Homeಕರ್ನಾಟಕಸಮಾಜವನ್ನು ಬದಲಾಯಿಸುವ ಮುನ್ನ ಯುವಜನರು ತಮ್ಮನ್ನು ಬದಲಾಯಿಸಿಕೊಳ್ಳಬೇಕು- ಕಾಮ್ರೇಡ್ ಪ್ರತಿಭಾ ನಾಯಕ್

ಸಮಾಜವನ್ನು ಬದಲಾಯಿಸುವ ಮುನ್ನ ಯುವಜನರು ತಮ್ಮನ್ನು ಬದಲಾಯಿಸಿಕೊಳ್ಳಬೇಕು- ಕಾಮ್ರೇಡ್ ಪ್ರತಿಭಾ ನಾಯಕ್

- Advertisement -
- Advertisement -

“ಸಮಾಜವನ್ನು ಬದಲಾಯಿಸುವ ಹೋರಾಟಕ್ಕೆ ಕಾಲಿಡುವ ಯುವಜನರು ಮೊದಲು ತಮ್ಮನ್ನೇ ಬದಲಾಯಿಸಿಕೊಳ್ಳಬೇಕು, ಸಮಾಜದ ಸಮಸ್ಯೆಗಳ ವಿರುದ್ಧ ಹೋರಾಟಗಳನ್ನು ಕಟ್ಟಬೇಕು. ಆ ಹೋರಾಟಗಳ ಮೂಲಕವೇ ನಮ್ಮ ಚಾರಿತ್ರ್ಯ ಮೇಲೇರುತ್ತದೆ” ಎಂದು ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಪ್ರತಿಭಾ ನಾಯಕ್ ಹೇಳಿದ್ದಾರೆ.

ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ಕರ್ನಾಟಕ  ರಾಜ್ಯ ಸಮಿತಿಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ಎರಡು ದಿನಗಳ 5ನೇ ರಾಜ್ಯ ಮಟ್ಟದ ಯುವಜನ ಸಮ್ಮೇಳನ ನಡೆದಿದೆ. ಈ ವೇಳೆ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿರುವ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಪ್ರತಿಭಾ ನಾಯಕ್, “ಇಂದು ನಮ್ಮ ಸಮಾಜದಲ್ಲಿ ಮೌಲ್ಯಗಳು ನಶಿಸುತ್ತಿವೆ.  ಆದರೆ, ನಾವು ಮೌಲ್ಯಗಳನ್ನು ಕಳೆದುಕೊಳ್ಳಬಾರದು. ಹೇಗೆ ಸುಗಂಧಯುಕ್ತ ಹೂವೊಂದು ತಾನಿರುವ ಸ್ಥಳವನ್ನು ಪರಿಮಳಯುಕ್ತಗೊಳಿಸುವುದೋ ಹಾಗೆಯೇ ಸಚ್ಚಾರಿತ್ರ್ಯವುಳ್ಳ ಯುವಕರಾಗಿ  ನಾವು  ನಮ್ಮ ಸಮಾಜದಲ್ಲಿಯೂ ಉನ್ನತ ಚಾರಿತ್ಯ್ರ ಮತ್ತು  ಮ್ಯೌಗಳನ್ನು ಬೆಳೆಸಬೇಕು”  ಎಂದು ಹೇಳಿದ್ದಾರೆ.

