Homeಕರ್ನಾಟಕಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

ಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

- Advertisement -
- Advertisement -

ಮೈಸೂರಿನಲ್ಲಿ ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಮೈಸೂರು ಲಯನ್ಸ್‌ ಕ್ಲಬ್‌‌ ಆಫ್‌ ಸೌತ್ ಸಂಸ್ಥೆಯಿಂದ ಸೋಮವಾರ ಏರ್ಪಡಿಸಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿರುವ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಅವರು, “ಭಿಕ್ಷುಕ ರಾಷ್ಟ್ರವಾಗಿದ್ದ ಭಾರತವೀಗ ವಿಶ್ವದ ನೇತಾರ ರಾಷ್ಟ್ರವಾಗಿದೆ” ಎಂದು ಹೇಳಿದ್ದಾರೆ.

“ಎಡಪಂಥೀಯ ಸಿದ್ಧಾಂತಕ್ಕೆ ಒಡೆಯೋದು ಗೊತ್ತಿತ್ತೇ ಹೊರತು ಕಟ್ಟೋದು ಗೊತ್ತೇ ಇರಲಿಲ್ಲ. ಇದು ಆರಂಭವಾಗಿದ್ದು ನೆಹರೂ ಕಾಲದಿಂದ. ರಷ್ಯನ್ ಮಾದರಿಯನ್ನು ಭಾರತಕ್ಕೆ ತರಲು ಈ ದೇಶವನ್ನು ಭಿಕ್ಷುಕ ದೇಶವನ್ನಾಗಿ ಮಾಡಿಬಿಟ್ಟರು. ಇದು ಎಲ್ಲಿಗೆ ಹೋಗಿ ಮುಟ್ಟಿತ್ತೆಂದರೆ ನಮ್ಮ ದೇಶದ ಚಿನ್ನವನ್ನು ಅಡವಿಟ್ಟು, ಬ್ರಿಟನ್‌ ಬ್ಯಾಂಕಿನಿಂದ ಸಾಲ ಕೇಳಬೇಕಾಗಿ ಬಂತು. ನಿಮ್ಮ ಚಿನ್ನವನ್ನು ನಮ್ಮ ದೇಶದಲ್ಲಿ ಅಡವಿಟ್ಟರೆ ಮಾತ್ರ ಸಾಲಕೊಡುತ್ತೇವೆ ಎಂದು ಬ್ರಿಟನ್ ಬ್ಯಾಂಕ್ ಹೇಳಿತ್ತು. ಭಾರತದ ಮೇಲೆ ಇತರೆ ದೇಶಗಳಿಗೆ ನಂಬಿಕೆ ಇರಲಿಲ್ಲ” ಎಂದು ಭೈರಪ್ಪ ತಿಳಿಸಿದ್ದಾರೆ.

“ನಮ್ಮ ಬಲಹೀನತೆ ವೈಚಾರಿಕತೆ ಮತ್ತು ಸಾಹಿತ್ಯಕ್ಕೂ ತಟ್ಟಿತು. ಕೀಳರಿಮೆಯನ್ನು ಬಿಂಬಿಸುವುದೇ ನಮ್ಮ ಶ್ರೇಷ್ಠತೆ ಆಯಿತು. ಇದನ್ನು ಮೆಟ್ಟಿ ನಿಲ್ಲಬೇಕಾದ ಕಾಲ ಇದೀಗ ಬಂದಿದೆ. ಇಂದು ಪರಿಸ್ಥಿತಿ ಬದಲಾಗಿವೆ. ವಿಶ್ವದ ಮುಂದೆ ಭಾರತ ಎದೆಯುಬ್ಬಿಸಿ ನಿಂತಿದೆ. ನಮ್ಮ ಆಹಾರ ಪದಾರ್ಥಗಳನ್ನು ಹೊರ ದೇಶಗಳಿಗೆ ರಫ್ತು ಮಾಡುತ್ತಿದ್ದೇವೆ. ಭಾರತ ಇದೀಗ ಭಿಕ್ಷುಕ ರಾಷ್ಟ್ರವಲ್ಲ. ಇದು ಹೇಗೆ ಸಾಧ್ಯವಾಯಿತು? ಇದನ್ನು ಅರ್ಥಮಾಡಿಕೊಳ್ಳಲು ಇಷ್ಟು ವರ್ಷ ಬೇಕಾಯಿತು. ಇದಕ್ಕಾಗಿ ಸಮರ್ಥ ನಾಯಕತ್ವ ಬೇಕಾಯಿತು..” ಎಂದಿರುವ ಅವರು, ಎಂದಿನಂತೆ ನರೇಂದ್ರ ಮೋದಿಯವರ ನಾಯಕತ್ವವನ್ನು ಹೊಗಳಿದ್ದಾರೆ.

