Homeಕರ್ನಾಟಕಮೋದಿಯವರ ಸಚಿವ ಸಂಪುಟದಲ್ಲಿ ‘ಸಾಮಾಜಿಕ ನ್ಯಾಯ’ದ ದನಿ ಹುಡುಕುತ್ತ....

ಮೋದಿಯವರ ಸಚಿವ ಸಂಪುಟದಲ್ಲಿ ‘ಸಾಮಾಜಿಕ ನ್ಯಾಯ’ದ ದನಿ ಹುಡುಕುತ್ತ….

ಇತರ ರಾಜ್ಯಗಳಲ್ಲಿ ಶೇ.50% ರಷ್ಟು ಮತ ಹಾಕಿದ ಆದಿವಾಸಿಗಳಿಗೆ ಕೇವಲ 2 ಸಚಿವ ಸ್ಥಾನ ನೀಡಿದರೆ, ಕರ್ನಾಟಕದಲ್ಲಿ ಎಲ್ಲ 7 ಮೀಸಲು ಕ್ಷೇತ್ರ ಗೆದ್ದರೂ ಒಬ್ಬರಿಗೂ ಸಚಿವಗಿರಿಯಿಲ್ಲ!

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ನಮ್ಮ ಅಧಿಕಾರ ಕೇಂದ್ರಗಳು ಎಂದಿಗೂ ಜನಪರವಲ್ಲ, ಹೀಗಾಗಿ ಇಲ್ಲಿ ಸಂಸತ್ತಿನಲ್ಲಿ ಸಾಮಾಜಿಕ ನ್ಯಾಯದ ಪ್ರಾಮಾಣಿಕ ದನಿ ಕೇಳೀತೇ ಎಂಬುದೂ ಸಂಶಯಾತ್ಮಕವೇ. ಸದ್ಯ ನಮ್ಮ ಸಂಸತ್ತಿಗೆ ಆಯ್ಕೆಯಾದವರು ಯಾವ ಯಾವ ಧರ್ಮ, ಸಮುದಾಯಕ್ಕೆ ಸೇರಿದವರು ಎಂಬ ಅಂಕಿಸಂಖ್ಯೆ ನೋಡಿದರೇನೇ ಇಲ್ಲಿ ‘ಬಹು ಸಂಖ್ಯಾತ’ರು ಪ್ರಬಲವಾಗಿ ಆವರಿಸುತ್ತಲೇ ಹೋಗುತ್ತಿರುವುದನ್ನು ಗಮನಿಸಬಹುದು…

ಈ 17ನೇ ಲೋಕಸಭೆಯಲ್ಲಿ ಶೇ, 90.4ರಷ್ಟು ಜಾತಿ- ಹಿಂದುಗಳು, ಶೇ. 5.2ರಷ್ಟು ಮುಸ್ಲಿಮರು (2014ಕ್ಕೆ ಹೋಲಿಸಿದರೆ ಈ ಸಲ ಐವರು ಮುಸ್ಲಿಂ ಎಂಪಿಗಳು ಹೆಚ್ಚಾಗಿದ್ದಾರೆ), ಶೇ. 4ರಷ್ಟು ಇತರೆ ಧಾರ್ಮಿಕ ಅಲ್ಪಸಂಖ್ಯಾತರು. ಬಿಜೆಪಿಯ ಎಂಪಿಗಳ ಪೈಕಿ ಶೇ. 99ರಷ್ಟು ಜಾತಿ-ಹಿಂದೂಗಳೇ.

ಜಾತಿ/ಸಮುದಾಯವಾರು ಲೆಕ್ಕಕ್ಕೆ ಬಂದರೆ, 542ರಲ್ಲಿ ಮೇಲ್ಜಾತಿಯವರ ಸಂಖ್ಯೆ 232, ಒಬಿಸಿ-120, ಎಸ್‍ಸಿ-86, ಎಸ್‍ಟಿ-52, ಧಾರ್ಮಿಕ ಅಲ್ಪಸಂಖ್ಯಾತರು-52.

ಕರ್ನಾಟಕದ ಉದಾಹರಣೆ ತೆಗೆದುಕೊಂಡರೆ, ಇಲ್ಲಿ 5 ಪರಿಶಿಷ್ಟ ಜಾತಿ ಮತ್ತು 2 ಪರಿಶಿಷ್ಟ ಪಂಗಡ ಮೀಸಲಿನ ಕ್ಷೇತ್ರಗಳೆಲ್ಲವೂ ಬಿಜೆಪಿಯ ಪಾಲಾಗಿವೆ. ಉಳಿದ ಸಾಮಾನ್ಯ ಕ್ಷೇತ್ರಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರದ್ದೇ ಪ್ರಾಬಲ್ಯ! ಈ ಸಲ 9 ಲಿಂಗಾಯತ ಸಂಸದರು, 3 ಬ್ರಾಹಣ ಸಂಸದರು (ಎಲ್ಲ ಬಿಜೆಪಿ) ಆಯ್ಕೆಯಾಗಿದ್ದಾರೆ. 6 ಒಕ್ಕಲಿಗರು (ಬಿಜೆಪಿ 4, ಕಾಂಗ್ರೆಸ್ ಜೆಡಿಎಸ್ ತಲಾ ಒಂದು) ಸಂಸತ್ ಪ್ರವೇಶಿಸಿದ್ದಾರೆ. ಅಂದರೆ 28ರಲ್ಲಿ 18 ಸಂಸದರು ಮೇಲ್ಜಾತಿಗೆ ಸೇರಿದವರೇ!