“ಕೋವಿಡ್‌ನ ಸಂದರ್ಭದಲ್ಲಿ ಸರ್ಕಾರವು ಸಾಕಷ್ಟು ಜನವಿರೋಧಿ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರದ ಉದ್ಯಮಗಳನ್ನು ಖಾಸಗಿ ಬಂಡವಾಳಿಗರಿಗೆ ಉಡುಗೊರೆಯಾಗಿ ನೀಡಿದೆ. ಪ್ರಪಂಚದಲ್ಲೇ  ದೊಡ್ಡ ಪ್ರಜಾಪ್ರಭುತ್ವವೆಂದು ಬೀಗುವ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಹರಣವಾಗುತ್ತಿದೆ. ಅವುಗಳನ್ನು ರಕ್ಷಿಸಲು ನಾವು ಹೋರಾಟ ಬೆಳೆಸಬೇಕು. ಯುವಜನರು ತಮ್ಮ ವಿರುದ್ಧ ಸರ್ಕಾರ  ತರುವ ನೀತಿಗಳ ವಿರುದ್ಧ, ತಮ್ಮ ಸಮಸ್ಯೆಗಳ ವಿರುದ್ಧದ ಹೋರಾಟಕ್ಕೆ ನಾಯಕತ್ವಕ್ಕಾಗಿ ಸಂಘಟನೆಯತ್ತ ನೋಡುತ್ತಿದ್ದಾರೆ. ಅವರನ್ನು ಸಂಘಟಿಸಿ ಹೋರಾಟವನ್ನು ಒಂದು ಗಮ್ಯಕ್ಕೆ ಹೊಯ್ಯುವ  ಹೊಣೆ ನಮ್ಮದು. ನಮಗಾಗಿ ಬದುಕುವುದಷ್ಟೇ ನಿಜವಾದ ಬದುಕಲ್ಲ, ಪರರಿಗಾಗಿ ಬದುಕುವವರು ನಿಜವಾದ ಮಾನವರು. ನಮ್ಮ ನಡುವೆ ಇರುವ ಯುವಕರಲ್ಲಿ ಅಂತಹ ಗುಣವುಳ್ಳ ಯುವಜನರಿದ್ದಾರೆ. ಅಂಥವರನ್ನು ಹುಡುಕಿ ಅವರಿಗೆ ವೈಚಾರಿಕತೆಯನ್ನು ನೀಡಿ ಯುವ ಸಂಘಟನಕಾರರಾಗಿ ಬೆಳೆಸುವ ಹೊಣೆಯನ್ನು ಯುವಜನರು ತೆಗೆದುಕೊಳ್ಳಬೇಕು” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

ಎಐಡಿವೈಓನ ರಾಷ್ಟಾಧ್ಯಕ್ಷರಾದ ಕಾ. ರಾಮಾಂಜನಪ್ಪ ಆಲ್ದಳ್ಳಿ ಮಾತನಾಡಿ, “ನಮ್ಮ ದೇಶದಲ್ಲಿ ವಿಭಿನ್ನ ಸಂಸ್ಕೃತಿಯ ಜನ ಸಾವಿರಾರು ವರ್ಷಗಳಿಂದ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಈಗ ಅವರ ನಡುವೆ ವಿಘಟನೆಯನ್ನು ತರಲು ಪಟ್ಟಭದ್ರ ಶಕ್ತಿಗಳು ಹವಣಿಸುತ್ತಿವೆ. ಅವರ ಹುನ್ನಾರವನ್ನು ಯುವಜನರು ಅರ್ಥಮಾಡಿಕೊಳ್ಳಬೇಕು. ಜನಸಾಮಾನ್ಯರಿಗೆ ಸತ್ಯದ ಅರಿವು ಮೂಡಿಸಿ ತಮ್ಮ ನೈಜ ಸಮಸ್ಯೆಗಳ ವಿರುದ್ಧ ಸಂಘಟಿತ ಹೋರಾಟಕಟ್ಟುವಂತೆ ಮಾಡುವ ಜವಾಬ್ದಾರಿ ಯುವಜನರ ಮೇಲಿದೆ. ನಮ್ಮ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ  ಹೋರಾಟಗಾರರಾದ ಭಗತ್‌ಸಿಂಗ್, ನೇತಾಜಿ ಮೊದಲಾದವರು  ಮಾನವನಿಂದ  ಮಾನವನ  ಶೋಷಣೆಯನ್ನು  ಅಂತ್ಯಗೊಳಿಸುವ  ಸಮ  ಸಮಾಜ ನಿರ್ಮಾಣದ  ಕನಸು  ಕಂಡಿದ್ದರು. ಅವರ  ವಿಚಾರದ ಬೆಳಕಿನಡಿಯಲ್ಲಿ ನಾವು ಹೋರಾಟವನ್ನು ಮಂದುವರೆಸಬೇಕು” ಎಂದಿದ್ದಾರೆ.

ಇದೆ ಸಂದರ್ಭದಲ್ಲಿ ಎಐಡಿವೈಓ ಹೊಸ ರಾಜ್ಯ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಶರಣಪ್ಪ ಉದ್ಬಾಳ್, ಉಪಾಧ್ಯಕ್ಷರುಗಳಾಗಿ  ಚನ್ನಬಸವ  ಜಾನೇಕಲ್, ವಿಜಯಕುಮಾರ್, ಕೃಷ್ಣ, ಜಗನ್ನಾಥ ಎಸ್.ಎಚ್, ವಿನಯ ಸಾರಥಿ ಆಯ್ಕೆಯಾಗಿದ್ದಾರೆ.


ಇದನ್ನೂ ಓದಿ: ಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...