Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಹಿಂದುತ್ವದ ಟೆರರಿಸ್ಟ್‌‌ಗಳು ಮುಸ್ಲಿಂ ವ್ಯಕ್ತಿಯನ್ನು ಕೊಲ್ಲುತ್ತಿದ್ದಾರೆ’ ಎಂದು ಸುಳ್ಳು ಹರಡಲಾಗುತ್ತಿದೆ!

ಫ್ಯಾಕ್ಟ್‌ಚೆಕ್‌: ‘ಹಿಂದುತ್ವದ ಟೆರರಿಸ್ಟ್‌‌ಗಳು ಮುಸ್ಲಿಂ ವ್ಯಕ್ತಿಯನ್ನು ಕೊಲ್ಲುತ್ತಿದ್ದಾರೆ’ ಎಂದು ಸುಳ್ಳು ಹರಡಲಾಗುತ್ತಿದೆ!

- Advertisement -
- Advertisement -

‘‘ರಾಮನ ಹೆಸರಿನಲ್ಲಿ ಹಿಂದುತ್ವದ ಭಯೋತ್ಪಾದಕರು ಅಮಾಯಕ ಮುಸ್ಲಿಮರನ್ನು ಕೊಲ್ಲುತ್ತಿದ್ದಾರೆ’’ ಎಂಬ ಶೀರ್ಷಿಕೆಯಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುಖ್ಯವಾಗಿ ಈ ವಿಡಿಯೊ ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ. 11 ಸೆಕೆಂಡಿನ ವಿಡಿಯೊ ಭಯಾನಕವಾಗಿದ್ದು, ನೀಲಿ ಪ್ಯಾಂಟಿಗೆ ಬೆಲ್ಟ್‌ ಧರಿಸಿರುವ, ಅರೆ ಬೆತ್ತಲೆ ವ್ಯಕ್ತಿಯನ್ನು ಕೈ ಕಟ್ಟಿ ಹಾಕಿ, ಬಾಯಿಗೆ ಬಟ್ಟೆಯನ್ನು ತುರುಕಲಾಗಿದೆ. ಜೊತೆಗೆ ವಿಡಿಯೊದಲ್ಲಿರುವ ವ್ಯಕ್ತಿಗೆ ‘ಜೈ ಶ್ರೀರಾಮ್ ಹೇಳು’ ಎಂದು ಒತ್ತಾಯಿಸುತ್ತಾ ಹರಿತವಾದ ಕತ್ತಿಯಿಂದ ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ರಕ್ತಸಿಕ್ತವಾದ ವಿಡಿಯೊ ನೋಡಲಾರದಷ್ಟು ಭಯಾನಕವಾಗಿದೆ.

ಮುಖ್ಯವಾಗಿ ಈ ವಿಡಿಯೊ ವಾಟ್ಸಪ್‌ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ. ಇದರ ಜೊತೆಗೆ ಫೇಸ್‌ಬುಕ್‌ನಲ್ಲಿ ಕೂಡಾ ಹರಿದಾಡುತ್ತಿದೆ. ಅದನ್ನು ಇಲ್ಲಿ ನೋಡಬಹುದು.(ಎಚ್ಚರಿಕೆ: ವಿಡಿಯೊ ನೋಡಬಾರದಷ್ಟು ಭಯಾನಕವಾಗಿದೆ). ವೈರಲ್‌ ಸಂದೇಶವೂ, “ರಾಮನ ಹೆಸರಲ್ಲಿ ಹಿಂದುತ್ವದ ಟೆರರಿಸ್ಟ್ ಗಳು ಅಮಾಯಕ ಮುಸಲ್ಮಾನರನ್ನು ಕೊಲ್ಲುತ್ತಿರೋದು ನೋಡಿ. Hinduthva people killing Muslims in name of lord rama in India” ಎಂದು ಪ್ರತಿಪಾದಿಸಿ ವೈರಲ್‌ ಆಗಿದೆ.

ಪ್ಯಾಕ್ಟ್‌‌ಚೆಕ್‌

ಹರಿದಾಡುತ್ತಿರುವ ವಿಡಿಯೊ ಭಯಾನಕವಾಗಿದ್ದು, ಅರೆ ಬೆತ್ತಲೆಯಾಗಿರುವ, ಬಾಯಿಗೆ ಬಟ್ಟೆ ತುರುಕಲ್ಪಟ್ಟ, ನೀಲಿ ಬಣ್ಣದ ಪ್ಯಾಂಟ್‌ಗೆ ಬೆಲ್ಟ್‌ ಧರಿಸಿರುವ ಯುವಕನ್ನು ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ದೃಶ್ಯವಂತೂ ಅಮಾನವೀಯವಾಗಿದ್ದು, ನೋಡಲು ಸಾಧ್ಯವಿಲ್ಲದಂತಿದೆ. ಈ ಚಿತ್ರವನ್ನೂ ನಾವು ರಿವರ್ಸ್ ಸರ್ಚ್ ಮಾಡಿದ್ದೇವೆ. ಈ ವೇಳೆ ನಮಗೆ ಆಸ್ಟ್ರೇಲಿಯಾದ ಸುದ್ದಿ ವೆಬ್‌‌ ಪೋರ್ಟಲ್‌ ಆಗಿರುವ news.com.auನಲ್ಲಿ 2018ರ ಫೆಬ್ರವರಿ ತಿಂಗಳ 6 ರಂದು ಮಾಡಿರುವ ಸುದ್ದಿ ದೊರೆತಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

