Homeಮುಖಪುಟದೇಶದ ಕಡಿಮೆ ಬಡತನದ ರಾಜ್ಯಗಳಾಗಿ ಹೊರಹೊಮ್ಮಿದ ಕೇರಳ, ತಮಿಳುನಾಡು: ನೀತಿ ಆಯೋಗ

ದೇಶದ ಕಡಿಮೆ ಬಡತನದ ರಾಜ್ಯಗಳಾಗಿ ಹೊರಹೊಮ್ಮಿದ ಕೇರಳ, ತಮಿಳುನಾಡು: ನೀತಿ ಆಯೋಗ

ಬಿಹಾರ, ಜಾರ್ಖಂಡ್‌ ಮತ್ತು ಉತ್ತರ ಪ್ರದೇಶ ರಾಜ್ಯಗಳು ಅತ್ಯಂತ ಹೆಚ್ಚು ಬಡತನ ಹೊಂದಿರುವ ರಾಜ್ಯಗಳಾಗಿದೆ ಎಂದು ಆಯೋಗ ಹೇಳಿದೆ

- Advertisement -
- Advertisement -

ನೀತಿ ಆಯೋಗದ ಮೊದಲ ‘ಬಹುಆಯಾಮದ ಬಡತನ ಸೂಚ್ಯಂಕ’ (MPI) ವರದಿಯ ಪ್ರಕಾರ ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶ ರಾಜ್ಯಗಳು ಭಾರತದ ಅತ್ಯಂತ ಬಡ ರಾಜ್ಯಗಳಾಗಿ ಹೊರಹೊಮ್ಮಿವೆ. ಸೂಚ್ಯಂಕದ ಪ್ರಕಾರ, ಬಿಹಾರದ 51.91% ಜನಸಂಖ್ಯೆಯು ಬಡವರಾಗಿದ್ದು ಮೊದಲ ಸ್ಥಾನದಲ್ಲಿದೆ. ಜಾರ್ಖಂಡ್‌ನಲ್ಲಿ 42.16%, ಉತ್ತರ ಪ್ರದೇಶ 37.79% ಮಧ್ಯಪ್ರದೇಶ 36.65% ಸೂಚ್ಯಂಕದ ನಾಲ್ಕನೇ ಸ್ಥಾನದಲ್ಲಿದ್ದರೆ, ಮೇಘಾಲಯ 32.67% ದೊಂದಿಗೆ ಐದನೇ ಸ್ಥಾನದಲ್ಲಿದೆ.

ಕೇರಳದಲ್ಲಿ 0.71%, ಗೋವಾ 3.76%, ಸಿಕ್ಕಿಂ 3.82%, ತಮಿಳುನಾಡು 4.89% ಮತ್ತು ಪಂಜಾಬ್ 5.59% ಭಾರತದಾದ್ಯಂತ ಕಡಿಮೆ ಬಡತನವನ್ನು ದಾಖಲಿಸಿದ್ದು, ಸೂಚ್ಯಂಕದ ಕೆಳಭಾಗದಲ್ಲಿವೆ. ಕರ್ನಾಟಕದಲ್ಲಿ 13.16% ಜನರು ಬಹು ಆಯಾಮದ ಬಡತನವನ್ನು ಹೊಂದಿದ್ದಾರೆ.

ಇದನ್ನೂ ಓದಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಕೇಂದ್ರಾಡಳಿತ ಪ್ರದೇಶಗಳ ಪೈಕಿ ದಾದ್ರಾ ಮತ್ತು ನಗರ ಹವೇಲಿ 27.36%, ಜಮ್ಮು ಕಾಶ್ಮೀರ ಮತ್ತು ಲಡಾಖ್ 12.58%, ದಮನ್-ದಿಯು 6.82% ಮತ್ತು ಚಂಡೀಗಢ 5.97% ಬಡ ಕೇಂದ್ರಾಡಳಿತವಾಗಿ ಹೊರಹೊಮ್ಮಿವೆ. ಪುದುಚೇರಿಯು ಅದರ ಜನಸಂಖ್ಯೆಯು 1.72% ರಷ್ಟು ಬಡವರನ್ನು ಹೊಂದಿದೆ. ಲಕ್ಷದ್ವೀಪ 1.82%, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು 4.30% ಮತ್ತು ದೆಹಲಿ 4.79% ದಷ್ಟು ಬಡತನವನ್ನು ಹೊಂದಿದೆ.

