Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಕೇರಳಲ್ಲಿ RSS ಕಾರ್ಯಕರ್ತನನ್ನು ಕೊಲ್ಲುತ್ತಿರುವ ವಿಡಿಯೊ ಎಂದು ಸುಳ್ಳು ಹರಡಲಾಗುತ್ತಿದೆ

ಫ್ಯಾಕ್ಟ್‌‌ಚೆಕ್: ಕೇರಳಲ್ಲಿ RSS ಕಾರ್ಯಕರ್ತನನ್ನು ಕೊಲ್ಲುತ್ತಿರುವ ವಿಡಿಯೊ ಎಂದು ಸುಳ್ಳು ಹರಡಲಾಗುತ್ತಿದೆ

ಕೇರಳದ ಮುಸ್ಲಿಮರು ಆರೆಸ್ಸೆಸ್‌ ಕಾರ್ಯಕರ್ತನ ಕತ್ತನ್ನು ಕೊಯ್ಯುತ್ತಿರುವ ದೃಶ್ಯ ಎಂದು ಪ್ರತಿಪಾದಿಸಿ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

- Advertisement -
- Advertisement -

‘ಕೇರಳದ ಮುಸ್ಲಿಮರು ಆರೆಸ್ಸೆಸ್‌ ಕಾರ್ಯಕರ್ತನ ಕತ್ತನ್ನು ಕೊಯ್ಯುತ್ತಿರುವ ದೃಶ್ಯ’ ಎಂದು ಪ್ರತಿಪಾದಿಸಿ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 50 ಸೆಕೆಂಡ್‌ ಇರುವ ವೈರಲ್ ವಿಡಿಯೊದಲ್ಲಿ, ಯುವಕನೊಬ್ಬನ ಮೇಲೆ ಮುಸ್ಲಿಮರ ಗುಂಪೊಂದು ದಾಳಿ ಮಾಡಿ ಎಳೆದುಕೊಂಡು ಹೋಗುತ್ತದೆ. ನಂತರ ಅದೇ ವಿಡಿಯೊ ಮುಂದುವರಿದಂತೆ, ಶರ್ಟ್‌ ಬಿಚ್ಚಿರುವ ಯುವಕನೊಬ್ಬನನ್ನು ಮಲಗಿಸಿ ಆತನ ಕತ್ತನ್ನು ಕೊಯ್ಯುತ್ತಿರುವ ಭಯಾನಕ ದೃಶ್ಯವಿದೆ.

ಈ ಭಯಾನಕ ದೃಶ್ಯವಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುಖ್ಯವಾಗಿ ವಾಟ್ಸಪ್‌‌ನಲ್ಲಿ ಇದು ಹರಿದಾಡುತ್ತಿದ್ದು, ಅದರ ಶಿರ್ಷಿಕೆ ಕೆಳಗಿನಂತಿದೆ.

ಅತಿ ಘೋರ, ಕ್ರೂರ, ನೋಡಲು ಅಸಾಧ್ಯ. ಇದು ಕೇರಳದ ಮುಸ್ಲಿಂ ಸಮುದಾಯದವರು RSS ಸ್ವಯಂ ಸೇವಕನನ್ನು ಕುತ್ತಿಗೆ ಕತ್ತರಿಸಿ ಹತ್ಯೆ ಮಾಡಲಾಯಿತು. ಯೋಚಿಸಿ! ಮುಂದೆ ಇವರು ಬಹುಸಂಖ್ಯಾತರಾದರೆ ಹಿಂದುಗಳ ಸ್ಥಿತಿ, ಗತಿ ಏನಾಗಬಹುದು? ನಿಜವಾಗಿ ಭಯಂಕರ ಭಯಾನಕ

ವಾಟ್ಸಪ್ ಮಾತ್ರವಲ್ಲದೆ ಟ್ವಿಟರ್‌ ಮತ್ತು ಫೇಸ್‌ಬುಕ್‌ನಲ್ಲೂ ಈ ವಿಡಿಯೊ ಹರಿದಾಡಿದೆ. ಅದನ್ನು ಇಲ್ಲಿ ನೋಡಬಹುದು. (ಎಚ್ಚರಿಕೆ: ವಿಡಿಯೊ ಭಯಾನಕವಾಗಿದೆ). ಫೇಸ್‌ಬುಕ್‌ನಲ್ಲೂ ಈ ವಿಡಿಯೊದ ಶೀರ್ಷಿಕೆ ಅಪ್ಲೋಡ್ ಆಗಿದ್ದು, ಅದನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಇಟಲಿಯಲ್ಲಿ ವಿಶ್ವನಾಯಕರನ್ನು ಭೇಟಿ ಮಾಡಲು ಮೋದಿ ಟ್ಯಾಕ್ಸಿಯಲ್ಲಿ ತೆರಳಿದ್ದರೆ?

