Homeಮುಖಪುಟವಿಜ್ಞಾನಕ್ಕಿಂತ ಜ್ಯೋತಿಷ್ಯ ದೊಡ್ಡದು ಎಂದಿದ್ದವರು ಈಗ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾಗಿದ್ದಾರೆ

ವಿಜ್ಞಾನಕ್ಕಿಂತ ಜ್ಯೋತಿಷ್ಯ ದೊಡ್ಡದು ಎಂದಿದ್ದವರು ಈಗ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾಗಿದ್ದಾರೆ

ನಾವು ನಮ್ಮ ಮಕ್ಕಳು ಹೆಚ್ಚು ಹೆಚ್ಚು ಆಧುನಿಕರಾಗಬೇಕು, ವಿಜ್ಞಾನವನ್ನು ಚೆನ್ನಾಗಿ ಕಲಿತು ಪ್ರಪಂಚದೊಟ್ಟಿಗೆ ಸ್ಪರ್ದಿಸಬೇಕೆಂದು ಬಯಸಿದರೆ, ವಿಜ್ಞಾನದ ಬಗ್ಗೆ ಅಪನಂಬಿಕೆ ಹೊಂದಿರುವ ವೇದ, ಪುರಾಣದ ಬಗ್ಗೆ ಭಕ್ತಿ ತೋರಿಸುವ ರಮೇಶ್ ಪೋಖ್ರಿಯಾಲ್ ರವರು ನಮ್ಮ ಸಚಿವರಾಗಿದ್ದಾರೆ

- Advertisement -
- Advertisement -

“ಲಕ್ಷ ವರ್ಷಗಳ ಹಿಂದೆಯೇ ಪರಮಾಣು ವಿಜ್ಞಾನದ ಬಗ್ಗೆ ಭಾರತಕ್ಕೆ ಗೊತ್ತಿತ್ತು.” ಜ್ಯೋತಿಷ್ಯದ ಮುಂದೆ ವಿಜ್ಞಾನ ಏನೇನು ಅಲ್ಲ. ಜ್ಯೋತಿಷ್ಯವು ಅತಿ ದೊಡ್ಡ ವಿಜ್ಞಾನವಾಗಿದೆ. ಅದು ವಿಜ್ಞಾನಕ್ಕಿಂತ ಹೆಚ್ಚಾಗಿರುತ್ತದೆ. ಹಾಗಾಗಿ ನಾವದನ್ನು ಹೆಚ್ಚು ಪ್ರಚಾರ ಮಾಡಲೇಬೇಕು.

ಈ ಮಾತುಗಳನ್ನು ಕೇಳಿದರೆ ನಿಮಗೆ ಏನನಿಸುತ್ತದೆ? ಯಾರೋ ಜೋಕರ್ ಹೇಳಿದ್ದಾನೆಂದು ನಗಬೇಡಿ. ಇದನ್ನು ಹೇಳಿದವರು ನಮ್ಮ ಮಕ್ಕಳ ಭವಿಷ್ಯವನ್ನು ತೀರ್ಮಾನಿಸುವ, ಭಾರತದ ಶಿಕ್ಷಣದ ನೀತಿಗಳನ್ನು ರೂಪಿಸುವ ನಮ್ಮ ನೂತನ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾದ ರಮೇಶ್ ಪೋಖ್ರಿಯಾಲ್ ನಿಶಾಂಕ್.

ಹೌದು ಸಂದೇಹವೇ ಬೇಡ. ಉತ್ತರಖಂಡದ ಮಾಜಿ ಮುಖ್ಯಮಂತ್ರಿ, ಹಾಲಿ ಹರಿದ್ವಾರದಿಂದ ಸಂಸದರಾಗಿ ಆಯ್ಕೆಯಾಗಿ ನೂತನ ಮಾನವ ಸಂಪನ್ಮೂಲ ಸಚಿರಾಗಿ ಆಯ್ಕೆಯಾಗಿರುವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಟಿವಿ ವಾಹಿನಿಗೆ ಹೇಳಿದ ಮಾತಿದು. 2014ರ ಡಿಸೆಂಬರ್ ನಲ್ಲಿ ಲೋಕಸಭೆಯಲ್ಲಿ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ (ಎಸ್.ಪಿ.ಎ) ಬಿಲ್ ಕುರಿತ ಚರ್ಚೆಯಲ್ಲಿ ಜ್ಯೋತಿಷ್ಯದ ಮುಂದೆ ವಿಜ್ಞಾನ ಏನೇನು ಅಲ್ಲ. ಜ್ಯೋತಿಷ್ಯವು ಅತಿ ದೊಡ್ಡ ವಿಜ್ಞಾನವಾಗಿದೆ. ಅದು ವಿಜ್ಞಾನಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹೇಳಿದ್ದರು.

