Homeಮುಖಪುಟರಾಜ್ಯ ಸರ್ಕಾರವೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಲಿ: ಬೆಂಗಳೂರಿನಿಂದ ಮೈಸೂರಿಗೆ ಬೈಕ್ ಜಾಥ

ರಾಜ್ಯ ಸರ್ಕಾರವೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಲಿ: ಬೆಂಗಳೂರಿನಿಂದ ಮೈಸೂರಿಗೆ ಬೈಕ್ ಜಾಥ

ನಾವು ಹಿಂದೆ ಕಾಲುಗಳಲ್ಲಿ ನಡೆದು ಹೋರಾಟ ಮಾಡುತ್ತಿದ್ದೆವು. ಈಗ ಬೇಗ ತಲುಪಬೇಕಿರುವ ಕಾರಣ ಕಾರು ಮತ್ತು ಬೈಕುಗಳಲ್ಲಿ ಜಾಥ ಮಾಡುತ್ತಿದ್ದೇವೆ. ಅನ್ನ ತಿನ್ನುವ ಪ್ರತಿಯೊಬ್ಬರು ರೈತ ಹೋರಾಟವನ್ನು ಬೆಂಬಲಿಸಬೇಕು - ಬಿ.ಟಿ ಲಲಿತಾ ನಾಯಕ್

- Advertisement -
- Advertisement -

ರಾಜ್ಯದಲ್ಲಿಯೂ ರೈತವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು ಮತ್ತು ದೇಶಾದ್ಯಂತ ಎಂಎಸ್‌ಪಿ ಕಾನೂನುಬದ್ಧಗೊಳಿಸುವಂತೆ ಒತ್ತಾಯಿಸಿ ಇಂದು ಕರ್ನಾಟಕ ಜನಶಕ್ತಿ ಸಂಘಟನೆಯು ಬೆಂಗಳೂರಿನಿಂದ ಮೈಸೂರುವರೆಗೆ ಬೈಕ್ ಮತ್ತು ಕಾರ್ ಜಾಥ ನಡೆಸಿತು.

ಕರಾಳ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವುದಾಗಿ ಪ್ರಧಾನಿ ಮೋದಿಯವರು ಮಾಡಿರುವ ಘೋಷಣೆ ದೇಶದ ರೈತರ ಚಾರಿತ್ರಿಕ ಹೋರಾಟಕ್ಕೆ ಸಂದ ಬಾರಿ ದೊಡ್ಡ ವಿಜಯವಾಗಿದೆ. ಆದರೆ ಪ್ರಧಾನಿ ಮೋದಿಯವರು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕಾನೂನು ರಚನೆಯ ಬಗ್ಗೆ ಹಾಗು ವಿದ್ಯುತ್ ಕ್ಷೇತ್ರದ ಸಂಪೂರ್ಣ ಖಾಸಗಿಕರಣಕ್ಕೆ ಅವಕಾಶ ಮಾಡಿಕೊಡುವ ವಿದ್ಯುತ್ ಮಸೂದೆ-2020 ರ ವಾಪಸಾತಿಯ ಬಗ್ಗೆ ಮೌನ ವಹಿಸಿದ್ದಾರೆ. ಈ ಬೇಡಿಕೆಗಳನ್ನು ಸಹ ಈಡೇರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮೋದಿಯವರು ಕೃಷಿ ಕಾಯ್ದೆಗಳ ವಾಪಸಾತಿಯ ಬಗ್ಗೆ ಮಾಡಿರುವ ಘೋಷಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳ ತಿದ್ದುಪಡಿಗಳನ್ನು ಕೂಡಲೇ ರದ್ದು ಮಾಡಬೇಕೆಂದು ಒತ್ತಾಯಿಸಲಾಯಿತು.

ಮಾಜಿ ಸಚಿವೆ, ಹೋರಾಟಗಾರ್ತಿ ಬಿ.ಟಿ ಲಲಿತಾ ನಾಯಕ್ ಮಾತನಾಡಿ, “ನಾವು ಹಿಂದೆ ಕಾಲುಗಳಲ್ಲಿ ನಡೆದು ಹೋರಾಟ ಮಾಡುತ್ತಿದ್ದೆವು. ಈಗ ಬೇಗ ತಲುಪಬೇಕಿರುವ ಕಾರಣ ಕಾರು ಮತ್ತು ಬೈಕುಗಳಲ್ಲಿ ಜಾಥ ಮಾಡುತ್ತಿದ್ದೇವೆ. ಅನ್ನ ತಿನ್ನುವ ಪ್ರತಿಯೊಬ್ಬರು ರೈತ ಹೋರಾಟವನ್ನು ಬೆಂಬಲಿಸಬೇಕು” ಎಂದರು.

ಕರ್ನಾಟಕ ಜನಶಕ್ತಿಯ ಗೌರವಾಧ್ಯಕ್ಷರಾದ ಗೌರಿಯವರು ಮಾತನಾಡಿ, “ಇಂದು ನವೆಂಬರ್ 26 ಸಂವಿಧಾನ ಜಾರಿಗೆ ಬಂದ ದಿನ ಯುವಜನರು ಹೋರಾಟದಲ್ಲಿ ಭಾಗವಹಿಸಿರುವುದು ಆಶಾದಾಯಕ ಬೆಳವಣಿಗೆ. ಇದೇ ಯುವಜನರು ಕರ್ನಾಟಕ ಹಳ್ಳಿ ಹಳ್ಳಿಗಳಿಗೆ ತೆರಳಿ ಕೃಷಿ ಕಾಯ್ದೆಗಳ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಿದರು. ಅವರ ಹೋರಾಟಕ್ಕೆ ಜಯವಾಗಿದೆ. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಆದರೆ ಕರ್ನಾಟಕದ ಮೂರು ಕಾಯ್ದೆಗಳು ಮತ್ತು ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯನ್ನು ವಾಪಸ್ ಪಡೆಯುವವರೆಗೂ ಹೋರಾಟ ಮುಂದುವರೆಸುತ್ತೇವೆ” ಎಂದರು.

ಬೈಕ್ ಜಾಥವು ರಾಮನಗರ ತಲುಪಿ ಅಲ್ಲಿ ರಸ್ತೆ ತಡೆ ನಡೆಸುತ್ತಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರ ಜೊತೆಗೂಡಿತು. ರಾಮನಗರದಲ್ಲಿ ಹೋರಾಟಗಾರರಾದ ನೂರ್ ಶ್ರೀಧರ್ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಅನಸೂಯಮ್ಮ ಅರಳಾಳುಸಂದ್ರ ಮಾತನಾಡಿದರು.

ನಂತರ ಬೈಕ್ ಜಾಥ ಶ್ರೀರಂಗಪಟ್ಟಣ ತಲುಪಿ ಹೆದ್ದಾರಿ ಬಂದ್ ನಡೆಸುತ್ತಿದ್ದ ರೈತರ ಜೊತೆ ಸೇರಿತು. ಇಂದು ಬೆಳಿಗ್ಗೆಯಿಂದಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆದ್ದಾರಿ ಬಂದ್ ಆರಂಭವಾಗಿದೆ.

ಇದನ್ನೂ ಓದಿ; ಸರ್ವಾಧಿಕಾರದ ಅಹಂ ಮುರಿದ ಸಮರ ಸತ್ಯಾಗ್ರಹ: ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...