Homeಮುಖಪುಟಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ನೀವು ‘ಪೆಂಗ್ವಿನ್‌’ ಆಗಿರಬೇಕು!

ಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ನೀವು ‘ಪೆಂಗ್ವಿನ್‌’ ಆಗಿರಬೇಕು!

- Advertisement -
- Advertisement -

ಹೌದು, ಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ಇದು ನಿಮ್ಮ ಅನುಭವಕ್ಕೆ ಬರಬೇಕಾದರೆ ನೀವು ‘ಪೆಂಗ್ವಿನ್’ ಆಗಿರಬೇಕು! ಏನಿದು ವಿಚಿತ್ರ ಹೇಳಿಕೆ ಎಂದು ನಿಮಗನಿಸುತ್ತಿದೆಯೆ? ಮುಂದಕ್ಕೆ ಓದಿ.

ಡಿಸೆಂಬರ್ ಬಂತೆಂದರೆ ಜಗತ್ತಿನ ನಾಶ, ಪ್ರಳಯ, ಎಂಬ ಸುದ್ದಿಯೆಲ್ಲಾ ಓಡಾಡುತ್ತವೆ. ಆದರೆ ಈ ಸುದ್ದಿ ಆ ರೀತಿಯ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲದೆ ಕಟ್ಟಿದ ಕಟ್ಟುಕತೆಯಲ್ಲ. ಅಷ್ಟಕ್ಕೂ ಇದು ಜಗತ್ತು ನಾಶವಾಗುವ ಕತೆಯಲ್ಲ, ಜಗತ್ತು ಅಂದು ಕೊನೆಗೊಳ್ಳುವುದೂ ಇಲ್ಲ. ನಮ್ಮ ಭೂಮಿಯಲ್ಲಿ ಸಾಮಾನ್ಯವಾಗಿ ನಡೆಯುವ ಒಂದು ವಿದ್ಯಮಾನ ಮಾತ್ರವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಸೆಂಬರ್‌‌ 21ರಂದು ನಿಜಕ್ಕೂ ಸೂರ್ಯ ಅಸ್ತಮಿಸದ ದಿನವಾಗಿದೆ. ಆದರೆ ಇದನ್ನು ನೀವು ನೋಡಬೇಕಾದರೆ ಭೂಮಿಯ ದಕ್ಷಿಣ ಧ್ರುವಕ್ಕೆ ತೆರಳಬೇಕಾಗುತ್ತದೆ. ಅಥವಾ ಅಲ್ಲಿಯೇ ಬದುಕುತ್ತಿರುವ ಪೆಂಗ್ವಿನ್ ನೀವಾಗಿರಬೇಕಾಗುತ್ತದೆ. ಹಾಗೆಯೇ ಡಿಸೆಂಬರ್‌ 21ರಂದು ಸೂರ್ಯೋದಯ ಕೂಡಾ ಆಗದ ದಿನವಾಗಿದೆ. ಇದರ ಅನುಭವ ಬರಬೇಕಾದರೆ, ಕತೆಗಳಲ್ಲಿ ಬರುವ ಸಾಂಟಾಕ್ಲಾಸ್‌ನಂತೆ ನೀವು ಉತ್ತರ ಧ್ರವದಲ್ಲಿ ವಾಸಿಸುತ್ತಿರಬೇಕು!

ಇದನ್ನೂ ಓದಿ:ಕಾರವಾರ ಕಿಮ್ಸ್‌ ವಿಧಿ ವಿಜ್ಞಾನ ವಿಭಾಗದಲ್ಲಿ ಅಕ್ರಮ ನೇಮಕಾತಿ; ವೈದ್ಯಕೀಯ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದೇಕೆ?

ಇದು ಹೇಗೆ ಸಾಧ್ಯ? ವೈಜ್ಞಾನಿಕ ಕಾರಣಗಳೇನು?

ಭೂಮಿಯು ತನ್ನ ಅಕ್ಷದಲ್ಲಿ ಸುತ್ತುವುದರಿಂದ ಸೂರ್ಯ ಉದಯಿಸಿದ ಹಾಗೆ ಮತ್ತು ಸೂರ್ಯ ಮುಳುಗುವ ಹಾಗೆ ಕಾಣುತ್ತದೆ. ಭೂಮಿ ತನ್ನ ಅಕ್ಷದಲ್ಲಿ ವಾರೆಯಾಗಿ ಸುತ್ತುತ್ತದೆ (ಮೇಲಿನ ಚಿತ್ರ ನೋಡಿ). ಭೂಮಿ ತನ್ನ ಅಕ್ಷದಲ್ಲಿ ಓರೆಯಾಗಿ ಸುತ್ತುವ ಕಾರಣದಿಂದಲೇ, ಭೂಮಿಯ ಉತ್ತರ ಮತ್ತು ದಕ್ಷಿಣ ಗೋಲದಲ್ಲಿ ಇರುವವರಿಗೆ ಹಗಲು ಮತ್ತು ರಾತ್ರಿಗಳ ಸಮಯ ವ್ಯತ್ಯಾಸ ಆಗುತ್ತದೆ.

