Homeಕರ್ನಾಟಕಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

ಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

- Advertisement -
- Advertisement -

ಮುಂಡಗೋಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅನೈರ್ಮಲ್ಯ, ಅಶುದ್ದ ಊಟ ಮತ್ತು ನೀರಿನಿಂದ ವಿದ್ಯಾರ್ಥಿಗಳ ಆರೋಗ್ಯ ಕೆಡುವ ಭಯ ಮೂಡಿದೆಯೆಂದು ಪಾಲಕರು ತಹಶೀಲ್ದಾರ್‌ಗೆ ದೂರು ಕೊಟ್ಟ ದಿನದ ರಾತ್ರಿಯೇ 9 ವಿದ್ಯಾರ್ಥಿಗಳು ವಾಂತಿ ತಲೆ ನೋವು, ಹೊಟ್ಟೆ ನೋವು ಬಾಧಿಸಿ ಆಸ್ಪತ್ರೆಗೆ ದಾಖಲಾಗಬೇಕಾದ ಘಟನೆ ನಡೆದಿದೆ. ಸಂಭವನೀಯ ಅನಾಹುತದಿಂದ ವಿದ್ಯಾರ್ಥಿಗಳು ಪಾರಾಗಿ ಮನೆ ಸೇರಿದ್ದಾರಾದರೂ ಶಾಲೆಯ ಅವ್ಯವಸ್ಥೆ ಬಗ್ಗೆ ಆತಂಕ, ಆಕ್ರೋಶ ಭರಿತ ಟೀಕೆ-ಟಿಪ್ಪಣಿ ವ್ಯಕ್ತವಾಗುತ್ತಿದೆ.

ಶುಕ್ರವಾರ ರಾತ್ರಿ ವಿದ್ಯಾರ್ಥಿಗಳು ಊಟ ಮುಗಿಸಿ ತಮ್ಮ ತಮ್ಮ ಕೊಠಡಿ ಸೇರಿಕೊಂಡಿದ್ದರು. ಆಗ ಇದ್ದಕ್ಕಿದ್ದಂತೆಯೆ 7 ಮತ್ತು 8ನೇ ತರಗತಿಗೆ ಸೇರಿದ ಓರ್ವ ಹುಡುಗ ಹಾಗು 8 ಹುಡುಗಿಯರಿಗೆ ವಾಂತಿ ಶುರುವಾಗಿದೆ. ಇನ್ನು ಕೆಲವರು ಹೊಟ್ಟೆ ನೋವು ಮತ್ತು ತಲೆ ನೋವಿನಿಂದ ಬಳಲತೊಡಗಿದರು. ಹಾಸ್ಟೇಲ್ ನರ್ಸ್ ರಾತ್ರಿಯೇ ಸರ್ಕಾರಿ ಆಸ್ಪತ್ರೆಗೆ 9 ವಿದ್ಯಾರ್ಥಿಗಳನ್ನು ದಾಖಲಿಸಿದ್ದಾರೆ. ಇವರಲ್ಲಿ 8 ವಿದ್ಯಾರ್ಥಿಗಳು ಗುಣಮುಖರಾಗಿ ಹಾಸ್ಟೇಲ್ ಸೇರಿದರೆ, ಒಬ್ಬ ವಿದ್ಯಾರ್ಥಿನಿ ಮಾತ್ರ ಹೆಚ್ಚು ಅಸ್ವಸ್ಥಳಾಗಿದ್ದರಿಂದ ಶನಿವಾರ ಸಂಜೆ ತನಕವೂ ಆಸ್ಪತ್ರೆಯಲ್ಲೆ ಇರಬೇಕಾಯಿತು.

ಕಲುಷಿತ ಆಹಾರದಿಂದ ತಮ್ಮ ಮಕ್ಕಳ ಆರೋಗ್ಯ ಹದಗೆಟ್ಟಿದೆಯೆಂದು ಪಾಲಕರು ಆಕ್ರೋಶಿತರಾಗಿದ್ದರು. ಪಾಲಕರ ಈ ಅನುಮಾನಕ್ಕೂ ಕಾರಣವಿತ್ತು. ಕೆಲ ದಿನಗಳ ಹಿಂದೆ ವಿದ್ಯಾರ್ಥಿಗಳಿಗೆ ಕೊಟ್ಟ ಊಟದಲ್ಲಿ ಹುಳುಗಳು ಕಂಡುಬಂದಿತ್ತು. ಈ ಕುರಿತು ತಹಶೀಲ್ದಾರ್‌ರಿಗೆ ದೂರು ಸಹ ನೀಡಲಾಗಿತ್ತು. ಆಹಾರ ಪದಾರ್ಥ ಸರಿಯಾಗಿ ಶುಚಿಗೊಳಿಸದೆ ಅಡಿಗೆ ತಯಾರಿಸದ್ದರಿಂದ ಹುಳುಗಳು ಊಟದಲ್ಲಿ ಬರಲು ಕಾಣವಾಗಿತ್ತೆಂದು ವಾರ್ಡನ್ ಹೇಳಿದ್ದರು.

