Homeಕರ್ನಾಟಕಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆ ನಡೆಸದಂತೆ ಬೆಳಗಾವಿ ಕ್ರಿಶ್ಚಿಯನ್ನರಿಗೆ ಪೊಲೀಸರ ‘ಸ್ನೇಹಪೂರ್ವಕ’ ಎಚ್ಚರಿಕೆ!

ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆ ನಡೆಸದಂತೆ ಬೆಳಗಾವಿ ಕ್ರಿಶ್ಚಿಯನ್ನರಿಗೆ ಪೊಲೀಸರ ‘ಸ್ನೇಹಪೂರ್ವಕ’ ಎಚ್ಚರಿಕೆ!

ಬಲಪಂಥೀಯ ಗುಂಪುಗಳು ದಾಳಿ ಮಾಡಬಹುದಾಗಿದ್ದು, ನಮಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ದೂರಲಾಗಿದೆ

- Advertisement -
- Advertisement -

ರಾಜ್ಯದ ಚಳಿಗಾಲದ ವಿಧಾನಮಂಡಲ ಅಧಿವೇಶನ ಮುಂದಿನ ತಿಂಗಳು ಬೆಳಗಾವಿಯಲ್ಲಿ ನಡೆಯಲಿದೆ. ಈ ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆಗಳನ್ನು ನಡೆಸದಂತೆ ಬೆಳಗಾವಿ ಜಿಲ್ಲೆಯ ಕ್ರೈಸ್ತರಿಗೆ ಪೊಲೀಸರು ‘ಸ್ನೇಹಪೂರ್ವಕ ಎಚ್ಚರಿಕೆ'(ಪ್ರೆಂಡ್‌ಲಿ ವಾರ್ನಿಂಗ್) ನೀಡಿದ್ದಾರೆ ಎಂದು ದಿ ನ್ಯೂಸ್ ಮಿನಿಟ್‌ ವರದಿ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ವಿವಾದಾತ್ಮಕ ‘ಮತಾಂತರ ವಿರೋಧಿ ಮಸೂದೆ’ಯನ್ನು ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

“ಬಲಪಂಥೀಯ ಗುಂಪುಗಳು ಕ್ರಿಶ್ಚಿಯನ್ನರ ಮೇಲೆ ದಾಳಿ ಮಾಡಬಹುದಾಗಿದ್ದು, ಪೊಲೀಸರು ರಕ್ಷಣೆ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪ್ರಾರ್ಥನಾ ಸಭೆಗಳನ್ನು ಮಾಡದಂತೆ, ಕೆಲವು ಪಾದ್ರಿಗಳನ್ನು ಕರೆಸಿ ಕೇಳಲಾಗಿದೆ. ಪೊಲೀಸರು ಲಿಖಿತವಾಗಿ ಏನನ್ನೂ ನೀಡಿಲ್ಲ, ಆದರೆ ಇದು ಕೋಮು ಸೌಹಾರ್ದತೆಯನ್ನು ಕಾಪಾಡಲು ಬೇಕಾಗಿ ಎಂದು ಹೇಳುತ್ತಾರೆ” ಎಂದು ಪಾದ್ರಿ ಥಾಮಸ್ ಜಾನ್ಸನ್ ನ್ಯೂಸ್‌ ಮಿನಿ‌ಟ್‌‌ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಕ್ರಿಶ್ಚಿಯನ್ನರ ವಿರುದ್ಧ 50 ದಾಳಿಗಳು ಇತ್ತೀಚೆಗೆ ನಡೆದಿದೆ: ವರದಿ

“ಪಾದ್ರಿ ಚೆರಿಯನ್ ಮೇಲೆ ಹಲ್ಲೆ ನಡೆದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಿಮ್ಮ ಸ್ವಂತ ಚರ್ಚ್ ಕಟ್ಟಡಗಳಿದ್ದರೆ, ನೀವು ಪ್ರಾರ್ಥನೆ ಸಭೆಗಳನ್ನು ನಡೆಸಬಹುದು. ಆದರೆ ಬಾಡಿಗೆ ಕಟ್ಟಡಗಳಲ್ಲಿ ಅಥವಾ ಖಾಸಗಿ ಮನೆಗಳಲ್ಲಿ ನಡೆಸಬೇಡಿ ಎಂದು ಪೊಲೀಸರು ಪಾದ್ರಿಗಳಿಗೆ ಹೇಳಿದ್ದಾರೆ” ಎಂದು ಅವರು ಹೇಳಿದ್ದಾರೆ.

