Homeಮುಖಪುಟಬೆಂಗಳೂರು: ಮುನಾವರ್‌ ಬಳಿಕ ಕುನಾಲ್ ಕಮ್ರಾ ಕಾರ್ಯಕ್ರಮವೂ ರದ್ದು; ಬೆದರಿಕೆ ಆರೋಪ

ಬೆಂಗಳೂರು: ಮುನಾವರ್‌ ಬಳಿಕ ಕುನಾಲ್ ಕಮ್ರಾ ಕಾರ್ಯಕ್ರಮವೂ ರದ್ದು; ಬೆದರಿಕೆ ಆರೋಪ

- Advertisement -
- Advertisement -

ಸ್ಥಳವನ್ನು ಬಂದ್ ಮಾಡುವ ಬೆದರಿಕೆ ಮತ್ತು ವಿಶೇಷ ಆಸನ ಅನುಮತಿಗಳನ್ನು ನಿರಾಕರಿಸಿದ ಕಾರಣ ಮುಂದಿನ 20 ದಿನಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ತಮ್ಮ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಕಾಮೆಡಿಯನ್‌‌ ಕುನಾಲ್ ಕಮ್ರಾ ಘೋಷಿಸಿದ್ದಾರೆ.

ಡಿಸೆಂಬರ್ 1ರಿಂದ 19ರ ನಡುವೆ ಬೆಂಗಳೂರಿನ ಜೆಪಿ ನಗರದ ಸ್ಥಳವೊಂದರಲ್ಲಿ ‘ಕುನಾಲ್ ಕಮ್ರಾ ಲೈವ್’ ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಕಮ್ರಾ ಪ್ರದರ್ಶಿಸಲು ಸಜ್ಜಾಗಿದ್ದರು. ಇತರ ರಾಜ್ಯಗಳಲ್ಲಿ ಇದೇ ರೀತಿಯ ಕಾರಣಗಳಿಂದಾಗಿ ಅವರ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ ಎಂದು ಕುನಾಲ್ ಅವರ ಆಪ್ತ ಮೂಲಗಳು ಹೇಳಿವೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಮ್ರಾ ಅವರ ಕಾರ್ಯಕ್ರಮ ರದ್ದಾಗಿದೆ.

ಗುಜರಾತ್ ಮೂಲದ ಮುನಾವರ್ ಫರೂಕಿ ನಂತರ ಕಳೆದ ಐದು ದಿನಗಳಲ್ಲಿ ಬೆಂಗಳೂರಿನಲ್ಲಿ ತನ್ನ ಪ್ರದರ್ಶನವನ್ನು ರದ್ದುಪಡಿಸಿದ ಎರಡನೇ ಹಾಸ್ಯನಟ ಕಮ್ರಾ. ಮೂಲಗಳ ಪ್ರಕಾರ, ಬೆಂಗಳೂರಿನ ಜೆಪಿ ನಗರ ಪೊಲೀಸ್ ಠಾಣೆಯು ಕಮ್ರಾ ಅವರ ಪ್ರದರ್ಶನ ನಡೆಯಲಿರುವ ಆರ್ಟ್ ಖೋಜ್‌ ಮಾಲೀಕರಿಗೆ ಸಮನ್ಸ್ ನೀಡಿತ್ತು.

ಈ ಮಧ್ಯೆ, ನವೆಂಬರ್ 30 ರಂದು ಕೆಲವು ಜನರು ಸ್ಥಳದ ಹೊರಗೆ ಜಮಾಯಿಸಿ, ಪ್ರದರ್ಶನವನ್ನು ವಿರೋಧಿಸಿದರು. ಈ ವೇಳೆ ಪೊಲೀಸ್ ವ್ಯಾನ್ ಸ್ಥಳಕ್ಕೆ ಆಗಮಿಸಿ ಗುಂಪನ್ನು ಚದುರಿಸಿತು ಎಂದು ಮೂಲಗಳು ತಿಳಿಸಿವೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಆರ್ಟ್ ಖೋಜ್ ಜೊತೆ ಪೊಲೀಸರು ಠಾಣೆಯಲ್ಲಿ ಸಭೆ ನಡೆಸಿದರು. ಕೋವಿಡ್-19 ನಿರ್ಬಂಧಗಳಿಂದಾಗಿ ಪ್ರದರ್ಶನವನ್ನು ರದ್ದುಗೊಳಿಸಲಾಗುತ್ತಿದೆ ಎಂದು ಲಿಖಿತವಾಗಿ ತಿಳಿಸಲು ಕೇಳಿಕೊಂಡರು ಎಂದು ಮೂಲಗಳು ಹೇಳುತ್ತವೆ. ಆದರೆ, ಕುನಾಲ್ ಕಮ್ರಾ ತಮ್ಮ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ, ಬೆದರಿಕೆಗಳಿಂದಾಗಿ ಕಾರ್ಯಕ್ರಮ ರದ್ದು ಮಾಡಲಾಗಿದೆ ಆರೋಪಿಸಿದ್ದಾರೆ. ಡಿಸೆಂಬರ್ 31ರವರೆಗೆ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಪೊಲೀಸರು ಸ್ಥಳದ ಮಾಲೀಕರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಮ್ರಾ ಅವರ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ಡಿಸೆಂಬರ್‌ 1ರಂದು ಮಾಹಿತಿ ಹೊರಬಿದ್ದಿದೆ. ಮುನಾವರ್ ಅವರ ಕಾರ್ಯಕ್ರಮವನ್ನು ಬೆಂಗಳೂರಿನ ಗುಡ್ ಶೆಫರ್ಡ್ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ರದ್ದು ಮಾಡುವಾಗ ಪೊಲೀಸರು, “ಮುನಾವರ್ ಅವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ವಿವಾದಾತ್ಮಕ ವ್ಯಕ್ತಿಯಾಗಿರುವುದರಿಂದ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು” ಎಂದಿದ್ದರು. ಕುನಾಲ್ ಕಮ್ರಾ ಪ್ರಕರಣದಲ್ಲಿ, ಪೊಲೀಸರು ಯಾವುದೇ ಆಕ್ಷೇಪಣೆಯನ್ನು ಲಿಖಿತವಾಗಿ ನೀಡಿಲ್ಲ.

