Homeಕರ್ನಾಟಕಆಪರೇಷನ್ ಕಮಲಕ್ಕೆ ಬ್ರೇಕ್: ಯಡಿಯೂರಪ್ಪನವರ ಈ ಮಾತಿನ ಹಿಂದಿರುವ ಮರ್ಮವೇನು?

ಆಪರೇಷನ್ ಕಮಲಕ್ಕೆ ಬ್ರೇಕ್: ಯಡಿಯೂರಪ್ಪನವರ ಈ ಮಾತಿನ ಹಿಂದಿರುವ ಮರ್ಮವೇನು?

ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಬೀಳಿಸಿದ ಅಪಖ್ಯಾತಿ ಬಿಜೆಪಿ ಮೇಲೆ ಬಾರದಂತೆ, ಅದನ್ನು ಸಿದ್ದರಾಮಯ್ಯ ಮೇಲೆ ಆರೋಪಿಸಿ, ಒಳಗೊಳಗೇ ಆಪರೇಷನ್ ನಡೆಸುವ ತಂತ್ರಗಾರಿಕೆ ಭಾಗವಾಗಿ ಯಡಿಯೂರಪ್ಪನವರಿಂದ ಇಂಥಾ ಹೇಳಿಕೆ ಹೇಳಿಸಲಾಗಿದೆ ಎನ್ನಲಾಗುತ್ತಿದೆ.

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ದೆಹಲಿಯಿಂದ ಮರಳಿದ ಯಡಿಯೂರಪ್ಪ ತುಂಬಾ ನಿರಾಶೆಯಲ್ಲಿದ್ದಾರೆ. ಪ್ರಚಂಡ ಜಯದಿಂದ ಯಾರ ಮಾತನ್ನೂ ಕೇಳಿಸಿಕೊಳ್ಳದ ಸ್ಥಿತಿಯಲ್ಲಿರುವ `ಮೋದಿ-ಶಾ’ ಹೈಕಮಾಂಡ್ ಸದ್ಯಕ್ಕೆ ಯಾವ ಆಪರೇಷನ್ನೂ ಮಾಡಬೇಡಿ, ಸುಮ್ಮನೇ ವಿರೋಧ ಪಕ್ಷದಲ್ಲಿ ಕೂಡಿ ಎಂದು ಖಡಕ್ ಆದೇಶವನ್ನು ಯಡಿಯೂರಪ್ಪರಿಗೆ ನೀಡಿ ಕಳಿಸಿದೆ. ಇನ್ನೊಂದು ಕಡೆ ಯಡಿಯೂರಪ್ಪ ಸೂಚಿಸಿದ ಬೆಜೆಪಿ ಸಂಸದರಿಗೆ ಒಂದೂ ಸಚಿವ ಸ್ಥಾನ ನೀಡದೇ ಯಡಿಯೂರಪ್ಪರನ್ನು ಹೈಕಮಾಂಡ್ ಮೂಲೆಗೆ ತಳ್ಳಿದೆ. ಬಿಜೆಪಿಯಲ್ಲಿ ಯುಡಿಯೂರಪ್ಪ ಕತೆ ಮುಗಿದೇ ಹೋಯ್ತಾ?

ಮೋದಿಯವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರಿಗೆ ಬಂದಿಳಿದ ಯಡಿಯೂರಪ್ಪನವರ ಮುಖದಲ್ಲಿ ಈ ಮೊದಲಿದ್ದ ಯಾವ ಲವಲವಿಕೆಯೂ ಉಳಿದಿಲ್ಲ. ಮೇ 23ಕ್ಕೆ ರಾಜ್ಯ ಮೈತ್ರಿ ಸರ್ಕಾರ ಮುರಿದುಬಿದ್ದು ಬಿಜೆಪಿ ಸರ್ಕಾರ ಅಧಿಕಾರಕ್ಕೇರಲಿದೆ ಎಂದು ತುಂಬು ಹುಮ್ಮಸ್ಸಿನಲ್ಲಿ ಮಾತಾಡುತ್ತಿದ್ದ ಯಡಿಯೂರಪ್ಪನವರು ದಿಲ್ಲಿಯಿಂದ ಬರುತ್ತಿದ್ದಂತೆಯೇ “ಸದ್ಯಕ್ಕೆ ಸರ್ಕಾರದ ಪತನಕ್ಕೆ ಕೈಯಾಕಬೇಡಿ ಎಂದು ವರಿಷ್ಠರು ಸೂಚಿಸಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡದೇ ವಿರೋಧ ಪಕ್ಷದಲ್ಲಿದ್ದುಕೊಂಡು ಕೆಲಸ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ” ಎಂಬ ಅಚ್ಚರಿ ಹೇಳಿಕೆ ನೀಡಿ ಅವರ ಹಿಂಬಾಲಕರೇ ತಬ್ಬಿಬ್ಬಾಗುವಂತೆ ಮಾಡಿದ್ದಾರೆ.

