Homeಕರ್ನಾಟಕಆಪರೇಷನ್ ಕಮಲಕ್ಕೆ ಬ್ರೇಕ್: ಯಡಿಯೂರಪ್ಪನವರ ಈ ಮಾತಿನ ಹಿಂದಿರುವ ಮರ್ಮವೇನು?

ಆಪರೇಷನ್ ಕಮಲಕ್ಕೆ ಬ್ರೇಕ್: ಯಡಿಯೂರಪ್ಪನವರ ಈ ಮಾತಿನ ಹಿಂದಿರುವ ಮರ್ಮವೇನು?

ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಬೀಳಿಸಿದ ಅಪಖ್ಯಾತಿ ಬಿಜೆಪಿ ಮೇಲೆ ಬಾರದಂತೆ, ಅದನ್ನು ಸಿದ್ದರಾಮಯ್ಯ ಮೇಲೆ ಆರೋಪಿಸಿ, ಒಳಗೊಳಗೇ ಆಪರೇಷನ್ ನಡೆಸುವ ತಂತ್ರಗಾರಿಕೆ ಭಾಗವಾಗಿ ಯಡಿಯೂರಪ್ಪನವರಿಂದ ಇಂಥಾ ಹೇಳಿಕೆ ಹೇಳಿಸಲಾಗಿದೆ ಎನ್ನಲಾಗುತ್ತಿದೆ.

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ದೆಹಲಿಯಿಂದ ಮರಳಿದ ಯಡಿಯೂರಪ್ಪ ತುಂಬಾ ನಿರಾಶೆಯಲ್ಲಿದ್ದಾರೆ. ಪ್ರಚಂಡ ಜಯದಿಂದ ಯಾರ ಮಾತನ್ನೂ ಕೇಳಿಸಿಕೊಳ್ಳದ ಸ್ಥಿತಿಯಲ್ಲಿರುವ `ಮೋದಿ-ಶಾ’ ಹೈಕಮಾಂಡ್ ಸದ್ಯಕ್ಕೆ ಯಾವ ಆಪರೇಷನ್ನೂ ಮಾಡಬೇಡಿ, ಸುಮ್ಮನೇ ವಿರೋಧ ಪಕ್ಷದಲ್ಲಿ ಕೂಡಿ ಎಂದು ಖಡಕ್ ಆದೇಶವನ್ನು ಯಡಿಯೂರಪ್ಪರಿಗೆ ನೀಡಿ ಕಳಿಸಿದೆ. ಇನ್ನೊಂದು ಕಡೆ ಯಡಿಯೂರಪ್ಪ ಸೂಚಿಸಿದ ಬೆಜೆಪಿ ಸಂಸದರಿಗೆ ಒಂದೂ ಸಚಿವ ಸ್ಥಾನ ನೀಡದೇ ಯಡಿಯೂರಪ್ಪರನ್ನು ಹೈಕಮಾಂಡ್ ಮೂಲೆಗೆ ತಳ್ಳಿದೆ. ಬಿಜೆಪಿಯಲ್ಲಿ ಯುಡಿಯೂರಪ್ಪ ಕತೆ ಮುಗಿದೇ ಹೋಯ್ತಾ?

ಮೋದಿಯವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರಿಗೆ ಬಂದಿಳಿದ ಯಡಿಯೂರಪ್ಪನವರ ಮುಖದಲ್ಲಿ ಈ ಮೊದಲಿದ್ದ ಯಾವ ಲವಲವಿಕೆಯೂ ಉಳಿದಿಲ್ಲ. ಮೇ 23ಕ್ಕೆ ರಾಜ್ಯ ಮೈತ್ರಿ ಸರ್ಕಾರ ಮುರಿದುಬಿದ್ದು ಬಿಜೆಪಿ ಸರ್ಕಾರ ಅಧಿಕಾರಕ್ಕೇರಲಿದೆ ಎಂದು ತುಂಬು ಹುಮ್ಮಸ್ಸಿನಲ್ಲಿ ಮಾತಾಡುತ್ತಿದ್ದ ಯಡಿಯೂರಪ್ಪನವರು ದಿಲ್ಲಿಯಿಂದ ಬರುತ್ತಿದ್ದಂತೆಯೇ “ಸದ್ಯಕ್ಕೆ ಸರ್ಕಾರದ ಪತನಕ್ಕೆ ಕೈಯಾಕಬೇಡಿ ಎಂದು ವರಿಷ್ಠರು ಸೂಚಿಸಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡದೇ ವಿರೋಧ ಪಕ್ಷದಲ್ಲಿದ್ದುಕೊಂಡು ಕೆಲಸ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ” ಎಂಬ ಅಚ್ಚರಿ ಹೇಳಿಕೆ ನೀಡಿ ಅವರ ಹಿಂಬಾಲಕರೇ ತಬ್ಬಿಬ್ಬಾಗುವಂತೆ ಮಾಡಿದ್ದಾರೆ.

