Homeಕರ್ನಾಟಕಬೆಳೆ ಹಾನಿಗಾಗಿ ಜಿಲ್ಲಾಡಳಿತಗಳಲ್ಲಿ 685 ಕೋಟಿ ಲಭ್ಯವಿದೆ, ಹೆಚ್ಚಿನ ಅನುದಾನಕ್ಕಾಗಿ ಕೇಂದ್ರಕ್ಕೆ ಪತ್ರ: ಸಿಎಂ ಬಸವರಾಜ...

ಬೆಳೆ ಹಾನಿಗಾಗಿ ಜಿಲ್ಲಾಡಳಿತಗಳಲ್ಲಿ 685 ಕೋಟಿ ಲಭ್ಯವಿದೆ, ಹೆಚ್ಚಿನ ಅನುದಾನಕ್ಕಾಗಿ ಕೇಂದ್ರಕ್ಕೆ ಪತ್ರ: ಸಿಎಂ ಬಸವರಾಜ ಬೊಮ್ಮಾಯಿ

- Advertisement -
- Advertisement -

ರಾಜ್ಯದಲ್ಲಿ ಅಕಾಲಿಕ ಮಳೆಗೆ ಬೆಳೆ ಹಾನಿ ಉಂಟಾಗಿದ್ದು, ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಇದೇ ವೇಳೆ ಹೆಚ್ಚಿನ ಅನುದಾನ ಒದಗಿಸುವಂತೆ ಕೋರಿ ಕೇಂದ್ರ ಸರ್ಕಾರದ ಪ್ರಕೃತಿ ವಿಕೋಪ ಕಾರ್ಯದರ್ಶಿಗಳಿಗೆ ಆರ್ಥಿಕ ಇಲಾಖೆ ವತಿಯಿಂದ ಪತ್ರವನ್ನು ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸೋಮವಾರ ತುಮಕೂರಿನ ಸಿದ್ಧಗಂಗಾಮಠದ ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ದ್ವಿತೀಯ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.

“ರಾಜ್ಯದಲ್ಲಿ ಬೆಳೆ ಹಾನಿ ಪರಿಹಾರಕ್ಕೆ 685 ಕೋಟಿ ರೂಪಾಯಿಗಳು ಎಲ್ಲಾ ಜಿಲಾಡಳಿತಗಳಲ್ಲಿ ಈಗಾಗಲೇ ಲಭ್ಯವಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಪರಿಹಾರ ಆಪ್‌ನಲಿ ಮಾಹಿತಿ ಆಪ್ ಲೋಡ್ ಮಾಡಿದವರಿಗೆ ಪರಿಹಾರವನ್ನು ವಿತರಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳೆ ಹಾನಿ ಸಮೀಕ್ಷೆ ಮಾಡಿಸಿ ತಕ್ಷಣ ಪರಿಹಾರ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

ಮುಂದುವರಿದು, “ಹಣಕಾಸಿನ ಅವಶ್ಯಕತೆ ಇದ್ದಲ್ಲಿ ಕೂಡಲೇ ತಿಳಿಸುವಂತೆ ಕೇಂದ್ರ ಸರ್ಕಾರ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳಲು ತಕ್ಷಣವೇ ಒಂದು ತಂಡವನ್ನು ಕಳುಹಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ರಾಜ್ಯ ಸರ್ಕಾರದ ಸಮೀಕ್ಷೆಯೂ ನಡೆದಿದೆ” ಎಂದಿದ್ದಾರೆ.

ಮಳೆಯಿಂದಾಗಿ ರೈತರಿಗೆ ಅಪಾರ ಹಾನಿಯಾಗಿದ್ದು, ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದರು. “ನಿರಂತರವಾಗಿ ಸುರಿದ ಮಳೆಯಿಂದಾಗಿ ರೈತರ ಬೆಳೆಯಲ್ಲಿ ಶೇ. 60 ರಷ್ಟು ನಷ್ಟವಾಗಿದೆ. ಲಕ್ಷಾಂತರ ರೂಪಾಯಿ ಸಾಲಮಾಡಿ ರೈತರು ಕಲ್ಕತ್ತಾದಿಂದ ಹೂಗಿಡಗಳನ್ನು ತರಿಸಿ ಹೊಲದಲ್ಲಿ ಹಾಕಿದ್ದರು. ಮಳೆಯಿಂದಾಗಿ ಬೆಳೆಪೂರ್ತಿ ಕೊಚ್ಚಿಹೋಗಿದೆ. ಕಳೆದ 25 ದಿನಗಳಿಂದ ಮಳೆಯಾಗುತ್ತಿದ್ದು ಬೆಳೆ ನಾಶವಾಗಿದೆ. ಸರ್ಕಾರ ಈಗಾಗಲೇ ಬೆಳೆನಷ್ಟದ ಸಮೀಕ್ಷೆ ಮಾಡಿಸಬೇಕಿತ್ತು, ಜಿಲ್ಲಾ ಉಸ್ತುವಾರಿ ಸಚಿವರು, ಮಂತ್ರಿಗಳು ರೈತರ ಸಂಕಷ್ಟ ಆಲಿಸಬೇಕಿತ್ತು. ಇದ್ಯಾವುದನ್ನೂ ಸರ್ಕಾರ ಮಾಡಿಲ್ಲ’ ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇನ್ನೂ ತಡ ಮಾಡದೆ ರಾಜ್ಯ ಸರ್ಕಾರ ತಕ್ಷಣ ಬೆಳೆ ನಷ್ಟದ ಸಮೀಕ್ಷೆ ಮಾಡಿ, ರೈತರಿಗೆ ಪರಿಹಾರದ ಹಣ ನೀಡಬೇಕು ಎಂದು ಮುಖ್ಯಮಂತ್ರಿಯವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದರು.


ಇದನ್ನೂ ಓದಿ: ಅಕಾಲಿಕ ಮಳೆಯಿಂದ ರೈತರ ಬೆಳೆಯಲ್ಲಿ ಶೇ. 60 ರಷ್ಟು ನಷ್ಟ, ತಕ್ಷಣ ಪರಿಹಾರ ನೀಡಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...