Homeಕರ್ನಾಟಕವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು

ವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು

- Advertisement -
- Advertisement -

ವಿವಾಹೇತರ ಸಂಬಂಧ ಹೊಂದಿದ್ದ ಆರೋಪ ಹೊರಿಸಿ ಮಹಿಳೆ ಹಾಗೂ ಯುವಕನೋರ್ವನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ ಚಿತ್ರಹಿಂಸೆ ನೀಡಿರುವ ಘಟನೆ ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ನಡೆದಿದೆ.

ಕೆಲವು ಗಂಟೆಗಳ ಕಾಲ ಮಹಿಳೆ ಹಾಗೂ ಯುವಕನನ್ನು ಹಾಗೆಯೇ ಕಟ್ಟಿದ್ದರೂ ಸಹಾಯಕ್ಕೆ ಬಾರದೆ ಗ್ರಾಮಸ್ಥರು ಸುಮ್ಮನೆ ನಿಂತು ನೋಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ವಿಡಿಯೊವನ್ನು ಹಂಚಿಕೊಂಡಿದ್ದು, ವಿಡಿಯೊ ವೈರಲ್‌ ಆಗಿದೆ.

ಹೆಮ್ಮರಗಾಲ ಗ್ರಾಮದ ಮಹಿಳೆಯು ತನ್ನ ಪತಿ ರವಿಯನ್ನು ತೊರೆದು ಕಳೆದು ಐದು ವರ್ಷಗಳಿಂದ ಪ್ರತ್ಯೇಕವಾಗಿ ವಾಸವಿದ್ದರು. ಇವರ ಮೂವರು ಮಕ್ಕಳ ಪೈಕಿ ಇಬ್ಬರು ಮಕ್ಕಳು ಗಂಡನ ಜೊತೆಗಿದ್ದರೆ, ಒಂದು ಮಗು ಮಹಿಳೆಯ ಜೊತೆಗಿದೆ. ಈ ಮಹಿಳೆಯು ಜೀವನೋಪಾಯಕ್ಕಾಗಿ ಕೊಡಗಿನ ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಮರಳಿದ್ದರು.

ಕೊಡಗಿನ ಕಾಫಿ ತೋಟದಲ್ಲಿ ಪರಿಚಯನಾದ ಪಕ್ಕದ ನೇರಳೆ ಗ್ರಾಮದ ಯುವಕ ಗುರುವಾರ ರಾತ್ರಿ ಮಹಿಳೆಯ ಮನೆಗೆ ಭೇಟಿ ನೀಡಿದ್ದನು. ಇದನ್ನು ಗಮನಿಸಿದ ಮಹಿಳೆಯ ಗಂಡ ರವಿ, ಆಕೆಯ ಮನೆಗೆ ಹೊರಗಿನಿಂದ ಚಿಲಕ ಹಾಕಿ, ತನ್ನ ಸಹೋದರ ಚಂದ್ರು ಜೊತೆಗೂಡಿ ಗ್ರಾಮಸ್ಥರ ಸಮ್ಮುಖದಲ್ಲೇ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾನೆ.

ಚಿತ್ರಹಿಂಸೆಯನ್ನು ತಾಳಲಾರದೆ ಮಹಿಳೆ ನರಳುತ್ತಿದ್ದರೂ ಗ್ರಾಮಸ್ಥರು ಈ ದೃಶ್ಯವನ್ನು ನೋಡುತ್ತಾ ನಿಂತಿದ್ದರು. ಗಂಡಾಳ್ವಿಕೆಯ ದಬ್ಬಾಳಿಕೆ ಇದೆಂದು ಜನರು ಆರೋಪಿಸಿದ್ದಾರೆ. ಈ ದೃಶ್ಯವನ್ನು ಮೊಬೈಲ್‌ನಲ್ಲಿ ಯಾರೋ ಸೆರೆ ಹಿಡಿದಿದ್ದು, ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕೌಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿರಿ: ಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ


“ಕಂಬಕ್ಕೆ ಕಟ್ಟಿ ಹಾಕಿದ ಕೆಲವು ಗಂಟೆಗಳ ನಂತರ ಗ್ರಾಮದ ಮುಖಂಡರು, ಈ ಯುವಕ ಮತ್ತು ಮಹಿಳೆಯನ್ನು ರಕ್ಷಿಸಿ ನ್ಯಾಯ ಪಂಚಾಯಿತಿ ನಡೆಸಿದ್ದಾರೆ. ಯುವಕನ ಗ್ರಾಮವಾದ ನೇರಳೆಯಿಂದ ಮುಖಂಡರನ್ನು ಕರೆಸಿ ಮಾತುಕತೆ ನಡೆಸಲಾಗಿದೆ” ಎಂದು ವರದಿಯಾಗಿದೆ.

ವಿವಾಹೇತರ ಸಂಬಂಧವಿರಲಿಲ್ಲ: ಮಹಿಳೆ ಸ್ಪಷ್ಟನೆ

ವಿವಾಹೇತರ ಸಂಬಂಧ ಹೊಂದಿದ್ದರು ಎಂಬ ಆರೋಪವನ್ನು ಮಹಿಳೆ ಅಲ್ಲಗಳೆದಿದ್ದಾರೆ. ತನ್ನ ಪತ್ನಿ ಯುವಕನ ಜೊತೆ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಆಕೆಯ ಗಂಡ ದೂರಿದರೆ, ಗಂಡನ ಆರೋಪವನ್ನು ಮಹಿಳೆ ನಿರಾಕರಿಸಿದ್ದಾರೆ. ಜೊತೆಗೆ ಕೌಲಂದೆ ಪೊಲೀಸ್‌ ಠಾಣೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೌಲಂದೆ ಪೊಲೀಸ್ ಠಾಣೆಯ ಪಿಎಸ್‌ಐ ಮಹೇಂದ್ರ, “ಕೊಡಗಿನ ಕಾಫಿ ತೋಟದಲ್ಲಿ ಪರಿಚಯವಾದ ಯುವಕ ಗ್ರಾಮಕ್ಕೆ ಬಂದಾಗ ಕಾಫಿ ಕುಡಿಯಲು ಮನೆಗೆ ಕರೆದಿದ್ದೆ. ನಮ್ಮ ನಡುವೆ ಯಾವುದೇ ವಿವಾಹೇತರ ಸಂಬಂಧವಿಲ್ಲ. ಯುವಕ ನಮ್ಮ ಮನೆಯೊಳಗೆ ಪ್ರವೇಶಿಸುತ್ತಿದ್ದಂತೆಯೇ ಗಂಡ ಮನೆಯ ಬಾಗಿಲನ್ನು ಮುಚ್ಚಿ, ಹೊರಗಿನಿಂದ ಚಿಲಕ ಹಾಕಿ ನಂತರ, ಆತನ ಸಹೋದರನನ್ನು ಕರೆತಂದು ನಮ್ಮಿಬ್ಬರನ್ನೂ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾನೆ” ಎಂದು ಮಹಿಳೆಯು ದೂರು ನೀಡಿದ್ದಾರೆ.

“ರವಿ ಮತ್ತು ಚಂದ್ರು ಸೇರಿ ಯುವಕ ಹಾಗೂ ಮಹಿಳೆಯನ್ನು ಕಟ್ಟಿಹಾಕಿದ್ದರು. ಗ್ರಾಮಸ್ಥರು ಬಳಿಕ ಬಿಡಿಸಿದ್ದಾರೆ. ಮಹಿಳೆಯ ದೂರಿನ ಆಧಾರದಲ್ಲಿ ಸಾರ್ವಜನಿಕವಾಗಿ ಮಹಿಳೆಗೆ ಹಿಂಸಿಸಿದ್ದರಿಂದ ಐಪಿಸಿ ಸೆಕ್ಷನ್‌ 354 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ರವಿಯನ್ನು ಬಂಧಿಸಿದ್ದು, ಚಂದ್ರು ಪರಾರಿಯಾಗಿದ್ದಾನೆ” ಎಂದು ಪಿಎಸ್‌ಐ ತಿಳಿಸಿದರು.


ಇದನ್ನೂ ಓದಿರಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...