Homeಕರ್ನಾಟಕನೀಟ್‌ ವಿರುದ್ಧ ಎಚ್‌ಡಿಕೆ ಸರಣಿ ಟ್ವೀಟ್‌; ನಂತರ ಡಿಲೀಟ್‌- ಕಾರಣ ಸ್ವಾರಸ್ಯಕರ!

ನೀಟ್‌ ವಿರುದ್ಧ ಎಚ್‌ಡಿಕೆ ಸರಣಿ ಟ್ವೀಟ್‌; ನಂತರ ಡಿಲೀಟ್‌- ಕಾರಣ ಸ್ವಾರಸ್ಯಕರ!

- Advertisement -
- Advertisement -

“ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರಕಾರವೂ ಇಂತಹ ನಿಲುವಿಗೆ ಬರಲಿ. ರಾಜ್ಯದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸಂಕಲ್ಪ ಅವರ ಹಾದಿ ಹಿಡಿಯುವುದನ್ನು ತಪ್ಪಿಸಬೇಕು” ಎಂದು ಆಶಯ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದಾರೆ.

“ಸೊರಬ ತಾಲ್ಲೂಕಿನ ಚೆನ್ನಪಟ್ಟಣ ಗ್ರಾಮದ ಸಂಕಲ್ಪ ಎಂಬ ವಿದ್ಯಾರ್ಥಿನಿ ಸಾವಿಗೆ ಶರಣಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಹೀಗೆ ಜೀವವನ್ನು ಕೊನೆ ಮಾಡಿಕೊಂಡ ಆ ಯುವತಿಯ ದುರ್ಮರಣ ಎಲ್ಲರಿಗೂ ಪಾಠ ಆಗಬೇಕಿದೆ” ಎಂದು ‘ವಿಜಯವಾಣಿ’ಯಲ್ಲಿ ಪ್ರಕಟವಾದ ಸುದ್ದಿಯನ್ನು ಅವರು ಹಂಚಿಕೊಂಡಿದ್ದರು.

“ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕು ಹಾಗೂ ಉನ್ನತ ಶಿಕ್ಷಣ ಬಡ, ಸಾಮಾನ್ಯ ಮಕ್ಕಳಿಗೂ ಸಿಗಬೇಕು ಎನ್ನುವ ಕಾಳಜಿಯ ಜತೆಗೆ, ಯಾರೇ ವಿದ್ಯಾರ್ಥಿಗಳು ಸೀಟು ಸಿಗಲಿಲ್ಲ ಎನ್ನುವ ಕಾರಣಕ್ಕೆ ಸಂಕಲ್ಪ ಅವರಂತೆ ಬದುಕನ್ನು ಕೊನೆ ಮಾಡಿಕೊಳ್ಳಬಾರದು” ಎಂದು ಹೇಳಿದ್ದರು.

“ಅವಕಾಶಗಳು ಆಕಾಶದಷ್ಟು ಇವೆ. ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಮಾರ್ಗಗಳು ಕೂಡ ಇವೆ. ದೃಢಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಕಲ್ಪ ಅವರಂತೆ ಜೀವ ತೆಗೆದುಕೊಳ್ಳಬಾರದು. ಇದು ನನ್ನ ಕಳಕಳಿಯ ಮನವಿ” ಎಂದು ಕೋರಿದ್ದರು.

“ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರಕಾರವೂ ಇಂತಹ ನಿಲುವಿಗೆ ಬರಲಿ.  ರಾಜ್ಯದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸಂಕಲ್ಪ ಅವರ ಹಾದಿ ಹಿಡಿಯುವುದನ್ನು ತಪ್ಪಿಸಬೇಕು” ಎಂದು ಆಗ್ರಹಿಸಿದ್ದರು.


