Homeಕರ್ನಾಟಕಜಿಂದಾಲ್‍ಗೆ ಭೂಮಿ: ಎಚ್.ಕೆ. ಪಾಟೀಲ, ರಾಘವೇಂದ್ರ ಕುಷ್ಟಗಿ ಏನು ಹೇಳ್ತಾರೆ?

ಜಿಂದಾಲ್‍ಗೆ ಭೂಮಿ: ಎಚ್.ಕೆ. ಪಾಟೀಲ, ರಾಘವೇಂದ್ರ ಕುಷ್ಟಗಿ ಏನು ಹೇಳ್ತಾರೆ?

ಕಾನೂನು ಇಲಾಖೆ ಈ ಭೂಮಿ ಪರಭಾರೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಸ್ತಾಪವನ್ನು ರಾಜ್ಯ ಸಚಿವ ಸಂಪುಟ ಒಪ್ಪಿಕೊಂಡಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಜಿಂದಾಲ್ ಸ್ಟೀಲ್ ಕಂಪನಿಗೆ 3600 ಎಕರೆ ಭೂಮಿ ಹಸ್ತಾಂತರಿಸುವುದನ್ನು ಹಲವರು ಮೊದಲಿಂದಲೂ ವಿರೋಧಿಸುತ್ತ ಬಂದಿದ್ದಾರೆ. ಆಡಳಿತ ಪಕ್ಷದ ಶಾಸಕ, ಮಾಜಿ ಸಚಿವ ಎಚ್‍ಕೆ ಪಾಟೀಲ ಮತ್ತು ಜನಸಂಗ್ರಾಮದ ಮುಖ್ಯಸ್ಥ ರಾಘವೇಂದ್ರ ಕುಷ್ಟಗಿ ನಾನುಗೌರಿ.ಕಾಂ ನೊಡನೆ ಮಾತಾಡಿ, ಇದರ ಹಿಂದಿನ ಹುನ್ನಾರಗಳನ್ನು ತೆರೆದಿಟ್ಟಿದ್ದಾರೆ…

ಕಾನೂನು ಇಲಾಖೆ ಈ ಭೂಮಿ ಪರಭಾರೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಸ್ತಾಪವನ್ನು ರಾಜ್ಯ ಸಚಿವ ಸಂಪುಟ ಒಪ್ಪಿಕೊಂಡಿದೆ. ಈ ಪ್ರಸ್ತಾಪದಲ್ಲೇ ಇದ್ದ ಕಾನೂನು ಇಲಾಖೆಯ ವ್ಯತಿರಿಕ್ತ ಅಭಿಪ್ರಾಯವನ್ನು ಉದಾಹರಿಸಿ ಕೆಲವು ಸಂಪುಟ ಸದಸ್ಯರು ವಿರೋಧ ಮಾಡಿದರೂ ರಾಜ್ಯ ಸರ್ಕಾರ ಜಿಂದಾಲ್ ಪರ ನಿಲುವು ಕೈಗೊಂಡಿರುವುದರ ಹಿಂದೆ ಸಾಕಷ್ಟು ‘ವ್ಯವಹಾರ’ ನಡೆದಿರಬಹುದು ಎಂಬ ಸಂಶಯ ಜನರನ್ನು ಕಾಡುತ್ತಿದೆ.

ಆಡಳಿತ ಪಕ್ಷದ ಶಾಸಕ ಮತ್ತು ಮಾಜಿ ಸಚಿವ ಎಚ್.ಕೆ ಪಾಟೀಲರು ಕಳೆದ 4-5 ದಿನದಿಂದ ಜಿಂದಾಲ್‍ಗೆ ಭೂಮಿ ನೀಡುತ್ತಿರುವುದು ಕಾನೂನು ವಿರೋಧ ಮತ್ತು ಅಕ್ರಮ ಎಂದು ಹೇಳುತ್ತಲೇ ಬಂದಿದ್ದಾರೆ. ಎಚ್.ಕೆ ಪಾಟೀಲರು ನಮ್ಮ ಪೋರ್ಟಲ್‍ನೊಂದಿಗೆ ಹಂಚಿಕೊಂಡ ಮಾಹಿತಿಯಿಲ್ಲಿದೆ:

‘ಜಿಂದಾಲ್‍ಗೆ ಭೂಮಿ ಕೊಡುವುದರ ಹಿಂದೆ ಸಂಶಯಾತ್ಮಕ ಕೈವಾಡವಿದೆ. ಯಾಕೆ ಕೊಡಬಾರದು ಎನ್ನುವುದಕ್ಕೆ ಈ ಮೂರು ಕಾರಣಗಳು ಸಾಕು: 1) ಅತ್ಯಂತ ಕಡಿಮೆ ಬೆಲೆಗೆ ಭೂಮಿಯನ್ನು ನೀಡುವ ಮೂಲಕ ರಾಜ್ಯ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿರುವುದು.

