Homeಮುಖಪುಟಬೆಂಗಳೂರು: ಮುನಾವರ್‌ ಬಳಿಕ ಕುನಾಲ್ ಕಮ್ರಾ ಕಾರ್ಯಕ್ರಮವೂ ರದ್ದು; ಬೆದರಿಕೆ ಆರೋಪ

ಬೆಂಗಳೂರು: ಮುನಾವರ್‌ ಬಳಿಕ ಕುನಾಲ್ ಕಮ್ರಾ ಕಾರ್ಯಕ್ರಮವೂ ರದ್ದು; ಬೆದರಿಕೆ ಆರೋಪ

- Advertisement -
- Advertisement -

ಸ್ಥಳವನ್ನು ಬಂದ್ ಮಾಡುವ ಬೆದರಿಕೆ ಮತ್ತು ವಿಶೇಷ ಆಸನ ಅನುಮತಿಗಳನ್ನು ನಿರಾಕರಿಸಿದ ಕಾರಣ ಮುಂದಿನ 20 ದಿನಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ತಮ್ಮ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಕಾಮೆಡಿಯನ್‌‌ ಕುನಾಲ್ ಕಮ್ರಾ ಘೋಷಿಸಿದ್ದಾರೆ.

ಡಿಸೆಂಬರ್ 1ರಿಂದ 19ರ ನಡುವೆ ಬೆಂಗಳೂರಿನ ಜೆಪಿ ನಗರದ ಸ್ಥಳವೊಂದರಲ್ಲಿ ‘ಕುನಾಲ್ ಕಮ್ರಾ ಲೈವ್’ ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಕಮ್ರಾ ಪ್ರದರ್ಶಿಸಲು ಸಜ್ಜಾಗಿದ್ದರು. ಇತರ ರಾಜ್ಯಗಳಲ್ಲಿ ಇದೇ ರೀತಿಯ ಕಾರಣಗಳಿಂದಾಗಿ ಅವರ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ ಎಂದು ಕುನಾಲ್ ಅವರ ಆಪ್ತ ಮೂಲಗಳು ಹೇಳಿವೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಮ್ರಾ ಅವರ ಕಾರ್ಯಕ್ರಮ ರದ್ದಾಗಿದೆ.

ಗುಜರಾತ್ ಮೂಲದ ಮುನಾವರ್ ಫರೂಕಿ ನಂತರ ಕಳೆದ ಐದು ದಿನಗಳಲ್ಲಿ ಬೆಂಗಳೂರಿನಲ್ಲಿ ತನ್ನ ಪ್ರದರ್ಶನವನ್ನು ರದ್ದುಪಡಿಸಿದ ಎರಡನೇ ಹಾಸ್ಯನಟ ಕಮ್ರಾ. ಮೂಲಗಳ ಪ್ರಕಾರ, ಬೆಂಗಳೂರಿನ ಜೆಪಿ ನಗರ ಪೊಲೀಸ್ ಠಾಣೆಯು ಕಮ್ರಾ ಅವರ ಪ್ರದರ್ಶನ ನಡೆಯಲಿರುವ ಆರ್ಟ್ ಖೋಜ್‌ ಮಾಲೀಕರಿಗೆ ಸಮನ್ಸ್ ನೀಡಿತ್ತು.

ಈ ಮಧ್ಯೆ, ನವೆಂಬರ್ 30 ರಂದು ಕೆಲವು ಜನರು ಸ್ಥಳದ ಹೊರಗೆ ಜಮಾಯಿಸಿ, ಪ್ರದರ್ಶನವನ್ನು ವಿರೋಧಿಸಿದರು. ಈ ವೇಳೆ ಪೊಲೀಸ್ ವ್ಯಾನ್ ಸ್ಥಳಕ್ಕೆ ಆಗಮಿಸಿ ಗುಂಪನ್ನು ಚದುರಿಸಿತು ಎಂದು ಮೂಲಗಳು ತಿಳಿಸಿವೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಆರ್ಟ್ ಖೋಜ್ ಜೊತೆ ಪೊಲೀಸರು ಠಾಣೆಯಲ್ಲಿ ಸಭೆ ನಡೆಸಿದರು. ಕೋವಿಡ್-19 ನಿರ್ಬಂಧಗಳಿಂದಾಗಿ ಪ್ರದರ್ಶನವನ್ನು ರದ್ದುಗೊಳಿಸಲಾಗುತ್ತಿದೆ ಎಂದು ಲಿಖಿತವಾಗಿ ತಿಳಿಸಲು ಕೇಳಿಕೊಂಡರು ಎಂದು ಮೂಲಗಳು ಹೇಳುತ್ತವೆ. ಆದರೆ, ಕುನಾಲ್ ಕಮ್ರಾ ತಮ್ಮ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ, ಬೆದರಿಕೆಗಳಿಂದಾಗಿ ಕಾರ್ಯಕ್ರಮ ರದ್ದು ಮಾಡಲಾಗಿದೆ ಆರೋಪಿಸಿದ್ದಾರೆ. ಡಿಸೆಂಬರ್ 31ರವರೆಗೆ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಪೊಲೀಸರು ಸ್ಥಳದ ಮಾಲೀಕರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಮ್ರಾ ಅವರ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ಡಿಸೆಂಬರ್‌ 1ರಂದು ಮಾಹಿತಿ ಹೊರಬಿದ್ದಿದೆ. ಮುನಾವರ್ ಅವರ ಕಾರ್ಯಕ್ರಮವನ್ನು ಬೆಂಗಳೂರಿನ ಗುಡ್ ಶೆಫರ್ಡ್ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ರದ್ದು ಮಾಡುವಾಗ ಪೊಲೀಸರು, “ಮುನಾವರ್ ಅವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ವಿವಾದಾತ್ಮಕ ವ್ಯಕ್ತಿಯಾಗಿರುವುದರಿಂದ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು” ಎಂದಿದ್ದರು. ಕುನಾಲ್ ಕಮ್ರಾ ಪ್ರಕರಣದಲ್ಲಿ, ಪೊಲೀಸರು ಯಾವುದೇ ಆಕ್ಷೇಪಣೆಯನ್ನು ಲಿಖಿತವಾಗಿ ನೀಡಿಲ್ಲ.