ಫ್ಯಾಕ್ಟ್‌ಚೆಕ್

ವಾಸ್ತವದಲ್ಲಿ ಈ ವಿಡಿಯೊವನ್ನು ಎರೆಡು ಬೇರೆ ಬೇರೆ ವಿಡಿಯೋಗಳನ್ನು ಸೇರಿಸಿ ಮಾಡಲಾಗಿದೆ. ಮೊದಲ ಭಾಗದಲ್ಲಿ ಜನ ಸಮೂಹವೊಂದು ಯುವಕನ ಮೇಲೆ ದಾಳಿ ಮಾಡುತ್ತದೆ. ಅದರಲ್ಲಿ ಸುದರ್ಶನ್ ನ್ಯೂಸ್‌ನ ಲೋಗೊ ಕಾಣಬಹುದು. ವಿಡಿಯೊದ ಎರಡನೇ ಭಾಗದಲ್ಲಿ ಅರೆ ಬೆತ್ತಲೆಯಾಗಿರುವ, ಬಾಯಿಗೆ ಬಟ್ಟೆ ತುರುಕಲ್ಪಟ್ಟ, ನೀಲಿ ಬಣ್ಣದ ಪ್ಯಾಂಟ್‌ಗೆ ಬೆಲ್ಟ್‌ ಧರಿಸಿರುವ ಯುವಕನ್ನು ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ಈ ದೃಶ್ಯವಂತೂ ಅಮಾನವೀಯವಾಗಿದ್ದು, ನೋಡಲು ಸಾಧ್ಯವಿಲ್ಲದಂತಿದೆ. ಎರಡು ವಿಡಿಯೊವನ್ನು ಸೇರಿಸಿ ಈ ವಿಡಿಯೊ ಮಾಡಿರುವುದರಿಂದ ನಾವು ವಿಡಿಯೊವನ್ನು ಬೇರೆ ಬೇರೆಯಾಗಿ ಫ್ಯಾಕ್ಟ್‌ಚೆಕ್‌ ಮಾಡೋಣ.

ವಿಡಿಯೋದ ಮೊದಲನೇ ಭಾಗ

ಮೊದಲನೇ ಭಾಗದಲ್ಲಿ ನಾಲ್ಕೈದು ಜನ ಗುಂಪು ಯುವಕನ ಮೇಲೆ ದಾಳಿ ಮಾಡಿ, ಆತನನ್ನು ಎಳೆದೊಯ್ಯುತ್ತದೆ. ಈ ವಿಡಿಯೊವನ್ನು ನಾವು (ನಾನುಗೌರಿ.ಕಾಂ) ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದ್ದು, ಈ ವೇಳೆ ನಾವು ಕೆಲವು ಟ್ವೀಟ್‌ಗಳನ್ನು ಗಮನಿಸಿದೆವು. ಈ ಟ್ವೀಟ್‌ ಆಧಾರದಲ್ಲಿ ನಾವು ಇನ್ನಷ್ಟು ಹುಡುಕಾಡಿದ್ದು, ಈ ವೇಳೆ ಈ ಘಟನೆಯ ಬಗ್ಗೆ ವರದಿ ಮಾಡಿರುವ ಪತ್ರಿಕಾ ವರದಿಗಳು ನಮಗೆ ಸಿಕ್ಕಿವೆ.

ಅಮರ್‌‌ ಉಜಾಲ’ ಪತ್ರಿಕೆಯು 2021 ಮೇ 5ನೇ ತಾರೀಕಿನಂದು ವರದಿ ಮಾಡಿದೆ. ವರದಿಯ ಪ್ರಕಾರ, “ಲೈನ್‌ಮ್ಯಾನ್‌ನನ್ನು ಒತ್ತೆಯಾಳಾಗಿ ಇಟ್ಟುಕೊಂಡು ಹಲ್ಲೆ” ಎಂದು ವರದಿ ಮಾಡಿದೆ. ಈ ವರದಿಯ ಪ್ರಕಾರ, “ಮುಜಫರ್‌ನಗರ, ಭೋಪಾ ಗ್ರಾಮದ ಸಿಕ್ರಿಯಲ್ಲಿ ವಿದ್ಯುತ್‌ ದೋಷವನ್ನು ಸರಿಪಡಿಸಲು ಬಂದ ಲೈನ್‌ಮ್ಯಾನ್‌ನನ್ನು ಗ್ರಾಮಸ್ಥರು ಒತ್ತೆಯಾಳಾಗಿಟ್ಟು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಲೈನ್‌ಮ್ಯಾನ್‌ನ ಸಹಚರರು ಅಲ್ಲಿಂದ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನೆಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ” ಎಂದು ಬರೆಯಲಾಗಿದೆ.

ಅಮರ್‌ ಉಜಾಲಾ ಪತ್ರಿಕೆಯ ಸುದ್ದಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಜೊತೆಗೆ ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಅಪ್‌ಲೋಡ್‌ ಮಾಡಿದ್ದ ವ್ಯಕ್ತಿಗಳಿಗೆ ಮುಜಾಫರ್‌ ನಗರ ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸರ ಪ್ರಕಾರ, “ಭೋಪಾ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ 07 ಜನರನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ. ಜೊತೆಗೆ 10-12 ಅಪರಿಚಿತ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 10 ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ” ಎಂದು ಮೇ ತಿಂಗಳ 5 ರಂದು ನೀಡಿದ್ದ ಪ್ರತಿಕ್ರಿಯೆಯಲ್ಲಿ ಹೇಳಿದ್ದಾರೆ.

