Homeಚಳವಳಿಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

- Advertisement -
- Advertisement -

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಬಳಿಯ ರಾಣಿಗೇಟ್ ಜೇನುಕುರುಬರ ಹಾಡಿಯ ಬಸವ ಎಂಬ ವ್ಯಕ್ತಿಯನ್ನು ಅಲ್ಲಿನ ಅರಣ್ಯ ಇಲಾಖೆಯ ವಾಚ್‌ಮನ್ ಮತ್ತು ಗಾರ್ಡ್ ಗಳು ಕ್ಷುಲ್ಲಕ ಕಾರಣಕ್ಕೆ ಗುಂಡಿಕ್ಕಿ ಹೊಡೆದಿದ್ದಾರೆ. ಆ ವ್ಯಕ್ತಿ ಸದ್ಯ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರಣ್ಯ ಸಿಬ್ಬಂದಿಯ ಈ ಅಮಾನವೀಯ ದೌರ್ಜನ್ಯ ಖಂಡಿಸಿ ಆಕ್ರೋಶ ಭುಗಿಲೆದ್ದಿದೆ. ಇಂದು ಗುರುವಾರ ಬೆಳಿಗ್ಗೆ 10.30ಕ್ಕೆ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜೇನುಕುರುಬರ ಯುವಕ ಬಸವ ಎಂಬುವವರು ಡಿಸೆಂಬರ್ 1ರ ಬುಧವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಬಹಿರ್ದೆಶೆಗೆ ಹೋಗಿದ್ದಾಗ ಆತನಿಗೆ ಅರಣ್ಯ ಇಲಾಖೆಯ ವಾಚ್ ಮನ್ ಸುಬ್ರಮಣಿ ಎಂಬಾತ ಬಂದೂಕಿನಿಂದ ಶೂಟ್ ಮಾಡಿದ್ದಾನೆ ಎಂದು ಸಂತ್ರಸ್ತನ ಪತ್ನಿ ಬೈಲಕುಪ್ಪೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ವಿವರ:

ಜೋಳ ಕೊಯ್ಲು ಮಾಡುವ ಸಂದರ್ಭದಲ್ಲಿ ಬಸವ ಎಂಬುವವರು ಪಕ್ಕದ ಅಣ್ಣಯ್ಯ ಎಂಬುವವರ ಜಮೀನಿಗೆ ಬರ್ಹಿದೆಸೆಗೆಂದು ಹೋಗಿದ್ದಾರೆ. ಆಗ ಅರಣ್ಯ ಇಲಾಖೆಯ ವಾಚ್‌ಮನ್ ಸುಬ್ರಮಣಿ ಜೊತೆಗೆ ಮಹೇಶ ಮತ್ತು ಸಿದ್ದ ಎಂಬುವವರು ಹಾಗೂ ಗಾರ್ಡ್ ಮಂಜು ಇವರುಗಳು ಬಸವನನ್ನು ಅಟ್ಟಿಸಿಕೊಂಡು ಬಂದು ಸಿಗದಿದ್ದಾಗ ಸುಬ್ರಮಣಿ ಎಂಬಾತನು ಕೋವಿಯಿಂದ ಗುಂಡು ಹಾರಿಸಿದ್ದಾರೆ. ಹಿಂಬಾಗಕ್ಕೆ ಗುಂಡು ಬಿದ್ದಿದೆ. ಗುಂಡಿನ ಶಬ್ದ ಕೇಳಿ ಜನ ಸೇರಿದಾಗ ಮಂಜು ಎಂಬುವವರನ್ನು ಹೊರತುಪಡಿಸಿ ಉಳಿದವರು ಓಡಿ ಹೋಗಿದ್ದಾರೆ. ನಂತರ ಸಂತ್ರಸ್ತನನ್ನು ಕುಶಾಲನಗರ ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಗುಂಡು ತೆಗೆಯಲು ಆಗದೆ ನಂತರ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಸೇರಿಸಲಾಗಿದೆ.

