Homeಕರ್ನಾಟಕಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

ಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

- Advertisement -
- Advertisement -

ಮುಂಡಗೋಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅನೈರ್ಮಲ್ಯ, ಅಶುದ್ದ ಊಟ ಮತ್ತು ನೀರಿನಿಂದ ವಿದ್ಯಾರ್ಥಿಗಳ ಆರೋಗ್ಯ ಕೆಡುವ ಭಯ ಮೂಡಿದೆಯೆಂದು ಪಾಲಕರು ತಹಶೀಲ್ದಾರ್‌ಗೆ ದೂರು ಕೊಟ್ಟ ದಿನದ ರಾತ್ರಿಯೇ 9 ವಿದ್ಯಾರ್ಥಿಗಳು ವಾಂತಿ ತಲೆ ನೋವು, ಹೊಟ್ಟೆ ನೋವು ಬಾಧಿಸಿ ಆಸ್ಪತ್ರೆಗೆ ದಾಖಲಾಗಬೇಕಾದ ಘಟನೆ ನಡೆದಿದೆ. ಸಂಭವನೀಯ ಅನಾಹುತದಿಂದ ವಿದ್ಯಾರ್ಥಿಗಳು ಪಾರಾಗಿ ಮನೆ ಸೇರಿದ್ದಾರಾದರೂ ಶಾಲೆಯ ಅವ್ಯವಸ್ಥೆ ಬಗ್ಗೆ ಆತಂಕ, ಆಕ್ರೋಶ ಭರಿತ ಟೀಕೆ-ಟಿಪ್ಪಣಿ ವ್ಯಕ್ತವಾಗುತ್ತಿದೆ.

ಶುಕ್ರವಾರ ರಾತ್ರಿ ವಿದ್ಯಾರ್ಥಿಗಳು ಊಟ ಮುಗಿಸಿ ತಮ್ಮ ತಮ್ಮ ಕೊಠಡಿ ಸೇರಿಕೊಂಡಿದ್ದರು. ಆಗ ಇದ್ದಕ್ಕಿದ್ದಂತೆಯೆ 7 ಮತ್ತು 8ನೇ ತರಗತಿಗೆ ಸೇರಿದ ಓರ್ವ ಹುಡುಗ ಹಾಗು 8 ಹುಡುಗಿಯರಿಗೆ ವಾಂತಿ ಶುರುವಾಗಿದೆ. ಇನ್ನು ಕೆಲವರು ಹೊಟ್ಟೆ ನೋವು ಮತ್ತು ತಲೆ ನೋವಿನಿಂದ ಬಳಲತೊಡಗಿದರು. ಹಾಸ್ಟೇಲ್ ನರ್ಸ್ ರಾತ್ರಿಯೇ ಸರ್ಕಾರಿ ಆಸ್ಪತ್ರೆಗೆ 9 ವಿದ್ಯಾರ್ಥಿಗಳನ್ನು ದಾಖಲಿಸಿದ್ದಾರೆ. ಇವರಲ್ಲಿ 8 ವಿದ್ಯಾರ್ಥಿಗಳು ಗುಣಮುಖರಾಗಿ ಹಾಸ್ಟೇಲ್ ಸೇರಿದರೆ, ಒಬ್ಬ ವಿದ್ಯಾರ್ಥಿನಿ ಮಾತ್ರ ಹೆಚ್ಚು ಅಸ್ವಸ್ಥಳಾಗಿದ್ದರಿಂದ ಶನಿವಾರ ಸಂಜೆ ತನಕವೂ ಆಸ್ಪತ್ರೆಯಲ್ಲೆ ಇರಬೇಕಾಯಿತು.

ಕಲುಷಿತ ಆಹಾರದಿಂದ ತಮ್ಮ ಮಕ್ಕಳ ಆರೋಗ್ಯ ಹದಗೆಟ್ಟಿದೆಯೆಂದು ಪಾಲಕರು ಆಕ್ರೋಶಿತರಾಗಿದ್ದರು. ಪಾಲಕರ ಈ ಅನುಮಾನಕ್ಕೂ ಕಾರಣವಿತ್ತು. ಕೆಲ ದಿನಗಳ ಹಿಂದೆ ವಿದ್ಯಾರ್ಥಿಗಳಿಗೆ ಕೊಟ್ಟ ಊಟದಲ್ಲಿ ಹುಳುಗಳು ಕಂಡುಬಂದಿತ್ತು. ಈ ಕುರಿತು ತಹಶೀಲ್ದಾರ್‌ರಿಗೆ ದೂರು ಸಹ ನೀಡಲಾಗಿತ್ತು. ಆಹಾರ ಪದಾರ್ಥ ಸರಿಯಾಗಿ ಶುಚಿಗೊಳಿಸದೆ ಅಡಿಗೆ ತಯಾರಿಸದ್ದರಿಂದ ಹುಳುಗಳು ಊಟದಲ್ಲಿ ಬರಲು ಕಾಣವಾಗಿತ್ತೆಂದು ವಾರ್ಡನ್ ಹೇಳಿದ್ದರು.