ಇದಕ್ಕೆ ಅವರು ಕೊಡುತ್ತಿರುವ ಕಾರಣ, “ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವ ಸಿದ್ದರಾಮಯ್ಯ ತಮ್ಮ ಪಕ್ಷದ ನಾಲ್ಕು ಶಾಸಕರನ್ನು ಅತೃಪ್ತರಂತೆ ಮುಂದೆ ಬಿಟ್ಟು ಬಿಜೆಪಿಗೆ ಕಳುಹಿಸುವ ಹುನ್ನಾರ ನಡೆಸಿದ್ದಾರೆ. ಆದ್ದರಿಂದ ನೀವು ಸರ್ಕಾರ ಪತನದ ಯತ್ನಕ್ಕೆ ಕೈಹಾಕಬೇಡಿ ಎಂಬ ಸಲಹೆ ನೀಡಿದ್ದಾರೆ” ಎನ್ನುತ್ತಿದ್ದಾರೆ.

ಆದರೆ ದಿಲ್ಲಿಯ ಬಲ್ಲ ಮೂಲಗಳು ಹೇಳುವಂತೆ ಯಡಿಯೂರಪ್ಪನವರು ಪ್ರಮಾಣವಚನ ಕಾರ್ಯಕ್ರಮದ ನೆಪದಲ್ಲಿ ದಿಲ್ಲಿಗೆ ಬಂದಿದ್ದೇ ಎರಡು ಅಜೆಂಡಾ ಇಟ್ಟುಕೊಂಡು. ಮೊದಲನೆಯದ್ದು, ತಮ್ಮ ಬೆಂಬಲಿಗ ಸಂಸದರಿಗೆ ಮೋದಿ ಸಂಪುಟದಲ್ಲಿ ಮಂತ್ರಿ ಮಾಡಿಸುವುದು. ಎರಡನೆಯದ್ದು, ಆಪರೇಷನ್ ಕಮಲಕ್ಕೆ ಅಧಿಕೃತ ಸಮ್ಮತಿ ಪಡೆದುಕೊಂಡು ಬರುವುದು. ಆದರೆ ಇವೆರಡೂ ಈಡೇರಿಲ್ಲ ಮಾತ್ರವಲ್ಲ, ಇನ್ನುಮುಂದೆ ಬಿಜೆಪಿಯಲ್ಲಿ ನಿಮ್ಮ ಪ್ರಾಧಾನ್ಯತೆ ಸಾಕು ಎಂಬ ಸ್ಪಷ್ಟ ಸುಳಿವನ್ನೂ ಅಮಿತ್ ಶಾ ನೀಡಿ ಕಳಿಸಿದ್ದಾರೆ ಎನ್ನುತ್ತವೆ ದಿಲ್ಲಿ ಮೂಲಗಳು.

