Homeಮುಖಪುಟಜಮ್ಮು ಕಾಶ್ಮೀರದಲ್ಲಿ ಈ ವರ್ಷ 40 ನಾಗರಿಕರು ಕೊಲ್ಲಲ್ಪಟ್ಟಿದ್ದು, 72 ಮಂದಿ ಗಾಯಗೊಂಡಿದ್ದಾರೆ: ಒಪ್ಪಿಕೊಂಡ ಒಕ್ಕೂಟ...

ಜಮ್ಮು ಕಾಶ್ಮೀರದಲ್ಲಿ ಈ ವರ್ಷ 40 ನಾಗರಿಕರು ಕೊಲ್ಲಲ್ಪಟ್ಟಿದ್ದು, 72 ಮಂದಿ ಗಾಯಗೊಂಡಿದ್ದಾರೆ: ಒಪ್ಪಿಕೊಂಡ ಒಕ್ಕೂಟ ಸರ್ಕಾರ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಈ ವರ್ಷದಲ್ಲಿ ಭಯೋತ್ಪಾದಕ-ಸಂಬಂಧಿತ ಹಿಂಸಾಚಾರ ಎಂದು ಆರೋಪಿಸಲಾಗಿರುವ ಘಟನೆಗಳಲ್ಲಿ, 40 ನಾಗರಿಕರು ಮತ್ತು ಕನಿಷ್ಠ 35 ಸೇನಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಒಕ್ಕೂಟ ಸರ್ಕಾರ ಲೋಕಸಭೆಯಲ್ಲಿ ಹೇಳಿದೆ. ಮಂಗಳವಾರ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರವಾಗಿ ಈ ಅಂಕಿಅಂಶಗಳನ್ನು ಬಹಿರಂಗಪಡಿಸಿದ್ದಾರೆ.

ಅದೇ ಹಿಂಸಾಚಾರದಲ್ಲಿ ಕನಿಷ್ಠ 72 ನಾಗರಿಕರು ಗಾಯಗೊಂಡಿದ್ದು, ಸೇನೆ ಮತ್ತು ಭದ್ರತಾ ಸಿಬ್ಬಂದಿಗಳ ಗಾಯಗೊಂಡವರ ಸಂಖ್ಯೆ 86 ಕ್ಕೆ ಏರಿದೆ ಎಂದು ಸರ್ಕಾರ ಹೇಳಿದೆ. ಈ ಎಲ್ಲಾ ಅಂಕಿ ಅಂಶಗಳು ಈ ವರ್ಷ ನವೆಂಬರ್ 15 ರವರೆಗೆ ವರದಿಯಾದ ಸಾವುಗಳು ಮತ್ತು ಗಾಯಗೊಂಡವರದ್ದಾಗಿದೆ.

ಇದನ್ನೂ ಓದಿ:ಜಮ್ಮು ಕಾಶ್ಮೀರ: ಹೈದರ್‌ಪೋರಾ ಎನ್‌ಕೌಂಟರ್‌ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಕಳೆದ ಮೂರು ವರ್ಷಗಳಲ್ಲಿ ಜಮ್ಮು ಕಾಶ್ಮೀರದಲ್ಲಿ 1,033 ಭಯೋತ್ಪಾದಕರ ದಾಳಿಯ ಘಟನೆಗಳು ನಡೆದಿವೆ ಎಂದು ಸರ್ಕಾರ ಸೋಮವಾರ ರಾಜ್ಯಸಭೆಗೆ ತಿಳಿಸಿದೆ. ರಕ್ಷಣಾ ಖಾತೆಯ ರಾಜ್ಯ ಸಚಿವ ಅಜಯ್ ಭಟ್ ಒದಗಿಸಿದ ವಿವರಗಳ ಪ್ರಕಾರ 2019 ರಲ್ಲಿ 594 ಘಟನೆಗಳು ವರದಿಯಾಗಿದ್ದು, ಇದು ಮೂರು ವರ್ಷಗಳಲ್ಲೆ ಅತಿ ಹೆಚ್ಚು ಘಟನೆಗಳು ನಡೆದ ವರ್ಷವಾಗಿದೆ.

ಈ ವರ್ಷ ನವೆಂಬರ್ 15 ರವರೆಗೆ 196 ಘಟನೆಗಳು ನಡೆದಿವೆ ಎಂದು ಅವರು ದೇಶಕ್ಕೆ ವಿವರಿಸಿದ್ದಾರೆ.

