Homeಮುಖಪುಟಬೆಳ್ಳಿ ಚುಕ್ಕಿ; ಏಮ್ಸ್ ಕೊಠಡಿ!

ಬೆಳ್ಳಿ ಚುಕ್ಕಿ; ಏಮ್ಸ್ ಕೊಠಡಿ!

- Advertisement -
- Advertisement -

ಏಮ್ಸ್ ಕೊಠಡಿ ಅಂದ ತಕ್ಷಣ, ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯ ಯಾವುದೋ ಒಂದು ಕೊಠಡಿ ಬಗ್ಗೆ ಇರಬಹುದೇ? ಆ ಕೊಠಡಿ ಒಳಗೆ ಏನಿರಬಹುದು? ಯಾಕಿರಬಹುದು? ಅಂತೆಲ್ಲಾ ಊಹಿಸಿದಿರಾ! ಇದು ದೆಹಲಿಯ ಏಮ್ಸ್ ಕೊಠಡಿಯ ಬಗ್ಗೆ ಅಲ್ಲ. ಆದರೂ ಇದು ಏಮ್ಸ್ ಕೊಠಡಿ!

ಈ ಮೇಲಿನ ಎರಡು ಚಿತ್ರಗಳನ್ನು ಗಮನಿಸಿ. ಏನನ್ನಿಸಿತು? ಚಿತ್ರ (1)ರಲ್ಲಿ ಪುರುಷನು ಮಹಿಳೆಗಿಂತ ಎತ್ತರವಾಗಿದ್ದಾರೆ, ಅದೇ ಚಿತ್ರ (2)ರಲ್ಲಿ ಮಹಿಳೆ ಪುರುಷನಿಗಿಂತ ಎತ್ತರವಾಗಿದ್ದಾರೆ ಅಲ್ಲವೇ? ಆದರೆ, ಚಿತ್ರ (1) ಮತ್ತು (2)ಕ್ಕಿರುವ ಬದಲಾವಣೆಯೆಂದರೆ, ಇಬ್ಬರೂ ತಮ್ಮ ತಮ್ಮ ಸ್ಥಾನಗಳನ್ನು ಬದಲಾಯಿಸಿರುವರು ಅಷ್ಟೇ! ಅದೇ ಕೊಠಡಿ, ಅದೇ ಸ್ಥಳ! ಮತ್ತೊಮ್ಮೆ ಸೂಕ್ಷ್ಮವಾಗಿ ಚಿತ್ರಗಳನ್ನು ಗಮನಿಸಿ.

ಮೇಲಿನ ಚಿತ್ರಗಳಲ್ಲಿರುವ ಕೊಠಡಿಯು ಸಾಮಾನ್ಯ ಕೊಠಡಿಯಂತೆಯೇ ಕಾಣುತ್ತಿದೆ. ಹೇಳಿಕೊಳ್ಳುವಂತಹ ಯಾವ ಬದಲಾವಣೆಗಳೂ ಗೋಚರಿಸುತ್ತಿಲ್ಲ. ಅಲ್ಲದೆ, ವೀಕ್ಷಕರಿಂದ ಇಬ್ಬರೂ ಒಂದೇ ಅಂತರದಲ್ಲಿ ನಿಂತಿದ್ದಾರೆ. ಆದರೆ, ಒಂದು ಬದಿಯಲ್ಲಿ ನಿಂತಿರುವರು ಎತ್ತರವಾಗಿದ್ದಾರೆ. ಅವರೇ ಮತ್ತೊಂದು ಬದಿಗೆ ಹೋದರೆ ಅವರ ಎತ್ತರ ಕಡಿಮೆಯಾಗುತ್ತಿದೆ. ಅವರು ಒಂದು ಬದಿಯಿಂದ ಇನ್ನೊಂದು ಬದಿಗೆ ನಡೆದುಕೊಂಡು ಹೊಗುವ ವಿಡಿಯೋವನ್ನು ನೀವು ನೋಡಿದರೆ, ಎತ್ತರಗಳು ವ್ಯತ್ಯಾಸವಾಗುವುದನ್ನು ಗಮನಿಸಬಹುದು. ವಿಡಿಯೋ ನೋಡಲು QR ಕೋಡ್ ಸ್ಕ್ಯಾನ್ ಮಾಡಿ.