ಯಡಿಯೂರಪ್ಪನವರು, ತಮ್ಮ ಆಪ್ತರಾದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬಾಗಲಕೋಟೆಯ ಗದ್ದಿಗೌಡರ್, ಹಾವೇರಿ ಶಿವಕುಮಾರ್ ಉದಾಸಿ, ಕೊಪ್ಪಳದ ಕರಡಿ ಸಂಗಣ್ಣ ಮತ್ತು ತುಮಕೂರಿನ ಬಸವರಾಜು- ಇವರಲ್ಲಿ ಒಬ್ಬಿಬ್ಬರಿಗೆ ಸಚಿವ ಸ್ಥಾನ ಅಪೇಕ್ಷಿಸಿದ್ದರು! ಇದಕ್ಕೆ ತಣ್ಣೀರು ಎರಚಿದ ಹೈಕಮಾಂಡ್ ಯಡಿಯೂರಪ್ಪ ಬಣದಿಂದ ಹೊರಗಡೆ ಗುರುತಿಸಿಕೊಂಡಿರುವ ಪ್ರಹ್ಲಾದ್ ಜೋಷಿ, ಸದಾನಂದಗೌಡ, ಸುರೇಶ್ ಅಂಗಡಿಗೆ ಮಾತ್ರ ಸಚಿವಗಿರಿ ದಯಪಾಲಿಸಿದೆ. ರಾಜ್ಯದಿಂದ ಈ ಹೆಸರುಗಳನ್ನು ಆರೆಸ್ಸೆಸ್ ಪರವಾಗಿ ಶಿಫಾರಸ್ಸು ಮಾಡಿದ್ದೇ ಸಂತೋಷ್‍ಜೀ ಎಂಬ ಸತ್ಯ ಯಡಿಯೂರಪ್ಪನವರನ್ನು ಮತ್ತಷ್ಟು ದಿಗ್ಭ್ರಮೆ ಗೊಳಿಸಿರಲಿಕ್ಕೂ ಸಾಕು.

ಎಂಪಿ ಎಲೆಕ್ಷನ್ನಿಗೆ ಟಿಕೇಟ್ ಹಂಚಿಕೆಯಲ್ಲೂ ಯಡಿಯೂರಪ್ಪನವರ ಶಿಫಾರಸ್ಸಿಗೆ ಹೈಕಮಾಂಡ್ ಮಣೆ ಹಾಕರಲಿಲ್ಲ ಎನ್ನುವುದನ್ನು ನಾವಿಲ್ಲಿ ಸ್ಮರಿಸಿಕೊಳ್ಳಬಹುದು. ಅಲ್ಲೂ ತೇಜಸ್ವಿ ಸೂರ್ಯನಂತ ಸಂತೋಷ್‍ಜಿ ಶಿಷ್ಯರಿಗೇ ಮಣೆ ಹಾಕಲಾಗಿತ್ತು. ಶೋಭಾ ಕರಂದ್ಲಾಜೆ ಮತ್ತು ಕರಡಿ ಸಂಗಣ್ಣರಿಗೆ ಟಿಕೇಟು ತರಲು ಯಡಿಯೂರಪ್ಪ ಹರಸಾಹಸ ಪಡಬೇಕಾಗಿ ಬಂದಿತ್ತು. ಅಲ್ಲದೇ ಚಿಕ್ಕೋಡಿ ಕ್ಷೇತ್ರದಲ್ಲಿ ತಮ್ಮ ಬೆಂಬಲಿಗ ಶಾಸಕ ಉಮೇಶ ಕತ್ತಿಯ ಸಹೋದರ ರಮೇಶ ಕತ್ತಿಗೂ ಟಿಕೆಟ್ ತರುವಲ್ಲಿ ಯಡಿಯೂರಪ್ಪ ಮುಗ್ಗರಿಸಿದ್ದರು.

ಕುಂದಗೋಳ ಉಪ ಚುನಾವಣೆಯಲ್ಲೂ ಯಡಿಯೂರಪ್ಪ ಬೀಗ ಚಿಕ್ಕನಗೌಡರಿಗೆ ಟಿಕೆಟ್ ತಪ್ಪಿಸುವ ಯತ್ನ ಮಾಡಲಾಗಿತ್ತು. ಕೊನೆಗೂ ಯಡಿಯೂರಪ್ಪ ಟಿಕೆಟ್ ತಂದರಾದರೂ ಹುಬ್ಬಳ್ಳಿ-ಧಾರವಾಡದ ಬಿಜೆಪಿ ನಾಯಕರು ಚಿಕ್ಕನಗೌಡರ ಪರ ಮನಪೂರ್ವಕ ಪ್ರಚಾರ ಮಾಡದೇ ಯಡಿಯೂರಪ್ಪ ಬೀಗನಿಗೆ ಸೋಲು ತಂದಿಟ್ಟರು. ಚಿಂಚೋಳಿಯಲ್ಲಿ ತಮ್ಮ ಶಿಷ್ಯ, ತಮ್ಮ ಸಂಪುಟದಲ್ಲಿ ಸಚಿವ ಸ್ಥಾನವನ್ನೂ ನೀಡಿದ್ದ ಸುನೀಲ್ ವಲ್ಯಾಪುರೆಗೆ ಟಿಕೆಟ್ ಕೊಡಿಸುವ ಯಡಿಯೂರಪ್ಪರ ಯತ್ನಕ್ಕೆ ಹಿನ್ನಡೆ ಮಾಡಿದ ಸಂತೋಷ್‍ಜಿ ಬಣ ಅಲ್ಲಿ ವಲಸಿಗ ಉಮೇಶ ಜಾಧವರ ಮಗ ಅವಿನಾಶ ಜಾಧವ್‍ಗೆ ಟಿಕೆಟು ನೀಡಿತ್ತು.

