Homeಕರ್ನಾಟಕಆಸ್ಪತ್ರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಕೊರೊನಾ ಮೃತದೇಹಗಳು ಪತ್ತೆ ಪ್ರಕರಣ: ಸಚಿವ ಸುರೇಶ್ ಕುಮಾರ್ ವಿರುದ್ಧ ಎಎಪಿ...

ಆಸ್ಪತ್ರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಕೊರೊನಾ ಮೃತದೇಹಗಳು ಪತ್ತೆ ಪ್ರಕರಣ: ಸಚಿವ ಸುರೇಶ್ ಕುಮಾರ್ ವಿರುದ್ಧ ಎಎಪಿ ಆಕ್ರೋಶ

- Advertisement -
- Advertisement -

ಬೆಂಗಳೂರಿನ ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯಲ್ಲಿ ಮೃತಪಟ್ಟ 15 ತಿಂಗಳ ಬಳಿಕ ಕೋವಿಡ್‌ ರೋಗಿಗಳ ಮೃತದೇಹಗಳು ಪತ್ತೆಯಾಗಿರುವ ಘಟನೆಗೆ ಸಂಬಂಧಿಸಿ ಸುರೇಶ್‌ ಕುಮಾರ್‌ ಸರ್ಕಾರಕ್ಕೊಂದು ಪತ್ರ ಬರೆದು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ಆರೋಪಿಸಿದೆ.

ESI ಆಸ್ಪತ್ರೆಯ ಶವಾಗಾರದಲ್ಲಿ ಕಳೆದ ಒಂದೂವರೆ ವರ್ಷದ ಹಿಂದೆ ಕೊರೊನಾದಿಂದ ಮೃತಪಟ್ಟಿದ್ದ ದುರ್ಗಾ ಸುಮಿತ್ರಾ (40) ಮತ್ತು ಮುನಿರಾಜು (50) ಎಂಬುವವರ ಮೃತದೇಹಗಳನ್ನಿಟ್ಟು ಆಸ್ಪತ್ರೆ ಸಿಬ್ಬಂದಿ ಮರೆತುಬಿಟ್ಟಿದ್ದಾರೆ. ಮೊನ್ನೆ ಶವಾಗಾರ ಸ್ವಚ್ಛಗೊಳಿಸುವ ವೇಳೆ ಸಿಬ್ಬಂದಿಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಎಪಿಯ ಬೆಂಗಳೂರು ನಗರ ಉಪಾಧ್ಯಕ್ಷ ಹಾಗೂ ರಾಜಾಜಿನಗರ ಉಸ್ತುವಾರಿ ಬಿ.ಟಿ.ನಾಗಣ್ಣ, “ಇಎಸ್‌ಐ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಇಬ್ಬರು ಕೋವಿಡ್‌ ರೋಗಿಗಳ ಶವವು ಬರೋಬ್ಬರಿ 15 ತಿಂಗಳ ಬಳಿಕ ಪತ್ತೆಯಾಗಿರುವುದು ನಾಚಿಕೆಗೇಡಿನ ಸಂಗತಿ. ಕೋವಿಡ್‌ ರೋಗಿಗಳನ್ನು ಸರ್ಕಾರ ಎಷ್ಟು ಹೀನಾಯವಾಗಿ ನೋಡಿಕೊಂಡಿದೆ ಎಂಬುದಕ್ಕೆ ಈ ಪ್ರಕರಣ ಉದಾಹರಣೆ. ಸುರೇಶ್‌ ಕುಮಾರ್‌ರವರು ಶಾಸಕ ಹಾಗೂ ಸಚಿವರಾಗಿದ್ದ ಸಂದರ್ಭದಲ್ಲೇ ಪ್ರಕರಣ ನಡೆದಿದೆ. ಅವರ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದ್ದು, ಸಂಪೂರ್ಣ ಜವಾಬ್ದಾರಿಯನ್ನು ಅವರೇ ಹೊರಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿ: ಅಮೆರಿಕ, ಯೂರೋಪ್ ದೇಶಗಳಲ್ಲಿ ಕೊರೊನಾ ನಾಲ್ಕನೇ ಅಲೆ; ಭಾರತ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆಯೇ?

“ಸುರೇಶ್‌ ಕುಮಾರ್‌ ಅವರು ಉಸ್ತುವಾರಿ ಸಚಿವರಾಗಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ಒಂದೇ ದಿನ 24 ಮಂದಿ ಮೃತಪಟ್ಟಿದ್ದರು. ಈಗ ಅವರದೇ ಕ್ಷೇತ್ರದ ಇಎಸ್‌ಐ ಅವ್ಯವಸ್ಥೆ ಬಯಲಾಗಿರುವುದು ಅವರ ಬೇಜವಾಬ್ದಾರಿತನವನ್ನು ತೋರಿಸುತ್ತದೆ” ಎಂದು ಆರೋಪಿಸಿದರು.