2) ಜಿಂದಾಲ್ ಸರ್ಕಾರದ ವಿವಿಧ ಇಲಾಖೆಗಳಿಗೆ ಸಾಕಷ್ಟು ಮೊತ್ತದ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರದ ಮೈಸೂರು ಮಿನರಲ್ಸ್ ಲಿಮಿಟೆಡ್ (ಎಂಎಂಎಲ್)ಗೆ 2 ಸಾವಿರ ಕೋಟಿಗೂ ಹಣವನ್ನು ಜಿಂದಾಲ್ ಪಾವತಿಸದೇ ಉಳಿಸಿಕೊಂಡಿದೆ. ನಮ್ಮ ಸರ್ಕಾರಿ ಸಂಸ್ಥೆಗೇ ಬಾಕಿ ಉಳಿಸಿಕೊಂಡ ಸಂಸ್ಥೆಗೆ ತರಾತುರಿಯಲ್ಲಿ ಅಗ್ಗದ ದರದಲ್ಲಿ ಭೂಮಿ ನೀಡಿದ್ದು ಅನೈತಿಕ ಮತ್ತು ಕಾನೂನು ವಿರೋಧಿ ತೀರ್ಮಾನ.

3) ಜಿಂದಾಲ್ ಮೇಲೆ ಅಕ್ರಮವಾಗಿ ಅದಿರು ಮಾರಿದ ಆರೋಪಗಳಿವೆ. ನ್ಯಾ. ಸಂತೋಷ ಹೆಗಡೆಯವರ ವರದಿಯಲ್ಲೂ ಇದು ಉಲ್ಲೇಖವಾಗಿದೆ. ಮೇಲಾಗಿ ಸುಪ್ರೀಂ ಕೋರ್ಟಿನಲ್ಲಿ ಜಿಂದಾಲ್ ಮೇಲೆ ಕೇಸೂ ಇದೆ. ನಮ್ಮ ರಾಜ್ಯದ ಸಾಮಾಜಿಕ ಹೋರಾಟಗಾರ ಎಸ್. ಆರ್ ಹಿರೇಮಠರು ಸುಪ್ರಿಂಕೋರ್ಟಿನಲ್ಲಿ ಜಿಂದಾಲ್ ವಿರುದ್ಧ ಕೇಸು ಹಾಕಿದ್ದಾರೆ. ಹೀಗಾಗಿ ಕಾನೂನು ಇಲಾಖೆಯು ಜಿಂದಾಲ್‍ಗೆ ಭೂಮಿ ಕೊಡಬಾರದು ಎಂಬ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತಪಡಿಸಿತ್ತು. ಜಿಂದಾಲ್ ಮೇಲೆ ಅಂತಹ ಯಾವ ಅಪೀಲೂ ಇಲ್ಲ ಎಂದು ರಾಜ್ಯದ ಅಡ್ವೋಕೇಟ್ ಜನರಲ್ ಕೂಡ ಸಂಪುಟಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ.

ನನ್ನ ಈ ವಿರೋಧದದ ಮಾದರಿಯಲ್ಲೇ ಬಿ.ಕೆ. ಹರಿಪ್ರಸಾದ್ ಮತ್ತು ಎಚ್ ವಿಶ್ವನಾಥ್ ಕೂಡ ವಿರೋಧ ಮಾಡಿದ್ದಾರೆ. ಸಂಪುಟ ಸಭೆಯಲ್ಲೂ ಕೆಲವರು ವಿರೋಧಿಸಿದ್ದಾರೆ , ಇಷ್ಟಿದ್ದೂ ಜಿಂದಾಲ್‍ಗೆ ಖನಿಜಯುಕ್ತ ಭೂಮಿ ನೀಡಿದ್ದು ಅಕ್ಷಮ್ಯ. ಸರ್ಕಾರ ತನ್ನ ನಿಲುವು ಬದಲಿಕೊಳ್ಳಲೇಬೇಕು…..

ರಾಘವೇಂದ್ರ ಕುಷ್ಟಗಿ:

“ಇದರ ಹಿಂದ್ ದೊಡ್ಡ ಲಾಬೀನ ಅದಾರಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಕೈವಾಡ ಇದೇರಿ. ಡಿ.ಕೆ. ಶಿವಕುಮಾರಗಂತೂ ಇದು ‘ಲಾಭದ’ ವಹಿವಾಟು ಅಷ್ಟೇ. 80ರದಶಕದಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ವಿಜಯನಗರ ಸ್ಟೀಲ್ ಕಂಪನಿಗೆ 17 ಸಾವಿರ ಎಕರೆ ಭೂಮಿ ನೀಡಿದ್ದರು. ಕಾಲಾಂತರದಲ್ಲಿ ಇದು ಲಾಭಯುತವಾಗದಂತೆ ಖಾಸಗಿ ಕಂಪನಿಗಳು ನೋಡಿಕೊಂಡವು. ಮುಂದೆ ಈ ಸರ್ಕಾರಿ ಸ್ವಾಮ್ಯದ ಉದ್ಯಮ ಜಿಂದಾಲ್ ಮಡಿಲಿಗೆ ಬಿತ್ತರಿ. ವಿಜಯನಗರ ಅಟೀಲ್ ಸಂಸ್ಥೆಯ 17 ಸಾವಿರ ಎಕರೆ ಜೊತೆಗೆ ಉಕ್ಕು ಉತ್ಪಾದನೆ ಮಾಡುವ ಲೈಸೆನ್ಸೂ ಜಿಂದಾಲ್‍ಗೆ ಸಿಕ್ಕಿತು.