ಅವರು “ನಾವಿಂದು ಪರಮಾಣು ವಿಜ್ಞಾನದ ಕುರಿತು ಮಾತಾಡುತ್ತೇವೆ. ಆದರೆ ಒಂದು ಲಕ್ಷ ವರ್ಷಗಳ ಹಿಂದೆಯೇ ಋಷಿ ಕಾನದ್ ರವರು ಪರಮಾಣು ಪರೀಕ್ಷೆ ನಡೆಸಿದ್ದರು” ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದರು. ಅಷ್ಟೆ ಅಲ್ಲದೇ ಆ ಕಾಲದಲ್ಲಿಯೇ ನಾವು ಕಸಿ ವಿಜ್ಞಾನವನ್ನು ಸಹ ಕಲಿತಿದ್ದೇವೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದ ಗಣೇಶನಿಗೆ ವೇದಗಳ ಕಾಲದಲ್ಲಿಯೇ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿತ್ತು ಎಂಬ ಮಾತನ್ನು ಪುನರುಚ್ಚರಿಸಿದ್ದರು.

ನಾವು ನಮ್ಮ ಮಕ್ಕಳು ಹೆಚ್ಚು ಹೆಚ್ಚು ಆಧುನಿಕರಾಗಬೇಕು, ವಿಜ್ಞಾನವನ್ನು ಚೆನ್ನಾಗಿ ಕಲಿತು ಪ್ರಪಂಚದೊಟ್ಟಿಗೆ ಸ್ಪರ್ದಿಸಬೇಕೆಂದು ಬಯಸಿದರೆ, ವಿಜ್ಞಾನದ ಬಗ್ಗೆ ಅಪನಂಬಿಕೆ ಹೊಂದಿರುವ ವೇದ, ಪುರಾಣದ ಬಗ್ಗೆ ಭಕ್ತಿ ತೋರಿಸುವ ರಮೇಶ್ ಪೋಖ್ರಿಯಾಲ್ ರವರು ನಮ್ಮ ಸಚಿವರಾಗಿದ್ದಾರೆ. ಅವರು ಮುಂದೆ ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ಕಾಲವೇ ನಿರ್ಧರಿಸಬೇಕಿದೆ.

“ಪ್ರಾಥಮಿಕ, ಪ್ರೌಢಶಾಲೆಯಿಂದ ಹಿಡಿದು ವಿಶ್ವವಿದ್ಯಾಲಯದವರೆಗೂ ವ್ಯವಹರಿಸುವ, ನಮ್ಮ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸುವ ಈ ವ್ಯಕ್ತಿ ಈಗ ನಮ್ಮ ನೂತನ ಎಚ್‍ಆರ್‍ಡಿ ಸಚಿವರಾಗಿದ್ದಾರೆ. ನಿಮಗೆ ಸ್ವಾಗತ. #ನ್ಯೂಇಂಡಿಯಾ” ಎಂದು ಮಾರ್ಮಿಕವಾಗಿ ಪೋಸ್ಟ್ ಹಾಕುವ ಮೂಲಕ ಯುವ ಚಿಂತಕ ಧೃವ್ ರಾಠೀ ಫೇಸ್‍ಬುಕ್ ರಮೇಶ್ ಪೋಖ್ರಿಯಾಲ್‍ರವರ ಮೇಲಿನ ಹೇಳಿಕೆಗಳ ಕುರಿತು ‘ದಿ ಹಿಂದೂ’ ಪತ್ರಿಕೆಯಲ್ಲಿ ಬಂದಿರುವ ಲೇಖನವನ್ನು ಷೇರ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...