Homeಫ್ಯಾಕ್ಟ್‌ಚೆಕ್ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಭಾರತೀಯ ಅಧಿಕಾರಿಗಳು ತಮ್ಮ ‘ಮೂಲಸೌಕರ್ಯಗಳ ಸಾಧನೆಗಳ’ ಪುರಾವೆಯಾಗಿ ಚೀನಾದ ಚಿತ್ರವನ್ನು ಬಳಸಬೇಕಾಗಿದೆ ಎಂದು ಚೀನಿಗರು ವ್ಯಂಗ್ಯವಾಡಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಜ್ಜಾಗುತ್ತಿದೆ. ಚುನಾವಣೆಯ ಪ್ರಚಾರಕ್ಕಾಗಿ ಬೇರೆ ರಾಜ್ಯಗಳು ಮತ್ತು ದೇಶಗಳ ಚಿತ್ರಗಳನ್ನು ಬಳಸಿದ್ದು ಹಲವು ಬಾರಿ ಮಾಧ್ಯಮಗಳಲ್ಲಿ ವರದಿಯಾಗಿದ್ದರೂ, ರಾಜ್ಯದ ಬಿಜೆಪಿ ನಾಯಕರು ಇನ್ನೂ ಈ ಚಾಳಿಯನ್ನು ಬಿಟ್ಟಿಲ್ಲ. ಇದೀಗ ಹೊಸದಾಗಿ ಚೀನಾ ದೇಶದ ವಿಮಾನ ನಿಲ್ದಾಣದ ಚಿತ್ರವನ್ನು ಬಳಸಿ, ಅಂತಾರಾಷ್ಟ್ರೀಯವಾಗಿ ದೇಶವನ್ನು ಮುಜುಗರಕ್ಕೆ ಒಳಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 25 ರ ಗುರುವಾರ ಉತ್ತರ ಪ್ರದೇಶದ ಜೇವರ್‌ನಲ್ಲಿ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಹೊಸದಾಗಿ ನಿರ್ಮಾಣವಾಗುತ್ತಿರುವ ಈ ವಿಮಾನ ನಿಲ್ದಾಣಕ್ಕೆ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ. ಈ ವಿಮಾನ ನಿಲ್ದಾಣವು ಪೂರ್ಣಗೊಂಡ ನಂತರ ಈ ರೀತಿ ಕಾಣಿಸುತ್ತದೆ ಎಂದು ಹೇಳಿಕೊಂಡು ವಿಮಾನ ನಿಲ್ದಾಣದ ಫೋಟೋ ಮತ್ತು ಚಿತ್ರವನ್ನು ಹಲವಾರು ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಆದರೆ ವಾಸ್ತವದಲ್ಲಿ ಅವರು ಹಂಚಿಕೊಂಡಿರುವ ವಿಮಾನ ನಿಲ್ದಾಣವು ಚೀನಾದ ಬೀಜಿಂಗ್ ಡಾಕ್ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಇದರ ವಿನ್ಯಾಸವನ್ನು ಇರಾಕಿನ ವಾಸ್ತುಶಿಲ್ಪಿ ಜಹಾ ಹದಿದ್ ವಿನ್ಯಾಸಗೊಳಿಸಿದ್ದಾರೆ. ಈ ಮೆಗಾ ಯೋಜನೆಗೆ ಚೀನಾವು 17.47 ಶತಕೋಟಿ ಡಾಲರ್‌ ವೆಚ್ಚ ಮಾಡಿದೆ.

ಬಿಜೆಪಿಯ ಮಾಜಿ ಸಂಸದ ಕನ್ವರ್ ಸಿಂಗ್ ತನ್ವಾರ್ ಅವರು ಫೇಸ್‌ಬುಕ್‌ನಲ್ಲಿ ಈ ಫೋಟೋವನ್ನು ಹಂಚಿಕೊಂಡು, “ಪಶ್ಚಿಮ ಉತ್ತರ ಪ್ರದೇಶವು ಇಂದು ‘ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ದ ಶಂಕುಸ್ಥಾಪನೆಯೊಂದಿಗೆ ಅಭಿವೃದ್ಧಿಯ ಹೊಸ ಮಗ್ಗುಲಿಗೆ ಹೊರಳಿದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಜನಸಾಮಾನ್ಯರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. #New_UP_Ki_Udaan” ಎಂದು ಬರೆದಿದ್ದರು.

ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಮಾನ ನಿಲ್ದಾಣದ ಇದೇ ಫೋಟೋವನ್ನು ಹೊಂದಿರುವ 1:58 ನಿಮಿಷಗಳ ವೀಡಿಯೊವನ್ನು ಒಕ್ಕೂಟ ಸರ್ಕಾರದ ಸಚಿವ ಅನುರಾಗ್ ಠಾಕೂರ್ (ಆರ್ಕೈವ್), ಶಿಕ್ಷಣ ರಾಜ್ಯ ಸಚಿವೆ ಅನ್ನಪೂರ್ಣ ದೇವಿ (ಆರ್ಕೈವ್) ಸೇರಿದಂತೆ ಹಲವು ಬಿಜೆಪಿ ನಾಯಕರು ಹಂಚಿಕೊಳ್ಳುತ್ತಿದ್ದಾರೆ. ಒಕ್ಕೂಟ ಸರ್ಕಾದ ಸಚಿವ ಅರ್ಜುನ್ ರಾಮ್ ಮೇಘವಾಲ್ (ಆರ್ಕೈವ್) ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ (ಆರ್ಕೈವ್) ಕೂಡಾ ಇದನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿನ ಹಲವು ಬಳಕೆದಾರರು ಒಂದೇ ರೀತಿಯ ಪ್ರತಿಪಾದನೆಯೊಂದಿಗೆ ಅದೇ ಫೋಟೋವನ್ನು ಹಂಚಿಕೊಂಡಿದ್ದಾರೆ. ಆರ್ಕೈವ್ ಮಾಡಿದ ಲಿಂಕ್‌ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಫ್ಯಾಕ್ಟ್‌ಚೆಕ್

ವಾಸ್ತವದಲ್ಲಿ ಈ ಚಿತ್ರವು 2015 ರಲ್ಲಿ ಲಂಡನ್ ಮೂಲದ ಆರ್ಕಿಟೆಕ್ಚರ್ ಮ್ಯಾಗಜೀನ್ ‘ಡಿ ಜೀನ್‌’ನಲ್ಲಿ ಪ್ರಕಟವಾಗಿತ್ತು. “ಜಹಾ ಹದಿದ್ ಬೀಜಿಂಗ್‌ನಲ್ಲಿ ‘ವಿಶ್ವದ ಅತಿದೊಡ್ಡ ವಿಮಾನ ನಿಲ್ದಾಣದ ಪ್ರಯಾಣಿಕರ ಟರ್ಮಿನಲ್’ ಗಾಗಿ ವಿನ್ಯಾಸಗಳನ್ನು ಅನಾವರಣಗೊಳಿಸಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ಬೀಜಿಂಗ್ ನ್ಯೂ ಏರ್‌ಪೋರ್ಟ್ ಎಂದೂ ಕರೆಯಲ್ಪಡುವ ಬೀಜಿಂಗ್ ಡ್ಯಾಕ್ಸಿಂಗ್ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ (PKX), ಮೇಲ್ಮೈ ವಿಸ್ತೀರ್ಣದಿಂದ ವಿಶ್ವದ ಅತಿದೊಡ್ಡ ವಿಮಾನ ನಿಲ್ದಾಣ ಎಂದು ಹೇಳಲಾಗುತ್ತದೆ. ನಿರ್ಮಾಣವು 2015 ರಲ್ಲಿ ಪ್ರಾರಂಭವಾಯಿತು ಮತ್ತು ಅದರ ಕಾರ್ಯಾಚರಣೆಗಳು ಸೆಪ್ಟೆಂಬರ್ 2019 ರಲ್ಲಿ ಪ್ರಾರಂಭವಾಯಿತು. ಈ ವಿಮಾನ ನಿಲ್ದಾಣದ ಚಿತ್ರವನ್ನು ಗೆಟ್ಟಿ ಕೂಡಾ ಕ್ಲಿಕ್ ಮಾಡಿದೆ.

