Homeಮುಖಪುಟಬೆಂಗಳೂರು: ಮುನಾವರ್‌ ಬಳಿಕ ಕುನಾಲ್ ಕಮ್ರಾ ಕಾರ್ಯಕ್ರಮವೂ ರದ್ದು; ಬೆದರಿಕೆ ಆರೋಪ

ಬೆಂಗಳೂರು: ಮುನಾವರ್‌ ಬಳಿಕ ಕುನಾಲ್ ಕಮ್ರಾ ಕಾರ್ಯಕ್ರಮವೂ ರದ್ದು; ಬೆದರಿಕೆ ಆರೋಪ

- Advertisement -
- Advertisement -

ಸ್ಥಳವನ್ನು ಬಂದ್ ಮಾಡುವ ಬೆದರಿಕೆ ಮತ್ತು ವಿಶೇಷ ಆಸನ ಅನುಮತಿಗಳನ್ನು ನಿರಾಕರಿಸಿದ ಕಾರಣ ಮುಂದಿನ 20 ದಿನಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ತಮ್ಮ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಕಾಮೆಡಿಯನ್‌‌ ಕುನಾಲ್ ಕಮ್ರಾ ಘೋಷಿಸಿದ್ದಾರೆ.

ಡಿಸೆಂಬರ್ 1ರಿಂದ 19ರ ನಡುವೆ ಬೆಂಗಳೂರಿನ ಜೆಪಿ ನಗರದ ಸ್ಥಳವೊಂದರಲ್ಲಿ ‘ಕುನಾಲ್ ಕಮ್ರಾ ಲೈವ್’ ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಕಮ್ರಾ ಪ್ರದರ್ಶಿಸಲು ಸಜ್ಜಾಗಿದ್ದರು. ಇತರ ರಾಜ್ಯಗಳಲ್ಲಿ ಇದೇ ರೀತಿಯ ಕಾರಣಗಳಿಂದಾಗಿ ಅವರ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ ಎಂದು ಕುನಾಲ್ ಅವರ ಆಪ್ತ ಮೂಲಗಳು ಹೇಳಿವೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಮ್ರಾ ಅವರ ಕಾರ್ಯಕ್ರಮ ರದ್ದಾಗಿದೆ.

ಗುಜರಾತ್ ಮೂಲದ ಮುನಾವರ್ ಫರೂಕಿ ನಂತರ ಕಳೆದ ಐದು ದಿನಗಳಲ್ಲಿ ಬೆಂಗಳೂರಿನಲ್ಲಿ ತನ್ನ ಪ್ರದರ್ಶನವನ್ನು ರದ್ದುಪಡಿಸಿದ ಎರಡನೇ ಹಾಸ್ಯನಟ ಕಮ್ರಾ. ಮೂಲಗಳ ಪ್ರಕಾರ, ಬೆಂಗಳೂರಿನ ಜೆಪಿ ನಗರ ಪೊಲೀಸ್ ಠಾಣೆಯು ಕಮ್ರಾ ಅವರ ಪ್ರದರ್ಶನ ನಡೆಯಲಿರುವ ಆರ್ಟ್ ಖೋಜ್‌ ಮಾಲೀಕರಿಗೆ ಸಮನ್ಸ್ ನೀಡಿತ್ತು.

ಈ ಮಧ್ಯೆ, ನವೆಂಬರ್ 30 ರಂದು ಕೆಲವು ಜನರು ಸ್ಥಳದ ಹೊರಗೆ ಜಮಾಯಿಸಿ, ಪ್ರದರ್ಶನವನ್ನು ವಿರೋಧಿಸಿದರು. ಈ ವೇಳೆ ಪೊಲೀಸ್ ವ್ಯಾನ್ ಸ್ಥಳಕ್ಕೆ ಆಗಮಿಸಿ ಗುಂಪನ್ನು ಚದುರಿಸಿತು ಎಂದು ಮೂಲಗಳು ತಿಳಿಸಿವೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಆರ್ಟ್ ಖೋಜ್ ಜೊತೆ ಪೊಲೀಸರು ಠಾಣೆಯಲ್ಲಿ ಸಭೆ ನಡೆಸಿದರು. ಕೋವಿಡ್-19 ನಿರ್ಬಂಧಗಳಿಂದಾಗಿ ಪ್ರದರ್ಶನವನ್ನು ರದ್ದುಗೊಳಿಸಲಾಗುತ್ತಿದೆ ಎಂದು ಲಿಖಿತವಾಗಿ ತಿಳಿಸಲು ಕೇಳಿಕೊಂಡರು ಎಂದು ಮೂಲಗಳು ಹೇಳುತ್ತವೆ. ಆದರೆ, ಕುನಾಲ್ ಕಮ್ರಾ ತಮ್ಮ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ, ಬೆದರಿಕೆಗಳಿಂದಾಗಿ ಕಾರ್ಯಕ್ರಮ ರದ್ದು ಮಾಡಲಾಗಿದೆ ಆರೋಪಿಸಿದ್ದಾರೆ. ಡಿಸೆಂಬರ್ 31ರವರೆಗೆ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಪೊಲೀಸರು ಸ್ಥಳದ ಮಾಲೀಕರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಮ್ರಾ ಅವರ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ಡಿಸೆಂಬರ್‌ 1ರಂದು ಮಾಹಿತಿ ಹೊರಬಿದ್ದಿದೆ. ಮುನಾವರ್ ಅವರ ಕಾರ್ಯಕ್ರಮವನ್ನು ಬೆಂಗಳೂರಿನ ಗುಡ್ ಶೆಫರ್ಡ್ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ರದ್ದು ಮಾಡುವಾಗ ಪೊಲೀಸರು, “ಮುನಾವರ್ ಅವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ವಿವಾದಾತ್ಮಕ ವ್ಯಕ್ತಿಯಾಗಿರುವುದರಿಂದ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು” ಎಂದಿದ್ದರು. ಕುನಾಲ್ ಕಮ್ರಾ ಪ್ರಕರಣದಲ್ಲಿ, ಪೊಲೀಸರು ಯಾವುದೇ ಆಕ್ಷೇಪಣೆಯನ್ನು ಲಿಖಿತವಾಗಿ ನೀಡಿಲ್ಲ.

