Homeಮುಖಪುಟಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ - ರೈತರ ಪ್ರತಿಭಟನೆ

ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

- Advertisement -
- Advertisement -

ಖಾಸಗಿ ಕಂಪನಿಗಳು ಮಂಡಿಗಳಲ್ಲಿ ಹತ್ತಿಯನ್ನು ಕಡಿಮೆ ದರದಲ್ಲಿ ಮಾರಾಟ ಮಾಡಲು ಒತ್ತಾಯಿಸುತ್ತಿವೆ ಎಂದು ಆರೋಪಿಸಿ ರೈತರು ಪಂಜಾಬ್‌ನ ಬಟಿಂಡಾದ ಮಾರುಕಟ್ಟೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದಾರೆ.

ಮಾಳ್ವಾ ಜಿಲ್ಲೆಯ ಕೆಲವು ಮಂಡಿಗಳಲ್ಲಿ ಹತ್ತಿ ಬೆಳೆಗಾರರಿಗೆ ಎಂಎಸ್ಪಿ ಕೂಡ ಸಿಗುತ್ತಿಲ್ಲ. ರೈತರ ಬೆಳೆದ ಹತ್ತಿಯನ್ನು ಕಳಪೆ ಗುಣಮಟ್ಟ ಎಂದು ಉಲ್ಲೇಖಿಸುತ್ತಿರುವ ಖಾಸಗಿ ಕಂಪನಿಗಳು, ಬೆಳೆಗೆ ಕಡಿಮೆ ಬೆಲೆ (ಎಂಎಸ್ಪಿಗಿಂತ) ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾಳ್ವಾ ಪ್ರದೇಶದಲ್ಲಿನ ರೈತರು ಬೆಳೆದ ಹತ್ತಿಗೆ ಈ ಋತುವಿನಲ್ಲಿ ಸಾರ್ವಕಾಲಿಕ ಹೆಚ್ಚಿನ ಬೆಲೆ ಅಂದರೆ ಕ್ವಿಂಟಾಲ್‌ಗೆ 9,400 ರೂ ಇದೆ. ಅಕಾಲಿಕ ಮಳೆ ಹಾಗೂ ಗುಲಾಬಿ ಬೂದಿ ಹುಳುವಿನ ದಾಳಿಯಿಂದಾಗಿ ಈ ಪ್ರದೇಶದಲ್ಲಿ ಹತ್ತಿ ಬೆಳೆಗೆ ಗಣನೀಯ ಹಾನಿ ಉಂಟಾಗಿದ್ದು, ಇದು ಹತ್ತಿ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ.

ಬಟಿಂಡಾ ಜಿಲ್ಲೆಯ ಶೇರ್ಗಡ ಗ್ರಾಮದ ರೈತ ಸಂದೀಪ್ ಸಿಂಗ್ ಮಾತನಾಡಿ, ‘ಒಂದು ವಾರದ ಹಿಂದೆಯಷ್ಟೆ ಹತ್ತಿ ಪ್ರತಿ ಕ್ವಿಂಟಾಲ್‌ಗೆ 8,500 ರೂಗೆ ಮಾರಾಟವಾಗಿತ್ತು. ಆದರೆ ಪ್ರಸ್ತುತ ಉತ್ತಮ ಗುಣಮಟ್ಟದ ಹತ್ತಿಯು 7,500 ರೂಗಿಂತ ಹೆಚ್ಚು ದರಕ್ಕೆ ಮಾರಾಟವಾಗುತ್ತಿಲ್ಲ. ಹತ್ತಿಯು ಉತ್ತಮ ಗುಣಮಟ್ಟದ್ದಾಗಿದ್ದು, ಕಡಿಮೆ ದರಕ್ಕೆ ನಾವು ಮಾರಾಟ ಮಾಡಲು ನಾವು ಸಿದ್ಧರಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೈ ಸಿಂಗ್ವಾಲ ಗ್ರಾಮದ ಮತ್ತೊಬ್ಬ ರೈತರಾದ ಜಗದೇವ್ ಸಿಂಗ್ ಮಾತನಾಡಿ, ‘ಕೆಲ ಸಮಯದ ಹಿಂದೆ ಹತ್ತಿ ಪ್ರತಿ ಕ್ವಿಂಟಾಲ್ಗೆ 9,400 ರೂಗೆ ಖರೀದಿಸಲಾಗಿತ್ತು. ಆದರೆ ಈಗ ಉದ್ದೇಶಪೂರ್ವಕವಾಗಿ ಖಾಸಗಿಯವರು ಬೆಲೆಯನ್ನು ಕಡಿಮೆ ಮಾಡಿದ್ದಾರೆ. ನಾನು ತಂದ ಉತ್ತಮ ಗುಣಮಟ್ಟದ ಹತ್ತಿಗೆ ಅವರು ಕೇವಲ 7,490 ರೂ ಕೊಡುತ್ತೇವೆ ಎಂದರು ನಾನು ಮಾರಲು ನಿರಾಕರಿಸಿದೆ. ಅವರು ಬೆಲೆ ಏರಿಸದಿದ್ದರೆ, ನಾನು ಬೇರೆ ಮಂಡಿಗೆ ಹೋಗಿ ಅಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತೇನೆ’ ಎಂದು ಬೇಸರ ವ್ಯಕ್ತಪಡಿಸಿದರು.

