Homeಕೊರೊನಾಓಮಿಕ್ರಾನ್ ಆತಂಕ: ಹೆಚ್ಚಿನ ಪರೀಕ್ಷೆ, ಹಾಟ್‌ಸ್ಪಾಟ್‌ಗಳ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ

ಓಮಿಕ್ರಾನ್ ಆತಂಕ: ಹೆಚ್ಚಿನ ಪರೀಕ್ಷೆ, ಹಾಟ್‌ಸ್ಪಾಟ್‌ಗಳ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ

- Advertisement -
- Advertisement -

ದಕ್ಷಿಣ ಆಫ್ರಿಕಾದಲ್ಲಿ ಈ ವಾರದ ಆರಂಭದಲ್ಲಿ ಕಂಡುಬಂದ ಕೊರೊನಾದ ಹೊಸ ರೂಪಾಂತರಕ್ಕೆ ‘ಓಮಿಕ್ರಾನ್’ ಎಂದು ಮರುನಾಮಕರಣ ಮಾಡಲಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ(WHO)ಯು ಈ ರೂಪಾಂತರವನ್ನು ‘ಕಳವಳಕಾರಿ ರೂಪಾಂತರ’ ಎಂದು ಕರೆದಿದೆ. ’ಓಮಿಕ್ರಾನ್’ ಬಗ್ಗೆ ಹೆಚ್ಚುತ್ತಿರುವ ಆತಂಕದ ಮಧ್ಯೆಯೇ ತೀವ್ರವಾದ ನಿಯಂತ್ರಣ, ಸಕ್ರಿಯ ಕಣ್ಗಾವಲು ಮತ್ತು ಉತ್ತಮ ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಹೆಚ್ಚಿಸಲು ಒಕ್ಕೂಟ ಸರ್ಕಾರವು ಎಲ್ಲಾ ರಾಜ್ಯಗಳನ್ನು ಸೂಚಿಸಿದೆ.

“ಈ ಕೊರೊನಾ ರೂಪಾಂತರವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ತೀವ್ರವಾದ ನಿಯಂತ್ರಣ, ಸಕ್ರಿಯ ಕಣ್ಗಾವಲು, ವ್ಯಾಕ್ಸಿನೇಷನ್ ಹೆಚ್ಚಳ ಮತ್ತು ಕೋವಿಡ್-ಸೂಕ್ತ ಮಾರ್ಗಸೂಚಿಗಳನ್ನು ಪೂರ್ವಭಾವಿ ಕ್ರಮದಲ್ಲಿ ಜಾರಿಗೊಳಿಸುವುದು ಅತ್ಯಗತ್ಯ” ಎಂದು ಆರೋಗ್ಯ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಓಮಿಕ್ರಾನ್‌ ಇತರ ರೂಪಗಳಿಗಿಂತ ಹೆಚ್ಚು ವೇಗವಾಗಿ ಹರಡಬಹುದು ಎಂದು WHO ಹೇಳಿದೆ.

ಅಂತಾರಾಷ್ಟ್ರೀಯ ವಿಮಾನಗಳ ಮೂಲಕ ಬರುವ ಪ್ರಯಾಣಿಕರ ಹಿಂದಿನ ಪ್ರಯಾಣದ ವಿವರಗಳನ್ನು ಪಡೆದು ವರದಿ ಮಾಡುವ ಕಾರ್ಯವಿಧಾನವಿದ್ದು, ಇದನ್ನು ನಿಮ್ಮ ಮಟ್ಟದಲ್ಲಿ ಮತ್ತೆ ಪರಿಶೀಲಿಸಬೇಕು ಎಂದು ಕೇಂದ್ರವು ರಾಜ್ಯಗಳಿಗೆ ತಿಳಿಸಿದೆ.