ಭೈರಪ್ಪ ಅವರು ಹೇಳಿರುವ ಮಾತುಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಮೈಸೂರು ಭಾಗದ ಜನಪರ ಪತ್ರಿಕೆ ‘ಆಂದೋಲನ’ ವರದಿಯನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ ಅವರು ಭೈರಪ್ಪ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.


ಇದನ್ನೂ ಓದಿರಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ


“ತಮ್ಮ ಪಂಚೇಂದ್ರಿಯಗಳನ್ನು ಕಳೆದುಕೊಂಡು ಮಾತನಾಡುತ್ತಿರುವ ಭೈರಪ್ಪನವರು ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆದಿರುವುದು ಬೇಸರದ ಸಂಗತಿ. ಸಾಹಿತಿ ಅಂದರೆ ತನ್ನ ಅಧ್ಯಯನ, ವಿಚಾರಧಾರೆಯ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕೆಂದು ಬಯಸುವುದು ಸಾಮಾನ್ಯ ನಿರೀಕ್ಷೆ. ಆದರೆ ಈ ಆಶಯಗಳಿಗೆ ತದ್ವಿರುದ್ಧವಾಗಿ ಮಾತನಾಡುತ್ತಿರುವ ಭೈರಪ್ಪನವರ ಮಾತುಗಳ ಬಗ್ಗೆ ನನಗಂತೂ ಯಾವುದೇ ಅಚ್ಚರಿಯಿಲ್ಲ. ಕಾರಣ ಅವರು ಬೆಳೆದು ಬಂದಿರುವ ಸಾಮಾಜಿಕ ಹಿನ್ನಲೆಯ ಮಹಿಮೆ ಅಂತದ್ದು” ಎಂದು ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಮುಂದುವರಿದು, “ಆದರೂ ತಾನು ಬದುಕಿದ್ದ ದೇಶದ ಇತಿಹಾಸವನ್ನೇ ಅರಿಯದ ಸಾಹಿತಿಯೊಬ್ಬರು ನೇರವಾಗಿ ತನ್ನ ದೇಶವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆಯಬೇಕಾದರೆ ಆತ ಯಾವುದೋ ಗಂಭೀರ ಮಾನಸಿಕ ಖಾಯಿಲೆಯಿಂದ ಬಳಲುತ್ತಿರಬಹುದು ಎಂದೇ ನನಗೆ ಅನಿಸುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದೇಶದ ಹಿಂದಿನ ಸಾಲದ ಪ್ರಮಾಣಕ್ಕೆ ಹೋಲಿಸಿದರೆ ಈಗ ಅದರ ಪ್ರಮಾಣ ಹೆಚ್ಚಾಗಿದೆ. ಈ ಸಂಗತಿಯನ್ನು ಅರಿಯದ ಭೈರಪ್ಪನವರು ಅನಗತ್ಯವಾಗಿ ನೆಹರೂ ಹೆಸರನ್ನು ಎಳೆದು ತಂದಿರುವುದರ ಹಿಂದೆ ಮನುವಾದಿ ಸರ್ಕಾರವನ್ನು ಬೆಂಬಲಿಸುವ ಅವರ ಬೌದ್ಧಿಕ ಕುತಂತ್ರ ಅಡಗಿದೆಯೇ ವಿನಃ ಸಾಮಾಜಿಕ ನ್ಯಾಯ ಸಾಧನೆಗೆ ಪೂರಕವಾದ ಯಾವ ಅಂಶವೂ ಇಲ್ಲಿ ಇಲ್ಲ” ಎಂದಿದ್ದಾರೆ.

“ದೇಶದ ಅಯೋಮಯ ಸ್ಥಿತಿಯ ಬಗ್ಗೆ ಮತ್ತು ಜನ ಸಾಮಾನ್ಯರ ಸಂಕಷ್ಟದ ಬದುಕಿನ ಬಗ್ಗೆ ಸತ್ಯ ಗೊತ್ತಿದ್ದರೂ ಸುಳ್ಳನ್ನೇ ಆಯ್ಕೆ ಮಾಡಿಕೊಳ್ಳುವ ಭೈರಪ್ಪನವರ ಮಾತನ್ನು ಯಾರೂ ಸೀರಿಯಸ್ಸಾಗಿ ತೆಗೆದುಕೊಳ್ಳಬಾರದು” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ಕನಸಿನ ಭಾರತಕ್ಕೆ ಸಂವಿಧಾನವೇ ರೋಡ್‌ ಮ್ಯಾಪ್‌: ಗಾಯಕಿ ಎಂ.ಡಿ.ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...