ಉತ್ತರ ಭಾರತದ ಹಿಂದು ಬೆಲ್ಟಿನಲ್ಲಿ ಬಿಜೆಪಿ ಮೇಲ್ಜಾತಿ, ಒಬಿಸಿ ಮತ್ತು ಆದಿವಾಸಿಗಳನ್ನು ಕೇಂದ್ರಿಕರಿಸಿ ಚುನಾವಣಾ ತಂತ್ರ ಹೆಣೆದಿತ್ತು ಎಂದು ಲೋಕನೀತಿ-ಸಿಎಸ್‍ಡಿಎಸ್ ಸಂಸ್ಥೆಯ ಸಮೀಕ್ಷೆ ಹೇಳಿದೆ. ಇಂತಹ ಯಾವ ಪ್ಲಾನೂ ಅಲ್ಲಿನ ಕಾಂಗ್ರೆಸ್ ಮತ್ತು ಮಹಾಘಟಬಂಧನದ ಪಕ್ಷಗಳಿಗೆ ಇರಲೇ ಇಲ್ಲ. ಎಸ್‍ಪಿ-ಬಿಎಸ್‍ಪಿ ಮತ್ತು ಆರ್‍ಎಲ್‍ಡಿ ನಡುವೆ ಮತವರ್ಗಾವಣೆ ಆಗುತ್ತದೆ ಎಂಬ ದೃಢ ನಿರ್ಧಾರಕ್ಕೆ ಘಟಬಂಧನ ಜೋತು ಬಿದ್ದು ಹಿಂದಕ್ಕೆ ಚಲಿಸಿತು.

ಸಹಜವಾಗಿ ಈ ಸಲ ಮೇಲ್ಜಾತಿಯ ಮತಗಳನ್ನು ಪಕ್ಕ ಮಾಡಿಕೊಂಡಿದ್ದ ಬಿಜೆಪಿ, ಒಬಿಸಿ ಮತ್ತು ಆದಿವಾಸಿಗಳನ್ನು ಕೇಂದ್ರೀಕರಿಸಿ ತನ್ನ ಪ್ರಚಾರ ವ್ಯೂಹವನ್ನು ಹೆಣೆದಿತ್ತು.. ಡಿಸೆಂಬರ್‍ನಲ್ಲಿ ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಶೇ. 34ರಷ್ಟು ಆದಿವಾಸಿ ಮತಗಳು ಬಂದಿದ್ದರೆ ಈ ಲೊಕಸಭಾ ಚುನಾವಣೆಯಲ್ಲಿ ಅದು ಶೇ. 52ಕ್ಕೆ ಏರಿತ್ತು! ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಘಡ್, ಹಿಮಾಚಲ ಪ್ರದೇಶ, ಬಿಹಾರ್-ಹೀಗೆ ಆದಿವಾಸಿಗಳಿಂದ ಸಾಕಷ್ಟು ಮತ ಪಡೆದ ಬಿಜೆಪಿ ಈಗ ಅವರಿಗೆ ಕಾಟಾಚಾರಕ್ಕೆ ಎಂಬಂತೆ ಎರಡೇ ಎರಡು ಸಚಿವ ಸ್ಥಾನ ನೀಡಿದೆ.

ಕರ್ನಾಟಕದಲ್ಲಿ ಇಬ್ಬರು ಬ್ರಾಹ್ಮಣ ಬಿಜೆಪಿ ಸಂಸದರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಅಂದಾಜಿತ್ತು. ಕಳೆದ ಸಲ ಆರಂಭದಲ್ಲಿ ದಾವಣಗೆರೆಯ ಸಿದ್ದೇಶ್ವರ್ ಅವರಿಗೆ ಸಚಿವಗಿರಿ ಕೊಟ್ಟು ನಂತರ ಅವರನ್ನು ತೆಗೆದು ಹಾಕಲಾಗಿತ್ತು. 2018ರ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಅನಂತ ಹೆಗಡೆಗೆ ಮಂತ್ರಿ ಸ್ಥಾನ ನೀಡಲಾಗಿತ್ತು. ಆಗ ಮೂವರು ಬ್ರಾಹ್ಮಣ ಸಂಸದರ ಪೈಕಿ ಇಬ್ಬರು ಸಚಿವರಾಗಿದ್ದರೆ ಬಿಜೆಪಿಯ ಬೆಂಬಲಿಗರು ಅನಿಸಿಕೊಂಡ ಲಿಂಗಾಯತ ಸಮುದಾಯಕ್ಕೆ ಯಾವ ಸಚಿವಗಿರಿಯೂ ಇರಲಿಲ್ಲ.