ಇದಕ್ಕೆ ಅವರು ಕೊಡುತ್ತಿರುವ ಕಾರಣ, “ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವ ಸಿದ್ದರಾಮಯ್ಯ ತಮ್ಮ ಪಕ್ಷದ ನಾಲ್ಕು ಶಾಸಕರನ್ನು ಅತೃಪ್ತರಂತೆ ಮುಂದೆ ಬಿಟ್ಟು ಬಿಜೆಪಿಗೆ ಕಳುಹಿಸುವ ಹುನ್ನಾರ ನಡೆಸಿದ್ದಾರೆ. ಆದ್ದರಿಂದ ನೀವು ಸರ್ಕಾರ ಪತನದ ಯತ್ನಕ್ಕೆ ಕೈಹಾಕಬೇಡಿ ಎಂಬ ಸಲಹೆ ನೀಡಿದ್ದಾರೆ” ಎನ್ನುತ್ತಿದ್ದಾರೆ.

ಆದರೆ ದಿಲ್ಲಿಯ ಬಲ್ಲ ಮೂಲಗಳು ಹೇಳುವಂತೆ ಯಡಿಯೂರಪ್ಪನವರು ಪ್ರಮಾಣವಚನ ಕಾರ್ಯಕ್ರಮದ ನೆಪದಲ್ಲಿ ದಿಲ್ಲಿಗೆ ಬಂದಿದ್ದೇ ಎರಡು ಅಜೆಂಡಾ ಇಟ್ಟುಕೊಂಡು. ಮೊದಲನೆಯದ್ದು, ತಮ್ಮ ಬೆಂಬಲಿಗ ಸಂಸದರಿಗೆ ಮೋದಿ ಸಂಪುಟದಲ್ಲಿ ಮಂತ್ರಿ ಮಾಡಿಸುವುದು. ಎರಡನೆಯದ್ದು, ಆಪರೇಷನ್ ಕಮಲಕ್ಕೆ ಅಧಿಕೃತ ಸಮ್ಮತಿ ಪಡೆದುಕೊಂಡು ಬರುವುದು. ಆದರೆ ಇವೆರಡೂ ಈಡೇರಿಲ್ಲ ಮಾತ್ರವಲ್ಲ, ಇನ್ನುಮುಂದೆ ಬಿಜೆಪಿಯಲ್ಲಿ ನಿಮ್ಮ ಪ್ರಾಧಾನ್ಯತೆ ಸಾಕು ಎಂಬ ಸ್ಪಷ್ಟ ಸುಳಿವನ್ನೂ ಅಮಿತ್ ಶಾ ನೀಡಿ ಕಳಿಸಿದ್ದಾರೆ ಎನ್ನುತ್ತವೆ ದಿಲ್ಲಿ ಮೂಲಗಳು.

