Homeಕರ್ನಾಟಕಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

ಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

‘ಗೆದ್ದ ದ್ವೇಷ, ಸೋತ ಕಲಾವಿದ, ವಿದಾಯ!’ ಎಂದು ಬೆಂಗಳೂರು ಕಾರ್ಯಕ್ರಮ ರದ್ದಾಗಿದ್ದಕ್ಕೆ ಮುನಾವರ್‌ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ದೇಶದ ಖ್ಯಾತ ಸ್ಟಾಂಡ್‌ ಅಪ್‌ ಕಾಮೆಡಿಯನ್‌ ಮುನಾವರ್‌ ಫಾರೂಖಿ ಅವರ ಕಾರ್ಯಕ್ರಮವೊಂದು ಭಾನುವಾರ(ಇಂದು) ಬೆಂಗಳೂರಿನಲ್ಲಿ ಆಯೋಜನೆಯಾಗಿತ್ತು. ಆದರೆ ಬೆಂಗಳೂರಿನ ಅಶೋಕನಗರ ಠಾಣೆಯ ಪೊಲೀಸರು ಕಾನೂನು ಸುವ್ಯವಸ್ಥೆಗೆ ಭಂಗ ಆಗುತ್ತದೆ ಎಂದು ಈ ಹೇಳಿ ಆಯೋಜಕರಿಗೆ ಪತ್ರವನ್ನು ಬರೆದದ್ದರಿಂದ, ಆಯೋಜಕರು ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಮೇಡಿಯನ್ ಮುನಾವರ್‌, ‘‘ದ್ವೇಷ ಗೆದ್ದಿದೆ, ಕಲಾವಿದ ಸೋತುಬಿಟ್ಟ, ನಾನು ಮುಗಿಸುತ್ತಿದ್ದೇನೆ! ವಿದಾಯ! ಅನ್ಯಾಯ” ಎಂದು ಪ್ರತಿಕ್ರಿಯಿಸಿದ್ದಾರೆ.

ಆಯೋಜಕರಿಗೆ ಬೆಂಗಳೂರು ಪೊಲೀಸರು ಬರೆದಿರುವ ಪತ್ರದಲ್ಲಿ, “ಮುನಾವರ್‌ ಫಾರೂಖಿ ಒಬ್ಬರು ವಿವಾದಾತ್ಮಕ ವ್ಯಕ್ತಿಯಾಗಿದ್ದು, ಅವರು ಇತರ ಧರ್ಮಗಳ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡುವಂತಹ ವ್ಯಕ್ತಿ ಎಂದು ನಮಗೆ ತಿಳಿದು ಬಂದಿದೆ. ಆದ್ದರಿಂದ ಹಲವು ರಾಜ್ಯಗಳಲ್ಲಿ ಅವರ ಕಾರ್ಯಕ್ರಮಗಳು ರದ್ದಾಗಿವೆ. ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಅವರ ವಿರುದ್ದ ಪ್ರಕರಣಗಳು ದಾಖಲಾಗಿದೆ. ಅವರ ಕಾರ್ಯಕ್ರಮಕ್ಕೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ನಮಗೆ ಮಾಹಿತಿಯಿದೆ. ಅವರ ಕಾರ್ಯಕ್ರಮದಿಂದ ಸಾರ್ವಜನಿಕರಲ್ಲಿ ಶಾಂತಿ ಮತ್ತು ಸೌಹಾರ್ಧತೆ ಹಾಳಾಗುತ್ತದೆ, ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುತ್ತದೆ. ಆದ್ದರಿಂದ ಭಾನುವಾರ ನಡೆಯಲಿರುವ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು” ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂ ದೇವತೆಗಳ ಅಪಹಾಸ್ಯ: ಹಾಸ್ಯ ನಟನ ವಿರುದ್ದ ಯಾವುದೇ ಪುರಾವೆಯಿಲ್ಲ ಎಂದ ಪೊಲೀಸರು