ವಿಶೇಷವೇನೆಂದರೆ, ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯದ ವಿಧಾನಸಭೆಯ ಚಳಿಗಾಲದ ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆಗಳನ್ನು ತಪ್ಪಿಸುವಂತೆ ಕ್ರೈಸ್ತರಿಗೆ ತಿಳಿಸಲಾಗಿದೆ. ಡಿಸೆಂಬರ್ 13 ರಿಂದ 24 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ವಿವಾದಾತ್ಮಕ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ. ಜಿಲ್ಲೆಯ 25 ಕ್ಕೂ ಹೆಚ್ಚು ಪಾದ್ರಿಗಳನ್ನು ಪೊಲೀಸರು ಸಂಪರ್ಕಿಸಿದ್ದು, ಪ್ರಾರ್ಥನಾ ಸಭೆಗಳನ್ನು ನಡೆಸದಂತೆ ಕೇಳಿಕೊಂಡಿದ್ದಾರೆ ಎಂದು ನ್ಯೂಸ್‌ ಮಿನಿಟ್‌ ದೃಡಪಡಿಸಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

“ಬಲಪಂಥೀಯರು ಚರ್ಚ್‌ಗಳಿಗೆ ನುಗ್ಗಿ, ವಸ್ತುಗಳನ್ನು ಒಡೆಯುತ್ತಾರೆ, ಜನರ ಮೇಲೆ ದಾಳಿ ಮಾಡುತ್ತಾರೆ. ಆದರೆ ಅಂತಿಮವಾಗಿ ಪಾದ್ರಿಗಳ ವಿರುದ್ಧ ಬಲವಂತದ ಮತಾಂತರದ ಆರೋಪದ ಮೇಲೆ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಅನೇಕರು ಈಗ ‘ಜೂಮ್ ಕರೆ’ಗಳಲ್ಲಿ ಪ್ರಾರ್ಥನಾ ಸಭೆಗಳನ್ನು ನಡೆಸುತ್ತಿದ್ದಾರೆ. ನಾವು ಬಲಪಂಥೀಯರಿಗೆ ಅವಕಾಶ ನೀಡಲು ಬಯಸುವುದಿಲ್ಲ” ಎಂದು ಪಾದ್ರಿ ಥಾಮಸ್ ಹೇಳಿದ್ದಾರೆ.

ಬುಧವಾರ, ರೆವರೆಂಡ್ ನಂದು ಕುಮಾರ್ ಮತ್ತು ರೆವರೆಂಡ್ ಡೆರೆಕ್ ಫೆರ್ನಾಂಡಿಸ್ ನೇತೃತ್ವದ ಬಿಷಪ್‌ಗಳು ಮತ್ತು ಕ್ರಿಶ್ಚಿಯನ್ ಮುಖಂಡರ ನಿಯೋಗವು ಬೆಳಗಾವಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ರಕ್ಷಣೆ ಕೋರಿ ಮನವಿ ಸಲ್ಲಿಸಿದೆ.

