Homeಕರ್ನಾಟಕಆಸ್ಪತ್ರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಕೊರೊನಾ ಮೃತದೇಹಗಳು ಪತ್ತೆ ಪ್ರಕರಣ: ಸಚಿವ ಸುರೇಶ್ ಕುಮಾರ್ ವಿರುದ್ಧ ಎಎಪಿ...

ಆಸ್ಪತ್ರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಕೊರೊನಾ ಮೃತದೇಹಗಳು ಪತ್ತೆ ಪ್ರಕರಣ: ಸಚಿವ ಸುರೇಶ್ ಕುಮಾರ್ ವಿರುದ್ಧ ಎಎಪಿ ಆಕ್ರೋಶ

- Advertisement -
- Advertisement -

ಬೆಂಗಳೂರಿನ ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯಲ್ಲಿ ಮೃತಪಟ್ಟ 15 ತಿಂಗಳ ಬಳಿಕ ಕೋವಿಡ್‌ ರೋಗಿಗಳ ಮೃತದೇಹಗಳು ಪತ್ತೆಯಾಗಿರುವ ಘಟನೆಗೆ ಸಂಬಂಧಿಸಿ ಸುರೇಶ್‌ ಕುಮಾರ್‌ ಸರ್ಕಾರಕ್ಕೊಂದು ಪತ್ರ ಬರೆದು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ಆರೋಪಿಸಿದೆ.

ESI ಆಸ್ಪತ್ರೆಯ ಶವಾಗಾರದಲ್ಲಿ ಕಳೆದ ಒಂದೂವರೆ ವರ್ಷದ ಹಿಂದೆ ಕೊರೊನಾದಿಂದ ಮೃತಪಟ್ಟಿದ್ದ ದುರ್ಗಾ ಸುಮಿತ್ರಾ (40) ಮತ್ತು ಮುನಿರಾಜು (50) ಎಂಬುವವರ ಮೃತದೇಹಗಳನ್ನಿಟ್ಟು ಆಸ್ಪತ್ರೆ ಸಿಬ್ಬಂದಿ ಮರೆತುಬಿಟ್ಟಿದ್ದಾರೆ. ಮೊನ್ನೆ ಶವಾಗಾರ ಸ್ವಚ್ಛಗೊಳಿಸುವ ವೇಳೆ ಸಿಬ್ಬಂದಿಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಎಪಿಯ ಬೆಂಗಳೂರು ನಗರ ಉಪಾಧ್ಯಕ್ಷ ಹಾಗೂ ರಾಜಾಜಿನಗರ ಉಸ್ತುವಾರಿ ಬಿ.ಟಿ.ನಾಗಣ್ಣ, “ಇಎಸ್‌ಐ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಇಬ್ಬರು ಕೋವಿಡ್‌ ರೋಗಿಗಳ ಶವವು ಬರೋಬ್ಬರಿ 15 ತಿಂಗಳ ಬಳಿಕ ಪತ್ತೆಯಾಗಿರುವುದು ನಾಚಿಕೆಗೇಡಿನ ಸಂಗತಿ. ಕೋವಿಡ್‌ ರೋಗಿಗಳನ್ನು ಸರ್ಕಾರ ಎಷ್ಟು ಹೀನಾಯವಾಗಿ ನೋಡಿಕೊಂಡಿದೆ ಎಂಬುದಕ್ಕೆ ಈ ಪ್ರಕರಣ ಉದಾಹರಣೆ. ಸುರೇಶ್‌ ಕುಮಾರ್‌ರವರು ಶಾಸಕ ಹಾಗೂ ಸಚಿವರಾಗಿದ್ದ ಸಂದರ್ಭದಲ್ಲೇ ಪ್ರಕರಣ ನಡೆದಿದೆ. ಅವರ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದ್ದು, ಸಂಪೂರ್ಣ ಜವಾಬ್ದಾರಿಯನ್ನು ಅವರೇ ಹೊರಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿ: ಅಮೆರಿಕ, ಯೂರೋಪ್ ದೇಶಗಳಲ್ಲಿ ಕೊರೊನಾ ನಾಲ್ಕನೇ ಅಲೆ; ಭಾರತ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆಯೇ?

“ಸುರೇಶ್‌ ಕುಮಾರ್‌ ಅವರು ಉಸ್ತುವಾರಿ ಸಚಿವರಾಗಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ಒಂದೇ ದಿನ 24 ಮಂದಿ ಮೃತಪಟ್ಟಿದ್ದರು. ಈಗ ಅವರದೇ ಕ್ಷೇತ್ರದ ಇಎಸ್‌ಐ ಅವ್ಯವಸ್ಥೆ ಬಯಲಾಗಿರುವುದು ಅವರ ಬೇಜವಾಬ್ದಾರಿತನವನ್ನು ತೋರಿಸುತ್ತದೆ” ಎಂದು ಆರೋಪಿಸಿದರು.