ಅರೆ, ಏನಿದು, ನಮ್ಮ ಕಣ್ಣಿಗೆ ಹೀಗೇಕೆ ಮೋಸವಾಗುತ್ತಿದೆ? ಇಂತಹ ಮೋಸಮಾಡುವ ಪ್ರಕ್ರಿಯೆಗಳನ್ನು ವೈಜ್ಞಾನಿಕವಾಗಿ ಭ್ರಮೆ (Illusion) ಎಂದು ಕರೆಯುತ್ತೇವೆ. ಮೇಲಿನ ಚಿತ್ರದಲ್ಲಿರುವ ಕೊಠಡಿಯು ಸಹ ಅಂತಹ ದೃಷ್ಟಿಭ್ರಮೆಗೆ ಒಂದು ಉದಾಹರಣೆ (Optical Illusion).

ಅಮೆರಿಕಾದ ಅಡೆಲ್ಬರ್ಟ್ ಏಮ್ಸ್ ಎಂಬ ಹೆಸರಿತ ನೇತ್ರ ತಜ್ಞ ಮೊದಲ ಬಾರಿಗೆ ಇಂತಹ ಕೊಠಡಿಯನ್ನು ವಿನ್ಯಾಸ ಮಾಡಿದರು. ಖ್ಯಾತ ಭೌತವಿಜ್ಞಾನಿಯಾದ ಹರ್ಮನ್ ಹೆಲ್ಮೋಲ್ಟ್ಸ್ (Hermann Helmholtz) ಅವರು ಮೊದಲ ಬಾರಿಗೆ ಇಂತಹ ಕೊಠಡಿಯ ಪರಿಕಲ್ಪನೆಯನ್ನು ವಿವರಿಸಿದ್ದರೂ, ಅದನ್ನು ಮೊಟ್ಟಮೊದಲ ಬಾರಿಗೆ ನಿರ್ಮಿಸಿದ್ದು ನೇತ್ರ ತಜ್ಞ ಏಮ್ಸ್. ಈ ಕೊಠಡಿಯಲ್ಲಿನ ವಿಶೇಷವೆಂದರೆ, ವಸ್ತುವು ನೋಡುಗರಿಂದ ಒಂದೇ ದೂರದಲ್ಲಿದ್ದರೂ, ಅದನ್ನು ಒಂದು ಬದಿಯಲ್ಲಿಟ್ಟರೆ ಅದು ದೈತ್ಯವಾಗಿ, ಮತ್ತೊಂದು ಬದಿಯಲ್ಲಿಟ್ಟರೆ ಕುಬ್ಜವಾಗಿರುವಂತೆ ಕಾಣುತ್ತದೆ.