ಕಳೆದ ಕೆಲವು ತಿಂಗಳುಗಳಿಂದ, ಬಿಜೆಪಿ ಬೆಂಬಲಿತ ಬಜರಂಗದಳ ಸೇರಿದಂತೆ ಹಲವಾರು ಸಂಘಟನೆಗಳು ರಾಜ್ಯದ ಹಲವು ಭಾಗಗಳಲ್ಲಿ ಕ್ರಿಶ್ಚಿಯನ್ ಪಾದ್ರಿಗಳಿಂದ ಬಲವಂತದ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿವೆ. ಈ ಪ್ರತಿಭಟನೆಗಳು ಮತಾಂತರವನ್ನು ನಿಷೇಧಿಸುವ ಕಾನೂನನ್ನು ತರುವ ದೊಡ್ಡ ಯೋಜನೆಯ ಭಾಗವಾಗಿದೆ ಎಂಬುವುದನ್ನು ನ್ಯೂಸ್‌ ಮಿನಿಟ್‌ ಉಲ್ಲೇಖಿಸಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸಮಸ್ಯೆಗಳು ಎಂದೂ ಹಿಂದೂ ಸಮುದಾಯಗಳಿಂದ ಉದ್ಬವಿಸಿಲ್ಲಾ ,ಸಮಸ್ಯೆಗಳ ಸರಮಾಲೆ ಇರೋದು ಕ್ರಿಶ್ಚಿಯನ್ನರು ಮಾಡುವ ಮತಾಂತರದಿಂದಲೇ ,ಪಾದ್ರಿಗಳು ಮಾಡು ಅನಾಚಾರ ಚಟುವಟಿಕೆಗಳಿಂದ ,ಮೊದಲು ಸಮಾಜದಲ್ಲಿ ಅನಿಶ್ಚಿತತೆ ಗೆ ಕಾರಣರಾದ ಮತಾಂತರಿಗಳನ್ನ ,ಅದಕ್ಕೆ ಸಹಕರಿಸುವ ಪತ್ರಿಕೆಗಳನ್ನು ಅನಿಶ್ಚಿತತೆ ಯೊಂದಿಗೆ ದುರ್ಬಲ ಗೊಳಿಸಬೇಕು.

  2. ಕರ್ನಾಟಕದ ಪೊಲೀಸರ ಈ ಕ್ರಮ ಕಂಡನಾರ್ಹ. ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನಗಿಶ್ಟವಾದ ದಾರ್ಮಿಕ ಆಚರಣೆಗಳನ್ನು, ಬೇರೆಯವರಿಗೆ ತೊಂದರೆ ಆಗದಂತೆ ಆಚರಣೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. “ನಾವು ರಕ್ಷಣೆ ಕೊಡುವುದು ಸಾದ್ಯವಿಲ್ಲ” ಎನ್ನುವುದು ಪೊಲೀಸರ ಕರ್ತವ್ಯಲೋಪ ಆಗುತ್ತದೆ.

  3. (ಬೆಳಗಾವಿ) ಪೊಲೀಸರ ಈ ಕ್ರಮ ಸರಿಯಲ್ಲ ಎಂದು ನನ್ನ ಅಭಿಪ್ರಾಯ, ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನ ಇಷ್ಟವಾದ ದಾರ್ಮಿಕ ಆಚರಣೆಗಳನ್ನು, ಬೇರೆಯವರಿಗೆ ತೊಂದರೆ ಆಗದಂತೆ ಆಚರಣೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ.
    (Article 25 26) “ನಾವು ರಕ್ಷಣೆ ಕೊಡುವುದು ಸಾದ್ಯವಿಲ್ಲ” ಎನ್ನುವುದು ಬೆಳಗಾವಿ ಪೊಲೀಸರ ಅಭಿಪ್ರಾಯ ಸರಿಯಲ್ಲ, ಪ್ರತಿಯೊಬ್ಬರಿಗೂ ರಕ್ಷಣೆ ಕೊಡುವುದು ನಿಮ್ಮ ಧರ್ಮ ಮತ್ತು ಕರ್ತವ್ಯ , ದಯವಿಟ್ಟು ಯೋಚಿಸಿ ತೀರ್ಮಾನ ತೆಗೆದುಕೊಳ್ಳಿ
    ಧನ್ಯವಾದಗಳು

  4. ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನಗಿಶ್ಟವಾದ ದಾರ್ಮಿಕ ಆಚರಣೆಗಳನ್ನು, ಬೇರೆಯವರಿಗೆ ತೊಂದರೆ ಆಗದಂತೆ ಆಚರಣೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. “ನಾವು ರಕ್ಷಣೆ ಕೊಡುವುದು ಸಾದ್ಯವಿಲ್ಲ” ಎನ್ನುವುದು ಪೊಲೀಸರ ಕರ್ತವ್ಯಲೋಪ ಆಗುತ್ತದೆ.

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...