Homeಮುಖಪುಟಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

ಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

- Advertisement -
- Advertisement -

ರೈತರ ನಿರಂತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾಯ್ದೆಗನ್ನು ಹಿಂತೆಗೆದುಕೊಂಡಿದೆ. ರೈತರ ದೃಷ್ಟಿಯೀಗ ಎಂಎಸ್‌ಪಿ ಖಾತ್ರಿಗಾಗಿ ಕಾನೂನು ಮಾಡಬೇಕು ಎಂಬುದರ ಮೇಲಿದೆ. ರೈತರ ಬಹು ದಿನದ ಬೇಡಿಕೆಗಳಲ್ಲಿ ಒಂದಾದ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಕಾನೂನು ಜಾರಿಗೂ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಈ ಸಂಬಂಧ ಸಮಿತಿಯನ್ನು ರಚಿಸಿದೆ. ಆದರೆ, ರೈತ ಸಂಘಗಳ 5 ಜನ ಪ್ರತಿನಿಧಿಗಳನ್ನೂ ಈ ಸಮಿತಿಗೆ ನೇಮಕ ಮಾಡಲು ಬೇಡಿಕೆ ಇಟ್ಟಿದ್ದು, ಇದು ಸಾಧ್ಯವಾದರೆ ರೈತರ ಹೋರಾಟವನ್ನು ಅಂತ್ಯಗೊಳಿಸುವ ಚರ್ಚೆಗಳು ಕೇಳಿಬರುತ್ತಿವೆ.

ಜಮ್ಹುರಿ ಕಿಸಾನ್ ಸಭಾದ ಪ್ರಧಾನ ಕಾರ್ಯದರ್ಶಿ ಕುಲ್ವಂತ್ ಸಿಂಗ್ ಸಂಧು ಈ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ್ದು, “ಸಮಿತಿಯಲ್ಲಿ ಸೇರಿಸಬೇಕಾದ ಐದು ಜನರ ಹೆಸರನ್ನು ನಾಮನಿರ್ದೇಶನ ಮಾಡುವ ಬಗ್ಗೆ ನಾವು ಸರ್ಕಾರದಿಂದ ಸಂದೇಶವನ್ನು ಸ್ವೀಕರಿಸಿದ್ದೇವೆ. ರೈತ ಸಂಘದ ಮುಖಂಡರು ಮತ್ತು ತಜ್ಞರನ್ನು ಒಳಗೊಂಡ ಐದು ಜನರ ಹೆಸರನ್ನು ನಿರ್ಧರಿಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬುಧವಾರ ಸಭೆ ಸೇರಲಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದೆ. ಅಲ್ಲದೆ ಎಂಎಸ್ಪಿ ಕುರಿತು ಸಮಿತಿಯನ್ನು ರಚಿಸುವುದು, ಅದರ ವಿಧಾನಗಳನ್ನು ಚರ್ಚಿಸುವುದು ಮತ್ತು ರೈತರ ವಿರುದ್ಧದ ಎಫ್ಐಆರ್ಗಳನ್ನು ಹಿಂಪಡೆಯುವುದು ಸೇರಿದಂತೆ ರೈತರ ಹಲವಾರು ಬೇಡಿಕೆಗಳನ್ನು ಈಡೇರಿಸಿದರೆ, ರೈತರಿಂದ “ಧರಣಿಯನ್ನು ಹಿಂತೆಗೆದುಕೊಳ್ಳಲು ಇದು ಬಲವಾದ ಅಂಶವಾಗಿದೆ” ಎಂದು ಅವರು ತಿಳಿಸಿದ್ದಾರೆ.

ಪಂಜಾಬ್-ಹರಿಯಾಣ ಸೇರಿದಂತೆ ಅನೇಕ ರಾಜ್ಯಗಳ ರೈತರು ದೆಹಲಿ ಗಡಿಗಳಾದ ಟಿಕ್ರಿ, ಸಿಂಘು, ಶಹಜಾನ್ಪುರ್, ಘಾಜೀಪುರ್‌ನಲ್ಲಿ ಕಳೆದ ಒಂದು ವರ್ಷದಿಂದ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಮುಂದಿನ ಎರಡು ವರ್ಷದವರೆಗೆ ಹೋರಾಟಕ್ಕೆ ಎಲ್ಲಾ ತಯಾರಿಯನ್ನು ನಡೆಸಿದ್ದರು. ಆದರೆ, ಇದೀಗ ರೈತರ ಎದುರು ಸರ್ಕಾರವೇ ಮಣಿದಿರುವ ಪರಿಣಾಮ ರೈತರ ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಮುಂದಿನ ಕ್ರಮವನ್ನು ಡಿಸೆಂಬರ್ 4 ರಂದು ಪ್ರಕಟಿಸುವ ನಿರೀಕ್ಷೆಯಿದೆ.