ಒಂದೂವರೆ ತಿಂಗಳ ಹಿಂದೆ ಇದೇ ಅರಣ್ಯ ಸಿಬ್ಬಂದಿ ಮತ್ತು ನಮಗೂ ನಮ್ಮ ಮನೆ ಮುಂದಿನ ಮರದ ವಿಚಾರವಾಗಿ ಜಗಳವಾಗಿತ್ತು. ಸಿಬ್ಬಂದಿಯ ಅನ್ಯಾಯವನ್ನು ನಾವು ಪ್ರಶ್ನಿಸಿ ಜಗಳವಾಡುತ್ತಿದ್ದೇವು. ಹಾಗಾಗಿ ನಮ್ಮ ಮೇಲೆ ಅವರಿಗೆ ದ್ವೇಷ ಎಂದು ಸಂತ್ರಸ್ತನ ಪತ್ನಿ ಪುಷ್ಪ ಆರೋಪಿಸಿದ್ದಾರೆ.

ದೂರಿನ ಪ್ರತಿ

ಆದಿವಾಸಿಗಳ ನೆರವಿಗೆ ಸ್ಥಳೀಯ ಸಂಸ್ಥೆಗಳಾದ ಗ್ರೀನ್ ಇಂಡಿಯಾದ ಡಾ.ಮಹೇಂದ್ರ ಕುಮಾರ ಮತ್ತು ಕಾರ್ಡ್ ಸಂಸ್ಥೆಯ ರಾಯ್ ಡೇವಿಡ್ ಸ್ಥಳಕ್ಕೆ ತಲುಪಿ ಪೊಲೀಸ್ ದೂರು ಸಲ್ಲಿಸಿ ಆದಿವಾಸಿಗಳಿಗೆ ಧೈರ್ಯ ತುಂಬಿದ್ದಾರೆ. ಈ ಅಮಾನವೀಯ ಘಟನೆ ಖಂಡಿಸಿ ಇಂದು ಮೈಸೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮತ್ತು ಪತ್ರಿಕಾಗೋಷ್ಠಿ ನಡೆಸುವುದಾಗಿ ಡಾ. ಮಹೇಂದ್ರ ಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಹಾಡಿಯ ಜನ ತಿಳಿಸುವ ಪ್ರಕಾರ, ಕಳೆದ ಒಂದೂವರೆ ತಿಂಗಳ ಹಿಂದೆ ಇದೇ ಐದಾರು ಜನ ಅರಣ್ಯ ಸಿಬ್ಬಂದಿಗಳ ಜೊತೆ ನಡೆಯಲಾಗಿದ್ದ ಕ್ಷುಲ್ಲಕ ವಾದ ಜಗಳಕ್ಕೆ ತಿರುಗಿ, ಅದು ದ್ವೇಷಕ್ಲೆ ನಾಂದಿ ಹಾಡಿದೆ. ಕೊನೆಗೆ ಗುಂಡಿಟ್ಟು ಕೊಲ್ಲುವ ಪ್ರಯತ್ನದವರೆಗೂ ಮುಂದುವರೆದಿದೆ. ಆದಿವಾಸಿಗಳೆಂದರೆ ತೀರಾ ಕನಿಷ್ಠ ಎಂಬ ಮನಸ್ಥಿತಿ ಇಲ್ಲಿಯ ಅರಣ್ಯ ಇಲಾಖೆಯ ಸಿಬ್ಬಂದಿಯವರಲ್ಲಿದೆ. ಗುಂಡು ಹೊಡೆದ ಮೇಲೆಯೂ ಇಲಾಖೆಯವರು ಎಲ್ಲಿಂದಲೋ ಕಟ್ಟಿಗೆ ತಂದು ಹಾಕಿ ಪ್ರಕರಣವನ್ನು ತಿರುಚುವ ಪಯತ್ನ ಮಾಡುತ್ತಿದ್ದಾರೆ. ಆದರೆ ಅವರು ಬೈಕಿನಲ್ಲಿ ಕಟ್ಟಿಗೆ ತಂದು ಹಾಕುತ್ತಿರುವುದಕ್ಕೆ ನಮ್ಮಲ್ಲಿ ಪುರಾವೆಗಳಿವೆ, ಅದನ್ನು ಪೋಲೀಸ್ ಇಲಾಖೆಗೆ ಸಲ್ಲಿಸಿದ್ದೇವೆ” ಎಂದರು.

