Homeಕರ್ನಾಟಕಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಡಾ.ಶ್ರೀನಿವಾಸ ಕಕ್ಕಿಲ್ಲಾಯ ಹಾಗೂ ಡಾ.ಎಚ್‌.ವಿ.ವಾಸು ಅವರು ಮೊಟ್ಟೆಯ ಅಗತ್ಯತೆಯನ್ನು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಕೋಳಿ ಮೊಟ್ಟೆ ಕೊಡುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಬೀದರ್‌ ನಗರದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ, ಅಕ್ಕನಾಗಲಾಂಬಿಕಾ ಮಹಿಳಾ ಗಣ ಹಾಗೂ ಲಿಂಗಾಯತ ಸಮಾಜದ ಆಶ್ರಯದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಪ್ರತಿಭಟನೆಯಲ್ಲಿ ಮಾತನಾಡಿರುವ ಬಸವ ಮಂಟಪದ ಪ್ರಧಾನ ಸಂಚಾಲಕರಾದ ಮಾತೆ ಸತ್ಯಾದೇವಿ, “ಅನುದಾನಿತ ಮತ್ತು ಸರ್ಕಾರಿ ಶಾಲೆಗಳ 1 ರಿಂದ 8ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಕೋಳಿಮೊಟ್ಟೆ ಕೊಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಮೊಟ್ಟೆ ಮಾಂಸಾಹಾರ, ಇದರಿಂದ ಮಕ್ಕಳ ಮಾನಸಿಕತೆ ಮೇಲೆ ದುಷ್ಪರಿಣಾಮ ಬೀರಲಿದೆ. ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸುವ ಕಳಕಳಿ ಇದ್ದಲ್ಲಿ ಹಣ್ಣು, ದ್ವಿದಳ ಧಾನ್ಯಗಳು ಮತ್ತು ಮೊಳಕೆ ಕಾಳು ಕೊಡುವ ವ್ಯವಸ್ಥೆ ಮಾಡಲಿ” ಎಂದು ಸಲಹೆ ನೀಡಿದ್ದಾರೆ.

“ಶಾಲೆಯಲ್ಲಿ ಮುಗ್ಧ ಮಕ್ಕಳಿಗೆ ಕೋಳಿಮೊಟ್ಟೆ ನೀಡಿದರೆ ಉದ್ದೇಶಪೂರ್ವಕವಾಗಿ ಮಾಂಸಾಹಾರಕ್ಕೆ ಪ್ರಚೋದನೆ ನೀಡಿದಂತಾಗುತ್ತದೆ. ಮೊಟ್ಟೆ ತಿನ್ನುವ ಮಕ್ಕಳು ಮತ್ತು ತಿನ್ನದ ಮಕ್ಕಳೆಂದು ಶಾಲೆಯಲ್ಲಿ ನೀವೇ ಭೇದಭಾವ ಮೂಡಿಸಿದಂತಾಗುತ್ತದೆ. ಜೈನ ಮತ್ತು ಲಿಂಗಾಯತ ಧರ್ಮದ ಪ್ರಕಾರ ಮೊಟ್ಟೆ ಮಾಂಸಾಹಾರ ಪದ್ಧತಿಯಾಗಿದೆ. ಇದರಿಂದ ಸಸ್ಯಾಹಾರಿ ಪದ್ಧತಿ ಅಳವಡಿಸಿಕೊಂಡವರಿಗೆ ಇದು ಅವಮಾನ ಮಾಡಿದಂತಾಗುತ್ತದೆ. ಆದ್ದರಿಂದ ಸರ್ಕಾರ ಕೂಡಲೇ ಈ ನಿರ್ಣಯವನ್ನು ಹಿಂಪಡೆಯಬೇಕು” ಎಂದು ಮಾತಾಜಿ ಆಗ್ರಹಿಸಿದ್ದಾರೆ.

ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಬಾರದು ಎಂದು ಆಗ್ರಹಿಸುತ್ತಿರುವುದು ವಿಜ್ಞಾನಕ್ಕೆ ವಿರುದ್ಧವಾದದ್ದು ಎನ್ನುತ್ತಾರೆ ವೈದ್ಯರು. ಮಕ್ಕಳಿಗೆ ಮೊಟ್ಟೆ ಅಗತ್ಯ ಎಂದು ಜನಪರ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಹಾಗೂ ಎಚ್‌.ವಿ.ವಾಸು ಅವರು ತಮ್ಮ ಅಭಿಪ್ರಾಯಗಳನ್ನು ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡಿದ್ದಾರೆ.

ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅವರ ಅಭಿಪ್ರಾಯ

2008ನೇ ಇಸವಿಯಿಂದ ನಾನು ಮತ್ತು ನರೇಂದ್ರ ನಾಯಕ್‌ ಅಂಥವರೆಲ್ಲ ಸೇರಿ ಶಾಲಾ ಮಕ್ಕಳಿಗೆ ಮೊಟ್ಟೆಯನ್ನು ಕೊಡಬೇಕೆಂದು ಬೇಡಿಕೆ ಇಡಲಾರಂಭಿಸಿದೆವು. ಅಂದು ಎಚ್‌.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು. ಆಗಿನಿಂದಲೂ ಮೊಟ್ಟೆ ಕೊಡುವುದಕ್ಕೆ ವಿರೋಧ ನಡೆಯುತ್ತಲೇ ಇದೆ. ಅಂದೇ ಕೇಂದ್ರ ಸರ್ಕಾರ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ಕೊಡಲು ಹಣ ನೀಡಲು ಶುರುಮಾಡಿತು. ಅಲ್ಲಿಗೆ ಹದಿಮೂರು ವರ್ಷಗಳಾಯಿತು. ಅಂದಿನಿಂದಲೇ ಈ ಸ್ವಾಮೀಜಿಗಳು ಸಮಸ್ಯೆಯನ್ನು ಉಂಟುಮಾಡಲು ಆರಂಭಿಸಿದರು.

ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಐದು ದಿನ ಮೊಟ್ಟೆಗಳನ್ನು ನೀಡುತ್ತಿದ್ದಾರೆ. ಈ ರಾಜ್ಯಗಳಲ್ಲಿ ಮಕ್ಕಳ ಕುಪೋಷಣೆ ಇಡೀ ದೇಶದಲ್ಲೇ ಕನಿಷ್ಠ ಮಟ್ಟದಲ್ಲಿದೆ. ಮಕ್ಕಳಲ್ಲಿ ಕುಪೋಷಣೆ ಇಲ್ಲವೇ ಇಲ್ಲ ಅನ್ನುವ ಮಟ್ಟಕ್ಕೆ ಈ ರಾಜ್ಯಗಳು ಯಶಸ್ಸು ಪಡೆದಿವೆ. ಕರ್ನಾಟಕ ರಾಜ್ಯದಲ್ಲಿ ಮೊಟ್ಟೆ ಪ್ರಸ್ತಾಪ 2007- 2008ರಲ್ಲಿ ಬಂದಾಗಿನಿಂದಲೂ ಈ ಸ್ವಾಮೀಜಿಗಳು ಸಮಸ್ಯೆ ಮಾಡುತ್ತಲೇ ಇದ್ದಾರೆ. ಕರ್ನಾಟಕದಲ್ಲಿ ಮಕ್ಕಳ ಅಪೌಷ್ಟಿಕತೆ ಶೇ. 37ರಷ್ಟಿದೆ. ಹಿಂದುಳಿದ ಜಿಲ್ಲೆಗಳಲ್ಲಿ ಕುಪೋಷಣೆಯ ಪ್ರಮಾಣ ಇನ್ನೂ ಹೆಚ್ಚಿದೆ.


ಇದನ್ನೂ ಓದಿರಿ: ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ


ಹಿಂದುಳಿದ ಜಿಲ್ಲೆಗಳಲ್ಲಿ ಮೊಟ್ಟೆಯನ್ನು ಸರ್ಕಾರ ಕೊಡಬೇಕೆಂದು ನಿರ್ಧರಿಸಿದ್ದು ವೈಜ್ಞಾನಿಕ ಕಾರಣದಿಂದ. ಮಕ್ಕಳಲ್ಲಿ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆ ಕುಂಠಿತವಾಗಿದೆ. ಈ ಕಾರಣದಿಂದಾಗಿ ಮೊಟ್ಟೆ ಕೊಡಬೇಕೆಂದು ಸರ್ಕಾರ ವೈಜ್ಞಾನಿಕ ಆಧಾರದಲ್ಲಿ, ತಜ್ಞರ ಶಿಫಾರಸ್ಸಿನಂತೆ ಕ್ರಮ ಕೈಗೊಡಿದೆ. ಮೊಟ್ಟೆಗಳನ್ನು ಕೊಡುವುದು ಜನರು ಕಟ್ಟುತ್ತಿರುವ ತೆರಿಗೆ ಹಣದಲ್ಲೇ ಹೊರತು ಸ್ವಾಮೀಜಿಯ ಹಣದಲ್ಲಿ ಅಲ್ಲ. ಸುಪ್ರಿಂಕೋರ್ಟ್ ಆದೇಶದ ಅನ್ವಯ ಮಧ್ಯಾಹ್ನದ ಬಿಸಿಯೂಟವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೇರಿಕೊಂಡು ಎಲ್ಲ ರಾಜ್ಯಗಳಲ್ಲಿ ನೀಡುತ್ತಿವೆ.