ಬಿಕೆಯು ನ ಪ್ರಧಾನ ಕಾರ್ಯದರ್ಶಿ ಜಗಮೋಹನ್ ಸಿಂಗ್ ಪಟಿಯಾಲ ಸಹ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, “ಎಂಎಸ್ಪಿ (MSP) ಸಮಿತಿಯ ಭಾಗವಾಗಲು ಐದು ರೈತ ಸಂಘದ ಮುಖಂಡರ ಹೆಸರುಗಳನ್ನು ಕೋರಿ ಸರ್ಕಾರ ಮಂಗಳವಾರ ನಮ್ಮನ್ನು ಸಂಪರ್ಕಿಸಿದೆ. ರೈತರ ವಿರುದ್ಧದ ಮೊಕದ್ದಮೆಗಳನ್ನು ಹಿಂಪಡೆಯುವಂತೆ ಎಲ್ಲಾ ರಾಜ್ಯಗಳಿಗೂ ಪತ್ರ ಕಳುಹಿಸಲಾಗಿದೆ ಎಂದು ಮೌಖಿಕ ಭರವಸೆ ನೀಡಿದೆ. ಆದರೆ ಇನ್ನೂ ಯಾವ ವಿಚಾರವನ್ನೂ ಬರಹದ ರೂಪದಲ್ಲಿ ಲಿಖಿತ ವಿಶ್ವಾಸ ನೀಡಿಲ್ಲ. ಗೃಹ ಸಚಿವಾಲಯ ನಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಹಾಗಾಗಿ ಹೆಚ್ಚಿನ ಬೇಡಿಕೆಗಳನ್ನು ಈಡೇರಿಸಲಾಗಿದೆ ಎಂದು ನಾನು ನಂಬುತ್ತೇನೆ” ಎಂದು ಜಗಮೋಹನ್ ಸಿಂಗ್ ಪಟಿಯಾಲ ತಿಳಿಸಿದ್ದಾರೆ.

“ವಿದ್ಯುಚ್ಛಕ್ತಿ (ತಿದ್ದುಪಡಿ) ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವುದಿಲ್ಲ ಎಂದು ತಿಳಿಸಲಾಗಿದೆ ಮತ್ತು ಮಾಲಿನ್ಯ ನಿಯಂತ್ರಣ ಸುಗ್ರೀವಾಜ್ಞೆಯಲ್ಲಿ ರೈತರಿಗೆ ಹುಲ್ಲು ಸುಡುವವರಿಗೆ ದಂಡ ವಿಧಿಸುವ ವಿಭಾಗವನ್ನು ಹಿಂಪಡೆಯಲಾಗಿದೆ. ಆದರೆ ಹೆಚ್ಚಿನ ವಿಷಯಗಳನ್ನು ನಮಗೆ ಮೌಖಿಕವಾಗಿ ತಿಳಿಸಲಾಗಿದೆ, ಲಿಖಿತವಾಗಿ ಅಲ್ಲ” ಎಂದು ಅವರು ಹೇಳಿದರು.

ಕ್ರಾಂತಿಕಾರಿ ಕಿಸಾನ್ ಯೂನಿಯನ್ ಅಧ್ಯಕ್ಷ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕರಾದ ಡಾ.ದರ್ಶನ್ ಪಾಲ್ ಮಾತನಾಡಿ, ‘ಎಂಎಸ್ಪಿ ಸಮಿತಿಗೆ ಐದು ರೈತರ ಪ್ರತಿನಿಧಿಗಳ ಹೆಸರನ್ನು ಸರ್ಕಾರ ಕೇಳಿದೆ ಎಂದು ನನಗೆ ತಿಳಿದಿದೆ. ಆದರೆ ಯಾರೂ ನನ್ನನ್ನು ಸಂಪರ್ಕಿಸಲಿಲ್ಲ ಎಂದಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆ ರದ್ದತಿಗೆ ಒಪ್ಪಿಗೆ ನೀಡಿದ ರಾಷ್ಟ್ರಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...