ಇದನ್ನೂ ಓದಿರಿ: ವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು


ನೀಟ್‌ ವಿರುದ್ಧ ಕುಮಾರಸ್ವಾಮಿಯವರು ಎತ್ತಿದ ಮಹತ್ವದ ಚರ್ಚೆಗೆ ಸಂಬಂಧಿಸಿದಂತೆ ವಿಜಯಕರ್ನಾಟಕ ವೆಬ್‌ಸೈಟ್‌ನಲ್ಲಿ ವರದಿ ಕೂಡ ಆಗಿದೆ. “ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದರೂ ವೈದ್ಯೆಯಾಗುವ ಬಯಕೆಗೆ ತಕ್ಕಂತೆ ಸರ್ಕಾರಿ ಕೋಟಾದಲ್ಲಿ ಎಂಬಿಬಿಎಸ್ ಸೀಟು ಪಡೆದುಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಕನ್ನಡಿಗರನ್ನು ಅವಕಾಶ ವಂಚಿತರನ್ನಾಗಿ ಮಾಡುತ್ತಿರುವ ನೀಟ್‌ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಸರಣಿ ಟ್ವೀಟ್‌ಗಳನ್ನು ಮಾಡಿ, ಘಟನೆ ಬಗ್ಗೆ ಬೇಸರ ಹೊರಹಾಕಿದ್ದಾರೆ” ಎಂದು ವರದಿ ಹೇಳಿದೆ.

ನೀಟ್ ವಿರುದ್ಧ ದನಿ ಎತ್ತಿರುವುದು ನಿಜಕ್ಕೂ ಸ್ವಾಗತಾರ್ಹ ಸಂಗತಿ. ನೀಟ್‌ ಬಡ, ಮಧ್ಯಮ ವರ್ಗದ ಪ್ರತಿಭೆಗಳನ್ನು ಆತಂಕಕ್ಕೆ ತಳ್ಳುತ್ತಿರುವುದು ನಿಜ. ಹೀಗಾಗಿಯೇ ತಮಿಳುನಾಡು ಸರ್ಕಾರ ಮಹತ್ವದ ನಿರ್ಣಯವನ್ನು ಕೈಗೊಂಡಿರುವುದಕ್ಕೆ ಪ್ರಜ್ಞಾವಂತ ವಲಯದಿಂದ ಪ್ರಶಂಸೆಯ ಮಹಾಪೂರವೇ ಹರಿದುಬಂದಿದೆ. ಇಷ್ಟೊಂದು ಮಹತ್ವದ ಸಂಗತಿಯ ಕುರಿತು ಟ್ವೀಟ್ ಮಾಡಿದ ಕುಮಾರಸ್ವಾಮಿಯವರು ಡಿಲೀಟ್ ಮಾಡುವ ಪ್ರಮೇಯವೇನಿತ್ತು ಎಂಬ ಅನುಮಾನಗಳು ಮೂಡುತ್ತವೆ.

ಈ ಕುರಿತು ಫ್ಯಾಕ್ಟ್‌ ಚೆಕ್‌ ಮಾಡಿದಾಗ, ಕುಮಾರಸ್ವಾಮಿಯವರು ಹಂಚಿಕೊಂಡಿದ್ದ ಸುದ್ದಿಯು 2020ನೇ ಇಸವಿಯದ್ದಾಗಿದ್ದು, ಹೀಗಾಗಿ ಅವರು ಟ್ವೀಟ್‌ಗಳನ್ನು ಅಳಿಸಿ ಹಾಕಿದ್ದಾರೆಂದು ಭಾವಿಸಬಹುದಾಗಿದೆ.

ಕುಮಾರಸ್ವಾಮಿಯವರು ಹಂಚಿಕೊಂಡಿರುವ ಸುದ್ದಿ ತುಣುಕು ‘ವಿಜಯವಾಣಿ’ ವೆಬ್‌ಸೈಟ್‌ದಾಗಿತ್ತು. ವಾಟ್ಸ್‌ಆಪ್‌ನಲ್ಲಿ ಬಂದ ಟ್ವಿಟರ್‌ ಲಿಂಕ್‌ನಲ್ಲಿ ಕುಮಾರಸ್ವಾಮಿಯವರು ಹಂಚಿಕೊಂಡಿರುವ ಸುದ್ದಿಯ ಸಾಲುಗಳನ್ನು ಗುರುತಿಸಬಹುದು.

