Homeಚಳವಳಿಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

- Advertisement -
- Advertisement -

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಬಳಿಯ ರಾಣಿಗೇಟ್ ಜೇನುಕುರುಬರ ಹಾಡಿಯ ಬಸವ ಎಂಬ ವ್ಯಕ್ತಿಯನ್ನು ಅಲ್ಲಿನ ಅರಣ್ಯ ಇಲಾಖೆಯ ವಾಚ್‌ಮನ್ ಮತ್ತು ಗಾರ್ಡ್ ಗಳು ಕ್ಷುಲ್ಲಕ ಕಾರಣಕ್ಕೆ ಗುಂಡಿಕ್ಕಿ ಹೊಡೆದಿದ್ದಾರೆ. ಆ ವ್ಯಕ್ತಿ ಸದ್ಯ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರಣ್ಯ ಸಿಬ್ಬಂದಿಯ ಈ ಅಮಾನವೀಯ ದೌರ್ಜನ್ಯ ಖಂಡಿಸಿ ಆಕ್ರೋಶ ಭುಗಿಲೆದ್ದಿದೆ. ಇಂದು ಗುರುವಾರ ಬೆಳಿಗ್ಗೆ 10.30ಕ್ಕೆ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜೇನುಕುರುಬರ ಯುವಕ ಬಸವ ಎಂಬುವವರು ಡಿಸೆಂಬರ್ 1ರ ಬುಧವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಬಹಿರ್ದೆಶೆಗೆ ಹೋಗಿದ್ದಾಗ ಆತನಿಗೆ ಅರಣ್ಯ ಇಲಾಖೆಯ ವಾಚ್ ಮನ್ ಸುಬ್ರಮಣಿ ಎಂಬಾತ ಬಂದೂಕಿನಿಂದ ಶೂಟ್ ಮಾಡಿದ್ದಾನೆ ಎಂದು ಸಂತ್ರಸ್ತನ ಪತ್ನಿ ಬೈಲಕುಪ್ಪೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ವಿವರ:

ಜೋಳ ಕೊಯ್ಲು ಮಾಡುವ ಸಂದರ್ಭದಲ್ಲಿ ಬಸವ ಎಂಬುವವರು ಪಕ್ಕದ ಅಣ್ಣಯ್ಯ ಎಂಬುವವರ ಜಮೀನಿಗೆ ಬರ್ಹಿದೆಸೆಗೆಂದು ಹೋಗಿದ್ದಾರೆ. ಆಗ ಅರಣ್ಯ ಇಲಾಖೆಯ ವಾಚ್‌ಮನ್ ಸುಬ್ರಮಣಿ ಜೊತೆಗೆ ಮಹೇಶ ಮತ್ತು ಸಿದ್ದ ಎಂಬುವವರು ಹಾಗೂ ಗಾರ್ಡ್ ಮಂಜು ಇವರುಗಳು ಬಸವನನ್ನು ಅಟ್ಟಿಸಿಕೊಂಡು ಬಂದು ಸಿಗದಿದ್ದಾಗ ಸುಬ್ರಮಣಿ ಎಂಬಾತನು ಕೋವಿಯಿಂದ ಗುಂಡು ಹಾರಿಸಿದ್ದಾರೆ. ಹಿಂಬಾಗಕ್ಕೆ ಗುಂಡು ಬಿದ್ದಿದೆ. ಗುಂಡಿನ ಶಬ್ದ ಕೇಳಿ ಜನ ಸೇರಿದಾಗ ಮಂಜು ಎಂಬುವವರನ್ನು ಹೊರತುಪಡಿಸಿ ಉಳಿದವರು ಓಡಿ ಹೋಗಿದ್ದಾರೆ. ನಂತರ ಸಂತ್ರಸ್ತನನ್ನು ಕುಶಾಲನಗರ ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಗುಂಡು ತೆಗೆಯಲು ಆಗದೆ ನಂತರ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಸೇರಿಸಲಾಗಿದೆ.

