Homeಕರ್ನಾಟಕರಾಜ್ಯದಲ್ಲಿ ’ಓಮಿಕ್ರಾನ್’ ಆತಂಕ: ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ- ಸಿಎಂ

ರಾಜ್ಯದಲ್ಲಿ ’ಓಮಿಕ್ರಾನ್’ ಆತಂಕ: ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ- ಸಿಎಂ

- Advertisement -
- Advertisement -

ವಿಶ್ವದಲ್ಲಿ ’ಓಮಿಕ್ರಾನ್’ ಬಗ್ಗೆ ಹೆಚ್ಚುತ್ತಿರುವ ಆತಂಕದ ಮಧ್ಯೆಯೇ ರಾಜ್ಯದಲ್ಲಿಯೂ ಸೋಂಕು ನಿಯಂತ್ರಣಕ್ಕೆ ಕ್ರಮ ವಹಿಸುತ್ತಿದ್ದು, ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

“ರಾಜ್ಯಕ್ಕೆ ಕೇರಳದಿಂದ ಬರುವವರಿಂದ ಸೋಂಕು ಹರಡುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಕೇರಳದಿಂದ ಬಂದಿರುವ ಅರೆವೈದ್ಯಕೀಯ ಸಿಬ್ಬಂದಿಗಳಲ್ಲಿ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮಡಿಕೇರಿ, ಚಾಮರಾಜನಗರ, ಮೈಸೂರು ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಆರ್ ಟಿಸಿಪಿಆರ್ ಪರೀಕ್ಷೆ ನಡೆಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ರಾಜ್ಯದೊಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ಕೇರಳ ರಾಜ್ಯದಿಂದ ಬರುವವರು ಎರಡೂ ಡೋಸ್‌ ಲಸಿಕೆ ಪಡೆದಿರಬೇಕು. RTPCR ಪರೀಕ್ಷೆಗಳನ್ನು ಹೆಚ್ಚಿಸಲು ಸೂಚನೆ ನೀಡಲಾಗಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

“ಗಡಿ ಭಾಗಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಎಚ್ಚರಿಕೆ ನೀಡುವ ಬಗ್ಗೆ ಉತ್ತರ ನೀಡುತ್ತಾ, ಗಡಿಗಳನ್ನು ಸಂಪೂರ್ಣವಾಗಿ ತಪಾಸಣೆಗೆ ಒಳಪಡಿಸುವುದು. 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್ ಟಿ ಸಿಪಿಆರ್ ಪರೀಕ್ಷೆ ಮಾಡಿಸುವುದು ಹಾಗೂ ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್ ಟಿಸಿಪಿಆರ್ ಪರೀಕ್ಷೆ ಮಾಡಿಸಲು ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಓಮಿಕ್ರಾನ್ ಆತಂಕ: ಹೆಚ್ಚಿನ ಪರೀಕ್ಷೆ, ಹಾಟ್‌ಸ್ಪಾಟ್‌ಗಳ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ

“ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೊಟ್ಸ್ವಾನಾ ದೇಶಗಳಲ್ಲಿ ಹರಡುತ್ತಿರುವ ಸೋಂಕಿನ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಪ್ರಧಾನಿಯವರು ಕೋವಿಡ್ ರೂಪಾಂತರಿ ನಿಯಂತ್ರಣಕ್ಕೆ ಹಲವಾರು ನಿರ್ದೇಶನಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಇದುವರೆಗೂ ಹೊಸ ಪ್ರಬೇಧದ ಸೋಂಕಿನ ಪ್ರಕರಣ ಕಂಡುಬಂದಿಲ್ಲ. ಧಾರವಾಡ , ಮೈಸೂರು, ಬೆಂಗಳೂರಿನ ವಿದ್ಯಾರ್ಥಿ ಹಾಸ್ಟೆಲ್ ಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಹಾಸ್ಟೆಲ್ ಗಳನ್ನು ಕಂಟೈನ್ಮೆಂಟ್ ಮಾಡಿ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. SDM ಕಾಲೇಜನ ವೈದ್ಯರು, ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಹೊರರೋಗಿಗಳನ್ನು ನಿರ್ಬಂಧಿಸಲಾಗಿದೆ. ಮೈಸೂರಿನಲ್ಲಿಯೂ ಸೋಂಕು ಕಾಣಿಸಿಕೊಂಡಿರುವ ಜಾಗಗಳನ್ನು ಕಂಟೇನಮೆಂಟ್ ಮಾಡಿ ತೀವ್ರ ನಿಗಾ ವಹಿಸಲಾಗಿದೆ. ಕೋವಿಡ್ ಪರೀಕ್ಷೆ ಮಾತ್ರವಲ್ಲದೇ ಚಿಕಿತ್ಸೆಯನ್ನು ನೀಡಲು ಪ್ರಾರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಹೊರ ದೇಶದಿಂದ ಆಗಮಿಸುವ ಜನರನ್ನು ತಪಾಸಣೆಗೆ ಒಳಪಡಿಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡುವುದು. ಇಲ್ಲವಾದಲ್ಲಿ ಕಂಟೈನ್‌ಮೆಂಟ್ ಸ್ಥಳಕ್ಕೆ ಸ್ಥಳಾಂತರಿಸುವುದು. ವಿಶೇಷವಾಗಿ ಓಮಿಕ್ರಾನ್ ಹೊಸ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಈ ಮೂರು ದೇಶಗಳಿಂದ ನಗರಕ್ಕೆ ಪ್ರಯಾಣಿಕರ ಆಗಮನವನ್ನು ಸಂಪೂರ್ಣವಾಗಿ ನಿಷೇದಿಸಬೇಕೆನ್ನುವ ಬೇಡಿಕೆಯನ್ನು ಕೇಂದ್ರ ಸರ್ಕಾರಕ್ಕೆ ಇಡಲಾಗಿದೆ” ಎಂದಿದ್ದಾರೆ.

ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಕೇಂದ್ರದ ಅನುಮತಿಗೆ ಪತ್ರ ಬರೆಯಲಾಗಿದೆ. ಮಾಲ್, ಸಾರ್ವಜನಿಕ ಸ್ಥಳಗಳು, ಕಚೇರಿಗಳಲ್ಲಿ ಎಲ್ಲರಿಗೂ ಎರಡೂ ಡೋಸ್ ಆಗಿರಲೇಬೇಕು. ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವವರೂ ಕೂಡ ಎರಡು ಡೋಸ್ ಪಡೆದಿರಬೇಕು. ಮಾಲ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ರಾಜ್ಯದಲ್ಲಿ 80 ಲಕ್ಷ ಲಸಿಕೆ ಲಭ್ಯವಿದ್ದು, ಈಗಾಗಲೆ ಮೊದಲನೇ ಡೋಸ್ 91 ಲಕ್ಷವಾಗಿದೆ. ಡಿಸೆಂಬರ್ ಅಂತ್ಯದೊಳಗೆ 70% ರಷ್ಟು ಎರಡನೇ ಡೋಸ್ ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...