Homeಮುಖಪುಟರೈತರಿಗೆ ಸಾಲ ನೀಡಲು SBI ಜೊತೆ ಕೈಜೋಡಿಸಿದ ಅದಾನಿ ಕ್ಯಾಪಿಟಲ್

ರೈತರಿಗೆ ಸಾಲ ನೀಡಲು SBI ಜೊತೆ ಕೈಜೋಡಿಸಿದ ಅದಾನಿ ಕ್ಯಾಪಿಟಲ್

ಆಸ್ಟ್ರೇಲಿಯಾದಲ್ಲಿ ಅದಾನಿಯ ಕಲ್ಲಿದ್ದಲು ಗಣಿಗಾರಿಕೆ ವಿರುದ್ಧ ದೊಡ್ಡ ಹೋರಾಟ ನಡೆಯುತ್ತಿದೆ. ಅದಾನಿಗೆ ಎಸ್‌ಬಿಐ ಸಾಲ ಕೊಡಬಾರದು ಎಂದು ಜನರು ಪ್ರತಿಭಟಿಸುತ್ತಿದ್ದಾರೆ. ಆದರೆ ಅದೇ ಎಸ್‌ಬಿಐ ಜೊತೆಸೇರಿ ರೈತರಿಗೆ ಸಾಲ ನೀಡಲು ಅದಾನಿ ಕ್ಯಾಪಿಟಲ್ ಮುಂದಾಗಿದೆ.

- Advertisement -
- Advertisement -

ರೈತರಿಗೆ ಟ್ಯ್ರಾಕ್ಟರ್ ಮತ್ತು ಕೃಷಿ ಉಪಕರಣಗಳ ಖರೀದಿಗೆ ಸಹ ಸಾಲ ನೀಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು (SBI) ಇತ್ತೀಚೆಗೆ ಅದಾನಿ ಗ್ರೂಪ್‌ನ NBFC ಅಂಗವಾದ ಅದಾನಿ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಈ ಕುರಿತು SBI ನೀಡಿರುವ ಪ್ರಕಟಣೆಯಲ್ಲಿ, ‘ಈ ಪಾಲುದಾರಿಕೆಯ ಮೂಲಕ, ಬೆಳೆಗಳ ಉತ್ಪಾದಕತೆಯನ್ನು ಹೆಚ್ಚಿಸಲು, ಕೃಷಿ ಯಾಂತ್ರೀಕರಣದ ಅಳವಡಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದೇಶದ ಒಳನಾಡಿನ ರೈತ ಗ್ರಾಹಕರನ್ನು ಆಕರ್ಷಿಸಲು ಸಾಧ್ಯವಾಗುತ್ತದೆ. ರೈತರ ಆದಾಯವನ್ನು ದ್ವಿಗುಣಗೊಳಿಸಲು, ಸಾಲದ ಹರಿವನ್ನು ಹೆಚ್ಚಿಸಲು, ಕೃಷಿ ಯಾಂತ್ರಿಕರಣ, ರೈತ ಉತ್ಪಾದಕ ಸಂಸ್ಥೆಗಳು ಇತ್ಯಾದಿಗಳಿಗೆ ಹಣಕಾಸು ಒದಗಿಸಲು ಅನೇಕ NBFC ಗಳೊಂದಿಗೆ ಸಹಕಾರಿ ಸಾಲ ನೀಡುವ ಅವಕಾಶಗಳನ್ನು SBI ಸಕ್ರಿಯವಾಗಿ ಎದುರು ನೋಡುತ್ತಿದೆ’ ಎಂದು ತಿಳಿಸಿದೆ.

SBI ಅಧ್ಯಕ್ಷ ದಿನೇಶ್ ಖಾರಾ, ‘‘ಸಹ ಸಾಲ’ ಕಾರ್ಯಕ್ರಮದ ಅಡಿಯಲ್ಲಿ ಅದಾನಿ ಕ್ಯಾಪಿಟಲ್‌ನೊಂದಿಗೆ ಸಹಭಾಗಿತ್ವವನ್ನು ಹೊಂದಲು ನಾವು ಸಂತೋಷಪಡುತ್ತೇವೆ’ ಎಂದು ಹೇಳಿದ್ದಾರೆ.

‘SBI ಗ್ರಾಹಕರ ನೆಲೆಯನ್ನು ವಿಸ್ತರಿಸಲು ಮತ್ತು ದೇಶದ ಹಿಂದುಳಿದ ಕೃಷಿ ವಿಭಾಗಗಳೊಂದಿಗೆ ಸಂಪರ್ಕ ಸಾಧಿಸಲು ಈ ಪಾಲುದಾರಿಕೆಯು ಸಹಾಯ ಮಾಡುತ್ತದೆ. ಭಾರತದ ಕೃಷಿ ಆರ್ಥಿಕತೆಯ ಬೆಳವಣಿಗೆಗೆ ಇದು ಮತ್ತಷ್ಟು ಕೊಡುಗೆ ನೀಡುತ್ತದೆ. ದೂರದ ಪ್ರದೇಶಗಳಲ್ಲಿನ ಗ್ರಾಹಕರನ್ನು ತಲುಪಲು ಮತ್ತು ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಲು ನಾವು ಎನ್ಬಿಎಫ್ಸಿಗಳೊಂದಿಗೆ ಕೆಲಸ ಮಾಡುವುದನ್ನು ಮುಂದುವರೆಸುತ್ತೇವೆ’ ಎಂದು ತಿಳಿಸಿದ್ದಾರೆ.