2010-11 ರ ಸುಮಾರು ಕೆಐಎಡಿಬಿ ತಾನೇ ಮುಂದೆ ನಿಂತು ರೈತರಿಂದ ಮತ್ತೆ 3 ಸಾವಿರ ಎಕರೆ ಭೂಮಿ ಖರೀದಿಸಿ ಇದೇ ಜಿಂದಾಲ್‍ಗೆ ಧಾರೆ ಎರೆಯಿತು. ಇದರ ಹಿಂದೆ ಎಲ್ಲ ಪಾರ್ಟಿಗಳ ದೊಡ್ಡ ಕುಳಗಳಿಗೆ ಸಾಕಷ್ಟು ಕಿಕ್‍ಬ್ಯಾಕ್ ಸಿಕ್ಕೇ ಸಿಕ್ಕಿರ್ತದ… ಈ 3 ಸಾವಿರ ಎಕರೆ ಪರಭಾರೆ ವಿರುದ್ಧ ಇಲ್ಲಿನ ಸ್ಥಳಿಯ ಬಸವಾರಾಜ್ ಅನ್ನೋರು ಸುಪ್ರಿಂಗೆ ಹೋಗ್ಯಾರ.

ಇದೆಲ್ಲಕ್ಕಿಂತ ಗಾಬರಿ ಎಂದರೆ ಜಿಂದಾಲ್‍ನವರು ತಮಗಿದ್ದ ಅಧಿಕೃತ ಭೂಮಿ ಪಕ್ಕದ ಗೋಮಾಳ, ಕೆರೆಕಟ್ಟೆ ಮತ್ತು ಅರಣ್ಯ ಭೂಮಿಯನ್ನು ಅತಿಕ್ರಮ ಮಾಡಿಕೊಂಡಾರ, ಇದರ ವಿರುದ್ಧಾನೂ ಯಾರಾದರೂ ಸುಪ್ರಿಂಗೆ ಹೋಗಬೇಕು.

ಇಲ್ಲಿನ ಜನರಿಗೆ ಉದ್ಯೋಗವನ್ನೂ ಕೊಡದ, ಸರ್ಕಾರಕ್ಕೆ ರಾಯಲ್ಟಿ ರೂಪದಲ್ಲಿ ಜುಜುಬಿ ಫೀಸು ಕಟ್ಟುವ ಇಂತಹ ಜನದ್ರೋಹಿ ಕಂಪನಿಗೆ ಈಗ 3600 ಎಕರೆ ಭೂಮಿ ನೀಡ್ತಾ ಇರೋದರ ಹಿಂದೆ ದೊಡ್ಡ ಕಿಕ್‍ಬ್ಯಾಕ್ ವ್ಯವಹಾರ ಅದಾರಿ….”

ಕಾನೂನು ಇಲಾಖೆ ಜಿಂದಾಲ್‍ಗೆ ಕೊಡುತ್ತಿರುವ ಭೂಮಿ ಖನಿಜ ಸಂಪತ್ತಿನ ಭೂಮಿ ಎಂದು ಕಾನೂನು ಇಲಾಖೆ ಹೇಳಿದರೆ ವಾಣಿಜ್ಯ ಇಲಾಖೆ, ‘ಇಲ್ಲಿ ಖನಿಜ ಸಂಪತ್ತಿಲ್ಲ, ಸಮಗ್ರ ಉಕ್ಕಿನ ಕಾಖಾನೆಯನ್ನು ಜಿಂದಾಲ್ ಸ್ಥಾಪಿಸಿದೆ’ ಎಂದು ನಿರ್ಲಜತನದಿಂದ ವಾಣಿಜ್ಯ ಇಲಾಖೆ ವಾದಿಸಿದೆ!

ಸ್ಥಳಿಯರ ನೆರವಿನಿಂದ ಒಂದು ದೊಡ್ಡ ಆಂದೋಲನ ರೂಪಿಸಿ ಈ ಭೂಮಿ ಪರಭಾರೆಯನ್ನು ಸರ್ಕಾರ ಹಿಂದಕ್ಕೆ ಪಡೆಯುವಂತೆ ಪ್ರಗತಿಪರರು ಮುಂದೆ ಬರಬೇಕಿದೆ.

ಇದನ್ನು ಓದಿರಿ: ಕಾರ್ಮಿಕ ವಿರೋಧಿ ಜಿಂದಾಲ್ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...