Homeಕರ್ನಾಟಕಓಮಿಕ್ರಾನ್ ಆತಂಕ: ಸಾವಿನ ಮೆರವಣಿಗೆ ಮತ್ತೆ ಬೇಡ- ಎಚ್.ಡಿ.ಕುಮಾರಸ್ವಾಮಿ

ಓಮಿಕ್ರಾನ್ ಆತಂಕ: ಸಾವಿನ ಮೆರವಣಿಗೆ ಮತ್ತೆ ಬೇಡ- ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ದೇಶದಲ್ಲಿ ಓಮಿಕ್ರಾನ್ ಆತಂಕ ಉಂಟಾಗಿದ್ದು, ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳು ಮುನ್ನೆಚ್ಚರಿಕೆ ನೀಡಿವೆ. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸೋಣ, ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾವನಾತ್ಮವಾಗಿ ಟ್ವೀಟ್ ಮಾಡಿದ್ದಾರೆ.

“ಕೋವಿಡ್‌ ಮೊದಲ ಅಲೆಯ ಆತಂಕ, ಎರಡನೇ ಅಲೆ ಸೃಷ್ಟಿಸಿದ ನರಕಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು, ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್‌ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ ಉಸಿರು ಚೆಲ್ಲಿದ ಜೀವಗಳನ್ನು ನೆನೆಸಿಕೊಂಡರೆ ಕಣ್ಣುಗಳ ಕಟ್ಟೆಯೊಡೆಯುತ್ತದೆ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ. ಯಾರೂ ಎಚ್ಚರ ತಪ್ಪುವುದು ಬೇಡ” ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಓಮಿಕ್ರಾನ್ ಆತಂಕ: ಸೌತ್ ಆಫ್ರಿಕಾದಿಂದ ಬಂದ ವ್ಯಕ್ತಿಗೆ ಸೋಂಕು, 3 ದೇಶಗಳಿಂದ ವಿಮಾನಯಾನ ಬಂದ್ ಮಾಡಿ- ಸಿಎಂ ಬೊಮ್ಮಾಯಿ

“ಕೊರೊನಾ ಹೊಸ ತಳಿ ಓಮಿಕ್ರಾನ್ 30ಕ್ಕೂ ಹೆಚ್ಚು ರೂಪಾಂತರ ಹೊಂದಿರುವ ವರದಿ ಇದೆ. ಭಾರತವೂ ಸೇರಿ ಜಗತ್ತಿನ ವಿವಿಧ ದೇಶಗಳಲ್ಲಿ ಮಾರಕ ಮಾರಿ ಪುನಾ ಅಬ್ಬರಿಸುತ್ತಿದೆ. ಕೇಂದ್ರ ಸರಕಾರ, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಎಲ್ಲೆಡೆ ಕೆನ್ನಾಲಗೆ ಚಾಚಿರುವ ಕೊರೋನಾ ಹೊಸ ತಳಿಯನ್ನೆದುರಿಸಲು ನಮಗೊಂದಿಷ್ಟು ತಾಳ್ಮೆ ಬೇಕಿದೆ” ಎಂದಿದ್ದಾರೆ.

“ಕೊರೊನ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ. ಇದು ನನ್ನ ವಿನಮ್ರ ಪ್ರಾರ್ಥನೆ” ಎಂದು ಜನಸಾಮಾನ್ಯರಲ್ಲಿ ಮನವಿ ಮಾಡಿದ್ದಾರೆ.

ಇತ್ತ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಓಮಿಕ್ರಾನ್‌ ಬಗ್ಗೆ ರಾಜ್ಯದಲ್ಲಿ ಕಟ್ಟುನಿಟ್ಟನ ಕ್ರಮ ಕೈಗೊಳ್ಳುತ್ತಿರುವುದರ ಕುರಿತು ಮಾಹಿತಿ ನೀಡಿದ್ದಾರೆ. “ಹೊರ ದೇಶದಿಂದ ಆಗಮಿಸುವ ಜನರನ್ನು ತಪಾಸಣೆಗೆ ಒಳಪಡಿಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ಇಲ್ಲವಾದಲ್ಲಿ ಕಂಟೈನ್‌ಮೆಂಟ್ ಸ್ಥಳಕ್ಕೆ ಸ್ಥಳಾಂತರಿಸುವುದು. ವಿಶೇಷವಾಗಿ ಓಮಿಕ್ರಾನ್ ಹೊಸ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೊಟ್ಸ್ವಾನಾ ಈ ಮೂರು ದೇಶಗಳಿಂದ ನಗರಕ್ಕೆ ಪ್ರಯಾಣಿಕರ ಆಗಮನವನ್ನು ಸಂಪೂರ್ಣವಾಗಿ ನಿಷೇದಿಸಬೇಕೆನ್ನುವ ಬೇಡಿಕೆಯನ್ನು ಕೇಂದ್ರ ಸರ್ಕಾರದ ಮುಂದೆ ಇಡಲಾಗಿದೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ’ಓಮಿಕ್ರಾನ್’ ಆತಂಕ: ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ- ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...