ಆದರೆ ಈ ಬಾರಿ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಲು ಕಲುಷಿತ ನೀರು ಕಾರಣವಾಗಿತ್ತು. ಶಾಲೆಯ ಕುಡಿಯುವ ನೀರನ್ನು ಶುದ್ದ ಮಾಡಲೆಂದು ಟ್ಯಾಂಕಿಗೆ ಬೆರೆಸಿದ ಕ್ಲೋರಿನ್‌ನಿಂದ ಸಮಸ್ಯೆಯಾಗಿದೆಯೆಂದು ತಾಲ್ಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ. ಎಚ್.ಎಫ್.ಇಂಗಳೆೆ ತಿಳಿಸಿದ್ದಾರೆ. ಮಿತಿ ಮೀರಿ ಕ್ಲೋರಿನ್ ಬೆರೆಸಿದ್ದು ಅಥವಾ ಕ್ಲೋರಿನ್ ಪರಿಣಾಮ ಕಡಿಮೆಯಾಗಿ ಕುಡಿಯಲು ಯೋಗ್ಯವಾಗುವ ಮೊದಲೆ ಹೊಣೆಗೇಡಿತನದಿಂದ ವಿದ್ಯಾಥಿಗಳಿಗೆ ನೀಡಿದ್ದರಿಂದ ಆರೋಗ್ಯ ಹದಗೆಟ್ಟಿದೆಯೆನ್ನಲಾಗಿದೆ.

ಶುದ್ದ ಕುಡಿಯುವ ನೀರಿನ ಘಟಕ ಶಾಲೆಗೆ ಮಂಜೂರಾಗಿ ಹಲವು ದಿನವಾಗಿದ್ದರೂ ಅದಿನ್ನು ಸ್ಥಾಪಿಸಲಾಗಿಲ್ಲ. ಘಟಕಕ್ಕೆ ಬೇಕಾದ ಸಾಮಗ್ರಿಗಳು ಬಂದಿವೆ. ಆದರೆ ಅದನ್ನು ಜೋಡಿಸಲಾಗಿಲ್ಲ. ಹೀಗಾಗಿ ಮಕ್ಕಳು ಶುದ್ದ ನೀರಿನಿಂದ ವಂಚಿತರಾಗಿ ಕಷ್ಟ ಎದುರಿಸುವಂತಾಗಿದೆಯೆಂದು ಪಾಲಕರು ಹೇಳುತ್ತಾರೆ. ಈ ಸಲ ಬಟ್ಟೆ, ಪುಸ್ತಕ ವಿತರಣೆಯಾಗಿಲ್ಲವೆಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಶಿಕ್ಷಕರಿಗೆ ಮಕ್ಕಳ ಬಗ್ಗೆ ಕಾಳಜಿಯಿಲ್ಲವೆಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದು, 9 ವಿದ್ಯಾರ್ಥಿಗಳು ಅಸ್ವಸ್ಥರಾದಾಗ ಆಸ್ಪತ್ರೆ ಸೇರಿಸಲು ನರ್ಸ್‌ಗೆ ಯಾವ ಶಿಕ್ಷಕರೂ ನೆರವಿಗೆ ಬರಲಿಲ್ಲವೆಂದು ಹೇಳಿದ್ದಾರೆ. ಶಾಲೆಯ ಹಿಂಬದಿಯ ವಸತಿ ಗ್ರಹದಲ್ಲೆ ಇದ್ದರು ಶಿಕ್ಷರು ಉದಾಸೀನ ತೋರಿಸಿದ್ದು ಅಮಾನವೀಯವೆಂದು ಪಾಲಕರು ಹೇಳುತ್ತಿದ್ದಾರೆ.


ಇದನ್ನೂ ಓದಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...