ಈ ಹದಿಮೂರು ವರ್ಷಗಳಲ್ಲಿ ವೈದ್ಯರು, ವೈಜ್ಞಾನಿಕ ಕಾರ್ಯಕರ್ತರು ಈ ರಾಜ್ಯದ ಮಕ್ಕಳ ಹಿತಾಸಕ್ತಿಯನ್ನು ಕಾಪಾಡಲು ಒತ್ತಡ ಹಾಕಿರುವುದಕ್ಕೆ ಬೆಲೆಯೇ ಇಲ್ಲವಾ? ಈ ಮೂರ್ನಾಲ್ಕು ಸ್ವಾಮೀಜಿಗಳು ಹೇಳಿದ್ದಕ್ಕಷ್ಟೇ ಬೆಲೆ ಎನ್ನುವುದಕ್ಕೆ ಅರ್ಥವೇನಿದೆ? ಮಕ್ಕಳಿಗೆ ನೀಡುವ ಮೊಟ್ಟೆಗೆ ಪರ್ಯಾಯವಿಲ್ಲ. ಯಾವುದೇ ಸಸ್ಯಾಹಾರವು, ಮಾಂಸಾಹಾರಕ್ಕೆ ಪರ್ಯಾಯ ಅಲ್ಲವೇ ಅಲ್ಲ. ಯಾವುದೇ ಸಸ್ಯಾಹಾರದಲ್ಲಿ ಮಕ್ಕಳಿಗೆ ಬೇಕಾದಷ್ಟು ಪ್ರೋಟೀನ್ ಸಿಗುವುದಿಲ್ಲ. ಈ ರಾಜ್ಯದಲ್ಲಿ ಶೇ. 80ರಿಂದ 88ರಷ್ಟು ಜನರು ಮಾಂಸಾಹಾರ ತಿನ್ನುವವರು. ಶೇ. 12ರಿಂದ 20ರಷ್ಟು ಜನರು ಮನೆಯಲ್ಲಿ ಸಸ್ಯಾಹಾರಿಗಳು. ಇವರ ಮಕ್ಕಳಿಗೆ ಮೊಟ್ಟೆಯನ್ನು ಕೊಡಬೇಡಿ.

ಮದನ್‌ ಮೋಹನ್‌ ಅವರು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದಾಗ ಇದೇ ರಾಜ್ಯ ಸರ್ಕಾರ ಸರ್ವೇ ಮಾಡಿತ್ತು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗಲೇ ಮಾಡಿದ್ದ ಸರ್ವೇ ಅದು. ಶೇ. 95ರಷ್ಟು ಮಕ್ಕಳು ನಮಗೆ ಹಾಲು ಬೇಡ, ಮೊಟ್ಟೆ ಬೇಕು ಎಂದು ಹೇಳಿದರು. ವಿಜ್ಞಾನಿಗಳು, ವೈದ್ಯರು, ಪ್ರಜ್ಞಾವಂತರು, ಸ್ವತಃ ಮಕ್ಕಳೇ ತಮಗೆ ಮೊಟ್ಟೆ ಬೇಕು ಎಂದು ಹೇಳಿರುವಾಗ, ಐದು ದಿನಗಳು ಮೊಟ್ಟೆ ನೀಡಲು ಬೇಕಾದಷ್ಟು ಹಣವನ್ನು ಕೇಂದ್ರ ಸರ್ಕಾರ ನೀಡುವಾಗ ಇವರ್‍ಯಾರು ನಾಲ್ಕು ಜನ ಮೊಟ್ಟೆ ಬೇಡ ಎನ್ನುವವರು? ಈ ಹದಿಮೂರು ವರ್ಷಗಳಿಂದ ಇವರ ಬುದ್ಧಿ ಸರಿ ಇರಲಿಲ್ಲವಾ?

“ಬೇಡ ಎನ್ನುವವರ ಮಕ್ಕಳಿಗೆ ಮೊಟ್ಟೆ ಕೊಡಬೇಡಿ, ನಮ್ಮ ಮಕ್ಕಳಿಗೆ ಕೊಡಿ” ಎಂದು ಪೋಷಕರು ಸರ್ಕಾರದ ಮೇಲೆ ಒತ್ತಡ ಹಾಕಬೇಕಿದೆ. ತಮ್ಮ ಮಕ್ಕಳಿಗೆ ಮೊಟ್ಟೆ ಬೇಡ ಎನ್ನವವವರಿಗೆ ಕೊಡುವುದು ಬೇಡ ಬಿಡಿ. ಬೇಕಿದ್ದವರಿಗೆ ಕೊಡಬಹುದಲ್ಲ! ಅದಕ್ಕೆ ಅಡ್ಡಿ ಬರುವುದಕ್ಕೆ ಇವರಿಗೆ ಅಧಿಕಾರ ಕೊಟ್ಟಿವವರು ಯಾರು?

