Homeಕೊರೊನಾಓಮಿಕ್ರಾನ್ ಆತಂಕ: ಹೆಚ್ಚಿನ ಪರೀಕ್ಷೆ, ಹಾಟ್‌ಸ್ಪಾಟ್‌ಗಳ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ

ಓಮಿಕ್ರಾನ್ ಆತಂಕ: ಹೆಚ್ಚಿನ ಪರೀಕ್ಷೆ, ಹಾಟ್‌ಸ್ಪಾಟ್‌ಗಳ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ

- Advertisement -
- Advertisement -

ದಕ್ಷಿಣ ಆಫ್ರಿಕಾದಲ್ಲಿ ಈ ವಾರದ ಆರಂಭದಲ್ಲಿ ಕಂಡುಬಂದ ಕೊರೊನಾದ ಹೊಸ ರೂಪಾಂತರಕ್ಕೆ ‘ಓಮಿಕ್ರಾನ್’ ಎಂದು ಮರುನಾಮಕರಣ ಮಾಡಲಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ(WHO)ಯು ಈ ರೂಪಾಂತರವನ್ನು ‘ಕಳವಳಕಾರಿ ರೂಪಾಂತರ’ ಎಂದು ಕರೆದಿದೆ. ’ಓಮಿಕ್ರಾನ್’ ಬಗ್ಗೆ ಹೆಚ್ಚುತ್ತಿರುವ ಆತಂಕದ ಮಧ್ಯೆಯೇ ತೀವ್ರವಾದ ನಿಯಂತ್ರಣ, ಸಕ್ರಿಯ ಕಣ್ಗಾವಲು ಮತ್ತು ಉತ್ತಮ ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಹೆಚ್ಚಿಸಲು ಒಕ್ಕೂಟ ಸರ್ಕಾರವು ಎಲ್ಲಾ ರಾಜ್ಯಗಳನ್ನು ಸೂಚಿಸಿದೆ.

“ಈ ಕೊರೊನಾ ರೂಪಾಂತರವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ತೀವ್ರವಾದ ನಿಯಂತ್ರಣ, ಸಕ್ರಿಯ ಕಣ್ಗಾವಲು, ವ್ಯಾಕ್ಸಿನೇಷನ್ ಹೆಚ್ಚಳ ಮತ್ತು ಕೋವಿಡ್-ಸೂಕ್ತ ಮಾರ್ಗಸೂಚಿಗಳನ್ನು ಪೂರ್ವಭಾವಿ ಕ್ರಮದಲ್ಲಿ ಜಾರಿಗೊಳಿಸುವುದು ಅತ್ಯಗತ್ಯ” ಎಂದು ಆರೋಗ್ಯ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಓಮಿಕ್ರಾನ್‌ ಇತರ ರೂಪಗಳಿಗಿಂತ ಹೆಚ್ಚು ವೇಗವಾಗಿ ಹರಡಬಹುದು ಎಂದು WHO ಹೇಳಿದೆ.

ಅಂತಾರಾಷ್ಟ್ರೀಯ ವಿಮಾನಗಳ ಮೂಲಕ ಬರುವ ಪ್ರಯಾಣಿಕರ ಹಿಂದಿನ ಪ್ರಯಾಣದ ವಿವರಗಳನ್ನು ಪಡೆದು ವರದಿ ಮಾಡುವ ಕಾರ್ಯವಿಧಾನವಿದ್ದು, ಇದನ್ನು ನಿಮ್ಮ ಮಟ್ಟದಲ್ಲಿ ಮತ್ತೆ ಪರಿಶೀಲಿಸಬೇಕು ಎಂದು ಕೇಂದ್ರವು ರಾಜ್ಯಗಳಿಗೆ ತಿಳಿಸಿದೆ.