ಒಂದೂವರೆ ತಿಂಗಳ ಹಿಂದೆ ಇದೇ ಅರಣ್ಯ ಸಿಬ್ಬಂದಿ ಮತ್ತು ನಮಗೂ ನಮ್ಮ ಮನೆ ಮುಂದಿನ ಮರದ ವಿಚಾರವಾಗಿ ಜಗಳವಾಗಿತ್ತು. ಸಿಬ್ಬಂದಿಯ ಅನ್ಯಾಯವನ್ನು ನಾವು ಪ್ರಶ್ನಿಸಿ ಜಗಳವಾಡುತ್ತಿದ್ದೇವು. ಹಾಗಾಗಿ ನಮ್ಮ ಮೇಲೆ ಅವರಿಗೆ ದ್ವೇಷ ಎಂದು ಸಂತ್ರಸ್ತನ ಪತ್ನಿ ಪುಷ್ಪ ಆರೋಪಿಸಿದ್ದಾರೆ.

ದೂರಿನ ಪ್ರತಿ

ಆದಿವಾಸಿಗಳ ನೆರವಿಗೆ ಸ್ಥಳೀಯ ಸಂಸ್ಥೆಗಳಾದ ಗ್ರೀನ್ ಇಂಡಿಯಾದ ಡಾ.ಮಹೇಂದ್ರ ಕುಮಾರ ಮತ್ತು ಕಾರ್ಡ್ ಸಂಸ್ಥೆಯ ರಾಯ್ ಡೇವಿಡ್ ಸ್ಥಳಕ್ಕೆ ತಲುಪಿ ಪೊಲೀಸ್ ದೂರು ಸಲ್ಲಿಸಿ ಆದಿವಾಸಿಗಳಿಗೆ ಧೈರ್ಯ ತುಂಬಿದ್ದಾರೆ. ಈ ಅಮಾನವೀಯ ಘಟನೆ ಖಂಡಿಸಿ ಇಂದು ಮೈಸೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮತ್ತು ಪತ್ರಿಕಾಗೋಷ್ಠಿ ನಡೆಸುವುದಾಗಿ ಡಾ. ಮಹೇಂದ್ರ ಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಹಾಡಿಯ ಜನ ತಿಳಿಸುವ ಪ್ರಕಾರ, ಕಳೆದ ಒಂದೂವರೆ ತಿಂಗಳ ಹಿಂದೆ ಇದೇ ಐದಾರು ಜನ ಅರಣ್ಯ ಸಿಬ್ಬಂದಿಗಳ ಜೊತೆ ನಡೆಯಲಾಗಿದ್ದ ಕ್ಷುಲ್ಲಕ ವಾದ ಜಗಳಕ್ಕೆ ತಿರುಗಿ, ಅದು ದ್ವೇಷಕ್ಲೆ ನಾಂದಿ ಹಾಡಿದೆ. ಕೊನೆಗೆ ಗುಂಡಿಟ್ಟು ಕೊಲ್ಲುವ ಪ್ರಯತ್ನದವರೆಗೂ ಮುಂದುವರೆದಿದೆ. ಆದಿವಾಸಿಗಳೆಂದರೆ ತೀರಾ ಕನಿಷ್ಠ ಎಂಬ ಮನಸ್ಥಿತಿ ಇಲ್ಲಿಯ ಅರಣ್ಯ ಇಲಾಖೆಯ ಸಿಬ್ಬಂದಿಯವರಲ್ಲಿದೆ. ಗುಂಡು ಹೊಡೆದ ಮೇಲೆಯೂ ಇಲಾಖೆಯವರು ಎಲ್ಲಿಂದಲೋ ಕಟ್ಟಿಗೆ ತಂದು ಹಾಕಿ ಪ್ರಕರಣವನ್ನು ತಿರುಚುವ ಪಯತ್ನ ಮಾಡುತ್ತಿದ್ದಾರೆ. ಆದರೆ ಅವರು ಬೈಕಿನಲ್ಲಿ ಕಟ್ಟಿಗೆ ತಂದು ಹಾಕುತ್ತಿರುವುದಕ್ಕೆ ನಮ್ಮಲ್ಲಿ ಪುರಾವೆಗಳಿವೆ, ಅದನ್ನು ಪೋಲೀಸ್ ಇಲಾಖೆಗೆ ಸಲ್ಲಿಸಿದ್ದೇವೆ” ಎಂದರು.