ಅದಾನಿ ಕ್ಯಾಪಿಟಲ್‌ನ ಎಂಡಿ ಮತ್ತು ಸಿಇಒ ಗೌರವ್ ಗುಪ್ತಾ, ‘ಭಾರತದ ಸಣ್ಣ ಮತ್ತು ಅತಿ ಸಣ್ಣ ಉದ್ದಿಮೆದಾರರಿಗೆ ಆರ್ಥಿಕ ಸಾಲವನ್ನು ಲಭ್ಯವಾಗುವಂತೆ ಮಾಡುವುದು ನಮ್ಮ ಗುರಿಯಾಗಿದೆ. SBI ಜೊತೆಗಿನ ನಮ್ಮ ಪಾಲುದಾರಿಕೆಯು ಬ್ಯಾಂಕ್ ಸೌಲಭ್ಯಗಳನ್ನು ಹೊಂದಿಲ್ಲದ ಹಾಗೂ ಹಿಂದುಳಿದ ಭಾರತೀಯ ರೈತರನ್ನು ಗುರಿಯಾಗಿಸುವುದಾಗಿದೆ. ನಮ್ಮ ಗುರಿಯು, ಈ ಪಾಲುದಾರಿಕೆಯ ಮೂಲಕ ಕೃಷಿ ಯಾಂತ್ರಿಕರಣಕ್ಕೆ ಕೊಡುಗೆ ನೀಡುವುದು ಮತ್ತು ಕೃಷಿ ವಿಭಾಗದ ಉತ್ಪಾದಕತೆ ಹಾಗೂ ಆದಾಯವನ್ನು ಸುಧಾರಿಸುವಲ್ಲಿ ಪಾತ್ರವಹಿಸುವುದಾಗಿದೆ’ ಎಂದು ವಿವರಿಸಿದ್ದಾರೆ.

ಒಟ್ಟಿನಲ್ಲಿ ಅದಾನಿ ಕಂಪನಿ ಕೃಷಿ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವುದನ್ನು ಈ ಒಪ್ಪಂದ ಬಹಿರಂಗಪಡಿಸುತ್ತದೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಏಕಸ್ವಾಮ್ಯ ಸಾಧಿಸುತ್ತಿರುವ ಅದು ಏಷ್ಯಾದ ನಂಬರ್ ಶ್ರೀಮಂತ ಕಂಪನಿ ಎನಿಸಿದೆ. ಕೃಷಿ ಕಾಯ್ದೆಗಳು ಜಾರಿಯಾದ ನಂತರ ದೇಶಾದ್ಯಂತ ರೈತರು ಅಂಬಾನಿ-ಅದಾನಿ ಕಂಪನಿಗಳನ್ನು ಬಾಯ್ಕಾಟ್ ಮಾಡುವಂತೆ ಕರೆ ನೀಡಿದ್ದರು. ಆಸ್ಟ್ರೇಲಿಯಾದಲ್ಲಿ ಅದಾನಿಯ ಕಲ್ಲಿದ್ದಲು ಗಣಿಗಾರಿಕೆ ವಿರುದ್ಧ ದೊಡ್ಡ ಹೋರಾಟ ನಡೆಯುತ್ತಿದೆ. ಅದಾನಿಗೆ ಎಸ್‌ಬಿಐ ಸಾಲ ಕೊಡಬಾರದು ಎಂದು ಜನರು ಪ್ರತಿಭಟಿಸುತ್ತಿದ್ದಾರೆ. ಆದರೆ ಅದೇ ಎಸ್‌ಬಿಐ ಜೊತೆಸೇರಿ ರೈತರಿಗೆ ಸಾಲ ನೀಡಲು ಅದಾನಿ ಕ್ಯಾಪಿಟಲ್ ಮುಂದಾಗಿದೆ. ಇದಕ್ಕೆ ರೈತರ ಪ್ರತಿಕ್ರಿಯೆ ಹೇಗಿರುತ್ತೆ ಎಂಬುದನ್ನು ಕಾದು ನೋಡಬೇಕಿದೆ.


ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅದಾನಿಗೆ ಎಸ್‌ಬಿಐ ಸಾಲ ಕೊಡಬಾರದು ಎಂದು ಜನರು ಪ್ರತಿಭಟಿಸುತ್ತಿದ್ದಾರೆ. ಆದರೆ ಅದೇ ಎಸ್‌ಬಿಐ ಜೊತೆಸೇರಿ ರೈತರಿಗೆ ಸಾಲ ನೀಡಲು ಅದಾನಿ ಕ್ಯಾಪಿಟಲ್ ಮುಂದಾಗಿದೆ. ಇದಕ್ಕೆ ರೈತರ ಪ್ರತಿಕ್ರಿಯೆ ಹೇಗಿರುತ್ತೆ ಎಂಬುದನ್ನು ಕಾದು ನೋಡಬೇಕಿದೆ.

  2. ಒಟ್ಟಿನಲ್ಲಿ ಅದಾನಿ ಕಂಪನಿ ಕೃಷಿ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವುದನ್ನು ಈ ಒಪ್ಪಂದ ಬಹಿರಂಗಪಡಿಸುತ್ತದೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಏಕಸ್ವಾಮ್ಯ ಸಾಧಿಸುತ್ತಿರುವ ಅದು ಏಷ್ಯಾದ ನಂಬರ್ ಶ್ರೀಮಂತ ಕಂಪನಿ ಎನಿಸಿದೆ. ಕೃಷಿ ಕಾಯ್ದೆಗಳು ಜಾರಿಯಾದ ನಂತರ ದೇಶಾದ್ಯಂತ ರೈತರು ಅಂಬಾನಿ-ಅದಾನಿ ಕಂಪನಿಗಳನ್ನು ಬಾಯ್ಕಾಟ್ ಮಾಡುವಂತೆ ಕರೆ ನೀಡಿದ್ದರು.

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...