Homeಕರ್ನಾಟಕಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

ಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

- Advertisement -
- Advertisement -

ಮುಂಡಗೋಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅನೈರ್ಮಲ್ಯ, ಅಶುದ್ದ ಊಟ ಮತ್ತು ನೀರಿನಿಂದ ವಿದ್ಯಾರ್ಥಿಗಳ ಆರೋಗ್ಯ ಕೆಡುವ ಭಯ ಮೂಡಿದೆಯೆಂದು ಪಾಲಕರು ತಹಶೀಲ್ದಾರ್‌ಗೆ ದೂರು ಕೊಟ್ಟ ದಿನದ ರಾತ್ರಿಯೇ 9 ವಿದ್ಯಾರ್ಥಿಗಳು ವಾಂತಿ ತಲೆ ನೋವು, ಹೊಟ್ಟೆ ನೋವು ಬಾಧಿಸಿ ಆಸ್ಪತ್ರೆಗೆ ದಾಖಲಾಗಬೇಕಾದ ಘಟನೆ ನಡೆದಿದೆ. ಸಂಭವನೀಯ ಅನಾಹುತದಿಂದ ವಿದ್ಯಾರ್ಥಿಗಳು ಪಾರಾಗಿ ಮನೆ ಸೇರಿದ್ದಾರಾದರೂ ಶಾಲೆಯ ಅವ್ಯವಸ್ಥೆ ಬಗ್ಗೆ ಆತಂಕ, ಆಕ್ರೋಶ ಭರಿತ ಟೀಕೆ-ಟಿಪ್ಪಣಿ ವ್ಯಕ್ತವಾಗುತ್ತಿದೆ.

ಶುಕ್ರವಾರ ರಾತ್ರಿ ವಿದ್ಯಾರ್ಥಿಗಳು ಊಟ ಮುಗಿಸಿ ತಮ್ಮ ತಮ್ಮ ಕೊಠಡಿ ಸೇರಿಕೊಂಡಿದ್ದರು. ಆಗ ಇದ್ದಕ್ಕಿದ್ದಂತೆಯೆ 7 ಮತ್ತು 8ನೇ ತರಗತಿಗೆ ಸೇರಿದ ಓರ್ವ ಹುಡುಗ ಹಾಗು 8 ಹುಡುಗಿಯರಿಗೆ ವಾಂತಿ ಶುರುವಾಗಿದೆ. ಇನ್ನು ಕೆಲವರು ಹೊಟ್ಟೆ ನೋವು ಮತ್ತು ತಲೆ ನೋವಿನಿಂದ ಬಳಲತೊಡಗಿದರು. ಹಾಸ್ಟೇಲ್ ನರ್ಸ್ ರಾತ್ರಿಯೇ ಸರ್ಕಾರಿ ಆಸ್ಪತ್ರೆಗೆ 9 ವಿದ್ಯಾರ್ಥಿಗಳನ್ನು ದಾಖಲಿಸಿದ್ದಾರೆ. ಇವರಲ್ಲಿ 8 ವಿದ್ಯಾರ್ಥಿಗಳು ಗುಣಮುಖರಾಗಿ ಹಾಸ್ಟೇಲ್ ಸೇರಿದರೆ, ಒಬ್ಬ ವಿದ್ಯಾರ್ಥಿನಿ ಮಾತ್ರ ಹೆಚ್ಚು ಅಸ್ವಸ್ಥಳಾಗಿದ್ದರಿಂದ ಶನಿವಾರ ಸಂಜೆ ತನಕವೂ ಆಸ್ಪತ್ರೆಯಲ್ಲೆ ಇರಬೇಕಾಯಿತು.

ಕಲುಷಿತ ಆಹಾರದಿಂದ ತಮ್ಮ ಮಕ್ಕಳ ಆರೋಗ್ಯ ಹದಗೆಟ್ಟಿದೆಯೆಂದು ಪಾಲಕರು ಆಕ್ರೋಶಿತರಾಗಿದ್ದರು. ಪಾಲಕರ ಈ ಅನುಮಾನಕ್ಕೂ ಕಾರಣವಿತ್ತು. ಕೆಲ ದಿನಗಳ ಹಿಂದೆ ವಿದ್ಯಾರ್ಥಿಗಳಿಗೆ ಕೊಟ್ಟ ಊಟದಲ್ಲಿ ಹುಳುಗಳು ಕಂಡುಬಂದಿತ್ತು. ಈ ಕುರಿತು ತಹಶೀಲ್ದಾರ್‌ರಿಗೆ ದೂರು ಸಹ ನೀಡಲಾಗಿತ್ತು. ಆಹಾರ ಪದಾರ್ಥ ಸರಿಯಾಗಿ ಶುಚಿಗೊಳಿಸದೆ ಅಡಿಗೆ ತಯಾರಿಸದ್ದರಿಂದ ಹುಳುಗಳು ಊಟದಲ್ಲಿ ಬರಲು ಕಾಣವಾಗಿತ್ತೆಂದು ವಾರ್ಡನ್ ಹೇಳಿದ್ದರು.

