Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಕೇರಳಲ್ಲಿ RSS ಕಾರ್ಯಕರ್ತನನ್ನು ಕೊಲ್ಲುತ್ತಿರುವ ವಿಡಿಯೊ ಎಂದು ಸುಳ್ಳು ಹರಡಲಾಗುತ್ತಿದೆ

ಫ್ಯಾಕ್ಟ್‌‌ಚೆಕ್: ಕೇರಳಲ್ಲಿ RSS ಕಾರ್ಯಕರ್ತನನ್ನು ಕೊಲ್ಲುತ್ತಿರುವ ವಿಡಿಯೊ ಎಂದು ಸುಳ್ಳು ಹರಡಲಾಗುತ್ತಿದೆ

ಕೇರಳದ ಮುಸ್ಲಿಮರು ಆರೆಸ್ಸೆಸ್‌ ಕಾರ್ಯಕರ್ತನ ಕತ್ತನ್ನು ಕೊಯ್ಯುತ್ತಿರುವ ದೃಶ್ಯ ಎಂದು ಪ್ರತಿಪಾದಿಸಿ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

- Advertisement -
- Advertisement -

‘ಕೇರಳದ ಮುಸ್ಲಿಮರು ಆರೆಸ್ಸೆಸ್‌ ಕಾರ್ಯಕರ್ತನ ಕತ್ತನ್ನು ಕೊಯ್ಯುತ್ತಿರುವ ದೃಶ್ಯ’ ಎಂದು ಪ್ರತಿಪಾದಿಸಿ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 50 ಸೆಕೆಂಡ್‌ ಇರುವ ವೈರಲ್ ವಿಡಿಯೊದಲ್ಲಿ, ಯುವಕನೊಬ್ಬನ ಮೇಲೆ ಮುಸ್ಲಿಮರ ಗುಂಪೊಂದು ದಾಳಿ ಮಾಡಿ ಎಳೆದುಕೊಂಡು ಹೋಗುತ್ತದೆ. ನಂತರ ಅದೇ ವಿಡಿಯೊ ಮುಂದುವರಿದಂತೆ, ಶರ್ಟ್‌ ಬಿಚ್ಚಿರುವ ಯುವಕನೊಬ್ಬನನ್ನು ಮಲಗಿಸಿ ಆತನ ಕತ್ತನ್ನು ಕೊಯ್ಯುತ್ತಿರುವ ಭಯಾನಕ ದೃಶ್ಯವಿದೆ.

ಈ ಭಯಾನಕ ದೃಶ್ಯವಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುಖ್ಯವಾಗಿ ವಾಟ್ಸಪ್‌‌ನಲ್ಲಿ ಇದು ಹರಿದಾಡುತ್ತಿದ್ದು, ಅದರ ಶಿರ್ಷಿಕೆ ಕೆಳಗಿನಂತಿದೆ.

ಅತಿ ಘೋರ, ಕ್ರೂರ, ನೋಡಲು ಅಸಾಧ್ಯ. ಇದು ಕೇರಳದ ಮುಸ್ಲಿಂ ಸಮುದಾಯದವರು RSS ಸ್ವಯಂ ಸೇವಕನನ್ನು ಕುತ್ತಿಗೆ ಕತ್ತರಿಸಿ ಹತ್ಯೆ ಮಾಡಲಾಯಿತು. ಯೋಚಿಸಿ! ಮುಂದೆ ಇವರು ಬಹುಸಂಖ್ಯಾತರಾದರೆ ಹಿಂದುಗಳ ಸ್ಥಿತಿ, ಗತಿ ಏನಾಗಬಹುದು? ನಿಜವಾಗಿ ಭಯಂಕರ ಭಯಾನಕ

ವಾಟ್ಸಪ್ ಮಾತ್ರವಲ್ಲದೆ ಟ್ವಿಟರ್‌ ಮತ್ತು ಫೇಸ್‌ಬುಕ್‌ನಲ್ಲೂ ಈ ವಿಡಿಯೊ ಹರಿದಾಡಿದೆ. ಅದನ್ನು ಇಲ್ಲಿ ನೋಡಬಹುದು. (ಎಚ್ಚರಿಕೆ: ವಿಡಿಯೊ ಭಯಾನಕವಾಗಿದೆ). ಫೇಸ್‌ಬುಕ್‌ನಲ್ಲೂ ಈ ವಿಡಿಯೊದ ಶೀರ್ಷಿಕೆ ಅಪ್ಲೋಡ್ ಆಗಿದ್ದು, ಅದನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಇಟಲಿಯಲ್ಲಿ ವಿಶ್ವನಾಯಕರನ್ನು ಭೇಟಿ ಮಾಡಲು ಮೋದಿ ಟ್ಯಾಕ್ಸಿಯಲ್ಲಿ ತೆರಳಿದ್ದರೆ?

