Homeಕರ್ನಾಟಕಓಮಿಕ್ರಾನ್ ಆತಂಕ: ಸಾವಿನ ಮೆರವಣಿಗೆ ಮತ್ತೆ ಬೇಡ- ಎಚ್.ಡಿ.ಕುಮಾರಸ್ವಾಮಿ

ಓಮಿಕ್ರಾನ್ ಆತಂಕ: ಸಾವಿನ ಮೆರವಣಿಗೆ ಮತ್ತೆ ಬೇಡ- ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ದೇಶದಲ್ಲಿ ಓಮಿಕ್ರಾನ್ ಆತಂಕ ಉಂಟಾಗಿದ್ದು, ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳು ಮುನ್ನೆಚ್ಚರಿಕೆ ನೀಡಿವೆ. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸೋಣ, ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾವನಾತ್ಮವಾಗಿ ಟ್ವೀಟ್ ಮಾಡಿದ್ದಾರೆ.

“ಕೋವಿಡ್‌ ಮೊದಲ ಅಲೆಯ ಆತಂಕ, ಎರಡನೇ ಅಲೆ ಸೃಷ್ಟಿಸಿದ ನರಕಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು, ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್‌ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ ಉಸಿರು ಚೆಲ್ಲಿದ ಜೀವಗಳನ್ನು ನೆನೆಸಿಕೊಂಡರೆ ಕಣ್ಣುಗಳ ಕಟ್ಟೆಯೊಡೆಯುತ್ತದೆ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ. ಯಾರೂ ಎಚ್ಚರ ತಪ್ಪುವುದು ಬೇಡ” ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಓಮಿಕ್ರಾನ್ ಆತಂಕ: ಸೌತ್ ಆಫ್ರಿಕಾದಿಂದ ಬಂದ ವ್ಯಕ್ತಿಗೆ ಸೋಂಕು, 3 ದೇಶಗಳಿಂದ ವಿಮಾನಯಾನ ಬಂದ್ ಮಾಡಿ- ಸಿಎಂ ಬೊಮ್ಮಾಯಿ

“ಕೊರೊನಾ ಹೊಸ ತಳಿ ಓಮಿಕ್ರಾನ್ 30ಕ್ಕೂ ಹೆಚ್ಚು ರೂಪಾಂತರ ಹೊಂದಿರುವ ವರದಿ ಇದೆ. ಭಾರತವೂ ಸೇರಿ ಜಗತ್ತಿನ ವಿವಿಧ ದೇಶಗಳಲ್ಲಿ ಮಾರಕ ಮಾರಿ ಪುನಾ ಅಬ್ಬರಿಸುತ್ತಿದೆ. ಕೇಂದ್ರ ಸರಕಾರ, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಎಲ್ಲೆಡೆ ಕೆನ್ನಾಲಗೆ ಚಾಚಿರುವ ಕೊರೋನಾ ಹೊಸ ತಳಿಯನ್ನೆದುರಿಸಲು ನಮಗೊಂದಿಷ್ಟು ತಾಳ್ಮೆ ಬೇಕಿದೆ” ಎಂದಿದ್ದಾರೆ.

“ಕೊರೊನ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ. ಇದು ನನ್ನ ವಿನಮ್ರ ಪ್ರಾರ್ಥನೆ” ಎಂದು ಜನಸಾಮಾನ್ಯರಲ್ಲಿ ಮನವಿ ಮಾಡಿದ್ದಾರೆ.

ಇತ್ತ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಓಮಿಕ್ರಾನ್‌ ಬಗ್ಗೆ ರಾಜ್ಯದಲ್ಲಿ ಕಟ್ಟುನಿಟ್ಟನ ಕ್ರಮ ಕೈಗೊಳ್ಳುತ್ತಿರುವುದರ ಕುರಿತು ಮಾಹಿತಿ ನೀಡಿದ್ದಾರೆ. “ಹೊರ ದೇಶದಿಂದ ಆಗಮಿಸುವ ಜನರನ್ನು ತಪಾಸಣೆಗೆ ಒಳಪಡಿಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ಇಲ್ಲವಾದಲ್ಲಿ ಕಂಟೈನ್‌ಮೆಂಟ್ ಸ್ಥಳಕ್ಕೆ ಸ್ಥಳಾಂತರಿಸುವುದು. ವಿಶೇಷವಾಗಿ ಓಮಿಕ್ರಾನ್ ಹೊಸ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೊಟ್ಸ್ವಾನಾ ಈ ಮೂರು ದೇಶಗಳಿಂದ ನಗರಕ್ಕೆ ಪ್ರಯಾಣಿಕರ ಆಗಮನವನ್ನು ಸಂಪೂರ್ಣವಾಗಿ ನಿಷೇದಿಸಬೇಕೆನ್ನುವ ಬೇಡಿಕೆಯನ್ನು ಕೇಂದ್ರ ಸರ್ಕಾರದ ಮುಂದೆ ಇಡಲಾಗಿದೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ’ಓಮಿಕ್ರಾನ್’ ಆತಂಕ: ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ- ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...