Homeಕರ್ನಾಟಕಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

ಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

- Advertisement -
- Advertisement -

ಮೈಸೂರಿನಲ್ಲಿ ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಮೈಸೂರು ಲಯನ್ಸ್‌ ಕ್ಲಬ್‌‌ ಆಫ್‌ ಸೌತ್ ಸಂಸ್ಥೆಯಿಂದ ಸೋಮವಾರ ಏರ್ಪಡಿಸಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿರುವ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಅವರು, “ಭಿಕ್ಷುಕ ರಾಷ್ಟ್ರವಾಗಿದ್ದ ಭಾರತವೀಗ ವಿಶ್ವದ ನೇತಾರ ರಾಷ್ಟ್ರವಾಗಿದೆ” ಎಂದು ಹೇಳಿದ್ದಾರೆ.

“ಎಡಪಂಥೀಯ ಸಿದ್ಧಾಂತಕ್ಕೆ ಒಡೆಯೋದು ಗೊತ್ತಿತ್ತೇ ಹೊರತು ಕಟ್ಟೋದು ಗೊತ್ತೇ ಇರಲಿಲ್ಲ. ಇದು ಆರಂಭವಾಗಿದ್ದು ನೆಹರೂ ಕಾಲದಿಂದ. ರಷ್ಯನ್ ಮಾದರಿಯನ್ನು ಭಾರತಕ್ಕೆ ತರಲು ಈ ದೇಶವನ್ನು ಭಿಕ್ಷುಕ ದೇಶವನ್ನಾಗಿ ಮಾಡಿಬಿಟ್ಟರು. ಇದು ಎಲ್ಲಿಗೆ ಹೋಗಿ ಮುಟ್ಟಿತ್ತೆಂದರೆ ನಮ್ಮ ದೇಶದ ಚಿನ್ನವನ್ನು ಅಡವಿಟ್ಟು, ಬ್ರಿಟನ್‌ ಬ್ಯಾಂಕಿನಿಂದ ಸಾಲ ಕೇಳಬೇಕಾಗಿ ಬಂತು. ನಿಮ್ಮ ಚಿನ್ನವನ್ನು ನಮ್ಮ ದೇಶದಲ್ಲಿ ಅಡವಿಟ್ಟರೆ ಮಾತ್ರ ಸಾಲಕೊಡುತ್ತೇವೆ ಎಂದು ಬ್ರಿಟನ್ ಬ್ಯಾಂಕ್ ಹೇಳಿತ್ತು. ಭಾರತದ ಮೇಲೆ ಇತರೆ ದೇಶಗಳಿಗೆ ನಂಬಿಕೆ ಇರಲಿಲ್ಲ” ಎಂದು ಭೈರಪ್ಪ ತಿಳಿಸಿದ್ದಾರೆ.

“ನಮ್ಮ ಬಲಹೀನತೆ ವೈಚಾರಿಕತೆ ಮತ್ತು ಸಾಹಿತ್ಯಕ್ಕೂ ತಟ್ಟಿತು. ಕೀಳರಿಮೆಯನ್ನು ಬಿಂಬಿಸುವುದೇ ನಮ್ಮ ಶ್ರೇಷ್ಠತೆ ಆಯಿತು. ಇದನ್ನು ಮೆಟ್ಟಿ ನಿಲ್ಲಬೇಕಾದ ಕಾಲ ಇದೀಗ ಬಂದಿದೆ. ಇಂದು ಪರಿಸ್ಥಿತಿ ಬದಲಾಗಿವೆ. ವಿಶ್ವದ ಮುಂದೆ ಭಾರತ ಎದೆಯುಬ್ಬಿಸಿ ನಿಂತಿದೆ. ನಮ್ಮ ಆಹಾರ ಪದಾರ್ಥಗಳನ್ನು ಹೊರ ದೇಶಗಳಿಗೆ ರಫ್ತು ಮಾಡುತ್ತಿದ್ದೇವೆ. ಭಾರತ ಇದೀಗ ಭಿಕ್ಷುಕ ರಾಷ್ಟ್ರವಲ್ಲ. ಇದು ಹೇಗೆ ಸಾಧ್ಯವಾಯಿತು? ಇದನ್ನು ಅರ್ಥಮಾಡಿಕೊಳ್ಳಲು ಇಷ್ಟು ವರ್ಷ ಬೇಕಾಯಿತು. ಇದಕ್ಕಾಗಿ ಸಮರ್ಥ ನಾಯಕತ್ವ ಬೇಕಾಯಿತು..” ಎಂದಿರುವ ಅವರು, ಎಂದಿನಂತೆ ನರೇಂದ್ರ ಮೋದಿಯವರ ನಾಯಕತ್ವವನ್ನು ಹೊಗಳಿದ್ದಾರೆ.

