Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ‘ಡಿಸೆಂಬರ್‌ 13 ರಂದು ಸೂರ್ಯ ಉದಯಸುವುದಿಲ್ಲ’ ಎಂಬುದು ನಿಜವೇ?

ಫ್ಯಾಕ್ಟ್‌‌ಚೆಕ್‌: ‘ಡಿಸೆಂಬರ್‌ 13 ರಂದು ಸೂರ್ಯ ಉದಯಸುವುದಿಲ್ಲ’ ಎಂಬುದು ನಿಜವೇ?

- Advertisement -
- Advertisement -

ಪ್ರತಿವರ್ಷ ಡಿಸೆಂಬರ್‌ ತಿಂಗಳು ಬಂದರೆ ಸಾಕು, ‘ಜಗತ್ತೇ ನಾಶ’, ‘ಭೂಮಿಯ ಅಂತ್ಯ’ ‘ಪ್ರಳಯ’ ಎಂದೆಲ್ಲಾ ಸುದ್ದಿಗಳು ಓಡಾಡುತ್ತವೆ. ಮಾಧ್ಯಮಗಳು ಕೂಡಾ ಇಂತಹದ್ದೇ ವಿಷಯಗಳನ್ನು ಇಟ್ಟುಕೊಂಡು ದಿನಗಟ್ಟಲೆ ಚರ್ಚಿಸುತ್ತವೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಅಂತಹದ್ದೇ ಒಂದು ಸಂದೇಶ ಹಾಗೂ ವಿಡಿಯೊ ಹರಿದಾಡಲು ಪ್ರಾರಂಭವಾಗಿದೆ. ಅದರಲ್ಲೂ ಮುಖ್ಯವಾಗಿ ವಾಟ್ಸಪ್‌ನಲ್ಲಿ ಇದು ಹರಿದಾಡುತ್ತಿದೆ.

ವೈರಲ್‌ ಸಂದೇಶ

ಮಲಯಾಳಂ ಭಾಷೆಯ ಈ ವಿಡಿಯೊದಲ್ಲಿ ನಿರೂಪಕನೊಬ್ಬ, “ಡಿಸೆಂಬರ್ 13 ರಂದು ಸೂರ್ಯೋದಯ ಆಗುವುದಿಲ್ಲ ಎಂದು ನಾಸಾ ವಿಜ್ಞಾನಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ. 13 ರಂದು ಭೂಮಿ ತನ್ನ ಕಕ್ಷೆಯಲ್ಲಿ ತಿರುಗುವುದಿಲ್ಲ ಎಂದು ನಾಸಾ ಕಂಡುಹಿಡಿದಿದೆ. ಈ ಅಪೂರ್ವ ಘಟನೆಗೆ ತಯಾರಾಗಿರಲು ತನ್ನ ತಂಡಕ್ಕೆ ಅದು ಹೇಳಿದೆ ಎಂದು ವರದಿ ಬರುತ್ತಿದೆ….” ಎಂದು ಅವರು ಹೇಳುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿಡಿಯೊ ಜೊತೆಗೆ ಕನ್ನಡ ಶೀರ್ಷಿಕೆಯು ಹರಿದಾಡುತ್ತಿದ್ದು, “ಡಿಸೆಂಬರ್ 13 ರಂದು ಸೂರ್ಯ ಉದಯಿಸಲ್ಲ ಎಂದು ನಾಸಾ ವಿಜ್ಞಾನಿಗಳು ಮುನ್ನೆಚ್ಚರಿಕೆ ನೀಡಿದೆ” ಎಂದು ಅದು ಪ್ರತಿಪಾದಿಸುತ್ತದೆ. ಇದನ್ನು ಫೇಸ್‌ಬುಕ್‌ನಲ್ಲಿ ಕೂಡಾ ಕಳೆದ ವರ್ಷದ ನವೆಂಬರ್‌ ತಿಂಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಅದನ್ನು ನೀವು ಇಲ್ಲಿ ನೋಡಬಹುದು.

ಮೊದಲೇ ಹೇಳಿದಂತೆ ಈ ರೀತಿಯ ಸುದ್ದಿಗಳು ಪ್ರತಿವರ್ಷ ಡಿಸೆಂಬರ್‌ ತಿಂಗಳಲ್ಲಿ ಓಡಾಡುತ್ತವೆ. ಮಾಧ್ಯಮಗಳಂತೂ ಇಂತಹ ವಿಷಯಗಳನ್ನು ಇಟ್ಟುಕೊಂಡು ಚರ್ಚೆ ಮತ್ತು ಕಾರ್ಯಕ್ರಮ ನಡೆಸಿ ತಮ್ಮ ಟಿಆರ್‌ಪಿ ರೇಟ್‌ ಹೆಚ್ಚಿಸಿಕೊಂಡು ಲಕ್ಷಾಂತರ ದುಡ್ಡನ್ನು ಎಣಿಸಿಕೊಳ್ಳುತ್ತವೆ. ಜನರು ಗಾಬರಿ ಬೀಳುತ್ತಾರೆ. ಆದರೆ ನಮ್ಮ ಭೂಮಿ ಮಾತ್ರ ಈ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ತನ್ನ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಎಂಐಎಂಗೆ ಶಾರುಖ್‌ ಬೆಂಬಲವೆಂದು ಫೋಟೋ ತಿರುಚಿ ಅಪಪ್ರಚಾರ