ವರದಿ ಪ್ರಕಾರ, “ಈ ಘಟನೆಯು ದಕ್ಷಿಣ ಅಮೆರಿಕಾದ ದೇಶವಾದ ವೆನೆಜುವೆಲಾದಲ್ಲಿ ನಡೆದಿದೆ. ವಿಡಿಯೋದಲ್ಲಿ, ಹದಿಹರೆಯದ ಬಾಲಕನನ್ನು ಮಾದಕ ದ್ರವ್ಯ ಮಾಫಿಯಾವು ಕತ್ತು ಕೊಯ್ದು ಕೊಂದಿದೆ. ಬಾಲಕನು ಮಾದಕ ದ್ರವ್ಯ ಮಾಫಿಯಾದ ವಿರೋಧಿ ಗುಂಪಿನವನಾಗಿದ್ದರಿಂದ, ಆತನನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಈ ವಿಡಿಯೊವನ್ನು ಆರೋಪಿ ಗುಂಪೇ ಚಿತ್ರೀಕರಿಸಿ, ದೃಶ್ಯಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದೆ”.

ಈ ಘಟನೆಯನ್ನು ‘ಮೈಲ್‌ ಆನ್‌ಲೈನ್‌’ ಸುದ್ದಿ ಪೋರ್ಟಲ್‌ ಕೂಡಾ ವರದಿ ಮಾಡಿದೆ. ಈ ಪತ್ರಿಕೆಯ ವರದಿಯ ಪ್ರಕಾರ, ಬಾಲಕನು 13 ವರ್ಷದವನಾಗಿದ್ದು, ಆತನ ಕತ್ತನ್ನು ಕೊಯ್ಯುವ ಮೊದಲು ಕಿವಿಯನ್ನು ಕೂಡಾ ಕತ್ತರಿಸಲಾಗಿತ್ತು.

ಅಲ್ಲದೆ ಈ ಭಯಾನಕ ವಿಡಿಯೊಗೆ ವಾಯ್ಸ್‌ ಓವರ್‌ ಮೂಲಕ ‘ಜೈ ಶ್ರೀರಾಮ್ ಹೇಳು’ ಎಂದು ಎಡಿಟ್‌ ಮಾಡಿ ಹಾಕಲಾಗಿದೆ. ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಜೈ ಶ್ರೀರಾಮ್ ಎಂದು ಹೇಳುತ್ತಾ ಹೊಡೆಯುವ ಶಬ್ದವನ್ನು ಕೇಳಬಹುದು. ಈ ವಾಯ್ಸ್‌ ಪ್ರಸ್ತುತ ವೈರಲ್‌ ವಿಡಿಯೊಗೆ ಹೊಂದಿಕೆ ಆಗುವುದಿಲ್ಲ.

ಇದೇ ರೀತಿಯ ವಿಡಿಯೊಗೆ ಮತ್ತೊಂದು ವಿಡಿಯೊವನ್ನು ಸೇರಿಸಿ, ‘ಕೇರಳದ ಮುಸ್ಲಿಮರು ಆರೆಸ್ಸೆಸ್‌ ಕಾರ್ಯಕರ್ತನ ಕತ್ತನ್ನು ಕೊಯ್ಯುತ್ತಿರುವ ದೃಶ್ಯ’ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ. ಅದರ ಫ್ಯಾಕ್ಟ್‌ಚೆಕ್‌ ಸುದ್ದಿಯನ್ನು ಇಲ್ಲಿ ಓದಬಹುದು.

ಒಟ್ಟಿನಲ್ಲಿ ವೈರಲ್‌ ಆಗಿರುವ ವಿಡಿಯೊ ಭಾರತದ ದೇಶದ್ದೇ ಅಲ್ಲ. ಇದು 2018 ರ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಅಮೆರಿಕಾದ ವೆನೆಜುವಾಲದಲ್ಲಿ ನಡೆದಿದೆ. ಈ ವಿಡಿಯೊಗೂ, ಭಾರತಕ್ಕೂ, ಆರೆಸ್ಸೆಸ್‌ಗೂ ಯಾವುದೇ ಸಂಬಂಧವಿಲ್ಲ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...