ಇದನ್ನೂ ಓದಿ: ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

“ಈ ರೂಪಾಂತರಿತ ವೈರಸ್‌ನಿಂದ ಉಂಟಾಗುವ ಉಲ್ಬಣವನ್ನು ನಿಭಾಯಿಸಲು ಸಾಕಷ್ಟು ಪರೀಕ್ಷಾ ಮೂಲಸೌಕರ್ಯವನ್ನು ಕಾರ್ಯಗತಗೊಳಿಸಬೇಕಾಗಿದೆ. ಕೆಲವು ರಾಜ್ಯಗಳಲ್ಲಿ ಒಟ್ಟಾರೆ ಪರೀಕ್ಷೆ ಮತ್ತು ಆರ್‌ಟಿ-ಪಿಸಿಆರ್ ಪರೀಕ್ಷೆಗಳ ಪ್ರಮಾಣವು ಕುಸಿದಿದ್ದು, ಇದರಿಂದ ಸೋಂಕಿನ ಹರಡುವಿಕೆಯ ನಿಜವಾದ ಮಟ್ಟವನ್ನು ನಿರ್ಧರಿಸಲು ಕಷ್ಟ” ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಇತ್ತೀಚಿಗೆ ಪಾಸಿಟಿವ್ ಪ್ರಕರಣಗಳು ಕಂಡುಬಂದ ಪ್ರದೇಶಗಳ ನಿರಂತರ ಮೇಲ್ವಿಚಾರಣೆಯನ್ನು ಮಾಡಬೇಕು. ಹಾಟ್‌ಸ್ಪಾಟ್‌ಗಳಲ್ಲಿ ಸ್ಯಾಚುರೇಶನ್ ಪರೀಕ್ಷೆಯ ಅಗತ್ಯವಿದೆ. ಜೊತೆಗೆ ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಎಲ್ಲಾ ಪಾಸಿಟಿವ್ ಬಂದ ವ್ಯಕ್ತಿಗಳ ಮಾದರಿಗಳನ್ನು ಗೊತ್ತುಪಡಿಸಿದ ಲ್ಯಾಬ್‌ಗಳಿಗೆ ಕಳುಹಿಸಬೇಕು ಎಂದು ಸೂಚಿಸಿದೆ.

“ದೇಶದಲ್ಲಿ ಈ ರೂಪಾಂತರಿ ಕುರಿತು ಸಾಮಾನ್ಯವಾಗಿ ತಪ್ಪು ಮಾಹಿತಿಗಳು ಜನರಿಗೆ ತಲುಪುತ್ತಿರುತ್ತವೆ. ಇದು ಜನಸಾಮಾನ್ಯರಲ್ಲಿ ಆತಂಕಕ್ಕೆ ಕಾರಣವಾಗುತ್ತದೆ. ಇದನ್ನು ಪರಿಹರಿಸಲು, ಎಲ್ಲಾ ರಾಜ್ಯಗಳು ಪೂರ್ವಭಾವಿಯಾಗಿ ಮತ್ತು ನಿಯಮಿತವಾಗಿ ಪತ್ರಿಕಾಗೋಷ್ಠಿಗಳು, ರಾಜ್ಯ ಬುಲೆಟಿನ್ಗಳ ಮೂಲಕ ಜನರ ಕಳವಳಗಳನ್ನು ಪರಿಹರಿಸಬೇಕು” ಎಂದು ಹೇಳಲಾಗಿದೆ.

ಈ ರೂಪಾಂತರವನ್ನು ಮೊದಲ ಬಾರಿಗೆ ಬುಧವಾರ ದಕ್ಷಿಣ ಆಫ್ರಿಕಾದಿಂದ ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ಮಾಡಲಾಗಿದೆ. ಓಮಿಕ್ರಾನ್ ಸೋಂಕು ನವೆಂಬರ್ 9 ರಂದು ಸಂಗ್ರಹಿಸಲಾದ ಮಾದರಿಯಿಂದ ಮೊದಲ ಬಾರಿಗೆ ದೃಢೀಕರಿಸಲ್ಪಟ್ಟಿತು. ಇತ್ತೀಚಿನ ವಾರಗಳಲ್ಲಿ, ದಕ್ಷಿಣ ಆಫ್ರಿಕಾದಲ್ಲಿ ಸೋಂಕುಗಳು ತೀವ್ರವಾಗಿ ಹೆಚ್ಚಿದ್ದು, ಇದು ಇದೇ ಸೋಂಕಿನ ಪರಿಣಾಮವಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದ ಬಹುತೇಕ ಎಲ್ಲಾ ಪ್ರಾಂತ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.


ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...