ಭೈರಪ್ಪ ಅವರು ಹೇಳಿರುವ ಮಾತುಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಮೈಸೂರು ಭಾಗದ ಜನಪರ ಪತ್ರಿಕೆ ‘ಆಂದೋಲನ’ ವರದಿಯನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ ಅವರು ಭೈರಪ್ಪ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.


ಇದನ್ನೂ ಓದಿರಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ


“ತಮ್ಮ ಪಂಚೇಂದ್ರಿಯಗಳನ್ನು ಕಳೆದುಕೊಂಡು ಮಾತನಾಡುತ್ತಿರುವ ಭೈರಪ್ಪನವರು ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆದಿರುವುದು ಬೇಸರದ ಸಂಗತಿ. ಸಾಹಿತಿ ಅಂದರೆ ತನ್ನ ಅಧ್ಯಯನ, ವಿಚಾರಧಾರೆಯ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕೆಂದು ಬಯಸುವುದು ಸಾಮಾನ್ಯ ನಿರೀಕ್ಷೆ. ಆದರೆ ಈ ಆಶಯಗಳಿಗೆ ತದ್ವಿರುದ್ಧವಾಗಿ ಮಾತನಾಡುತ್ತಿರುವ ಭೈರಪ್ಪನವರ ಮಾತುಗಳ ಬಗ್ಗೆ ನನಗಂತೂ ಯಾವುದೇ ಅಚ್ಚರಿಯಿಲ್ಲ. ಕಾರಣ ಅವರು ಬೆಳೆದು ಬಂದಿರುವ ಸಾಮಾಜಿಕ ಹಿನ್ನಲೆಯ ಮಹಿಮೆ ಅಂತದ್ದು” ಎಂದು ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಮುಂದುವರಿದು, “ಆದರೂ ತಾನು ಬದುಕಿದ್ದ ದೇಶದ ಇತಿಹಾಸವನ್ನೇ ಅರಿಯದ ಸಾಹಿತಿಯೊಬ್ಬರು ನೇರವಾಗಿ ತನ್ನ ದೇಶವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆಯಬೇಕಾದರೆ ಆತ ಯಾವುದೋ ಗಂಭೀರ ಮಾನಸಿಕ ಖಾಯಿಲೆಯಿಂದ ಬಳಲುತ್ತಿರಬಹುದು ಎಂದೇ ನನಗೆ ಅನಿಸುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದೇಶದ ಹಿಂದಿನ ಸಾಲದ ಪ್ರಮಾಣಕ್ಕೆ ಹೋಲಿಸಿದರೆ ಈಗ ಅದರ ಪ್ರಮಾಣ ಹೆಚ್ಚಾಗಿದೆ. ಈ ಸಂಗತಿಯನ್ನು ಅರಿಯದ ಭೈರಪ್ಪನವರು ಅನಗತ್ಯವಾಗಿ ನೆಹರೂ ಹೆಸರನ್ನು ಎಳೆದು ತಂದಿರುವುದರ ಹಿಂದೆ ಮನುವಾದಿ ಸರ್ಕಾರವನ್ನು ಬೆಂಬಲಿಸುವ ಅವರ ಬೌದ್ಧಿಕ ಕುತಂತ್ರ ಅಡಗಿದೆಯೇ ವಿನಃ ಸಾಮಾಜಿಕ ನ್ಯಾಯ ಸಾಧನೆಗೆ ಪೂರಕವಾದ ಯಾವ ಅಂಶವೂ ಇಲ್ಲಿ ಇಲ್ಲ” ಎಂದಿದ್ದಾರೆ.

“ದೇಶದ ಅಯೋಮಯ ಸ್ಥಿತಿಯ ಬಗ್ಗೆ ಮತ್ತು ಜನ ಸಾಮಾನ್ಯರ ಸಂಕಷ್ಟದ ಬದುಕಿನ ಬಗ್ಗೆ ಸತ್ಯ ಗೊತ್ತಿದ್ದರೂ ಸುಳ್ಳನ್ನೇ ಆಯ್ಕೆ ಮಾಡಿಕೊಳ್ಳುವ ಭೈರಪ್ಪನವರ ಮಾತನ್ನು ಯಾರೂ ಸೀರಿಯಸ್ಸಾಗಿ ತೆಗೆದುಕೊಳ್ಳಬಾರದು” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ಕನಸಿನ ಭಾರತಕ್ಕೆ ಸಂವಿಧಾನವೇ ರೋಡ್‌ ಮ್ಯಾಪ್‌: ಗಾಯಕಿ ಎಂ.ಡಿ.ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...