Homeಕರ್ನಾಟಕಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆ ನಡೆಸದಂತೆ ಬೆಳಗಾವಿ ಕ್ರಿಶ್ಚಿಯನ್ನರಿಗೆ ಪೊಲೀಸರ ‘ಸ್ನೇಹಪೂರ್ವಕ’ ಎಚ್ಚರಿಕೆ!

ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆ ನಡೆಸದಂತೆ ಬೆಳಗಾವಿ ಕ್ರಿಶ್ಚಿಯನ್ನರಿಗೆ ಪೊಲೀಸರ ‘ಸ್ನೇಹಪೂರ್ವಕ’ ಎಚ್ಚರಿಕೆ!

ಬಲಪಂಥೀಯ ಗುಂಪುಗಳು ದಾಳಿ ಮಾಡಬಹುದಾಗಿದ್ದು, ನಮಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ದೂರಲಾಗಿದೆ

- Advertisement -
- Advertisement -

ರಾಜ್ಯದ ಚಳಿಗಾಲದ ವಿಧಾನಮಂಡಲ ಅಧಿವೇಶನ ಮುಂದಿನ ತಿಂಗಳು ಬೆಳಗಾವಿಯಲ್ಲಿ ನಡೆಯಲಿದೆ. ಈ ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆಗಳನ್ನು ನಡೆಸದಂತೆ ಬೆಳಗಾವಿ ಜಿಲ್ಲೆಯ ಕ್ರೈಸ್ತರಿಗೆ ಪೊಲೀಸರು ‘ಸ್ನೇಹಪೂರ್ವಕ ಎಚ್ಚರಿಕೆ'(ಪ್ರೆಂಡ್‌ಲಿ ವಾರ್ನಿಂಗ್) ನೀಡಿದ್ದಾರೆ ಎಂದು ದಿ ನ್ಯೂಸ್ ಮಿನಿಟ್‌ ವರದಿ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ವಿವಾದಾತ್ಮಕ ‘ಮತಾಂತರ ವಿರೋಧಿ ಮಸೂದೆ’ಯನ್ನು ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

“ಬಲಪಂಥೀಯ ಗುಂಪುಗಳು ಕ್ರಿಶ್ಚಿಯನ್ನರ ಮೇಲೆ ದಾಳಿ ಮಾಡಬಹುದಾಗಿದ್ದು, ಪೊಲೀಸರು ರಕ್ಷಣೆ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪ್ರಾರ್ಥನಾ ಸಭೆಗಳನ್ನು ಮಾಡದಂತೆ, ಕೆಲವು ಪಾದ್ರಿಗಳನ್ನು ಕರೆಸಿ ಕೇಳಲಾಗಿದೆ. ಪೊಲೀಸರು ಲಿಖಿತವಾಗಿ ಏನನ್ನೂ ನೀಡಿಲ್ಲ, ಆದರೆ ಇದು ಕೋಮು ಸೌಹಾರ್ದತೆಯನ್ನು ಕಾಪಾಡಲು ಬೇಕಾಗಿ ಎಂದು ಹೇಳುತ್ತಾರೆ” ಎಂದು ಪಾದ್ರಿ ಥಾಮಸ್ ಜಾನ್ಸನ್ ನ್ಯೂಸ್‌ ಮಿನಿ‌ಟ್‌‌ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಕ್ರಿಶ್ಚಿಯನ್ನರ ವಿರುದ್ಧ 50 ದಾಳಿಗಳು ಇತ್ತೀಚೆಗೆ ನಡೆದಿದೆ: ವರದಿ

“ಪಾದ್ರಿ ಚೆರಿಯನ್ ಮೇಲೆ ಹಲ್ಲೆ ನಡೆದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಿಮ್ಮ ಸ್ವಂತ ಚರ್ಚ್ ಕಟ್ಟಡಗಳಿದ್ದರೆ, ನೀವು ಪ್ರಾರ್ಥನೆ ಸಭೆಗಳನ್ನು ನಡೆಸಬಹುದು. ಆದರೆ ಬಾಡಿಗೆ ಕಟ್ಟಡಗಳಲ್ಲಿ ಅಥವಾ ಖಾಸಗಿ ಮನೆಗಳಲ್ಲಿ ನಡೆಸಬೇಡಿ ಎಂದು ಪೊಲೀಸರು ಪಾದ್ರಿಗಳಿಗೆ ಹೇಳಿದ್ದಾರೆ” ಎಂದು ಅವರು ಹೇಳಿದ್ದಾರೆ.