ಪೊಲೀಸರು ನೀಡಿರುವ ಹಿಂಬರಹ

ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಸವ ಮತ್ತು ಆತನ ಸಹಚರರು ಗಂಧದ ಕಟ್ಟಿಗೆ ಸಾಗಿಸುತ್ತಿದ್ದರೆಂದು ದೂರು ನೀಡಿದ್ದಾರೆ. ಪೋಲೀಸರು ಇವರ ವಿರುದ್ದ FIR ದಾಖಲಿಸಿದ್ದಾರೆ. ಆದರೆ ಹಾಡಿಯ ಜೇನು ಕುರುಬರು ಕೊಟ್ಟ ದೂರಿಗೆ ಕೇವಲ ಎಂಡಾರ್ಸಮೆಂಟ್ ನೀಡಲಾಗಿದ್ದು, ಇಲಾಖೆಯ ಸಿಬ್ಬಂದಿಗಳ ವಿರುದ್ದ FIR ಮಾಡಲಾಗುವುದಿಲ್ಲವೆಂದೂ, ಬದಲಾಗಿ ತನಿಖೆ ನಡೆಸುತ್ತೇವೆಂದು ಪೋಲೀಸ್ ಇಲಾಖೆಯವರು ತಿಳಿಸಿರುತ್ತಾರೆ. ಸ್ಥಳೀಯ ಶಾಸಕರಾದ ಮಹದೇವಪ್ಪನವರು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ,ಇತರ ನಾಯಕರುಗಳು, ಪೋಲೀಸ್ ಇಲಾಖೆಗೆ ಪೋನ್ ಮಾಡಿ ಆದಿವಾಸಿಗಳಿಗೆ ಆದ ಅನ್ಯಾಯದ ವಿರುದ್ದ FIR ದಾಖಲಿಸಲು ತಿಳಿಸಿದರೂ ಮೇಲಿನ ಎಸ್ಪಿಯವರ ಆದೇಶದ ಪ್ರಕಾರ ದಾಖಲಿಸಲು ನಮಗೆ ಅನುಮತಿ ಇಲ್ಲವೆಂದು ತಿಳಿಸಿದ್ದಾರೆ. ಇದನ್ನು ವಿರೋಧಿಸಿ ಇಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಮತ್ತು ಬುಡಕಟ್ಟು ಕೃಷಿಕರ ಸಂಘಟನೆಗಳು ಸೇರಿ ಪ್ರತಿಭಟಿಸುತ್ತೇವೆ ಎಂದು ತಿಳಿಸಿದ್ದಾರೆ.

ಅರಣ್ಯ ಸಿಬ್ಬಂದಿ ತಂದು ಹಾಕಿರುವ ಮರದ ತುಂಡುಗಳು

ನಟ ಚೇತನ್ ಈ ಅನ್ಯಾಯವನ್ನು ಖಂಡಿಸಿದ್ದು, ಮೈಸೂರಿನ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ನಿನ್ನೆ ಪಿರಿಯಾಪಟ್ಟಣದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರಿಂದ ಗುಂಡೇಟು ತಿಂದು ಆಸ್ಪತ್ರೆಯಲ್ಲಿರುವ ಆದಿವಾಸಿ ವ್ಯಕ್ತಿಗೆ ನ್ಯಾಯ ಕೇಳಲು, ನಾನೀಗ ಮೈಸೂರಿಗೆ ಹೊರಟಿದ್ದೇನೆ.ಈ ವಿಷಯದ ಕುರಿತಾಗಿ, ಇಂದು ಬೆಳಗ್ಗೆ 10 ಗಂಟೆಯಿಂದ ಮೈಸೂರಿನ ಡಿಸಿ ಕಚೇರಿಯ ಎದುರು, ಆದಿವಾಸಿ ಗುಂಪುಗಳು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಾರೆ. ನಾನು ಕೂಡ ಅವರೊಂದಿಗೆ ಕೈ ಜೋಡಿಸುತ್ತೇನೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...