ಇದನ್ನೂ ಓದಿ: ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

“ಈ ರೂಪಾಂತರಿತ ವೈರಸ್‌ನಿಂದ ಉಂಟಾಗುವ ಉಲ್ಬಣವನ್ನು ನಿಭಾಯಿಸಲು ಸಾಕಷ್ಟು ಪರೀಕ್ಷಾ ಮೂಲಸೌಕರ್ಯವನ್ನು ಕಾರ್ಯಗತಗೊಳಿಸಬೇಕಾಗಿದೆ. ಕೆಲವು ರಾಜ್ಯಗಳಲ್ಲಿ ಒಟ್ಟಾರೆ ಪರೀಕ್ಷೆ ಮತ್ತು ಆರ್‌ಟಿ-ಪಿಸಿಆರ್ ಪರೀಕ್ಷೆಗಳ ಪ್ರಮಾಣವು ಕುಸಿದಿದ್ದು, ಇದರಿಂದ ಸೋಂಕಿನ ಹರಡುವಿಕೆಯ ನಿಜವಾದ ಮಟ್ಟವನ್ನು ನಿರ್ಧರಿಸಲು ಕಷ್ಟ” ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಇತ್ತೀಚಿಗೆ ಪಾಸಿಟಿವ್ ಪ್ರಕರಣಗಳು ಕಂಡುಬಂದ ಪ್ರದೇಶಗಳ ನಿರಂತರ ಮೇಲ್ವಿಚಾರಣೆಯನ್ನು ಮಾಡಬೇಕು. ಹಾಟ್‌ಸ್ಪಾಟ್‌ಗಳಲ್ಲಿ ಸ್ಯಾಚುರೇಶನ್ ಪರೀಕ್ಷೆಯ ಅಗತ್ಯವಿದೆ. ಜೊತೆಗೆ ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಎಲ್ಲಾ ಪಾಸಿಟಿವ್ ಬಂದ ವ್ಯಕ್ತಿಗಳ ಮಾದರಿಗಳನ್ನು ಗೊತ್ತುಪಡಿಸಿದ ಲ್ಯಾಬ್‌ಗಳಿಗೆ ಕಳುಹಿಸಬೇಕು ಎಂದು ಸೂಚಿಸಿದೆ.

“ದೇಶದಲ್ಲಿ ಈ ರೂಪಾಂತರಿ ಕುರಿತು ಸಾಮಾನ್ಯವಾಗಿ ತಪ್ಪು ಮಾಹಿತಿಗಳು ಜನರಿಗೆ ತಲುಪುತ್ತಿರುತ್ತವೆ. ಇದು ಜನಸಾಮಾನ್ಯರಲ್ಲಿ ಆತಂಕಕ್ಕೆ ಕಾರಣವಾಗುತ್ತದೆ. ಇದನ್ನು ಪರಿಹರಿಸಲು, ಎಲ್ಲಾ ರಾಜ್ಯಗಳು ಪೂರ್ವಭಾವಿಯಾಗಿ ಮತ್ತು ನಿಯಮಿತವಾಗಿ ಪತ್ರಿಕಾಗೋಷ್ಠಿಗಳು, ರಾಜ್ಯ ಬುಲೆಟಿನ್ಗಳ ಮೂಲಕ ಜನರ ಕಳವಳಗಳನ್ನು ಪರಿಹರಿಸಬೇಕು” ಎಂದು ಹೇಳಲಾಗಿದೆ.

ಈ ರೂಪಾಂತರವನ್ನು ಮೊದಲ ಬಾರಿಗೆ ಬುಧವಾರ ದಕ್ಷಿಣ ಆಫ್ರಿಕಾದಿಂದ ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ಮಾಡಲಾಗಿದೆ. ಓಮಿಕ್ರಾನ್ ಸೋಂಕು ನವೆಂಬರ್ 9 ರಂದು ಸಂಗ್ರಹಿಸಲಾದ ಮಾದರಿಯಿಂದ ಮೊದಲ ಬಾರಿಗೆ ದೃಢೀಕರಿಸಲ್ಪಟ್ಟಿತು. ಇತ್ತೀಚಿನ ವಾರಗಳಲ್ಲಿ, ದಕ್ಷಿಣ ಆಫ್ರಿಕಾದಲ್ಲಿ ಸೋಂಕುಗಳು ತೀವ್ರವಾಗಿ ಹೆಚ್ಚಿದ್ದು, ಇದು ಇದೇ ಸೋಂಕಿನ ಪರಿಣಾಮವಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದ ಬಹುತೇಕ ಎಲ್ಲಾ ಪ್ರಾಂತ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.


ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...