“ಶವಾಗಾರದಲ್ಲಿ ಶವವನ್ನು ಇಟ್ಟ ನಂತರ ಅದರ ಮೇಲೆ ಸ್ಟಿಕ್ಕರ್‌ ಅಂಟಿಸುವ ಪದ್ಧತಿಯನ್ನು ಇಎಸ್‌ಐನಲ್ಲಿ ಅನುಸರಿಸಲಾಗುತ್ತದೆ. ಆದರೆ ಈ ಶವಗಳಿಗೆ ಸ್ಟಿಕ್ಕರ್‌ ಅಂಟಿಸದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಕೋವಿಡ್‌ ಸಾವಿಗೆ ಸಂಬಂಧಿಸಿ ಸುಳ್ಳು ಲೆಕ್ಕ ನೀಡುವ ಉದ್ದೇಶದಿಂದಲೇ ಹೀಗೆ ಮಾಡಿರುವ ಸಂಶಯವಿದೆ. ಆಸ್ಪತ್ರೆಯ ಉನ್ನತ ಅಧಿಕಾರಿಗಳನ್ನು ಬಂಧಿಸಿ ತನಿಖೆ ನಡೆಸಿದರೆ ಮಾತ್ರ ಸತ್ಯ ಹೊರಬರಲಿದೆ. ಇನ್ನೂ ಎಷ್ಟು ಶವಗಳನ್ನು ಮುಚ್ಚಿಡಲಾಗಿತ್ತು, ಇದಕ್ಕೆ ಅಸಲಿ ಕಾರಣವೇನು ಎಂಬುದು ಬೆಳಕಿಗೆ ಬರಬೇಕು” ಎಂದು ಬಿ.ಟಿ.ನಾಗಣ್ಣ ಆಗ್ರಹಿಸಿದರು.

’ಸರ್ಕಾರ ಹಾಗೂ ಆಸ್ಪತ್ರೆಯ ಮೇಲೆ ಭರವಸೆಯಿಟ್ಟು ರೋಗಿಗಳನ್ನು ಆಸ್ಪತ್ರೆಗೆ ಸೇರಿಸುತ್ತಾರೆ. ಚಿಕಿತ್ಸೆ ಫಲಕಾರಿಯಾಗದೇ ಕೋವಿಡ್‌ ರೋಗಿ ಮೃತಪಟ್ಟಾಗ ಸೂಕ್ತ ರೀತಿಯಲ್ಲಿ ಗೌರವದಿಂದ ಅಂತ್ಯಕ್ರಿಯೆ ಮಾಡುವುದು ಅಥವಾ ಕುಟುಂಬಕ್ಕೆ ಹಸ್ತಾಂತರಿಸುವುದು ಆಸ್ಪತ್ರೆಯ ಜವಾಬ್ದಾರಿಯಾಗಿದೆ. ಅದರ ಬದಲು ಈ ರೀತಿ 15 ತಿಂಗಳ ಕಾಲ ಕೊಳೆಯುವಂತೆ ಮಾಡಿರುವುದು ಅತ್ಯಂತ ಅಮಾನವೀಯ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದಿದ್ದಾರೆ.

ಘಟನೆ ಸಂಬಂಧ ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್, ಕಾರ್ಮಿಕ ಸಚಿವ ಎ.ಶಿವರಾಮ್ ಹೆಬ್ಬಾರ್ ಅವರಿಗೆ ಪತ್ರ ಬರೆದಿದ್ದು, ಈ ವಿಷಯವನ್ನು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ತಿಳಿಸುವಂತೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೂವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಸರ್ಕಾರಕ್ಕೊಂದು ಪತ್ರ ಬರೆದು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಶಾಸಕ ಸುರೇಶ್ ಕುಮಾರ್ ಯತ್ನಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ಆರೋಪಿಸಿದೆ.

————-

ಇದನ್ನೂ ಓದಿ: ಬೆಂಗಳೂರಿನ ESI ಆಸ್ಪತ್ರೆ ನಿರ್ಲಕ್ಷ್ಯ: ಒಂದೂವರೆ ವರ್ಷದ ಬಳಿಕ ಶವಾಗಾರದಿಂದ ಕೊರೊನಾ ಪೀಡಿತರ ಮೃತದೇಹ ಹೊರ ತೆಗೆದ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...