ವಿಡಿಯೋದ ಎರಡನೇ ಭಾಗ

ವಿಡಿಯೋದ ಎರಡನೇ ಭಾಗದಲ್ಲಿ ಭಯಾನಕ ದೃಶ್ಯವಿದ್ದು, ಅರೆ ಬೆತ್ತಲೆಯಾಗಿರುವ, ಬಾಯಿಗೆ ಬಟ್ಟೆ ತುರುಕಲ್ಪಟ್ಟ, ನೀಲಿ ಬಣ್ಣದ ಪ್ಯಾಂಟ್‌ಗೆ ಬೆಲ್ಟ್‌ ಧರಿಸಿರುವ ಯುವಕನ್ನು ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ಈ ದೃಶ್ಯವಂತೂ ಅಮಾನವೀಯವಾಗಿದ್ದು, ನೋಡಲು ಸಾಧ್ಯವಿಲ್ಲದಂತಿದೆ. ಈ ಚಿತ್ರವನ್ನೂ ನಾವು ರಿವರ್ಸ್ ಸರ್ಚ್ ಮಾಡಿದ್ದೇವೆ. ಈ ವೇಳೆ ನಮಗೆ ಆಸ್ಟ್ರೇಲಿಯಾದ ಸುದ್ದಿ ವೆಬ್‌‌ ಪೋರ್ಟಾಲ್‌ ಆಗಿರುವ news.com.auನಲ್ಲಿ 2018ರ ಫೆಬ್ರವರಿ ತಿಂಗಳ 6ರಂದು ಮಾಡಿರುವ ಸುದ್ದಿ ದೊರಕಿದೆ.

ವರದಿ ಪ್ರಕಾರ, “ಈ ಘಟನೆಯು ದಕ್ಷಿಣ ಅಮೆರಿಕಾದ ದೇಶವಾದ ವೆನೆಜುವೆಲಾದಲ್ಲಿ ನಡೆದಿದೆ. ವಿಡಿಯೋದಲ್ಲಿ, ಹದಿಹರೆಯದ ಬಾಲಕನನ್ನು ಮಾದಕ ದ್ರವ್ಯ ಮಾಫಿಯಾವು ಕತ್ತು ಕೊಯ್ದು ಕೊಂದಿದೆ. ಬಾಲಕನು ಮಾದಕ ದ್ರವ್ಯ ಮಾಫಿಯಾದ ವಿರೋಧಿ ಗುಂಪಿನವನಾಗಿದ್ದರಿಂದ, ಆತನನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ಕತ್ತು ಕೊಯ್ದು ಕೊಂದಿತು. ಈ ವಿಡಿಯೊವನ್ನು ಆರೋಪಿ ಗುಂಪೇ ಚಿತ್ರೀಕರಿಸಿ, ದೃಶ್ಯಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದೆ”

ಈ ಘಟನೆಯನ್ನು ‘ಮೈಲ್‌ ಆನ್‌ಲೈನ್‌’ ಸುದ್ದಿ ಪೋರ್ಟಲ್‌ ಕೂಡಾ ವರದಿ ಮಾಡಿದೆ. ಈ ಪತ್ರಿಕೆಯ ವರದಿಯ ಪ್ರಕಾರ, ಬಾಲಕನು 13 ವರ್ಷದವನಾಗಿದ್ದು, ಆತನ ಕತ್ತನ್ನು ಕೊಯ್ಯುವ ಮೊದಲು ಕಿವಿಯನ್ನು ಕೂಡಾ ಕತ್ತರಿಸಲಾಗಿತ್ತು.

ಒಟ್ಟಿನಲ್ಲಿ ವೈರಲ್‌ ಆಗಿರುವ ವಿಡಿಯೊವನ್ನು ಎರಡು ಘಟನೆಗಳ ದೃಶ್ಯಗಳನ್ನು ಸೇರಿಸಿ ಮಾಡಲಾಗಿದೆ. ಮೊದಲನೇ ಘಟನೆಯು 2021ರ ಮೇ ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಎರಡನೇ ಘಟನೆ 2018 ರ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಅಮೆರಿಕಾದ ವೆನೆಜುವಾಲದಲ್ಲಿ ನಡೆದಿದೆ. ಈ ಎರಡು ವಿಡಿಯೊಗೂ, ಕೇರಳಕ್ಕೂ, ಆರೆಸ್ಸೆಸ್‌ಗೂ ಯಾವುದೇ ಸಂಬಂಧವಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಪತ್ರಿಕೆ ಅದೋಗತಿಗೆ ಹೋಗಲು ಇಂತ ನ್ಯೂಸ್ ಗಳೇ ಕಾರಣ ,ಜನರು ಪತ್ರಿಕೆ ಮೇಲೆ ನಂಬಿಕೆ ಕಳೆದು ಕೊಳ್ಳಲು.

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...