ಎರಡು ಕಾರಣಗಳಿಂದಾಗಿ ಬೆಂಗಳೂರಿನಲ್ಲಿ ತನ್ನ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ ಎಂದು ಕಮ್ರಾ ಆರೋಪಿಸಿದ್ದಾರೆ. “ಮೊದಲನೆಯದಾಗಿ, ಹೆಚ್ಚು ಕುಳಿತುಕೊಳ್ಳಬಹುದಾದ ಸ್ಥಳದಲ್ಲಿ 45 ಜನರನ್ನು ಕೂರಿಸಲು ನಾವು ವಿಶೇಷ ಅನುಮತಿಗಳನ್ನು ಪಡೆದಿಲ್ಲ. ಎರಡನೆಯದಾಗಿ, ನಾನು ಎಂದಾದರೂ ಅಲ್ಲಿ ಪ್ರದರ್ಶನ ನೀಡಿದರೆ ಸ್ಥಳವನ್ನು ಮುಚ್ಚುವುದಾಗಿ ಬೆದರಿಕೆ ಹಾಕಲಾಗಿದೆ. ಇದು COVID-19 ಪ್ರೋಟೋಕಾಲ್ ಮತ್ತು ಹೊಸ ಮಾರ್ಗಸೂಚಿಗಳ ಭಾಗವಾಗಿದೆ ಎಂದು ನಾನು ಭಾವಿಸುತ್ತೇನೆ. ವೈರಸ್‌ನ ರೂಪಾಂತರದಂತೆ ನಾನು ಕಾಣುತ್ತಿದ್ದೇನೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ ಕಮ್ರಾ.

“ತನ್ನ ಪರಿಸ್ಥಿತಿಯನ್ನು ಮುನಾವರ್‌ಗೆ ಹೋಲಿಸಿರುವ ಕಮ್ರಾ, ಇಬ್ಬರನ್ನೂ ಒಂದೇ ರೀತಿಯಲ್ಲಿ ಮೌನಗೊಳಿಸಲಾಗುತ್ತಿದೆ ಎಂದು ದೂರಿದ್ದಾರೆ. ‘ಫಾರೂಕಿ ಹಾಸ್ಯವನ್ನು ತೊರೆಯಬೇಕಾದಾಗ ಕಮ್ರಾ ಹೇಗೆ ಪ್ರದರ್ಶನ ನೀಡುತ್ತಾನೆ’ ಎಂದು ಆಶ್ಚರ್ಯ ಪಡುವವರಿಗೆ ಆಡಳಿತ ವರ್ಗವು ಕನಿಷ್ಠ ಸಮಾನತೆಯಿಂದ ದಬ್ಬಾಳಿಕೆ ಮಾಡಲು ಪ್ರಯತ್ನಿಸುತ್ತಿದೆ ಎಂಬ ಅಂಶದಿಂದ ನಾವು ಸಾಂತ್ವನವನ್ನು ಕಂಡುಕೊಳ್ಳಬಹುದು” ಎಂದು ಅವರು ಬರೆದಿದ್ದಾರೆ.


ಇದನ್ನೂ ಓದಿರಿ: ಕರ್ನಾಟಕ ಹೈಕೋರ್ಟ್‌ನ ವಿಚಾರಣೆಯ ವೇಳೆ ಅರೆಬೆತ್ತಲೆಯಾಗಿ ಸ್ನಾನ ಮಾಡಿದ ವ್ಯಕ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...