ಏಮ್ಸ್ ಕೊಠಡಿಯ ವಿನ್ಯಾಸ

ಮೇಲಿನ ಚಿತ್ರಗಳು ಏಮ್ಸ್ ಕೊಠಡಿಯ ವಿನ್ಯಾಸದ top view ಮತ್ತು side viewಗಳನ್ನು ತೋರಿಸುತ್ತವೆ. ಸಾಮಾನ್ಯವಾಗಿ ನಾವು ಕೊಠಡಿ ಎಂದಾಕ್ಷಣಾ ಛಾವಣಿ ಮತ್ತು ನೆಲವು ಸಮಾನಾಂತರವಾಗಿದ್ದು, ಗೋಡೆಗಳು ನೇರವಾಗಿರುವಂತೆ ಗ್ರಹಿಸುತ್ತೇವೆ. ಹಾಗೆಯೇ, ಏಮ್ಸ್ ಕೊಠಡಿಯನ್ನು ಹೊರಗಿನಿಂದ ಕಂಡಾಗ, ಇದೇ ರೀತಿ ಗೋಚರಿಸುವಂತೆ ವಿನ್ಯಾಸ ಮಾಡಲಾಗಿರುತ್ತದೆ. ಆ ಕೊಠಡಿಯನ್ನು ಒಂದು ವೀಕ್ಷಣಾ ಕಿಂಡಿಯಿಂದ ಕಂಡಾಗ ಮಾತ್ರ ಅದರ ಮ್ಯಾಜಿಕ್ ಅನಾವರಣಗೊಂಡು ನಮ್ಮನ್ನು ಚಕಿತಗೊಳಿಸುತ್ತದೆ.

ಏಮ್ಸ್ ಕೊಠಡಿ, ಹೊರಗಿನಿಂದ ಸಾಮಾನ್ಯ ಕೊಠಡಿಯಾಗಿದ್ದರೂ, ಅದನ್ನು trapezoidal shapeನಲ್ಲಿ (ವಿಷಮ ಸಮಾನಾಂತರ ಚತುರ್ಭುಜ) ವಿನ್ಯಾಸ ಮಾಡಿರುತ್ತಾರೆ. ಈ ಕೊಠಡಿಯಲ್ಲಿ ಯಾವ ಗೋಡೆಗಳೂ ಸಮಾನಾಂತರವಾಗಿರುವುದಿಲ್ಲ, ಎಲ್ಲವೂ ಒಂದಕ್ಕೊಂದು ಓರೆಯಾಗಿರುತ್ತದೆ. ನೆಲ ಮತ್ತು ಛಾವಣಿಯೂ ಕೂಡ ಸಮಾನಾಂತರವಾಗಿರದೆ, ಛಾವಣಿಯು ಇಳಿಜಾರಾಗಿರುತ್ತದೆ. ಏಮ್ಸ್ ಕೊಠಡಿಯ ಒಳಗೆ ವೀಕ್ಷಿಸಲು ನಿರ್ದಿಷ್ಟ ಜಾಗವನ್ನು ಅಥವಾ ವೀಕ್ಷಣಾ ಕಿಂಡಿಯನ್ನು ಕಲ್ಪಿಸಿರುತ್ತಾರೆ. ಅಲ್ಲಿಂದಲೇ ಒಳಗೆ ನಡೆಯುವ ಕ್ರಿಯೆಯನ್ನು ನೋಡಬೇಕು. ಈ ವೀಕ್ಷಣಾ ಕಿಂಡಿಯಿಂದ ನೋಡಿದಾಗ ಮಾತ್ರ ಒಂದು ಬದಿ ಹತ್ತಿರವಿರುವಂತೆ, ಮತ್ತೊಂದು ಬದಿ ದೂರವಿರುವಂತೆ ಕಾಣುತ್ತದೆ. ಮೇಲಿನ ಚಿತ್ರಗಳಲ್ಲಿ ಅದನ್ನು ನೋಡಬಹುದು. ಆದರೆ, ನೋಡುಗರಿಗೆ ಇದ್ಯಾವುದು ಗೊತ್ತಾಗದ ರೀತಿಯಲ್ಲಿ ಏಮ್ಸ್ ಕೊಠಡಿಯು ಒಳಗೆ ನೆಲ, ಛಾವಣಿ ಮತ್ತು ಗೋಡೆಗಳ ಮೇಲೆ ಚಿತ್ರ ಅಥವಾ ವಿನ್ಯಾಸಗಳನ್ನು ರಚಿಸಲಾಗಿರುತ್ತದೆ. ಈ ಚಿತ್ರಗಳು ಈ ಕೊಠಡಿ ಒಂದು ಸಾಮಾನ್ಯ ಕೊಠಡಿಯಂತೆಯೇ ಇದೆ ಎನ್ನುವ ಭ್ರಮೆಯನ್ನು ನಮ್ಮ ಕಣ್ಣಿನಲ್ಲಿ ಬಿಂಬಿಸುತ್ತಲೇ ಇರುತ್ತದೆ. ಆದರೆ, ಕೊಠಡಿಯೊಳಗೆ ಒಂದು ಬದಿಯಿಂದ ಇನ್ನೊಂದು ಬದಿಗೆ ಯಾರಾದರೂ ನಡೆದರೆ ಅಥವಾ ವಸ್ತುಗಳ ಸ್ಥಾನವನ್ನು ಬದಲಾಯಿಸಿದರೆ, ಅರೆ ಏನಿದು, ಏನಾಯಿತು, ಹೇಗೆ ಆ ವಸ್ತು ಚಿಕ್ಕದಾಯ್ತು, ದೊಡ್ಡದಾಯ್ತು ಎನ್ನುವ ಪ್ರಶ್ನೆಗಳು ಮೂಡುತ್ತವೆ. ಇದೇ ದೃಷ್ಟಿ ಭ್ರಮೆ! ಮನುಷ್ಯನ ಮೆದುಳು ವಸ್ತುವಿನ ಗಾತ್ರವನ್ನು ಹೇಗೆ ಕಂಡುಕೊಳ್ಳುತ್ತದೆ ಎನ್ನುವ ಆಂಶವನ್ನು ತಿಳಿಯಲು ಇಂತಹ ದೃಷ್ಟಿ ಭ್ರಮೆಯ ಪ್ರಯೋಗಗಳನ್ನು ಕೈಗೊಂಡು ಮನಶಾಸ್ತಜ್ಞರು ಅಧ್ಯಯನ ನಡೆಸುತ್ತಾರೆ.