ಗಾಯದ ಮೇಲೆ ಬರೆ ಎಂಬಂತೆ, ಈಗ ಆಪರೇಷನ್ ಕಮಲ ಮಾಡಬೇಡಿ, ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚಿಸುವ ದುಸ್ಸಾಹಸಕ್ಕೆ ಕೈ ಹಾಕಬೇಡಿ, ತೆಪ್ಪಗೆ ವಿರೋಧ ಪಕ್ಷವಾಗಿ ಕೆಲಸ ಮಾಡಿ ಎಂದು ಹೈಕಮಾಂಡ್ ಸೂಚನೆ ನೀಡಿದೆ ಎಂದು ಸ್ವತಃ ಯಡಿಯೂರಪ್ಪನವರೇ ಹೇಳಿಕೊಳ್ಳುತ್ತಿದ್ದಾರೆ. ಅಂದರೆ ಮುಖ್ಯಮಂತ್ರಿಯಾಗುವ ಯಡಿಯೂರಪ್ಪ ಕನಸಿಗೆ ಹೈಕಮಾಂಡ್ ಅಂತಿಮ ಮೊಳೆ ಹೊಡೆಯಿತೇ? ಎಂಬ ಅನುಮಾನ ಮೂಡದಿರದು.

ಲಿಂಗಾಯತ ಪ್ರಾಬಲ್ಯವಿರುವ ಉತ್ತರ ಕರ್ನಾಟಕಕ್ಕಷ್ಟೇ ಸೀಮಿತವಾಗಿದ್ದ ಬಿಜೆಪಿ ಈ ಚುನಾವಣೆಯಲ್ಲಿ ಮೋದಿ ಅಲೆಯಲ್ಲಿ ಒಕ್ಕಲಿಗ ಪ್ರಾಬಲ್ಯದ ಹಳೇ ಮೈಸೂರು ಪ್ರಾಂತ್ಯದಲ್ಲೂ ಕಾಂಗ್ರೆಸ್-ಜೆಡಿಎಸ್ ಹಿಂದಿಕ್ಕಿ ಅದ್ಭುತ ಯಶಸ್ಸು ಗಳಿಸಿರುವುದರಿಂದ ಇನ್ಮುಂದೆ ಕರ್ನಾಟಕದ ರಾಜಕಾರಣಕ್ಕೆ ಯಡಿಯೂರಪ್ಪ ತಮಗೆ ತೀರಾ ಅನಿವಾರ್ಯ ಆಗಲಾರರು ಎಂಬ ತರ್ಕಕ್ಕೆ ಬಿಜೆಪಿ ಹೈಕಮಾಂಡನ್ನು ಸಂತೋಷ್‍ಜಿ ಪಡೆ ತಂದು ನಿಲ್ಲಿಸಿದೆ ಎನ್ನುವುದು ಲೇಟೆಸ್ಟ್ ವರ್ತಮಾನ.