“ಸಂಕಲ್ಪಗೆ 5ನೇ ತರಗತಿಯಲ್ಲಿದ್ದಾಗ ಹೃದಯಾಘಾತವಾಗಿ ಶಸ್ತ್ರಚಿಕಿತ್ಸೆಗೊಳಗಾಗಿ ಚೇತರಿಸಿಕೊಂಡಿದ್ದಳು. ಅಂದಿನಿಂದ ಡಾಕ್ಟರ್‌ ಆಗಬೇಕು ಎಂದು ಕನಸು ಕಟ್ಟಿಕೊಂಡಿದ್ದಳು. ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ್ದರೂ ನೀಟ್‌ನಲ್ಲಿ ನಿರೀಕ್ಷಿತ ಅಂಕ ಗಳಿಸಲಾಗದ ಕಾರಣ ಸರ್ಕಾರಿ ಕೋಟಾದಲ್ಲಿ ಸೀಟು ಸಿಕ್ಕಿರಲಿಲ್ಲ..” ಎಂದು ಇರುವುದನ್ನು ಗಮನಿಸಬಹುದು.

ವಿಜಯವಾಣಿ ಸುದ್ದಿ ಜಾಲತಾಣದಲ್ಲಿ ಸುದ್ದಿಯನ್ನು ಹುಡುಕಿದಾಗ, ಈ ಮೇಲಿನ ಸಾಲುಗಳಿರುವ ಸುದ್ದಿಯು ಪತ್ತೆಯಾಯಿತು. “ಡಾಕ್ಟರ್‌ ಕನಸು ಕಟ್ಟಿದ್ದ ಯುವತಿ ಆತ್ಮಹತ್ಯೆ; ಶೇ. 96 ಅಂಕ ತೆಗೆದರೂ ಸಿಗದ ಸರ್ಕಾರಿ ಸೀಟು!’ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟವಾಗಿದೆ. ಸುದ್ದಿ ಪ್ರಕಟವಾದ ದಿನಾಂಕವನ್ನು ಪರಿಶೀಲಿಸಿದಾಗ, 2020ರ ಡಿಸೆಂಬರ್‌‌ 28 ಎಂದಿರುವುದನ್ನು ಗಮನಿಸಬಹುದು.

ಹಳೆಯ ಸುದ್ದಿ ಎಂದು ಗಮನಿಸದೆ ನೀಟ್ ರದ್ದು ಪ್ರಸ್ತಾಪವನ್ನು ಮಾಡಿದ್ದರಿಂದ ಕುಮಾರಸ್ವಾಮಿಯವರು ಸರಣಿ ಟ್ವೀಟ್‌ಗಳನ್ನು ಡಿಲೀಟ್ ಮಾಡಿರಬಹುದು ಎಂದು ಊಹಿಸಬಹುದು. ಆದರೆ ನೀಟ್ ವಿರುದ್ಧ ಕುಮಾರಸ್ವಾಮಿಯವರು ಎತ್ತಿರುವ ಪ್ರಶ್ನೆ ಮಹತ್ವದ್ದು. ನೀಟ್‌ ಶೈಕ್ಷಣಿಕ ವ್ಯವಸ್ಥೆಗೆ ಅಪಾಯಕಾರಿ. ಯುವತಿಯ ಆತ್ಮಹತ್ಯೆ ಹಳೆಯ ಸುದ್ದಿ ಎಂಬುದನ್ನು ಬಿಟ್ಟರೆ, ನೀಟ್‌ ಬಡ ಮಧ್ಯಮ ವಿದ್ಯಾರ್ಥಿಗಳ ಕತ್ತು ಹಿಸುಕುತ್ತಿರುವುದು ಸುಳ್ಳಲ್ಲ. ಅದರ ವಿರುದ್ಧ ಕರ್ನಾಟಕ ಸರ್ಕಾರ ತಮಿಳುನಾಡು ಸರ್ಕಾರದಂತೆಯೇ ನಿರ್ಣಯ ತೆಗೆದುಕೊಳ್ಳಬೇಕು ಎಂದು ಆಗ್ರಹಿಸುವುದು ಮಹತ್ವದ್ದಾಗಿದೆ.


ಇದನ್ನೂ ಓದಿರಿ: ಫ್ಯಾಕ್ಟ್‌‌ಚೆಕ್: ಕೇರಳಲ್ಲಿ RSS ಕಾರ್ಯಕರ್ತನನ್ನು ಕೊಲ್ಲುತ್ತಿರುವ ವಿಡಿಯೊ ಎಂದು ಸುಳ್ಳು ಹರಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...