ಪೊಲೀಸರು ನೀಡಿರುವ ಹಿಂಬರಹ

ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಸವ ಮತ್ತು ಆತನ ಸಹಚರರು ಗಂಧದ ಕಟ್ಟಿಗೆ ಸಾಗಿಸುತ್ತಿದ್ದರೆಂದು ದೂರು ನೀಡಿದ್ದಾರೆ. ಪೋಲೀಸರು ಇವರ ವಿರುದ್ದ FIR ದಾಖಲಿಸಿದ್ದಾರೆ. ಆದರೆ ಹಾಡಿಯ ಜೇನು ಕುರುಬರು ಕೊಟ್ಟ ದೂರಿಗೆ ಕೇವಲ ಎಂಡಾರ್ಸಮೆಂಟ್ ನೀಡಲಾಗಿದ್ದು, ಇಲಾಖೆಯ ಸಿಬ್ಬಂದಿಗಳ ವಿರುದ್ದ FIR ಮಾಡಲಾಗುವುದಿಲ್ಲವೆಂದೂ, ಬದಲಾಗಿ ತನಿಖೆ ನಡೆಸುತ್ತೇವೆಂದು ಪೋಲೀಸ್ ಇಲಾಖೆಯವರು ತಿಳಿಸಿರುತ್ತಾರೆ. ಸ್ಥಳೀಯ ಶಾಸಕರಾದ ಮಹದೇವಪ್ಪನವರು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ,ಇತರ ನಾಯಕರುಗಳು, ಪೋಲೀಸ್ ಇಲಾಖೆಗೆ ಪೋನ್ ಮಾಡಿ ಆದಿವಾಸಿಗಳಿಗೆ ಆದ ಅನ್ಯಾಯದ ವಿರುದ್ದ FIR ದಾಖಲಿಸಲು ತಿಳಿಸಿದರೂ ಮೇಲಿನ ಎಸ್ಪಿಯವರ ಆದೇಶದ ಪ್ರಕಾರ ದಾಖಲಿಸಲು ನಮಗೆ ಅನುಮತಿ ಇಲ್ಲವೆಂದು ತಿಳಿಸಿದ್ದಾರೆ. ಇದನ್ನು ವಿರೋಧಿಸಿ ಇಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಮತ್ತು ಬುಡಕಟ್ಟು ಕೃಷಿಕರ ಸಂಘಟನೆಗಳು ಸೇರಿ ಪ್ರತಿಭಟಿಸುತ್ತೇವೆ ಎಂದು ತಿಳಿಸಿದ್ದಾರೆ.

ಅರಣ್ಯ ಸಿಬ್ಬಂದಿ ತಂದು ಹಾಕಿರುವ ಮರದ ತುಂಡುಗಳು

ನಟ ಚೇತನ್ ಈ ಅನ್ಯಾಯವನ್ನು ಖಂಡಿಸಿದ್ದು, ಮೈಸೂರಿನ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ನಿನ್ನೆ ಪಿರಿಯಾಪಟ್ಟಣದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರಿಂದ ಗುಂಡೇಟು ತಿಂದು ಆಸ್ಪತ್ರೆಯಲ್ಲಿರುವ ಆದಿವಾಸಿ ವ್ಯಕ್ತಿಗೆ ನ್ಯಾಯ ಕೇಳಲು, ನಾನೀಗ ಮೈಸೂರಿಗೆ ಹೊರಟಿದ್ದೇನೆ.ಈ ವಿಷಯದ ಕುರಿತಾಗಿ, ಇಂದು ಬೆಳಗ್ಗೆ 10 ಗಂಟೆಯಿಂದ ಮೈಸೂರಿನ ಡಿಸಿ ಕಚೇರಿಯ ಎದುರು, ಆದಿವಾಸಿ ಗುಂಪುಗಳು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಾರೆ. ನಾನು ಕೂಡ ಅವರೊಂದಿಗೆ ಕೈ ಜೋಡಿಸುತ್ತೇನೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...