ಯಡಿಯೂರಪ್ಪನವರು, ತಮ್ಮ ಆಪ್ತರಾದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬಾಗಲಕೋಟೆಯ ಗದ್ದಿಗೌಡರ್, ಹಾವೇರಿ ಶಿವಕುಮಾರ್ ಉದಾಸಿ, ಕೊಪ್ಪಳದ ಕರಡಿ ಸಂಗಣ್ಣ ಮತ್ತು ತುಮಕೂರಿನ ಬಸವರಾಜು- ಇವರಲ್ಲಿ ಒಬ್ಬಿಬ್ಬರಿಗೆ ಸಚಿವ ಸ್ಥಾನ ಅಪೇಕ್ಷಿಸಿದ್ದರು! ಇದಕ್ಕೆ ತಣ್ಣೀರು ಎರಚಿದ ಹೈಕಮಾಂಡ್ ಯಡಿಯೂರಪ್ಪ ಬಣದಿಂದ ಹೊರಗಡೆ ಗುರುತಿಸಿಕೊಂಡಿರುವ ಪ್ರಹ್ಲಾದ್ ಜೋಷಿ, ಸದಾನಂದಗೌಡ, ಸುರೇಶ್ ಅಂಗಡಿಗೆ ಮಾತ್ರ ಸಚಿವಗಿರಿ ದಯಪಾಲಿಸಿದೆ. ರಾಜ್ಯದಿಂದ ಈ ಹೆಸರುಗಳನ್ನು ಆರೆಸ್ಸೆಸ್ ಪರವಾಗಿ ಶಿಫಾರಸ್ಸು ಮಾಡಿದ್ದೇ ಸಂತೋಷ್‍ಜೀ ಎಂಬ ಸತ್ಯ ಯಡಿಯೂರಪ್ಪನವರನ್ನು ಮತ್ತಷ್ಟು ದಿಗ್ಭ್ರಮೆ ಗೊಳಿಸಿರಲಿಕ್ಕೂ ಸಾಕು.

ಎಂಪಿ ಎಲೆಕ್ಷನ್ನಿಗೆ ಟಿಕೇಟ್ ಹಂಚಿಕೆಯಲ್ಲೂ ಯಡಿಯೂರಪ್ಪನವರ ಶಿಫಾರಸ್ಸಿಗೆ ಹೈಕಮಾಂಡ್ ಮಣೆ ಹಾಕರಲಿಲ್ಲ ಎನ್ನುವುದನ್ನು ನಾವಿಲ್ಲಿ ಸ್ಮರಿಸಿಕೊಳ್ಳಬಹುದು. ಅಲ್ಲೂ ತೇಜಸ್ವಿ ಸೂರ್ಯನಂತ ಸಂತೋಷ್‍ಜಿ ಶಿಷ್ಯರಿಗೇ ಮಣೆ ಹಾಕಲಾಗಿತ್ತು. ಶೋಭಾ ಕರಂದ್ಲಾಜೆ ಮತ್ತು ಕರಡಿ ಸಂಗಣ್ಣರಿಗೆ ಟಿಕೇಟು ತರಲು ಯಡಿಯೂರಪ್ಪ ಹರಸಾಹಸ ಪಡಬೇಕಾಗಿ ಬಂದಿತ್ತು. ಅಲ್ಲದೇ ಚಿಕ್ಕೋಡಿ ಕ್ಷೇತ್ರದಲ್ಲಿ ತಮ್ಮ ಬೆಂಬಲಿಗ ಶಾಸಕ ಉಮೇಶ ಕತ್ತಿಯ ಸಹೋದರ ರಮೇಶ ಕತ್ತಿಗೂ ಟಿಕೆಟ್ ತರುವಲ್ಲಿ ಯಡಿಯೂರಪ್ಪ ಮುಗ್ಗರಿಸಿದ್ದರು.

ಕುಂದಗೋಳ ಉಪ ಚುನಾವಣೆಯಲ್ಲೂ ಯಡಿಯೂರಪ್ಪ ಬೀಗ ಚಿಕ್ಕನಗೌಡರಿಗೆ ಟಿಕೆಟ್ ತಪ್ಪಿಸುವ ಯತ್ನ ಮಾಡಲಾಗಿತ್ತು. ಕೊನೆಗೂ ಯಡಿಯೂರಪ್ಪ ಟಿಕೆಟ್ ತಂದರಾದರೂ ಹುಬ್ಬಳ್ಳಿ-ಧಾರವಾಡದ ಬಿಜೆಪಿ ನಾಯಕರು ಚಿಕ್ಕನಗೌಡರ ಪರ ಮನಪೂರ್ವಕ ಪ್ರಚಾರ ಮಾಡದೇ ಯಡಿಯೂರಪ್ಪ ಬೀಗನಿಗೆ ಸೋಲು ತಂದಿಟ್ಟರು. ಚಿಂಚೋಳಿಯಲ್ಲಿ ತಮ್ಮ ಶಿಷ್ಯ, ತಮ್ಮ ಸಂಪುಟದಲ್ಲಿ ಸಚಿವ ಸ್ಥಾನವನ್ನೂ ನೀಡಿದ್ದ ಸುನೀಲ್ ವಲ್ಯಾಪುರೆಗೆ ಟಿಕೆಟ್ ಕೊಡಿಸುವ ಯಡಿಯೂರಪ್ಪರ ಯತ್ನಕ್ಕೆ ಹಿನ್ನಡೆ ಮಾಡಿದ ಸಂತೋಷ್‍ಜಿ ಬಣ ಅಲ್ಲಿ ವಲಸಿಗ ಉಮೇಶ ಜಾಧವರ ಮಗ ಅವಿನಾಶ ಜಾಧವ್‍ಗೆ ಟಿಕೆಟು ನೀಡಿತ್ತು.