ಎರಡು ಕಾರಣಗಳಿಂದಾಗಿ ಬೆಂಗಳೂರಿನಲ್ಲಿ ತನ್ನ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ ಎಂದು ಕಮ್ರಾ ಆರೋಪಿಸಿದ್ದಾರೆ. “ಮೊದಲನೆಯದಾಗಿ, ಹೆಚ್ಚು ಕುಳಿತುಕೊಳ್ಳಬಹುದಾದ ಸ್ಥಳದಲ್ಲಿ 45 ಜನರನ್ನು ಕೂರಿಸಲು ನಾವು ವಿಶೇಷ ಅನುಮತಿಗಳನ್ನು ಪಡೆದಿಲ್ಲ. ಎರಡನೆಯದಾಗಿ, ನಾನು ಎಂದಾದರೂ ಅಲ್ಲಿ ಪ್ರದರ್ಶನ ನೀಡಿದರೆ ಸ್ಥಳವನ್ನು ಮುಚ್ಚುವುದಾಗಿ ಬೆದರಿಕೆ ಹಾಕಲಾಗಿದೆ. ಇದು COVID-19 ಪ್ರೋಟೋಕಾಲ್ ಮತ್ತು ಹೊಸ ಮಾರ್ಗಸೂಚಿಗಳ ಭಾಗವಾಗಿದೆ ಎಂದು ನಾನು ಭಾವಿಸುತ್ತೇನೆ. ವೈರಸ್‌ನ ರೂಪಾಂತರದಂತೆ ನಾನು ಕಾಣುತ್ತಿದ್ದೇನೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ ಕಮ್ರಾ.

“ತನ್ನ ಪರಿಸ್ಥಿತಿಯನ್ನು ಮುನಾವರ್‌ಗೆ ಹೋಲಿಸಿರುವ ಕಮ್ರಾ, ಇಬ್ಬರನ್ನೂ ಒಂದೇ ರೀತಿಯಲ್ಲಿ ಮೌನಗೊಳಿಸಲಾಗುತ್ತಿದೆ ಎಂದು ದೂರಿದ್ದಾರೆ. ‘ಫಾರೂಕಿ ಹಾಸ್ಯವನ್ನು ತೊರೆಯಬೇಕಾದಾಗ ಕಮ್ರಾ ಹೇಗೆ ಪ್ರದರ್ಶನ ನೀಡುತ್ತಾನೆ’ ಎಂದು ಆಶ್ಚರ್ಯ ಪಡುವವರಿಗೆ ಆಡಳಿತ ವರ್ಗವು ಕನಿಷ್ಠ ಸಮಾನತೆಯಿಂದ ದಬ್ಬಾಳಿಕೆ ಮಾಡಲು ಪ್ರಯತ್ನಿಸುತ್ತಿದೆ ಎಂಬ ಅಂಶದಿಂದ ನಾವು ಸಾಂತ್ವನವನ್ನು ಕಂಡುಕೊಳ್ಳಬಹುದು” ಎಂದು ಅವರು ಬರೆದಿದ್ದಾರೆ.


ಇದನ್ನೂ ಓದಿರಿ: ಕರ್ನಾಟಕ ಹೈಕೋರ್ಟ್‌ನ ವಿಚಾರಣೆಯ ವೇಳೆ ಅರೆಬೆತ್ತಲೆಯಾಗಿ ಸ್ನಾನ ಮಾಡಿದ ವ್ಯಕ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...