Homeಕರ್ನಾಟಕಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ; ವನ್ಯ ಜೀವಿಗಳ ಮೇಲಾಗುವ ಪರಿಣಾಮ ಸಮೀಕ್ಷೆಗೆ ಹೈಕೋರ್ಟ್ ನಿರ್ದೇಶನ

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ; ವನ್ಯ ಜೀವಿಗಳ ಮೇಲಾಗುವ ಪರಿಣಾಮ ಸಮೀಕ್ಷೆಗೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಅಂಕೋಲಾ-ಹುಬ್ಬಳ್ಳಿ ಬ್ರಾಡ್‌ಗೇಜ್ ರೈಲು ಮಾರ್ಗ ನಿರ್ಮಾಣದಿಂದ ಪಶ್ಚಿಮ ಘಟ್ಟಗಳಲ್ಲಿನ ವನ್ಯ ಜೀವಿಗಳ ಮೇಲಾಗುವ ಪರಿಣಾಮದ ಸಾಧಕ-ಭಾದಕಗಳ ಸಮೀಕ್ಷೆ ಸ್ವತಂತ್ರವಾಗಿ ನಡೆಸಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ವನ್ಯ ಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕರ್ನಾಟಕದ ಕರಾವಳಿ ಮತ್ತು ಉತ್ತರ ಕರ್ನಾಟಕ ಜೋಡಿಸುವ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಈ ಭಾಗದ ಜನರ ಬಹು ದಿನದ ಕನಸು. ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಸದರಿ ರೈಲು ಮಾರ್ಗಕ್ಕಾಗಿ ಸುದೀರ್ಘ ಹೋರಾಟ ನಡೆಯುತ್ತ ಬಂದಿದೆ. ಆದರೆ ಇದನ್ನು ಪರಿಸರವಾದಿಗಳು ನಿರಂತರವಾಗಿ ವಿರೋಧಿಸ್ತುತ್ತಿದ್ದಾರೆ. ಹಲವು ವರ್ಷಗಳ ಹಿಂದೆಯೆ ಅರ್ಧಕ್ಕೆ ಬಂದುನಿಂತಿರುವ ಅಂಕೋಲಾ-ಹುಬ್ಬಳ್ಳಿ ನಡುವಿನ 164.44 ಕಿ.ಮೀ. ಉದ್ದದ ರೈಲು ಮಾರ್ಗ ನಿಮಾಣಕ್ಕೆ 20-3-2020ರಂದು ಕರ್ನಾಟಕ ರಾಜ್ಯ ವನ್ಯ ಜೀವಿ ಮಂಡಳಿ ಅನುಮತಿ ಕೊಟ್ಟಿತ್ತು.

ಇದನ್ನು ಪ್ರಶ್ನಿಸಿ ಪ್ರಾಜೆಕ್ಟ್ ವೃಕ್ಷ ಪೌಂಡೇಶನ್ ಮತ್ತು ಗಿರಿಧರ್ ಕುಲಕರ್ಣಿ ಎಂಬವರು ಪ್ರತ್ಯೇಕವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇವೆರಡು ಅರ್ಜಿಗಳು ಬುಧವಾರ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗಿಯ ಪೀಠದ ಮುಂದೆ ಬಂದಿದ್ದವು. ವಾದ ಆಲಿಸಿದ ನ್ಯಾಯಪೀಠ “ಅಭಿವೃದ್ಧಿಯಾಗಬೇಕು, ಆದರೆ ಅದರಿಂದ ವನ್ಯ ಜೀವಿ ಸಂಪತ್ತಿಗೆ ತೊಂದರೆಯಾಗಬಾರದು. ಆದ್ದರಿಂದ ರಾಷ್ಟ್ರೀಯ ವನ್ಯಜೀವಿ ಮಂಡಳಿ ಯೋಜನೆಯ ಸಾಧಕ-ಬಾಧಕಗಳ ಮೌಲ್ಯಮಾಪನ ಮಾಡಿ ವರದಿ ಸಲ್ಲಿಸಬೇಕು. ಲಭ್ಯವಿರುವ ಸಮೀಕ್ಷೆ ಮತ್ತು ವರದಿ ಪರಿಶೀಲಿಸಬೇಕು. ತಜ್ಞರ ನೆರವು ಬೇಕಿದ್ದರೆ ಪಡೆದುಕೊಳ್ಳಬಹುದು” ಎಂದು ಅಭಿಪ್ರಾಯಪಟ್ಟಿತು.