***

ಡಾ.ಎಚ್‌.ವಿ.ವಾಸು ಅವರ ಅಭಿಪ್ರಾಯ

ಹಸಿವು ಮತ್ತು ಅಪೌಷ್ಟಿಕತೆ ನಮ್ಮ ದೇಶದಲ್ಲಿ ಇಂದಿಗೂ ಮುಂದುವರೆಯುತ್ತಿರುವುದು ಆರ್ಥಿಕ ದಾರಿದ್ರ್ಯದಿಂದ ಅಲ್ಲ. ಬೌದ್ಧಿಕ ಮತ್ತು ಸಾಂಸ್ಕೃತಿಕ ದಾರಿದ್ರ್ಯದಿಂದ ಮತ್ತು ಹುನ್ನಾರಗಳ ಕಾರಣದಿಂದ.

ಕೋಟಿಗಟ್ಟಲೆ ಮಕ್ಕಳು ಕ್ಯಾಲೊರಿ ಅಪೌಷ್ಟಿಕತೆಯಿಂದ ಬಾಧಿತರಾಗಿದ್ದರೆ, ಕೋಟಿ ಕೋಟಿ ಜನರು ಅತಿ ಹೆಚ್ಚು ಶರ್ಕರಪಿಷ್ಟವನ್ನು ಮಾತ್ರ ತಿಂದು ಪ್ರೋಟೀನ್ ಹಾಗೂ ಇನ್ನಿತರ ಪೌಷ್ಟಿಕಾಂಶಗಳ ಕೊರತೆಯಿಂದ ಬಳಲುತ್ತಿದ್ದಾರೆ. ಬಡವರೂ ಡಯಾಬಿಟಿಕ್ ಆಗುವುದು ನಮ್ಮ ದೇಶದಲ್ಲಿ ಮಾತ್ರ ಎನಿಸುತ್ತದೆ.

ಹಸಿರು ಕ್ರಾಂತಿಯ ನಂತರ ಹೆಚ್ಚೆಚ್ಚು ಶರ್ಕರಪಿಷ್ಟವಿರುವ ಏಕದಳ ಬೆಳೆಗಳಿಗೆ ಮಾತ್ರ ಹೆಚ್ಚಿನ ಪ್ರೋತ್ಸಾಹ ದೊರೆಯಿತು, ಬೆಂಬಲ ಬೆಲೆಯೂ ಅದಕ್ಕೇ ಸಿಗುತ್ತದೆ, ಸಾರ್ವಜನಿಕ ಆಹಾರ ವ್ಯವಸ್ಥೆ (ರೇಷನ್ ಅಂಗಡಿ)ಯಲ್ಲೂ ಅವೇ ದೊರೆಯುತ್ತವೆ ಮತ್ತು ಅವೇ ಹೆಚ್ಚು ಅಗ್ಗದ ಆಹಾರ ಪದಾರ್ಥಗಳಾಗಿವೆ. ಹೀಗಾಗಿ ಹಲವು ರೀತಿಯ ರೋಗಗಳು ಜನರನ್ನು ಬಾಧಿಸುತ್ತಿವೆ. ಇವೆಲ್ಲಕ್ಕೆ ಮೊಟ್ಟೆ ಅತ್ಯುತ್ತಮ ಪರಿಹಾರವಾಗಬಲ್ಲದು. ಜೊತೆಗೆ ದೇಶದ ಬಹುಸಂಖ್ಯಾತರಿಗೆ ಮೊಟ್ಟೆ ತಿನ್ನುವುದು ಅಪಥ್ಯವೂ ಅಲ್ಲ. ಆದರೆ ಹುಸಿ ಶ್ರೇಷ್ಠತೆಯ ವ್ಯಸನ ಹತ್ತಿಸಿಕೊಂಡು, ಹುಸಿ ಸಾಂಸ್ಕೃತಿಕ ಮೇಲ್ಮೆಯನ್ನು ಪ್ರತಿಪಾದಿಸುವ ಚಿಂತನೆಗಳು ಇದಕ್ಕೆ ಅಡ್ಡಿಯಾಗಿವೆ.

ಮಕ್ಕಳಿಗೆ ಮೊಟ್ಟೆಯನ್ನು ಕೊಡಲು ವಿರೋಧಿಸುವವರು ವಾಸ್ತವದಲ್ಲಿ ಜೀವವಿರೋಧಿಗಳಾಗಿದ್ದಾರೆ. ಇದು ಅರ್ಥವಾಗದೇ ವಿರೋಧಿಸುತ್ತಿರುವವರೂ ಇದ್ದಾರೆ, ಅರ್ಥವಾಗಿಯೂ ವಿರೋಧಿಸುತ್ತಿರುವವರು ಇದ್ದಾರೆ. ಇದೇ ದುರಂತ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...