ಇಷ್ಟೇ ಅಲ್ಲದೆ ಗೂಗಲ್ ಅರ್ಥ್‌ ಕೂಡಾ ಬೀಜಿಂಗ್ ಡಾಕ್ಸಿಂಗ್ ವಿಮಾನ ನಿಲ್ದಾಣದ ಚಿತ್ರಗಳನ್ನು ತೆಗೆದಿದೆ.

ನವೆಂಬರ್ 24 ರಂದು ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್ ಹ್ಯಾಂಡಲ್ ವಿಮಾನ ನಿಲ್ದಾಣದ ಚಿತ್ರಾತ್ಮಕ ವಿನ್ಯಾಸವನ್ನು ಹಂಚಿಕೊಂಡಿದೆ. ಆದರೆ ಇದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ನಾಯಕರು ಹಂಚಿಕೊಂಡ ಚಿತ್ರವನ್ನು ಹೋಲುತ್ತಿಲ್ಲ.

ಚೀನಾ ದೇಶದ ವಿಮಾನ ನಿಲ್ದಾಣವನ್ನು ಉತ್ತರ ಪ್ರದೇಶದ ವಿಮಾನ ನಿಲ್ದಾಣ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿರುವುದ ಬಗ್ಗೆ ಚೀನಾದ ಸಾಗರೋತ್ತರ ವಿಶ್ಲೇಷಕ ಶೇನ್ ಶಿವೈ ಟ್ವಿಟರ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅವರು, “ಭಾರತ ಸರ್ಕಾರದ ಸುಳ್ಳು ಸುದ್ದಿಯ ಪ್ರೊಪಗಾಂಡವನ್ನು ಬಹಿರಂಗಪಡಿಸಲಾಗಿದೆ. ಯಪ್ಪೋ….ಭಾರತದ ಸರ್ಕಾರದ ಅಧೀಕೃತರು ಚೀನಾ ಬೀಜಿಂಗ್ ಡಾಕ್ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಛಾಯಾಚಿತ್ರಗಳನ್ನು ತಮ್ಮ ‘ಮೂಲಸೌಕರ್ಯಗಳ ಸಾಧನೆಗಳ’ ಪುರಾವೆಯಾಗಿ ಬಳಸಬೇಕಾಗಿದೆ ಎಂದು ತಿಳಿದು ಆಘಾತವಾಯಿತು. ಚೀನಾದ ಬೀಜಿಂಗ್ ಡಾಕ್ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಸ್ವಾಗತ, 17.47 ಶತಕೋಟಿ ಡಾಲರ್‌ ವೆಚ್ಚದ ಮೆಗಾ ಯೋಜನೆ” ಎಂದು ವಿಮಾನ ನಿಲ್ದಾಣದ ಚಿತ್ರವನ್ನು ಮತ್ತು ಬಿಜೆಪಿಯ ನಾಯಕರ ಟ್ವೀಟ್‌ನ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ನೋಯ್ಡಾ ವಿಮಾನ ನಿಲ್ದಾಣದ ಬಗ್ಗೆ ಈ ಹಿಂದೆ ಕೂಡಾ ಸುಳ್ಳು ಸುದ್ದಿ ಹರಡಲಾಗಿತ್ತು. ಆ ಸಮಯದಲ್ಲಿ ದಕ್ಷಿಣ ಕೊರಿಯಾದ ಇಂಚಿಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಫೋಟೋವನ್ನು ಜೆವಾರ್‌ನಲ್ಲಿರುವ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ತಪ್ಪಾಗಿ ಹಂಚಿಕೊಳ್ಳಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಇಟಲಿಯಲ್ಲಿ ವಿಶ್ವನಾಯಕರನ್ನು ಭೇಟಿ ಮಾಡಲು ಮೋದಿ ಟ್ಯಾಕ್ಸಿಯಲ್ಲಿ ತೆರಳಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...