ಪ್ರಸ್ತುತ ವಾಟ್ಸಪ್‌‌ನಲ್ಲಿ ಹರಿದಾಡುತ್ತಿರುವ ಈ ಸಂದೇಶದ ಮೂಲ ಕೆಲವು ವರ್ಷಗಳ ಹಿಂದಿನ ಮಲಯಾಳಂ ಯೂಟ್ಯೂಬ್‌ ಚಾನೆಲ್‌ನಿಂದ ಬಂದಿದೆ. ಇದರ ಮೂಲ ಚಾನೆಲ್‌ ಮಲಬಾರ್‌ ಆನ್‌ಲೈನ್‌ ಆಗಿದ್ದು ನಾನುಗೌರಿ.ಕಾಂ ಗೆ ಈ ಚಾನೆಲ್‌ ಲಭ್ಯವಾಗಿಲ್ಲ.

ಆದರೆ 2018 ರ ಡಿಸೆಂಬರ್‌ ಮೂರರಂದು Shadshan Chrlary ಎಂಬವರು ಈ ವಿಡಿಯೊವನ್ನು ತಮ್ಮ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಆದರೆ ಇದನ್ನು ಈ ಚಾನೆಲ್‌ನಿಂದ ಹೆಚ್ಚು ಜನರು ವೀಕ್ಷಣೆ ಮಾಡಿರಲಿಲ್ಲ. ಜೊತೆಗೆ ಅದೇ ವರ್ಷ ನವೆಂಬರ್‌ ತಿಂಗಳಲ್ಲಿ ಇದೇ ರೀತಿಯ ಸುದ್ದಿಗಳನ್ನು ಮಲಯಾಳಂನ ಇನ್ನೂ ಕೆಲವು ಯೂಟ್ಯೂಬ್‌ ಚಾನೆಲ್‌ಗಳು ವರದಿ ಮಾಡಿದ್ದವು. ಅದನ್ನು ಇಲ್ಲಿ ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾಸಾ ಡಿಸೆಂಬರ್‌ ತಿಂಗಳಲ್ಲಿ ಹೀಗೆ ನಡೆಯುತ್ತದೆ ಎಂದು ಹೇಳಿದೆಯ?

ಜಗತ್ತಿನ ಅತ್ಯುನ್ನತ ಬಾಹ್ಯಾಕಾಶ ಅಧ್ಯಯನ ಸಂಸ್ಥೆಯಾದ ‘ನಾಸಾ’ ಡಿಸೆಂಬರ್‌ ತಿಂಗಳ ಯಾವುದಾದರು ದಿನದಂದು ಸೂರ್ಯ ಉದಯಿಸುವುದಿಲ್ಲ ಎಂದು ಹೇಳಿಲ್ಲ. ನಾಸಾ ಈ ರೀತಿಯ ಹೇಳಿಕೆ ನೀಡಿದ್ದರೆ ಜಗತ್ತಿನ ವಿಶ್ವಾಸಾರ್ಹ ಪತ್ರಿಕೆಗಳು ವರದಿ ಮಾಡಿರುತ್ತಿದ್ದವು. ಆದರೆ ಈ ರೀತಿಯಾಗಿ ಯಾವುದೆ ಸುದ್ದಿಗಳು ನಮಗೆ ಸಿಕ್ಕಿಲ್ಲ.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಈ ವರದಿಯು ವಿಜ್ಞಾನದ ಬಗ್ಗೆ ಸಾಮಾನ್ಯ ಜ್ಞಾನ ಕೂಡಾ ತಿಳಿಯದ ವ್ಯಕ್ತಿಗಳು ಮಾಡಿದ್ದಾರೆ. ಅವರು ವಿಡಿಯೊದಲ್ಲಿ, “ಭೂಮಿ ಸೂರ್ಯನ ಸುತ್ತ ತಿರುಗಲು 24 ಗಂಟೆಗಳು ಬೇಕಾಗುತ್ತದೆ” ಎಂದು ಹೇಳುತ್ತಾರೆ. ಆದರೆ ನಿಜವಾಗಿಯು ಭೂಮಿ ಸೂರ್ಯನ ಸುತ್ತಲು ತಿರುಗಲು ಒಂದು ವರ್ಷ (365 ದಿನಗಳು) ಬೇಕಾಗುತ್ತದೆ.

