Homeಮುಖಪುಟಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ಕೃಷಿ ಕಾನೂನು ರದ್ದತಿ ಮಸೂದೆ ಮಂಡನೆ ನಿರೀಕ್ಷೆ

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ಕೃಷಿ ಕಾನೂನು ರದ್ದತಿ ಮಸೂದೆ ಮಂಡನೆ ನಿರೀಕ್ಷೆ

- Advertisement -
- Advertisement -

ಇಂದಿನಿಂದ (ನ.29) ಸಂಸತ್ತಿನ 25 ದಿನಗಳ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆ ಸೇರಿದಂತೆ 36 ಮಸೂದೆಗಳನ್ನು ಅಂಗೀಕರಿಸುವ ನಿರೀಕ್ಷೆಯಿದೆ. ಪೆಗಾಸಸ್ ಕಣ್ಗಾವಲು ಪ್ರಕರಣ ಮತ್ತು ಬೆಲೆ ಏರಿಕೆ ಸೇರಿ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿರುವ ಸಾಧ್ಯತೆಯಿದೆ.

ಭಾನುವಾರ ನಡೆದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರಾಗಿದ್ದರು. ಇದು ಸಂಪ್ರದಾಯದ ಉಲ್ಲಂಘನೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದವು. “ಪ್ರಧಾನಿ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವ ಯಾವುದೇ ಸಂಪ್ರದಾಯ ಇರಲಿಲ್ಲ, ಇದನ್ನು ಮೋದಿ ಅವರು ಪ್ರಾರಂಭಿಸಿದರು” ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಚಳಿಗಾಲದ ಅಧಿವೇಶನದ 19 ಅಧಿವೇಶನಗಳಲ್ಲಿ, ಸರ್ಕಾರವು 36 ಶಾಸಕಾಂಗ ಮಸೂದೆಗಳು ಮತ್ತು ಒಂದು ಹಣಕಾಸು ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ.

ವಿವಾದಿತ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಮೊದಲ ದಿನ ಲೋಕಸಭೆಯಲ್ಲಿ ಪರಿಚಯಿಸಲು ಮತ್ತು ಅಂಗೀಕರಿಸಲು ನಿರ್ಧರಿಸಲಾಗಿದೆ. ಇದನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪರಿಚಯಿಸಲಿದ್ದಾರೆ. ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ತಮ್ಮ ಸಂಸದರಿಗೆ ಇಂದು ಕಡ್ಡಾಯವಾಗಿ ಹಾಜರಾಗುವಂತೆ ವಿಪ್ ಜಾರಿಗೊಳಿಸಿವೆ.

ಇದನ್ನೂ ಓದಿ: ಕೃಷಿ ಕಾಯ್ದೆ ವಾಪಸ್‌ಗೆ ಸಂಪುಟ ಒಪ್ಪಿಗೆ: ಅಧಿವೇಶನದ ಮೊದಲ ದಿನವೇ ಹಿಂತೆಗೆತ ಪ್ರಕ್ರಿಯೆ ಆರಂಭ

‘ಚಳಿಗಾಲದ ಅಧಿವೇಶನದ ಮೊದಲ ದಿನವೇ ಕೃಷಿ ಕಾಯ್ದೆಗಳ ಹಿಂತೆಗೆತ ಪ್ರಕ್ರಿಯೆ ಆರಂಭವಾಗಲಿದ್ದು, ಅದು ನಮ್ಮ ಆದ್ಯತೆಯ ಕರ್ತವ್ಯವಾಗಿದೆ. ಸಂಸತ್ತಿನ ಅಧಿವೇಶನದ ಮೊದಲ ದಿನದಿಂದಲೇ ಈ ಪ್ರಕ್ರಿಯೆ ಪ್ರಾರಂಭವಾಗಲಿದೆ. ನವೆಂಬರ್‌ 19ರಂದು ಪ್ರಧಾನಿ ನೀಡಿದ್ದ ಭರವಸೆಯನ್ನು ಘೋಷಣೆಯಾದ ಐದು ದಿನಗಳಲ್ಲಿ ಈಡೇರಿಸಲಾಗಿದೆ. ಸಂಪುಟವು ಈಗಾಗಲೇ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಈ ಹಿಂದೆ ತಿಳಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ನವೆಂಬರ್‍ 19 ರಂದು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದು ಮಾಡಲಾಗುವುದು. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರು ಮನೆಗೆ ಹಿಂತಿರುಗಬೇಕು ಎಂದು ಮನವಿ ಮಾಡಿದ್ದರು.

ಆದರೆ, ಆಂದೋಲನವನ್ನು ತಕ್ಷಣವೇ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ಅಧೀಕೃತವಾಗಿ ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ. ಸರ್ಕಾರವು MSP ಜೊತೆಗೆ ರೈತರ ಇತರ ಸಮಸ್ಯೆಗಳನ್ನು ಚರ್ಚಿಸಬೇಕು ಎಂದು ರೈತ ನಾಯಕರು ತಿಳಿಸಿದ್ದರು.


ಇದನ್ನೂ ಓದಿ: ರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...