ಗಾಯದ ಮೇಲೆ ಬರೆ ಎಂಬಂತೆ, ಈಗ ಆಪರೇಷನ್ ಕಮಲ ಮಾಡಬೇಡಿ, ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚಿಸುವ ದುಸ್ಸಾಹಸಕ್ಕೆ ಕೈ ಹಾಕಬೇಡಿ, ತೆಪ್ಪಗೆ ವಿರೋಧ ಪಕ್ಷವಾಗಿ ಕೆಲಸ ಮಾಡಿ ಎಂದು ಹೈಕಮಾಂಡ್ ಸೂಚನೆ ನೀಡಿದೆ ಎಂದು ಸ್ವತಃ ಯಡಿಯೂರಪ್ಪನವರೇ ಹೇಳಿಕೊಳ್ಳುತ್ತಿದ್ದಾರೆ. ಅಂದರೆ ಮುಖ್ಯಮಂತ್ರಿಯಾಗುವ ಯಡಿಯೂರಪ್ಪ ಕನಸಿಗೆ ಹೈಕಮಾಂಡ್ ಅಂತಿಮ ಮೊಳೆ ಹೊಡೆಯಿತೇ? ಎಂಬ ಅನುಮಾನ ಮೂಡದಿರದು.

ಲಿಂಗಾಯತ ಪ್ರಾಬಲ್ಯವಿರುವ ಉತ್ತರ ಕರ್ನಾಟಕಕ್ಕಷ್ಟೇ ಸೀಮಿತವಾಗಿದ್ದ ಬಿಜೆಪಿ ಈ ಚುನಾವಣೆಯಲ್ಲಿ ಮೋದಿ ಅಲೆಯಲ್ಲಿ ಒಕ್ಕಲಿಗ ಪ್ರಾಬಲ್ಯದ ಹಳೇ ಮೈಸೂರು ಪ್ರಾಂತ್ಯದಲ್ಲೂ ಕಾಂಗ್ರೆಸ್-ಜೆಡಿಎಸ್ ಹಿಂದಿಕ್ಕಿ ಅದ್ಭುತ ಯಶಸ್ಸು ಗಳಿಸಿರುವುದರಿಂದ ಇನ್ಮುಂದೆ ಕರ್ನಾಟಕದ ರಾಜಕಾರಣಕ್ಕೆ ಯಡಿಯೂರಪ್ಪ ತಮಗೆ ತೀರಾ ಅನಿವಾರ್ಯ ಆಗಲಾರರು ಎಂಬ ತರ್ಕಕ್ಕೆ ಬಿಜೆಪಿ ಹೈಕಮಾಂಡನ್ನು ಸಂತೋಷ್‍ಜಿ ಪಡೆ ತಂದು ನಿಲ್ಲಿಸಿದೆ ಎನ್ನುವುದು ಲೇಟೆಸ್ಟ್ ವರ್ತಮಾನ.