ಮಾನ್ಸಾ ಜಿಲ್ಲೆಯಲ್ಲಿ, ಖಾಸಗಿಯವರು ಹತ್ತಿಯನ್ನು ಕ್ವಿಂಟಲ್ಗೆ 5,200 ರೂಗೆ ಖರೀದಿಸಿದ್ದಾರೆ. ಇದು ಈ ವರ್ಷ ನಿಗದಿಪಡಿಸಿರುವ ಎಂಎಸ್ಪಿ (ಕನಿಷ್ಟ ಬೆಂಬಲ ಬೆಲೆ) 5,925 ರೂ ಗಿಂತ ಕಡಿಮೆಯಾಗಿದೆ.
ಖಾಸಗಿಯವರ ಈ ನಿರಂಕುಶ ಧೋರಣೆ ವಿರುದ್ಧ ಹತ್ತಿ ಬೆಳೆಗಾರರು ಕೆಲ ಗ್ರಾಮಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಖಾಸಗಿ ಕಂಪನಿಗಳು ಖರೀದಿಸುತ್ತಿರುವ ಹತ್ತಿಯ ಬೆಲೆಯಲ್ಲಿ ಖಂಡಿತವಾಗಿಯೂ ಇಳಿಕೆಯಾಗಿದೆ ಎಂದು ಭಾರತೀಯ ಹತ್ತಿ ನಿಗಮದ (ಸಿಸಿಐ) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಖಾಸಗಿ ಕಂಪನಿಗಳು ಒಟ್ಟುಗೂಡಿ ‘ಪೂಲ್’ ಅನ್ನು ರಚಿಸಿಕೊಂಡಿವೆ. ಅವರು ಮುಂಚೆಯೇ ಮಾತಾಡಿಕೊಂಡಿದ್ದು ಉತ್ತಮ ಗುಣಮಟ್ಟದ ಹತ್ತಿಗೆ ನಿಗದಿತ ಬೆಲೆಗಿಂತ ಹೆಚ್ಚಿನ ದರವನ್ನು ಉಲ್ಲೇಖಿಸದಿರಲು ನಿರ್ಧರಿಸಿದ್ದಾರೆ’ ಎಂದು ಅವರು ಹೇಳಿದರು.

ಮಾನ್ಸಾ ಜಿಲ್ಲೆಯ ಬಿಕೆಯು (ದಕೌಂಡ)ದ ಮುಖಂಡ ಗೋರಾ ಸಿಂಗ್ ಭೈನಿ ಬಾಘಾ ಮಾತನಾಡಿ, ‘ಕೆಲವೇ ದಿನಗಳ ಹಿಂದೆ ಉತ್ತಮ ಗುಣಮಟ್ಟದ ಹತ್ತಿ ಕ್ವಿಂಟಲ್‌ಗೆ 8,500 ರಿಂದ 9,400 ರೂ ಸಿಗುತ್ತಿತ್ತು. ಈಗ ಇದ್ದಕ್ಕಿದ್ದಂತೆ ಬೆಲೆ ಕುಸಿದಿರುವುದು ಹೇಗೆ? ಕೀಟಬಾಧೆ ಹಾಗೂ ಅಕಾಲಿಕ ಮಳೆಯಿಂದ ಹತ್ತಿ ಬೆಳೆಗಾರರು ಈಗಾಗಲೇ ನಷ್ಟ ಅನುಭವಿಸಿದ್ದಾರೆ. ಅವರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ನೀಡದಿದ್ದರೆ, ನಾವು ಶೀಘ್ರದಲ್ಲೇ ಅನಿರ್ದಿಷ್ಟ ಹೋರಾಟವನ್ನು ಪ್ರಾರಂಭಿಸುತ್ತೇವೆ’ ಎಂದು ಅವರು ಎಚ್ಚರಿಕೆ ನೀಡಿದರು.


ಇದನ್ನೂ ಓದಿ: ಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...