ಅಂದಹಾಗೆ ಮೇಲಿನ ವಿನ್ಯಾಸದಂತೆ ಈ ಏಮ್ಸ್ ಕೊಠಡಿಯನ್ನು ನೀವು ಕಟ್ಟಿಸಬಹುದು, ಅಥವಾ ದೊಡ್ಡದಾದ ಕಾರ್ಡ್‌ಬೋರ್ಡ್‌ಗಳಲ್ಲಿ, ಗೋಡೆ, ಛಾವಣಿ ಮತ್ತು ನೆಲಹಾಸುಗಳನ್ನು ಮಾಡಿ, ಬಣ್ಣ ಬಳಿದು ಏಮ್ಸ್ ಕೊಠಡಿಯನ್ನು ಶಾಲೆ, ಕಾಲೇಜು ಅಥವಾ ಮ್ಯೂಸಿಯಂಗಳಲ್ಲಿ ನಿರ್ಮಿಸಬಹುದು. ಬೆಂಗಳೂರಿನ ಜವಾಹಾರಲಾಲ್ ನೆಹರೂ ತಾರಾಲಯದಲ್ಲಿ ದೊಡ್ಡದಾದ ಏಮ್ಸ್ ಕೊಠಡಿಯನ್ನೇ ನಿರ್ಮಿಸಿದ್ದಾರೆ. ಒಮ್ಮೆ ಅಲ್ಲಿಗೆ ಭೇಟಿ ನೀಡಿದಾಗ, ಖಗೋಳ ಪ್ರದರ್ಶನದ ಜೊತೆಗೆ, ಏಮ್ಸ್ ಕೊಠಡಿ ಒಳಗೂ ಒಂದು ವಾಕ್ ಮಾಡಿ ಬನ್ನಿ.


ಇದನ್ನೂ ಓದಿ: ಐದು ಶತಮಾನಗಳಲ್ಲೇ ಅತ್ಯಂತ ದೀರ್ಘವಾದ ಭಾಗಶಃ ಚಂದ್ರ ಗ್ರಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...