ಈ ಸಲ ಬೆಂಗಳೂರು ದಕ್ಷಿಣದ ಅನಂತಕುಮಾರ್ ಸಾವಿನ ಕಾರಣದಿಂದ ಆ ಕೋಟಾ ಅವರ ಶಿಷ್ಯ ಧಾರವಾಡದ ಪ್ರಹ್ಲಾದ್ ಜೋಶಿಗೆ ಸಿಕ್ಕಿದೆ. ಮತ್ತೆ ಒಕ್ಕಲಿಗರ ಕೋಟಾದಲ್ಲಿ ನಾಲ್ವರು ಒಕ್ಕಲಿಗ ಸಂಸದರ ಪೈಕಿ ‘ಹಿರಿಯ’ ಸದಾನಂದಗೌಡರಿಗೆ ಮತ್ತೆ ಚಾನ್ಸು ಲಭಿಸಿದೆ. ಇವರಿಬ್ಬರೂ ಕ್ಯಾಬಿನೆಟ್ ಸಚಿವರು. ಬೆಳಗಾವಿಯಿಂದ 4 ಸಲ ಗೆದ್ದಿರುವ ಸುರೇಶ ಅಂಗಡಿ ಎಂಬ ಬಣಜಿಗ ಲಿಂಗಾಯತರಿಗೆ ರಾಜ್ಯ ಸಚಿವ ಸ್ಥಾನವನ್ನಷ್ಟೇ ನೀಡಲಾಗಿದೆ.

ಯಡಿಯೂರಪ್ಪ ನೀಡಿದ ಪಟ್ಟಿಯಲ್ಲಿ ಒಬ್ಬರಿಗೂ ಸ್ಥಾನವಿಲ್ಲ! ಅವರು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬಾಗಲಕೋಟೆಯ ಗದ್ದಿಗೌಡರ್, ಹಾವೇರಿ ಶಿವಕುಮಾರ್ ಉದಾಸಿ, ಕೊಪ್ಪಳದ ಕರಡಿ ಸಂಗಣ್ಣ ಮತ್ತು ತುಮಕೂರಿನ ಬಸವರಾಜು- ಇವರಲ್ಲಿ ಒಬ್ಬಿಬ್ಬರಿಗೆ ಸಚಿವ ಸ್ಥಾನ ಅಪೇಕ್ಷಿಸಿದ್ದರು!

ಎಸ್‍ಸಿ, ಎಸ್ಟಿಗೆ ಶೂನ್ಯ!
ಕಳೆದ ಸಲ 2014ರಲ್ಲಿ ಬಿಜೆಪಿ 7 ಮೀಸಲು ಕ್ಷೇತ್ರಗಳಲ್ಲಿ ಕೇವಲ ವಿಜಯಪುರ ಒಂದರಲ್ಲಿ ಮಾತ್ರ ಗೆದ್ದಿತ್ತು. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಆಗ ವಿಜಯಪುರದ ರಮೇಶ ಜಿಗಜಿಗಣಿಯವರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಈ ಸಲ ಬಿಜೆಪಿ ಎಲ್ಲ 7 ಮೀಸಲು ಕ್ಷೇತ್ರಗಳಲ್ಲಿ ಗೆದ್ದಿದ್ದರೂ ಆ ಸಮುದಾಯಗಳಿಗೆ ಸೇರಿದ ಒಬ್ಬ ಸಂಸದನಿಗೂ ಸಚಿವ ಸ್ಥಾನ ನೀಡಿಲ್ಲ. ಕಲಬುರ್ಗಿ ವಿಭಾಗದಲ್ಲೇ ಅದು 3 ಮೀಸಲು ಕ್ಷೇತ್ರಗಳನ್ನು ಗೆದ್ದಿದ್ದರೂ ಆ ಭಾಗಕ್ಕೂ ಮಣೆ ಹಾಕಿಲ್ಲ.
ಒಟ್ಟು 57 ಸಚಿವ ಸ್ಥಾನದಲ್ಲಿ 21ನ್ನು ಬ್ರಾಹ್ಮಣರಿಗೆ ನೀಡಿರುವ, ಸಂಘ ಪರಿವಾರ ನಿರ್ಧರಿಸುವ ಪಟ್ಟಿಯಲ್ಲಿ ಇನ್ನೆಂತಾ ಸಾಮಾಜಿಕ ನ್ಯಾಯ ಹುಡುಕೋಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...