ಆದರೆ ಈ ಬಾರಿ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಲು ಕಲುಷಿತ ನೀರು ಕಾರಣವಾಗಿತ್ತು. ಶಾಲೆಯ ಕುಡಿಯುವ ನೀರನ್ನು ಶುದ್ದ ಮಾಡಲೆಂದು ಟ್ಯಾಂಕಿಗೆ ಬೆರೆಸಿದ ಕ್ಲೋರಿನ್‌ನಿಂದ ಸಮಸ್ಯೆಯಾಗಿದೆಯೆಂದು ತಾಲ್ಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ. ಎಚ್.ಎಫ್.ಇಂಗಳೆೆ ತಿಳಿಸಿದ್ದಾರೆ. ಮಿತಿ ಮೀರಿ ಕ್ಲೋರಿನ್ ಬೆರೆಸಿದ್ದು ಅಥವಾ ಕ್ಲೋರಿನ್ ಪರಿಣಾಮ ಕಡಿಮೆಯಾಗಿ ಕುಡಿಯಲು ಯೋಗ್ಯವಾಗುವ ಮೊದಲೆ ಹೊಣೆಗೇಡಿತನದಿಂದ ವಿದ್ಯಾಥಿಗಳಿಗೆ ನೀಡಿದ್ದರಿಂದ ಆರೋಗ್ಯ ಹದಗೆಟ್ಟಿದೆಯೆನ್ನಲಾಗಿದೆ.

ಶುದ್ದ ಕುಡಿಯುವ ನೀರಿನ ಘಟಕ ಶಾಲೆಗೆ ಮಂಜೂರಾಗಿ ಹಲವು ದಿನವಾಗಿದ್ದರೂ ಅದಿನ್ನು ಸ್ಥಾಪಿಸಲಾಗಿಲ್ಲ. ಘಟಕಕ್ಕೆ ಬೇಕಾದ ಸಾಮಗ್ರಿಗಳು ಬಂದಿವೆ. ಆದರೆ ಅದನ್ನು ಜೋಡಿಸಲಾಗಿಲ್ಲ. ಹೀಗಾಗಿ ಮಕ್ಕಳು ಶುದ್ದ ನೀರಿನಿಂದ ವಂಚಿತರಾಗಿ ಕಷ್ಟ ಎದುರಿಸುವಂತಾಗಿದೆಯೆಂದು ಪಾಲಕರು ಹೇಳುತ್ತಾರೆ. ಈ ಸಲ ಬಟ್ಟೆ, ಪುಸ್ತಕ ವಿತರಣೆಯಾಗಿಲ್ಲವೆಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಶಿಕ್ಷಕರಿಗೆ ಮಕ್ಕಳ ಬಗ್ಗೆ ಕಾಳಜಿಯಿಲ್ಲವೆಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದು, 9 ವಿದ್ಯಾರ್ಥಿಗಳು ಅಸ್ವಸ್ಥರಾದಾಗ ಆಸ್ಪತ್ರೆ ಸೇರಿಸಲು ನರ್ಸ್‌ಗೆ ಯಾವ ಶಿಕ್ಷಕರೂ ನೆರವಿಗೆ ಬರಲಿಲ್ಲವೆಂದು ಹೇಳಿದ್ದಾರೆ. ಶಾಲೆಯ ಹಿಂಬದಿಯ ವಸತಿ ಗ್ರಹದಲ್ಲೆ ಇದ್ದರು ಶಿಕ್ಷರು ಉದಾಸೀನ ತೋರಿಸಿದ್ದು ಅಮಾನವೀಯವೆಂದು ಪಾಲಕರು ಹೇಳುತ್ತಿದ್ದಾರೆ.


ಇದನ್ನೂ ಓದಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...