“ಶವಾಗಾರದಲ್ಲಿ ಶವವನ್ನು ಇಟ್ಟ ನಂತರ ಅದರ ಮೇಲೆ ಸ್ಟಿಕ್ಕರ್‌ ಅಂಟಿಸುವ ಪದ್ಧತಿಯನ್ನು ಇಎಸ್‌ಐನಲ್ಲಿ ಅನುಸರಿಸಲಾಗುತ್ತದೆ. ಆದರೆ ಈ ಶವಗಳಿಗೆ ಸ್ಟಿಕ್ಕರ್‌ ಅಂಟಿಸದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಕೋವಿಡ್‌ ಸಾವಿಗೆ ಸಂಬಂಧಿಸಿ ಸುಳ್ಳು ಲೆಕ್ಕ ನೀಡುವ ಉದ್ದೇಶದಿಂದಲೇ ಹೀಗೆ ಮಾಡಿರುವ ಸಂಶಯವಿದೆ. ಆಸ್ಪತ್ರೆಯ ಉನ್ನತ ಅಧಿಕಾರಿಗಳನ್ನು ಬಂಧಿಸಿ ತನಿಖೆ ನಡೆಸಿದರೆ ಮಾತ್ರ ಸತ್ಯ ಹೊರಬರಲಿದೆ. ಇನ್ನೂ ಎಷ್ಟು ಶವಗಳನ್ನು ಮುಚ್ಚಿಡಲಾಗಿತ್ತು, ಇದಕ್ಕೆ ಅಸಲಿ ಕಾರಣವೇನು ಎಂಬುದು ಬೆಳಕಿಗೆ ಬರಬೇಕು” ಎಂದು ಬಿ.ಟಿ.ನಾಗಣ್ಣ ಆಗ್ರಹಿಸಿದರು.

’ಸರ್ಕಾರ ಹಾಗೂ ಆಸ್ಪತ್ರೆಯ ಮೇಲೆ ಭರವಸೆಯಿಟ್ಟು ರೋಗಿಗಳನ್ನು ಆಸ್ಪತ್ರೆಗೆ ಸೇರಿಸುತ್ತಾರೆ. ಚಿಕಿತ್ಸೆ ಫಲಕಾರಿಯಾಗದೇ ಕೋವಿಡ್‌ ರೋಗಿ ಮೃತಪಟ್ಟಾಗ ಸೂಕ್ತ ರೀತಿಯಲ್ಲಿ ಗೌರವದಿಂದ ಅಂತ್ಯಕ್ರಿಯೆ ಮಾಡುವುದು ಅಥವಾ ಕುಟುಂಬಕ್ಕೆ ಹಸ್ತಾಂತರಿಸುವುದು ಆಸ್ಪತ್ರೆಯ ಜವಾಬ್ದಾರಿಯಾಗಿದೆ. ಅದರ ಬದಲು ಈ ರೀತಿ 15 ತಿಂಗಳ ಕಾಲ ಕೊಳೆಯುವಂತೆ ಮಾಡಿರುವುದು ಅತ್ಯಂತ ಅಮಾನವೀಯ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದಿದ್ದಾರೆ.

ಘಟನೆ ಸಂಬಂಧ ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್, ಕಾರ್ಮಿಕ ಸಚಿವ ಎ.ಶಿವರಾಮ್ ಹೆಬ್ಬಾರ್ ಅವರಿಗೆ ಪತ್ರ ಬರೆದಿದ್ದು, ಈ ವಿಷಯವನ್ನು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ತಿಳಿಸುವಂತೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೂವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಸರ್ಕಾರಕ್ಕೊಂದು ಪತ್ರ ಬರೆದು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಶಾಸಕ ಸುರೇಶ್ ಕುಮಾರ್ ಯತ್ನಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ಆರೋಪಿಸಿದೆ.

————-

ಇದನ್ನೂ ಓದಿ: ಬೆಂಗಳೂರಿನ ESI ಆಸ್ಪತ್ರೆ ನಿರ್ಲಕ್ಷ್ಯ: ಒಂದೂವರೆ ವರ್ಷದ ಬಳಿಕ ಶವಾಗಾರದಿಂದ ಕೊರೊನಾ ಪೀಡಿತರ ಮೃತದೇಹ ಹೊರ ತೆಗೆದ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...