ವಿಶೇಷವೇನೆಂದರೆ, ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯದ ವಿಧಾನಸಭೆಯ ಚಳಿಗಾಲದ ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆಗಳನ್ನು ತಪ್ಪಿಸುವಂತೆ ಕ್ರೈಸ್ತರಿಗೆ ತಿಳಿಸಲಾಗಿದೆ. ಡಿಸೆಂಬರ್ 13 ರಿಂದ 24 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ವಿವಾದಾತ್ಮಕ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ. ಜಿಲ್ಲೆಯ 25 ಕ್ಕೂ ಹೆಚ್ಚು ಪಾದ್ರಿಗಳನ್ನು ಪೊಲೀಸರು ಸಂಪರ್ಕಿಸಿದ್ದು, ಪ್ರಾರ್ಥನಾ ಸಭೆಗಳನ್ನು ನಡೆಸದಂತೆ ಕೇಳಿಕೊಂಡಿದ್ದಾರೆ ಎಂದು ನ್ಯೂಸ್‌ ಮಿನಿಟ್‌ ದೃಡಪಡಿಸಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

“ಬಲಪಂಥೀಯರು ಚರ್ಚ್‌ಗಳಿಗೆ ನುಗ್ಗಿ, ವಸ್ತುಗಳನ್ನು ಒಡೆಯುತ್ತಾರೆ, ಜನರ ಮೇಲೆ ದಾಳಿ ಮಾಡುತ್ತಾರೆ. ಆದರೆ ಅಂತಿಮವಾಗಿ ಪಾದ್ರಿಗಳ ವಿರುದ್ಧ ಬಲವಂತದ ಮತಾಂತರದ ಆರೋಪದ ಮೇಲೆ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಅನೇಕರು ಈಗ ‘ಜೂಮ್ ಕರೆ’ಗಳಲ್ಲಿ ಪ್ರಾರ್ಥನಾ ಸಭೆಗಳನ್ನು ನಡೆಸುತ್ತಿದ್ದಾರೆ. ನಾವು ಬಲಪಂಥೀಯರಿಗೆ ಅವಕಾಶ ನೀಡಲು ಬಯಸುವುದಿಲ್ಲ” ಎಂದು ಪಾದ್ರಿ ಥಾಮಸ್ ಹೇಳಿದ್ದಾರೆ.

ಬುಧವಾರ, ರೆವರೆಂಡ್ ನಂದು ಕುಮಾರ್ ಮತ್ತು ರೆವರೆಂಡ್ ಡೆರೆಕ್ ಫೆರ್ನಾಂಡಿಸ್ ನೇತೃತ್ವದ ಬಿಷಪ್‌ಗಳು ಮತ್ತು ಕ್ರಿಶ್ಚಿಯನ್ ಮುಖಂಡರ ನಿಯೋಗವು ಬೆಳಗಾವಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ರಕ್ಷಣೆ ಕೋರಿ ಮನವಿ ಸಲ್ಲಿಸಿದೆ.