ಫ್ಯಾಕ್ಟ್‌ಚೆಕ್

ವಾಸ್ತವದಲ್ಲಿ ಈ ವಿಡಿಯೊವನ್ನು ಎರೆಡು ಬೇರೆ ಬೇರೆ ವಿಡಿಯೋಗಳನ್ನು ಸೇರಿಸಿ ಮಾಡಲಾಗಿದೆ. ಮೊದಲ ಭಾಗದಲ್ಲಿ ಜನ ಸಮೂಹವೊಂದು ಯುವಕನ ಮೇಲೆ ದಾಳಿ ಮಾಡುತ್ತದೆ. ಅದರಲ್ಲಿ ಸುದರ್ಶನ್ ನ್ಯೂಸ್‌ನ ಲೋಗೊ ಕಾಣಬಹುದು. ವಿಡಿಯೊದ ಎರಡನೇ ಭಾಗದಲ್ಲಿ ಅರೆ ಬೆತ್ತಲೆಯಾಗಿರುವ, ಬಾಯಿಗೆ ಬಟ್ಟೆ ತುರುಕಲ್ಪಟ್ಟ, ನೀಲಿ ಬಣ್ಣದ ಪ್ಯಾಂಟ್‌ಗೆ ಬೆಲ್ಟ್‌ ಧರಿಸಿರುವ ಯುವಕನ್ನು ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ಈ ದೃಶ್ಯವಂತೂ ಅಮಾನವೀಯವಾಗಿದ್ದು, ನೋಡಲು ಸಾಧ್ಯವಿಲ್ಲದಂತಿದೆ. ಎರಡು ವಿಡಿಯೊವನ್ನು ಸೇರಿಸಿ ಈ ವಿಡಿಯೊ ಮಾಡಿರುವುದರಿಂದ ನಾವು ವಿಡಿಯೊವನ್ನು ಬೇರೆ ಬೇರೆಯಾಗಿ ಫ್ಯಾಕ್ಟ್‌ಚೆಕ್‌ ಮಾಡೋಣ.

ವಿಡಿಯೋದ ಮೊದಲನೇ ಭಾಗ

ಮೊದಲನೇ ಭಾಗದಲ್ಲಿ ನಾಲ್ಕೈದು ಜನ ಗುಂಪು ಯುವಕನ ಮೇಲೆ ದಾಳಿ ಮಾಡಿ, ಆತನನ್ನು ಎಳೆದೊಯ್ಯುತ್ತದೆ. ಈ ವಿಡಿಯೊವನ್ನು ನಾವು (ನಾನುಗೌರಿ.ಕಾಂ) ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದ್ದು, ಈ ವೇಳೆ ನಾವು ಕೆಲವು ಟ್ವೀಟ್‌ಗಳನ್ನು ಗಮನಿಸಿದೆವು. ಈ ಟ್ವೀಟ್‌ ಆಧಾರದಲ್ಲಿ ನಾವು ಇನ್ನಷ್ಟು ಹುಡುಕಾಡಿದ್ದು, ಈ ವೇಳೆ ಈ ಘಟನೆಯ ಬಗ್ಗೆ ವರದಿ ಮಾಡಿರುವ ಪತ್ರಿಕಾ ವರದಿಗಳು ನಮಗೆ ಸಿಕ್ಕಿವೆ.

ಅಮರ್‌‌ ಉಜಾಲ’ ಪತ್ರಿಕೆಯು 2021 ಮೇ 5ನೇ ತಾರೀಕಿನಂದು ವರದಿ ಮಾಡಿದೆ. ವರದಿಯ ಪ್ರಕಾರ, “ಲೈನ್‌ಮ್ಯಾನ್‌ನನ್ನು ಒತ್ತೆಯಾಳಾಗಿ ಇಟ್ಟುಕೊಂಡು ಹಲ್ಲೆ” ಎಂದು ವರದಿ ಮಾಡಿದೆ. ಈ ವರದಿಯ ಪ್ರಕಾರ, “ಮುಜಫರ್‌ನಗರ, ಭೋಪಾ ಗ್ರಾಮದ ಸಿಕ್ರಿಯಲ್ಲಿ ವಿದ್ಯುತ್‌ ದೋಷವನ್ನು ಸರಿಪಡಿಸಲು ಬಂದ ಲೈನ್‌ಮ್ಯಾನ್‌ನನ್ನು ಗ್ರಾಮಸ್ಥರು ಒತ್ತೆಯಾಳಾಗಿಟ್ಟು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಲೈನ್‌ಮ್ಯಾನ್‌ನ ಸಹಚರರು ಅಲ್ಲಿಂದ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನೆಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ” ಎಂದು ಬರೆಯಲಾಗಿದೆ.

ಅಮರ್‌ ಉಜಾಲಾ ಪತ್ರಿಕೆಯ ಸುದ್ದಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಜೊತೆಗೆ ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಅಪ್‌ಲೋಡ್‌ ಮಾಡಿದ್ದ ವ್ಯಕ್ತಿಗಳಿಗೆ ಮುಜಾಫರ್‌ ನಗರ ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸರ ಪ್ರಕಾರ, “ಭೋಪಾ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ 07 ಜನರನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ. ಜೊತೆಗೆ 10-12 ಅಪರಿಚಿತ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 10 ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ” ಎಂದು ಮೇ ತಿಂಗಳ 5 ರಂದು ನೀಡಿದ್ದ ಪ್ರತಿಕ್ರಿಯೆಯಲ್ಲಿ ಹೇಳಿದ್ದಾರೆ.