ಕಾರ್ಯಕ್ರಮ ಆಯೋಜಕರು ಪ್ರದರ್ಶನವನ್ನು ರದ್ದುಗೊಳಿಸಿದ್ದಾರೆ ಎಂದು ಮುನಾವರ್‌ ಫಾರೂಖಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಭಾವನಾತ್ಮಕ ಪತ್ರ ಬರೆದಿದ್ದಾರೆ. ಅದರಲ್ಲಿ, “ಬೆದರಿಕೆಗಳು ಬಂದ ಹಿನ್ನಲೆ, ಬೆಂಗಳೂರಿನಲ್ಲಿ ಇಂದು ನಡೆಯಲಿದ್ದ ಶೋ ರದ್ದಾಗಿದೆ. ನಾವು 600+ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದೇವೆ. ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಸಂಸ್ಥೆಗೆ ದೇಣಿಗೆ ಸಂಗ್ರಹಕ್ಕಾಗಿ ತಿಂಗಳ ಹಿಂದೆ ನನ್ನ ತಂಡವನ್ನು ಕರೆಯಲಾಗಿತ್ತು. ಈ ಸಂಸ್ಥೆಯು ‘ಚಾರಿಟಿಗಾಗಿ ಇದನ್ನು ಮಾಡುತ್ತಿದ್ದೇವೆ ಎಂದು ಹೇಳದಿರಿ’ ಎಂದು ಹೇಳಿರುವುದನ್ನು ನಾವು ಒಪ್ಪಿಕೊಂಡಿದ್ದೆವು” ಎಂದು ಹೇಳಿದ್ದಾರೆ.

“ಇದು ಅನ್ಯಾಯವಾಗಿದೆ. ನನ್ನ ಪ್ರದರ್ಶನವು ಧರ್ಮಾತೀತವಾಗಿ ಭಾರತದ ಜನರಿಂದ ಪ್ರೀತಿ ಗಳಿಸಿದೆ. ಇದು ಅನ್ಯಾಯವಾಗಿದೆ. ಪ್ರದರ್ಶನದಲ್ಲಿ ಏನೂ ತೊಂದರೆಯಿಲ್ಲ ಎಂದು ನಾವು ಪ್ರದರ್ಶನದ ಸೆನ್ಸಾರ್ ಪ್ರಮಾಣಪತ್ರವನ್ನು ಹೊಂದಿದ್ದೇವೆ. ಬೆದರಿಕೆಗಳ ಕಾರಣ ಕಳೆದ 2 ತಿಂಗಳುಗಳಲ್ಲಿ 12 ಶೋಗಳನ್ನು ಬಿಟ್ಟುಬಿಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನನಗನಿಸುತ್ತದೆ ಇದು ಇಲ್ಲಿ ಮುಗಿಯಿತು ಎಂದು. ನನ್ನ ಹೆಸರು ಮುನಾವರ್ ಫಾರೂಖಿ ಮತ್ತು ಇದು ನನ್ನ ಸಮಯ. ಜನರೇ ನೀವುಗಳು ಅದ್ಭುತ ಪ್ರೇಕ್ಷಕರಾಗಿದ್ದೀರಿ. ನಾನು ಇದನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ, ವಿದಾಯ” ಎಂದು ಅವರು ಬೇಸರ ವ್ಯಕ್ತಪಡಿಸಿ ಬರೆದಿದ್ದಾರೆ.