ಕಳೆದ ಕೆಲವು ತಿಂಗಳುಗಳಿಂದ, ಬಿಜೆಪಿ ಬೆಂಬಲಿತ ಬಜರಂಗದಳ ಸೇರಿದಂತೆ ಹಲವಾರು ಸಂಘಟನೆಗಳು ರಾಜ್ಯದ ಹಲವು ಭಾಗಗಳಲ್ಲಿ ಕ್ರಿಶ್ಚಿಯನ್ ಪಾದ್ರಿಗಳಿಂದ ಬಲವಂತದ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿವೆ. ಈ ಪ್ರತಿಭಟನೆಗಳು ಮತಾಂತರವನ್ನು ನಿಷೇಧಿಸುವ ಕಾನೂನನ್ನು ತರುವ ದೊಡ್ಡ ಯೋಜನೆಯ ಭಾಗವಾಗಿದೆ ಎಂಬುವುದನ್ನು ನ್ಯೂಸ್‌ ಮಿನಿಟ್‌ ಉಲ್ಲೇಖಿಸಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸಮಸ್ಯೆಗಳು ಎಂದೂ ಹಿಂದೂ ಸಮುದಾಯಗಳಿಂದ ಉದ್ಬವಿಸಿಲ್ಲಾ ,ಸಮಸ್ಯೆಗಳ ಸರಮಾಲೆ ಇರೋದು ಕ್ರಿಶ್ಚಿಯನ್ನರು ಮಾಡುವ ಮತಾಂತರದಿಂದಲೇ ,ಪಾದ್ರಿಗಳು ಮಾಡು ಅನಾಚಾರ ಚಟುವಟಿಕೆಗಳಿಂದ ,ಮೊದಲು ಸಮಾಜದಲ್ಲಿ ಅನಿಶ್ಚಿತತೆ ಗೆ ಕಾರಣರಾದ ಮತಾಂತರಿಗಳನ್ನ ,ಅದಕ್ಕೆ ಸಹಕರಿಸುವ ಪತ್ರಿಕೆಗಳನ್ನು ಅನಿಶ್ಚಿತತೆ ಯೊಂದಿಗೆ ದುರ್ಬಲ ಗೊಳಿಸಬೇಕು.

  2. ಕರ್ನಾಟಕದ ಪೊಲೀಸರ ಈ ಕ್ರಮ ಕಂಡನಾರ್ಹ. ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನಗಿಶ್ಟವಾದ ದಾರ್ಮಿಕ ಆಚರಣೆಗಳನ್ನು, ಬೇರೆಯವರಿಗೆ ತೊಂದರೆ ಆಗದಂತೆ ಆಚರಣೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. “ನಾವು ರಕ್ಷಣೆ ಕೊಡುವುದು ಸಾದ್ಯವಿಲ್ಲ” ಎನ್ನುವುದು ಪೊಲೀಸರ ಕರ್ತವ್ಯಲೋಪ ಆಗುತ್ತದೆ.

  3. (ಬೆಳಗಾವಿ) ಪೊಲೀಸರ ಈ ಕ್ರಮ ಸರಿಯಲ್ಲ ಎಂದು ನನ್ನ ಅಭಿಪ್ರಾಯ, ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನ ಇಷ್ಟವಾದ ದಾರ್ಮಿಕ ಆಚರಣೆಗಳನ್ನು, ಬೇರೆಯವರಿಗೆ ತೊಂದರೆ ಆಗದಂತೆ ಆಚರಣೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ.
    (Article 25 26) “ನಾವು ರಕ್ಷಣೆ ಕೊಡುವುದು ಸಾದ್ಯವಿಲ್ಲ” ಎನ್ನುವುದು ಬೆಳಗಾವಿ ಪೊಲೀಸರ ಅಭಿಪ್ರಾಯ ಸರಿಯಲ್ಲ, ಪ್ರತಿಯೊಬ್ಬರಿಗೂ ರಕ್ಷಣೆ ಕೊಡುವುದು ನಿಮ್ಮ ಧರ್ಮ ಮತ್ತು ಕರ್ತವ್ಯ , ದಯವಿಟ್ಟು ಯೋಚಿಸಿ ತೀರ್ಮಾನ ತೆಗೆದುಕೊಳ್ಳಿ
    ಧನ್ಯವಾದಗಳು

  4. ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನಗಿಶ್ಟವಾದ ದಾರ್ಮಿಕ ಆಚರಣೆಗಳನ್ನು, ಬೇರೆಯವರಿಗೆ ತೊಂದರೆ ಆಗದಂತೆ ಆಚರಣೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. “ನಾವು ರಕ್ಷಣೆ ಕೊಡುವುದು ಸಾದ್ಯವಿಲ್ಲ” ಎನ್ನುವುದು ಪೊಲೀಸರ ಕರ್ತವ್ಯಲೋಪ ಆಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...