ಭಯೋತ್ಪಾದಕರಿಗೆ ನೆರವು ನೀಡುವವರನ್ನು ಹತ್ತಿಕ್ಕುವುದು, ರಾತ್ರಿ ಗಸ್ತು ತಿರುಗುವುದು, ಭದ್ರತಾ ಏಜೆನ್ಸಿಗಳ ನಡುವೆ ಉತ್ತಮ ಸಮನ್ವಯತೆ ಮತ್ತು ಭಯೋತ್ಪಾದಕರಿಗೆ ಧನಸಹಾಯ ಒದಗಿಸುವವರ ವಿರುದ್ಧ ಕಾನೂನುಬದ್ಧವಾಗಿ ನಡೆಯುವುದು ಸೇರಿದಂತೆ ಭಯೋತ್ಪಾದಕರನ್ನು ಎದುರಿಸುವಾಗ ಜಮ್ಮು ಕಾಶ್ಮೀರದಲ್ಲಿನ ಪ್ರಾಣಹಾನಿಯನ್ನು ಕಡಿಮೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸಚಿವ ನಿತ್ಯಾನಂತ ರೈ ಸಂಸತ್ತಿಗೆ ಭರವಸೆ ನೀಡಿದ್ದಾರೆ.

ಇದನ್ನೂ ಓದಿ:‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ – ಕಾಶ್ಮೀರಿ ಬಾಲಕಿ

ಇತ್ತೀಚಿನ ವರ್ಷಗಳಲ್ಲಿ ಭಯೋತ್ಪಾದಕ ದಾಳಿಗಳು ಕಡಿಮೆಯಾಗಿವೆ ಎಂದು ಸಚಿವ ಅಜಯ್ ಭಟ್ ರಾಜ್ಯಸಭೆಯಲ್ಲಿ ಹೇಳಿದ್ದು, ಮಿಲಿಟರಿ ಸಿಬ್ಬಂದಿಗಳ ಜೀವಹಾನಿ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

“ಅಕ್ಟೋಬರ್‌ ತಿಂಗಳ ಬಹುಪಾಲು ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯು ಶಂಕಿತ ಎಲ್‌ಇಟಿ ಉಗ್ರರೊಂದಿಗೆ ಚಕಮಕಿಯಲ್ಲಿ ತೊಡಗಿದೆ. ನವೆಂಬರ್ 13 ರಂದು ಚುರಾಚಂದ್‌ಪುರ ಜಿಲ್ಲೆಯ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲೆ ಶಂಕಿತ ಬಂಡುಕೋರರು ದಾಳಿ ಹಾಕಿದ್ದರು. ಈ ಘಟನೆಯಲ್ಲಿ ಅಸ್ಸಾಂ ರೈಫಲ್ಸ್‌ನ 5 ಸಿಬ್ಬಂದಿ ಮತ್ತು 2 ನಾಗರಿಕರು ಸೇರಿದಂತೆ ಏಳು ಜನರು ಪ್ರಾಣ ಕಳೆದುಕೊಂಡಿದ್ದಾರೆ, 6 ಅಸ್ಸಾಂ ರೈಫಲ್ಸ್ ಸಿಬ್ಬಂದಿ ಗಾಯಗೊಂಡಿದ್ದಾರೆ” ಎಂದು ಸಚಿವ ನಿತ್ಯಾನಂದ ರೈ ವರದಿ ಮಾಡಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕಸಿದುಕೊಂಡು ಎರಡು ವರ್ಷಗಳು ಕಳೆದಿವೆ. ಅಲ್ಲಿನ ಜನರ ಸಂಕಷ್ಟಕಗಳನ್ನು ಕಳೆದು ಒಳ್ಳೆಯ ದಿನಗಳು ಬರಲಿವೆ ಎಂದು ದೇಶದ ಜನರಿಗೆ ತಿಳಿಸಲಾಗಿತ್ತು. ಆದರೆ ಅಲ್ಲಿನ ಜನರಿಗೆ ಸುಮಾರು ಒಂದು ವರ್ಷಗಳ ಕಾಲ ಲಾಕ್‌ಡೌನ್‌ ಶಿಕ್ಷೆ ನೀಡಲಾಗಿತ್ತು. ಜೊತೆಗೆ ರಾಜಕೀಯ ನಾಯಕರನ್ನು ಗೃಹಬಂಧನ ಹಾಗೂ ಜೈಲಿಗೆ ಅಟ್ಟಲಾಗಿತ್ತು.

ಇದನ್ನೂ ಓದಿ:ಜಮ್ಮು ಕಾಶ್ಮೀರ: 2019 ರಿಂದ 2,300 ಕ್ಕೂ ಹೆಚ್ಚು ಜನರ ಮೇಲೆ UAPA ಅಡಿ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...