ಆದರೆ ಈ ಬಾರಿ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಲು ಕಲುಷಿತ ನೀರು ಕಾರಣವಾಗಿತ್ತು. ಶಾಲೆಯ ಕುಡಿಯುವ ನೀರನ್ನು ಶುದ್ದ ಮಾಡಲೆಂದು ಟ್ಯಾಂಕಿಗೆ ಬೆರೆಸಿದ ಕ್ಲೋರಿನ್‌ನಿಂದ ಸಮಸ್ಯೆಯಾಗಿದೆಯೆಂದು ತಾಲ್ಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ. ಎಚ್.ಎಫ್.ಇಂಗಳೆೆ ತಿಳಿಸಿದ್ದಾರೆ. ಮಿತಿ ಮೀರಿ ಕ್ಲೋರಿನ್ ಬೆರೆಸಿದ್ದು ಅಥವಾ ಕ್ಲೋರಿನ್ ಪರಿಣಾಮ ಕಡಿಮೆಯಾಗಿ ಕುಡಿಯಲು ಯೋಗ್ಯವಾಗುವ ಮೊದಲೆ ಹೊಣೆಗೇಡಿತನದಿಂದ ವಿದ್ಯಾಥಿಗಳಿಗೆ ನೀಡಿದ್ದರಿಂದ ಆರೋಗ್ಯ ಹದಗೆಟ್ಟಿದೆಯೆನ್ನಲಾಗಿದೆ.

ಶುದ್ದ ಕುಡಿಯುವ ನೀರಿನ ಘಟಕ ಶಾಲೆಗೆ ಮಂಜೂರಾಗಿ ಹಲವು ದಿನವಾಗಿದ್ದರೂ ಅದಿನ್ನು ಸ್ಥಾಪಿಸಲಾಗಿಲ್ಲ. ಘಟಕಕ್ಕೆ ಬೇಕಾದ ಸಾಮಗ್ರಿಗಳು ಬಂದಿವೆ. ಆದರೆ ಅದನ್ನು ಜೋಡಿಸಲಾಗಿಲ್ಲ. ಹೀಗಾಗಿ ಮಕ್ಕಳು ಶುದ್ದ ನೀರಿನಿಂದ ವಂಚಿತರಾಗಿ ಕಷ್ಟ ಎದುರಿಸುವಂತಾಗಿದೆಯೆಂದು ಪಾಲಕರು ಹೇಳುತ್ತಾರೆ. ಈ ಸಲ ಬಟ್ಟೆ, ಪುಸ್ತಕ ವಿತರಣೆಯಾಗಿಲ್ಲವೆಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಶಿಕ್ಷಕರಿಗೆ ಮಕ್ಕಳ ಬಗ್ಗೆ ಕಾಳಜಿಯಿಲ್ಲವೆಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದು, 9 ವಿದ್ಯಾರ್ಥಿಗಳು ಅಸ್ವಸ್ಥರಾದಾಗ ಆಸ್ಪತ್ರೆ ಸೇರಿಸಲು ನರ್ಸ್‌ಗೆ ಯಾವ ಶಿಕ್ಷಕರೂ ನೆರವಿಗೆ ಬರಲಿಲ್ಲವೆಂದು ಹೇಳಿದ್ದಾರೆ. ಶಾಲೆಯ ಹಿಂಬದಿಯ ವಸತಿ ಗ್ರಹದಲ್ಲೆ ಇದ್ದರು ಶಿಕ್ಷರು ಉದಾಸೀನ ತೋರಿಸಿದ್ದು ಅಮಾನವೀಯವೆಂದು ಪಾಲಕರು ಹೇಳುತ್ತಿದ್ದಾರೆ.


ಇದನ್ನೂ ಓದಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...