ಉಚ್ಛ ನ್ಯಾಯಾಲಯದ ತೀರ್ಪನ್ನು ಹುಬ್ಬಳ್ಳಿ-ಅಂಕೋಲಾ ರೈಲು ಹೋರಾಟ ಕ್ರಿಯಾ ಸಮಿತಿ ಸ್ವಾಗತಿಸಿದ್ದು, ಹೈಕೋರ್ಟ್ ನಿರ್ದೇಶನವು ಯೋಜನೆ ಜಾರಿಗಾಗಿ ಸಮಿತಿ ನಡೆಸುತ್ತಿರುವ ಸುದೀರ್ಘ ಹೋರಾಟಕ್ಕೆ ಶಕ್ತಿ ತುಂಬಿದೆ. ಮುಖ್ಯ ಮಂತ್ರಿಗಳನ್ನು ಭೇಟಿಯಾಗಿ ಸರ್ಕಾರದ ವತಿಯಿಂದ ಯೋಜನೆಗೆ ಪೂರಕವಾಗಿ ಇರುವ ವಿವಿಧ ಅಧ್ಯಯನ ವರದಿಗಳನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಒದಗಿಸಲು ಕ್ರಮಕೈಗೊಳ್ಳುವಂತೆ ವಿನಂತಿಸಲಾಗುವುದೆಂದು ಹೋರಾಟ ಸಮಿತಿಯ ಅಧ್ಯಕ್ಷ ರಮಾನಂದ ನಾಯಕ, ಕಾರ್ಯದರ್ಶಿ ವಿಠ್ಠಲದಾಸ ಕಾಮತ್ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.

ಹೈಕೋರ್ಟ್ ನಿರ್ದೇಶನವನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಮಂತ್ರಿ ಶಿವರಾಮ ಹೆಬ್ಬಾರ್ ಮತ್ತು ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಸ್ವಾಗತಿಸಿದ್ದಾರೆ. ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗಾಗಿ ವಿಶೇಷ ವಕೀಲರನ್ನು ನೇಮಿಸಿತ್ತು. ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಎಷ್ಟು ಲಾಭದಾಯಕ ಮತ್ತು ಪರಿಸರ ಪೂರಕವೆಂಬುದನ್ನು ಸರ್ಕಾರ ರಾಷ್ಟ್ರೀಯ ವನ್ಯಜೀವಿ ಮಂಡಳಿಗೂ ಮನವರಿಕೆ ಮಾಡಿಕೊಡಲಿದೆಯೆಂದು ಹೆಬ್ಬಾರ್ ಹೇಳಿದ್ದಾರೆ.


ಇದನ್ನೂ ಓದಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Hubli 🔁Ankola railway route plan is the best one for the goods and passangers also… So plz expand the surroundung lines connect with Hubli Dividion SSS

  2. Hubli 🔁Ankola railway route plan is the best one for the goods and passangers also… So plz expand the surroundung lines connect with Hubli Dividion SSS.

LEAVE A REPLY

Please enter your comment!
Please enter your name here

- Advertisment -

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...

ಸಾಲ-ವಂಚನೆ-ಹಣ ವರ್ಗಾವಣೆ ಪ್ರಕರಣ: ಅಂಬಾನಿ ಗ್ರೂಪ್ ಮಾಜಿ ಕಾರ್ಯನಿರ್ವಾಹಕ ಅಮಿತಾಬ್ ಜುಂಜುನ್‌ವಾಲಾ ಅವರನ್ನು ಬಂಧಿಸಿದ ಇಡಿ

ನವದೆಹಲಿ: ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ನ ಮಾಜಿ ಹಿರಿಯ ಕಾರ್ಯನಿರ್ವಾಹಕ ಅಮಿತಾಭ್ ಜುನ್ಜುನ್ವಾಲಾ ಅವರನ್ನು ಜಾರಿ ನಿರ್ದೇಶನಾಲಯ (ED) ಬುಧವಾರ ಬಂಧಿಸಿದೆ...

ಲೈಂಗಿಕ ದೌರ್ಜನ್ಯ ವಿವಾದದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ ನಾಸಿಕ್ ಟಿಸಿಎಸ್; ಮನೆಯಿಂದಲೇ ಕೆಲಸ ಮಾಡುತ್ತಿರುವ ಸಿಬ್ಬಂದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ವ್ಯವಹಾರ ಪ್ರಕ್ರಿಯೆಯ ಹೊರಗುತ್ತಿಗೆ (ಬಿಪಿಒ) ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣಗಳ ವಿವಾದದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉದ್ಯೋಗಿಗಳಿಗೆ...

ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಮರ ಸಾರಿದ್ದು, ಗುರುವಾರ (ಏ.16) ಅಧಿಕೃತವಾಗಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ, ನಾಮಕ್ಕಲ್‌ನಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ...

ತೆಲಂಗಾಣ ಜಾತಿ ಜನಗಣತಿ: ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿರುವ ಎಸ್‌ಸಿ- ಎಸ್‌ಟಿ ಸಮುದಾಯ

ತೆಲಂಗಾಣದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳು ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿವೆ, ಹಿಂದುಳಿದ ವರ್ಗಗಳು (ಬಿಸಿ) 2.7 ಪಟ್ಟು ಹೆಚ್ಚು ಹಿಂದುಳಿದಿವೆ; ರಾಜ್ಯದ ಕಲ್ಯಾಣ...

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...