ಈ ಕ್ಷಣದಲ್ಲೇ ಆಪರೇಷನ್ ಕಮಲ ನಡೆಸಿ ಸರ್ಕಾರ ರಚಿಸಲು ಮುಂದಾದರೆ ಅನಿವಾರ್ಯವಾಗಿ ಯಡಿಯೂರಪ್ಪನವರನ್ನೇ ಸಿಎಂ ಮಾಡಬೇಕಾಗುತ್ತೆ. ಅದರ ಬದಲು ಅದನ್ನು ಕೊಂಚ ಮುಂದೂಡಿದರೆ, ಈಗ ಶುರುವಾಗಿರುವ ಮೋದಿ ಪರ್ವವನ್ನು ಕರ್ನಾಟಕದಲ್ಲಿ ಇನ್ನಷ್ಟೂ ಬಿಗಿಗೊಳಿಸುತ್ತಲೇ ಯಡಿಯೂರಪ್ಪನವರನ್ನು ರಾಜಕಾರಣದಲ್ಲಿ ಸಂಪೂರ್ಣ ಅಪ್ರಸ್ತುತಗೊಳಿಸಿದ ನಂತರ ತಮಗಿಷ್ಟ ಬಂದ ವ್ಯಕ್ತಿಯನ್ನು, (ಸಂತೋಷ್‍ರನ್ನು) ಸಿಎಂ ಮಾಡಬಹುದೆನ್ನುವ ಲೆಕ್ಕಾಚಾರವನ್ನು ಬಿಜೆಪಿ ಹೆಣೆದು ಕೂತಿದೆ ಎನ್ನಲಾಗುತ್ತಿದೆ. ಅಷ್ಟರೊಳಗೆ ಮೈತ್ರಿ ನಾಯಕರ ನಡುವಿನ ಕಿತ್ತಾಟ ತಾರಕಕ್ಕೇರಿ ಸರ್ಕಾರ ಬಿದ್ದರೆ, ಬಿಜೆಪಿಗೆ ಅಪಖ್ಯಾತಿಯೂ ತಟ್ಟುವುದಿಲ್ಲ ಎಂಬ ತರ್ಕ ಇಲ್ಲಿ ಕೆಲಸ ಮಾಡಿರುವ ಸಾಧ್ಯತೆಯೇ ಹೆಚ್ಚು.

ಮತ್ತೊಂದು ತರ್ಕದ ಪ್ರಕಾರ ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಬೀಳಿಸಿದ ಅಪಖ್ಯಾತಿ ಬಿಜೆಪಿ ಮೇಲೆ ಬಾರದಂತೆ, ಅದನ್ನು ಸಿದ್ದರಾಮಯ್ಯ ಮೇಲೆ ಆರೋಪಿಸಿ, ಒಳಗೊಳಗೇ ಆಪರೇಷನ್ ನಡೆಸುವ ತಂತ್ರಗಾರಿಕೆ ಭಾಗವಾಗಿ ಯಡಿಯೂರಪ್ಪನವರಿಂದ ಇಂಥಾ ಹೇಳಿಕೆ ಹೇಳಿಸಲಾಗಿದೆ ಎನ್ನಲಾಗುತ್ತಿದೆ. ಅದೇನೆ ಇರಲಿ, ದಿಲ್ಲಿಯಿಂದ ವಾಪಾಸು ಬಂದ ಯಡಿಯೂರಪ್ಪನವರ ಮುಖದಲ್ಲಿ ಮೊದಲಿದ್ದ ಹುಮ್ಮಸ್ಸು ನಾಪತ್ತೆಯಾಗಿರುವುದು ಮಾತ್ರ ಸತ್ಯ.

ಲೋಕಸಭಾ ಚುನಾವಣೆ ನಡೆದು ತಿಂಗಳೊಪ್ಪತ್ತಿನಲ್ಲೇ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ 509 ಸ್ಥಾನ ಗೆದ್ದು ಚೇತರಿಸಿಕೊಂಡಿದ್ದರೆ, 25 ಸಂಸದರನ್ನು ಗೆದ್ದುಕೊಂಡ ಖುಷಿಯಲ್ಲಿದ್ದ ಬಿಜೆಪಿ ಕೇವಲ 366 ಲೋಕಲ್ ಬಾಡಿ ಸ್ಥಾನಗಳಿಗಷ್ಟೇ ಸೀಮಿತಗೊಂಡು ಆಘಾತಕ್ಕೆ ತುತ್ತಾಗಿರೋದು ಕೂಡಾ ಯಡಿಯೂರಪ್ಪನವರ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಲಕ್ಷಣವಲ್ಲ ಎನ್ನಲಾಗುತ್ತಿದೆ.

ಇದನ್ನು ಓದಿ: ಲಿಂಗಾಯಿತರಿಗೆ ಬಿಜೆಪಿ ಕೊಟ್ಟಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...