ವಿಡಿಯೊದಲ್ಲಿ ಹೇಳುವ ಪ್ರಕಾರ, ಸೂರ್ಯೋದಯ ಆಗದೇ ಇರುವುದು ಎಂದರೆ ಭೂಮಿ ತನ್ನ ಚಲನೆ 24 ಗಂಟೆಗಳ ಕಾಲ ನಿಲ್ಲಿಸುವುದಾಗಿದೆ. ಆದರೆ ಇದು ಅಸಾಧ್ಯವಾದ ವಿಷಯವಾಗಿದೆ. ಪ್ರಸ್ತುತ ಭೂಮಿಯು ಪ್ರತಿ ಸೆಕೆಂಡಿಗೆ 30 ಕಿಲೋ ಮೀಟರ್‌ ವೇಗದಲ್ಲಿ ಚಲಿಸುತ್ತದೆ. ಈ ವೇಗದಲ್ಲಿ ಚಲಿಸುತ್ತಿರುವ ಭೂಮಿ ಸಡನ್ನಾಗಿ ನಿಂತರೆ ಏನಾಗಬಹುದು? ನೀವೇ ಊಹಿಸಿ. ಆದ್ದರಿಂದ ಭೂಮಿ ಹೀಗೆ ಸಡನ್ನಾಗಿ ತನ್ನ ಚಲನೆಯನ್ನು ನಿಲ್ಲಿಸುವುದಿಲ್ಲ.

ಭೂಮಿಯ ಚಲನೆ ನಿಧಾನವಾಗುತ್ತಿದೆಯೇ?

ಹೌದು, ವಿಜ್ಞಾನಿಗಳು ಭೂಮಿಯ ಚಲನೆ ನಿಧಾನವಾಗುತ್ತದೆ ಎಂದು ಹೇಳುತ್ತಾರೆ. ಭೂಮಿ ಹುಟ್ಟಿದ ಸುಮಾರು 4.5 ಶತಕೋಟಿ ವರ್ಷಗಳ ಹಿಂದಿನಿಂದ, ಇಂದಿನವರೆಗೂ ಭೂಮಿಯ ತಿರುಗುವಿಕೆ ಕ್ರಮೇಣ ನಿಧಾನವಾಗುತ್ತಿದೆ. ಇದು ಇಂದಿಗೂ ಮುಂದುವರೆದಿರುವ ಪ್ರಕ್ರಿಯೆಯಾಗಿದೆ. ಅಂದಾಜಿನಂತೆ ಭೂಮಿ ತನ್ನ ತಿರುಗುವಿಕೆಯಲ್ಲಿ ಒಂದು ಸೆಕೆಂಡ್‌ ನಿಧಾನ ಆಗಬೇಕೆಂದರೆ ಸುಮಾರು 60 ಸಾವಿರ ವರ್ಷಗಳು ಬೇಕಾಗುತ್ತದೆ.

ನೂರಾರು ಮಿಲಿಯನ್ ವರ್ಷಗಳ ಹಿಂದೆ ಹೋದರೆ, ಅಂದು ಭೂಮಿಯ ಒಂದು ದಿನ ಅಂದರೆ ಕೇವಲ 22 ಗಂಟೆಗಳು ಮಾತ್ರವಾಗಿತ್ತು!. ಈಗ ಅದು 24 ಗಂಟೆಗೆ ಬಂದು ತಲುಪಿದೆ.

ಒಟ್ಟಿನಲ್ಲಿ ಭೂಮಿಯು ತನ್ನ ಚಲನೆಯನ್ನು ತೀರಾ ನಿಧಾನವಾಗಿ ಕಡಿಮೆ ಮಾಡುತ್ತಿದೆ. ಮೇಲೆ ಹೇಳಿದರೆ ಒಂದು ಸೆಕೆಂಡ್ ನಿಧಾನವಾಗಲು 60 ಸಾವಿರ ವರ್ಷಗಳು ಬೇಕು. ಹಾಗಿರುವಾಗ ಭೂಮಿ, ಸೂರ್ಯನ ಸುತ್ತ ಸುತ್ತುವುದನ್ನು ನಿಲ್ಲಿಸುವುದು ಸಾಧ್ಯವೇ ಇಲ್ಲ ಮಾತು. ಹಾಗಾಗಿ ಮೇಲಿನ ‘ಸೂರ್ಯ ಉದಯಿಸುವುದಿಲ್ಲ’ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪ್ರತಿಪಾದನೆ ಸಂಪೂರ್ಣ ತಪ್ಪಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಭೂಮಿಯ ಚಲನೆ ನಿಲ್ಲದ ಹಾಗೆ ಏನಾದರೂ ಒಂದು ಹೊಸ ತರಹದ ಹೋಮ ಇರಬಹುದೋ…ಏನೋ….

  2. ಬೆಳಕಾಗಿ ಇರುತ್ತದೆ ಎಲ್ಲೋ ಒಂದು ಕಡೆ ಸೈಕ್ಲೋನ್ ಮಳೆ ಬಾರ ಬಹುದು ಹಾಗ ಬಿಸಿಲೂ ಭೂಮಿ ಗೆ ತಕುವುದಿಲ್ಲಾದ ಕಾರಣ ಈ ವದಂತ್ತಿ ಹಬ್ಬಿರ ಬಹುದು

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...