ಜಾರ್ಖಂಡ್, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಛತ್ತೀಸ್‌ಗಢ ನಂತರದ ಸ್ಥಾನದಲ್ಲಿ ಬಿಹಾರವು ಅತಿ ಹೆಚ್ಚು ಅಪೌಷ್ಟಿಕತೆಯನ್ನು ಹೊಂದಿದೆ. ಕರ್ನಾಟಕ 13 ನೇ ಸ್ಥಾನದಲ್ಲಿದ್ದು, 33.56% ಜನರು ಅಪೌಷ್ಟಿಕತೆಯನ್ನು ಹೊಂದಿದೆ.

ಇದನ್ನೂ ಓದಿ: ಬಡತನದಿಂದ ನೊಂದು ದಲಿತ ಸಹೋದರರು ಸಾವಿಗೆ ಶರಣು

ಆರೋಗ್ಯ ವಂಚಿತ ತಾಯಂದಿರು, ಶಾಲಾ ಶಿಕ್ಷಣ ವಂಚಿತರ ಶೇಕಡವಾರು ಪ್ರಮಾಣದಲ್ಲಿಯೂ ಬಿಜಾರ ಕಳೆಮಟ್ಟದಲ್ಲಿದೆ. ಶಾಲಾ ಹಾಜರಾತಿ, ಅಡುಗೆ ಇಂಧನ ಮತ್ತು ವಿದ್ಯುತ್ ವಂಚಿತ ಜನಸಂಖ್ಯೆಯ ಶೇಕಡಾವಾರು ಪ್ರಮಾಣದಲ್ಲಿ ಕೂಡಾ ಬಿಹಾರ ಕೆಳಮಟ್ಟದಲ್ಲಿದೆ.

ಉತ್ತರ ಪ್ರದೇಶವು ಮಕ್ಕಳ ಮತ್ತು ಹದಿಹರೆಯದವರ ಮರಣದ ವಿಭಾಗದಲ್ಲಿ ಅತ್ಯಂತ ಕೆಳ ಮಟ್ಟದಲ್ಲಿದೆ. ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಇದರ ನಂತರದ ಸ್ಥಾನದಲ್ಲಿದೆ. ನೈರ್ಮಲ್ಯದಿಂದ ವಂಚಿತವಾಗಿರುವ ಜನಸಂಖ್ಯೆಯ ಶೇಕಡಾವಾರು ಪ್ರಮಾಣದಲ್ಲಿ ಜಾರ್ಖಂಡ್ ಅತ್ಯಂತ ಕಳಪೆ ಸಾಧನೆ ಮಾಡಿದ್ದು, ನಂತರದ ಸ್ಥಾನದಲ್ಲಿ ಬಿಹಾರ ಮತ್ತು ಒಡಿಶಾ ಇದೆ.

ವರದಿಯ ಪ್ರಕಾರ, ಭಾರತದ ರಾಷ್ಟ್ರೀಯ MPI ಅಳತೆಯು, ‘ಆಕ್ಸ್‌ಫರ್ಡ್ ಬಡತನ ಮತ್ತು ಮಾನವ ಅಭಿವೃದ್ಧಿ ಉಪಕ್ರಮ’ (OPHI) ಮತ್ತು ‘ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ’ (UNDP) ಅಭಿವೃದ್ಧಿಪಡಿಸಿದ ಜಾಗತಿಕವಾಗಿ ಅಂಗೀಕರಿಸಲ್ಪಟ್ಟ ಮತ್ತು ದೃಢವಾದ ವಿಧಾನವನ್ನು ಬಳಸುತ್ತದೆ.

ಬಹುಮುಖ್ಯವಾಗಿ, ‘ಬಹುಆಯಾಮದ ಬಡತನದ ಅಳತೆ’ಯು ಕುಟುಂಬಗಳು ಎದುರಿಸುತ್ತಿರುವ ಬಹು ಮತ್ತು ಏಕಕಾಲಿಕ ಅಭಾವಗಳನ್ನು ಕಂಡುಹಿಡಿಯುತ್ತದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಬಡತನ ಮತ್ತು ಆರ್ಥಿಕ ಸಂಕಷ್ಟ: ಒಂದು ವರ್ಷದೊಳಗೆ ರಾಜ್ಯದಲ್ಲಿ 850 ಆತ್ಮಹತ್ಯೆ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...