ಈ ಕ್ಷಣದಲ್ಲೇ ಆಪರೇಷನ್ ಕಮಲ ನಡೆಸಿ ಸರ್ಕಾರ ರಚಿಸಲು ಮುಂದಾದರೆ ಅನಿವಾರ್ಯವಾಗಿ ಯಡಿಯೂರಪ್ಪನವರನ್ನೇ ಸಿಎಂ ಮಾಡಬೇಕಾಗುತ್ತೆ. ಅದರ ಬದಲು ಅದನ್ನು ಕೊಂಚ ಮುಂದೂಡಿದರೆ, ಈಗ ಶುರುವಾಗಿರುವ ಮೋದಿ ಪರ್ವವನ್ನು ಕರ್ನಾಟಕದಲ್ಲಿ ಇನ್ನಷ್ಟೂ ಬಿಗಿಗೊಳಿಸುತ್ತಲೇ ಯಡಿಯೂರಪ್ಪನವರನ್ನು ರಾಜಕಾರಣದಲ್ಲಿ ಸಂಪೂರ್ಣ ಅಪ್ರಸ್ತುತಗೊಳಿಸಿದ ನಂತರ ತಮಗಿಷ್ಟ ಬಂದ ವ್ಯಕ್ತಿಯನ್ನು, (ಸಂತೋಷ್‍ರನ್ನು) ಸಿಎಂ ಮಾಡಬಹುದೆನ್ನುವ ಲೆಕ್ಕಾಚಾರವನ್ನು ಬಿಜೆಪಿ ಹೆಣೆದು ಕೂತಿದೆ ಎನ್ನಲಾಗುತ್ತಿದೆ. ಅಷ್ಟರೊಳಗೆ ಮೈತ್ರಿ ನಾಯಕರ ನಡುವಿನ ಕಿತ್ತಾಟ ತಾರಕಕ್ಕೇರಿ ಸರ್ಕಾರ ಬಿದ್ದರೆ, ಬಿಜೆಪಿಗೆ ಅಪಖ್ಯಾತಿಯೂ ತಟ್ಟುವುದಿಲ್ಲ ಎಂಬ ತರ್ಕ ಇಲ್ಲಿ ಕೆಲಸ ಮಾಡಿರುವ ಸಾಧ್ಯತೆಯೇ ಹೆಚ್ಚು.

ಮತ್ತೊಂದು ತರ್ಕದ ಪ್ರಕಾರ ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಬೀಳಿಸಿದ ಅಪಖ್ಯಾತಿ ಬಿಜೆಪಿ ಮೇಲೆ ಬಾರದಂತೆ, ಅದನ್ನು ಸಿದ್ದರಾಮಯ್ಯ ಮೇಲೆ ಆರೋಪಿಸಿ, ಒಳಗೊಳಗೇ ಆಪರೇಷನ್ ನಡೆಸುವ ತಂತ್ರಗಾರಿಕೆ ಭಾಗವಾಗಿ ಯಡಿಯೂರಪ್ಪನವರಿಂದ ಇಂಥಾ ಹೇಳಿಕೆ ಹೇಳಿಸಲಾಗಿದೆ ಎನ್ನಲಾಗುತ್ತಿದೆ. ಅದೇನೆ ಇರಲಿ, ದಿಲ್ಲಿಯಿಂದ ವಾಪಾಸು ಬಂದ ಯಡಿಯೂರಪ್ಪನವರ ಮುಖದಲ್ಲಿ ಮೊದಲಿದ್ದ ಹುಮ್ಮಸ್ಸು ನಾಪತ್ತೆಯಾಗಿರುವುದು ಮಾತ್ರ ಸತ್ಯ.

ಲೋಕಸಭಾ ಚುನಾವಣೆ ನಡೆದು ತಿಂಗಳೊಪ್ಪತ್ತಿನಲ್ಲೇ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ 509 ಸ್ಥಾನ ಗೆದ್ದು ಚೇತರಿಸಿಕೊಂಡಿದ್ದರೆ, 25 ಸಂಸದರನ್ನು ಗೆದ್ದುಕೊಂಡ ಖುಷಿಯಲ್ಲಿದ್ದ ಬಿಜೆಪಿ ಕೇವಲ 366 ಲೋಕಲ್ ಬಾಡಿ ಸ್ಥಾನಗಳಿಗಷ್ಟೇ ಸೀಮಿತಗೊಂಡು ಆಘಾತಕ್ಕೆ ತುತ್ತಾಗಿರೋದು ಕೂಡಾ ಯಡಿಯೂರಪ್ಪನವರ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಲಕ್ಷಣವಲ್ಲ ಎನ್ನಲಾಗುತ್ತಿದೆ.

ಇದನ್ನು ಓದಿ: ಲಿಂಗಾಯಿತರಿಗೆ ಬಿಜೆಪಿ ಕೊಟ್ಟಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...