ಎರಡು ಕಾರಣಗಳಿಂದಾಗಿ ಬೆಂಗಳೂರಿನಲ್ಲಿ ತನ್ನ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ ಎಂದು ಕಮ್ರಾ ಆರೋಪಿಸಿದ್ದಾರೆ. “ಮೊದಲನೆಯದಾಗಿ, ಹೆಚ್ಚು ಕುಳಿತುಕೊಳ್ಳಬಹುದಾದ ಸ್ಥಳದಲ್ಲಿ 45 ಜನರನ್ನು ಕೂರಿಸಲು ನಾವು ವಿಶೇಷ ಅನುಮತಿಗಳನ್ನು ಪಡೆದಿಲ್ಲ. ಎರಡನೆಯದಾಗಿ, ನಾನು ಎಂದಾದರೂ ಅಲ್ಲಿ ಪ್ರದರ್ಶನ ನೀಡಿದರೆ ಸ್ಥಳವನ್ನು ಮುಚ್ಚುವುದಾಗಿ ಬೆದರಿಕೆ ಹಾಕಲಾಗಿದೆ. ಇದು COVID-19 ಪ್ರೋಟೋಕಾಲ್ ಮತ್ತು ಹೊಸ ಮಾರ್ಗಸೂಚಿಗಳ ಭಾಗವಾಗಿದೆ ಎಂದು ನಾನು ಭಾವಿಸುತ್ತೇನೆ. ವೈರಸ್‌ನ ರೂಪಾಂತರದಂತೆ ನಾನು ಕಾಣುತ್ತಿದ್ದೇನೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ ಕಮ್ರಾ.

“ತನ್ನ ಪರಿಸ್ಥಿತಿಯನ್ನು ಮುನಾವರ್‌ಗೆ ಹೋಲಿಸಿರುವ ಕಮ್ರಾ, ಇಬ್ಬರನ್ನೂ ಒಂದೇ ರೀತಿಯಲ್ಲಿ ಮೌನಗೊಳಿಸಲಾಗುತ್ತಿದೆ ಎಂದು ದೂರಿದ್ದಾರೆ. ‘ಫಾರೂಕಿ ಹಾಸ್ಯವನ್ನು ತೊರೆಯಬೇಕಾದಾಗ ಕಮ್ರಾ ಹೇಗೆ ಪ್ರದರ್ಶನ ನೀಡುತ್ತಾನೆ’ ಎಂದು ಆಶ್ಚರ್ಯ ಪಡುವವರಿಗೆ ಆಡಳಿತ ವರ್ಗವು ಕನಿಷ್ಠ ಸಮಾನತೆಯಿಂದ ದಬ್ಬಾಳಿಕೆ ಮಾಡಲು ಪ್ರಯತ್ನಿಸುತ್ತಿದೆ ಎಂಬ ಅಂಶದಿಂದ ನಾವು ಸಾಂತ್ವನವನ್ನು ಕಂಡುಕೊಳ್ಳಬಹುದು” ಎಂದು ಅವರು ಬರೆದಿದ್ದಾರೆ.


ಇದನ್ನೂ ಓದಿರಿ: ಕರ್ನಾಟಕ ಹೈಕೋರ್ಟ್‌ನ ವಿಚಾರಣೆಯ ವೇಳೆ ಅರೆಬೆತ್ತಲೆಯಾಗಿ ಸ್ನಾನ ಮಾಡಿದ ವ್ಯಕ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...