ಭೂಮಿಯ ದಕ್ಷಿಣ ಗೋಳವು ಸೂರ್ಯನೆಡೆಗೆ ಬಾಗಿದ್ದಾಗ ಆ ಪ್ರದೇಶದ ಜನರಿಗೆ ಹಗಲು ಹೆಚ್ಚು ದೀರ್ಘವಾಗಿ ಇರುತ್ತದೆ. ಉತ್ತರ ಧ್ರುವವು ಸೂರ್ಯನಿಂದ ದೂರವಾಗಿ ಇದ್ದರೆ ಈ ಪ್ರಕ್ರಿಯೆಯು ಹಿಂದುಮುಂದಾಗಿ ಇರುತ್ತದೆ. ಉದಾಹರಣೆಗೆ, ಭಾರತ ಉತ್ತರಾರ್ಧಗೋಳದಲ್ಲಿ ಇರುವುದರಿಂದ ನಮಗೆ ಡಿಸೆಂಬರ್‌ ತಿಂಗಳಲ್ಲಿ ರಾತ್ರಿ ಅತೀ ದೀರ್ಘವಾಗಿ ಹಗಲು ಚಿಕ್ಕದಾಗಿರುತ್ತದೆ.

ಆದ್ದರಿಂದಲೇ, ಡಿಸೆಂಬರ್‌ 21ರಂದು ಭೂಮಿಯ ಉತ್ತರ ಧ್ರವದಲ್ಲಿ ಸೂರ್ಯನ ಬೆಳಕೇ ಇರುವುದಿಲ್ಲ. ಇದಕ್ಕೆ ‘ಧ್ರುವ ರಾತ್ರಿ’ ಎಂದು ಕರೆಯುತ್ತಾರೆ. ಈ ದಿನ ಅಲ್ಲಿ ಸೂರ್ಯೋದಯ ಆಗುವುದಿಲ್ಲ. ಅದೇ ಸಮಯದಲ್ಲಿ ಭೂಮಿಯ ದಕ್ಷಿಣ ಧ್ರುವದಲ್ಲಿ ಸೂರ್ಯಾಸ್ತ ಆಗುವುದಿಲ್ಲ. ಮಧ್ಯ ರಾತ್ರಿಯ ಸಮಯವಾದರೂ ಅಲ್ಲಿ ಸೂರ್ಯ ಕಾಣುತ್ತಾ ಇರುತ್ತಾನೆ. ಈ ದಿನವನ್ನು ಧ್ರುವ ದಿನ ಅಥವಾ ಮಧ್ಯರಾತ್ರಿಯ ಸೂರ್ಯ ಎಂದು ಕರೆಯುತ್ತಾರೆ.

ಹೀಗಾಗಿ ಡಿಸೆಂಬರ್‌ 21 ರಂದು ಭೂಮಿಯ ಉತ್ತರ ಧ್ರವದಲ್ಲಿ ಸೂರ್ಯ ಹುಟ್ಟುವುದೇ ಇಲ್ಲ. ಹಾಗೂ ಅದೇ ದಿನ ಭೂಮಿಯ ದಕ್ಷಿಣ ಧ್ರುವದಲ್ಲಿ ಸೂರ್ಯ ಅಸ್ತಮಿಸುವುದೇ ಇಲ್ಲ.

ಹಾಗೆ ನೋಡಿದರೆ ಸೂರ್ಯ ‘ಹುಟ್ಟವುದುದು ಮತ್ತು ಮುಳುಗುವುದು’ ಎಂಬ ಪದಗಳು ಕೇವಲ ಆಡು ಮಾತುಗಳಾಗಿದ್ದು, ವೈಜ್ಞಾನಿಕವಾಗಿ ಇದು ಸರಿಯಲ್ಲ. ಸೂರ್ಯ ಪ್ರತಿ ದಿನ ಹುಟ್ಟುವುದು ಮತ್ತು ಮುಳುಗುವುದು ಕೂಡಾ ಇಲ್ಲ. ಸೂರ್ಯ ತನ್ನ ಕಕ್ಷೆಯಲ್ಲಿ ಸುತ್ತುತ್ತಾ ಇರುತ್ತದೆ. ಭೂಮಿ ತನ್ನ ಕಕ್ಷೆಯಲ್ಲಿ ಸುತ್ತುವುದರಿಂದ ಸೂರ್ಯ ಹುಟ್ಟಿದ ಹಾಗೆ ಮತ್ತು ಅಸ್ತಮಿಸಿದ ಹಾಗೆ ಕಾಣುತ್ತದೆ.

ಇದನ್ನೂ ಓದಿ:ವೈದ್ಯವಿಜ್ಞಾನ ನೊಬೆಲ್ 2021; ನಮ್ಮ ಸುತ್ತಲಿನ ಜಗತ್ತನ್ನು ನಾವು ಹೇಗೆ ಗ್ರಹಿಸುತ್ತೇವೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...