ವಿಡಿಯೋದ ಎರಡನೇ ಭಾಗ

ವಿಡಿಯೋದ ಎರಡನೇ ಭಾಗದಲ್ಲಿ ಭಯಾನಕ ದೃಶ್ಯವಿದ್ದು, ಅರೆ ಬೆತ್ತಲೆಯಾಗಿರುವ, ಬಾಯಿಗೆ ಬಟ್ಟೆ ತುರುಕಲ್ಪಟ್ಟ, ನೀಲಿ ಬಣ್ಣದ ಪ್ಯಾಂಟ್‌ಗೆ ಬೆಲ್ಟ್‌ ಧರಿಸಿರುವ ಯುವಕನ್ನು ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ಈ ದೃಶ್ಯವಂತೂ ಅಮಾನವೀಯವಾಗಿದ್ದು, ನೋಡಲು ಸಾಧ್ಯವಿಲ್ಲದಂತಿದೆ. ಈ ಚಿತ್ರವನ್ನೂ ನಾವು ರಿವರ್ಸ್ ಸರ್ಚ್ ಮಾಡಿದ್ದೇವೆ. ಈ ವೇಳೆ ನಮಗೆ ಆಸ್ಟ್ರೇಲಿಯಾದ ಸುದ್ದಿ ವೆಬ್‌‌ ಪೋರ್ಟಾಲ್‌ ಆಗಿರುವ news.com.auನಲ್ಲಿ 2018ರ ಫೆಬ್ರವರಿ ತಿಂಗಳ 6ರಂದು ಮಾಡಿರುವ ಸುದ್ದಿ ದೊರಕಿದೆ.

ವರದಿ ಪ್ರಕಾರ, “ಈ ಘಟನೆಯು ದಕ್ಷಿಣ ಅಮೆರಿಕಾದ ದೇಶವಾದ ವೆನೆಜುವೆಲಾದಲ್ಲಿ ನಡೆದಿದೆ. ವಿಡಿಯೋದಲ್ಲಿ, ಹದಿಹರೆಯದ ಬಾಲಕನನ್ನು ಮಾದಕ ದ್ರವ್ಯ ಮಾಫಿಯಾವು ಕತ್ತು ಕೊಯ್ದು ಕೊಂದಿದೆ. ಬಾಲಕನು ಮಾದಕ ದ್ರವ್ಯ ಮಾಫಿಯಾದ ವಿರೋಧಿ ಗುಂಪಿನವನಾಗಿದ್ದರಿಂದ, ಆತನನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ಕತ್ತು ಕೊಯ್ದು ಕೊಂದಿತು. ಈ ವಿಡಿಯೊವನ್ನು ಆರೋಪಿ ಗುಂಪೇ ಚಿತ್ರೀಕರಿಸಿ, ದೃಶ್ಯಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದೆ”

ಈ ಘಟನೆಯನ್ನು ‘ಮೈಲ್‌ ಆನ್‌ಲೈನ್‌’ ಸುದ್ದಿ ಪೋರ್ಟಲ್‌ ಕೂಡಾ ವರದಿ ಮಾಡಿದೆ. ಈ ಪತ್ರಿಕೆಯ ವರದಿಯ ಪ್ರಕಾರ, ಬಾಲಕನು 13 ವರ್ಷದವನಾಗಿದ್ದು, ಆತನ ಕತ್ತನ್ನು ಕೊಯ್ಯುವ ಮೊದಲು ಕಿವಿಯನ್ನು ಕೂಡಾ ಕತ್ತರಿಸಲಾಗಿತ್ತು.

ಒಟ್ಟಿನಲ್ಲಿ ವೈರಲ್‌ ಆಗಿರುವ ವಿಡಿಯೊವನ್ನು ಎರಡು ಘಟನೆಗಳ ದೃಶ್ಯಗಳನ್ನು ಸೇರಿಸಿ ಮಾಡಲಾಗಿದೆ. ಮೊದಲನೇ ಘಟನೆಯು 2021ರ ಮೇ ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಎರಡನೇ ಘಟನೆ 2018 ರ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಅಮೆರಿಕಾದ ವೆನೆಜುವಾಲದಲ್ಲಿ ನಡೆದಿದೆ. ಈ ಎರಡು ವಿಡಿಯೊಗೂ, ಕೇರಳಕ್ಕೂ, ಆರೆಸ್ಸೆಸ್‌ಗೂ ಯಾವುದೇ ಸಂಬಂಧವಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಪತ್ರಿಕೆ ಅದೋಗತಿಗೆ ಹೋಗಲು ಇಂತ ನ್ಯೂಸ್ ಗಳೇ ಕಾರಣ ,ಜನರು ಪತ್ರಿಕೆ ಮೇಲೆ ನಂಬಿಕೆ ಕಳೆದು ಕೊಳ್ಳಲು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...