ಇದನ್ನೂ ಓದಿ: ಕೊನೆಗೂ ಜೈಲಿನಿಂದ ಬಿಡುಗಡೆಗೊಂಡ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿ

ಮಧ್ಯಪ್ರದೇಶದ ಇಂಧೋರ್‌ನಲ್ಲಿ ಜನವರಿ 2 ರಂದು ಬಂಧನಕ್ಕೊಳಗಾಗಿದ್ದ ಹಾಸ್ಯ ಕಲಾವಿದ ಮುನಾವರ್‌ ಫಾರೂಖಿ ಅವರು ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯುಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಯಾವುದೇ ಪುರಾವೆಯಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

“ಮುನಾವರ್‌ ಫಾರೂಖಿ ಅವರು ಹಿಂದೂ ದೇವತೆಗಳನ್ನಾಲಿ ಅಥವಾ ಗೃಹ ಸಚಿವ ಅಮಿತ್ ಶಾ ಅವರನ್ನಾಲಿ ಅವಮಾನಿಸಿದ ಯಾವುದೇ ಪುರಾವೆಗಳಿಲ್ಲ” ಎಂದು ತುಕಾಗಂಜ್ ಠಾಣೆಯ ಇನ್ಸ್‌ಪೆಕ್ಟರ್‌ ಕಮಲೇಶ ಶರ್ಮಾ ಅವರು ಹೇಳಿದ್ದಾಗಿ ದಿ ಕ್ವಿಂಟ್ ವರದಿ ಮಾಡಿತ್ತು. ಇದರ ನಂತರ ಬಂಧನದ ಸುಮಾರು ಒಂದು ತಿಂಗಳ ನಂತರ ಜೈಲಿನಿಂದ ಬಿಡುಗಡೆ ಹೊಂದಿದ್ದರು. ಅದಾಗಿಯೂ ಹಲವು ಹಿಂದುತ್ವವಾದಿ ಸಂಘಟನೆಗಳ ಬೆದರಿಕೆಯಿಂದಾಗಿ ತನಗೆ ಕೆಲಸ ಮಾಡಲು ಆಗುತ್ತಿಲ್ಲ ಎಂದು ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್ ಫಾರೂಖಿ ಅಕ್ಟೋಬರ್‌ ಕೊನೆಯಲ್ಲಿ ಹೇಳಿದ್ದರು.

ಇದನ್ನೂ ಓದಿ: ಕಾಮೇಡಿಯನ್‌‌ ಮುನಾವರ್‌ ಫಾರೂಖಿಗೆ ಪ್ರತಿದಿನ 50 ಬೆದರಿಕೆ ಕರೆ; ಹಲವು ಶೋ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ದೇಶದಲ್ಲಿ ಇಲ್ಲಿನ ಮೂಲನಿವಾಸಿಗಳ ಮೇಲಿನ ದೌರ್ಜನ್ಯ ಇಂದು ನಿನ್ನೆಯದಲ್ಲ ಇದು ಹರಪ್ಪದ ಶ್ರೀಮಂತ ಸಂಸ್ಕೃತಿಯ ಮೇಲಿನ ದಾಳಿಯೋಂದಿಗೆ ಆದಿಯಾಗಿ ಬೌದ್ಧ ಧರ್ಮ , ಬಸವ ಧರ್ಮ ಹಾಗೂ ಇಂದಿಗೂ ಬಹುಜನರ ಮೇಲೆ ನಿರಂತರವಾಗಿ ನಡೆಯುತ್ತಲೇ ಇದೆ. ಅದಕ್ಕಾಗಿಯೇ ಬಹುಜನರನ್ನು ಸಾವಿರಾರು ವರ್ಷಗಳ ಕಾಲ ಶಿಕ್ಷಣ ಆದಿಯಾಗಿ ಎಲ್ಲಾ ಹಕ್ಕು ಅವಕಾಶಗಳಿಂದ ವಮಚಿಸಿದ್ದು, ಈಗಲೂ ಅದೆ ಪ್ರಯತ್ನಗಳು ನಡೆಯುತ್ತಲೇ ಇವೆ. ಆದರೆ ನಮ್ಮ ಈ ಮುಗ್ಧ ಜನರಿಗೆ ಅರ್ಥ ವಾಗದಿರುವುದೆ ದುರಂತ.

  2. Is it really for puneeth sir charity or… Doubt it… Puneeth sir never defamed this coutry reputation… Instead he silently did society reforms….. Not like this on stage

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...