Homeಕರ್ನಾಟಕನಟಿ ಅಮೂಲ್ಯಾ ಗರ್ಭಿಣಿಯಾಗಿದ್ದು ‘ರಾಜ್ಯಕ್ಕೆ ಶುಭಸುದ್ದಿ’ ಎಂದ BTV; ಆಕ್ರೋಶ-ಟ್ರೋಲ್

ನಟಿ ಅಮೂಲ್ಯಾ ಗರ್ಭಿಣಿಯಾಗಿದ್ದು ‘ರಾಜ್ಯಕ್ಕೆ ಶುಭಸುದ್ದಿ’ ಎಂದ BTV; ಆಕ್ರೋಶ-ಟ್ರೋಲ್

- Advertisement -
- Advertisement -

ಕನ್ನಡ ಮಾಧ್ಯಮಗಳು ಸಿನಿಮಾ ನಟ-ನಟಿಯರ ಪ್ರತಿ ವಿಚಾರದಲ್ಲಿ ‘ಮಾಧ್ಯಮ ಕರ್ತವ್ಯ’ವನ್ನು ಮರೆತು ಕೆಟ್ಟದಾಗಿ ವರ್ತಿಸುತ್ತವೆ. ಜನಪ್ರಿಯ ನಟ-ನಟಿಯರ ಸಾವು, ಅಪಘಾತ, ಅನಾರೋಗ್ಯ, ಪ್ರೀತಿ-ಪ್ರಣಯ ಮತ್ತು ಅವರ ಖುಷಿಯ ಘಳಿಗೆಯನ್ನು ಭಾವನಾತ್ಮಕವಾಗಿ ವೀಕ್ಷಕರ ಮೇಲೆ ಹೇರಿ ಬಿಡುತ್ತದೆ. ಜೊತೆಗೆ ಬೇರೆ ಅಂತಹದ್ದೇ ಸುದ್ದಿಗಳು ಸಿಗುವವರೆಗೂ ಅವುಗಳ ಸುತ್ತ ಗಿರಕಿ ಹೊಡೆಯುತ್ತಲೆ ಇರುತ್ತವೆ.

ಈ ವೇಳೆ ಅವು ನಟ ನಟಿಯರ ಖುಷಿ-ದುಃಖಗಳಷ್ಟೇ ರಾಜ್ಯದ ಸಮಸ್ಯೆ ಎಂದು ಬಿಂಬಿಸಿ ಉಳಿದ ಬಹುಮುಖ್ಯವಾದ ಸುದ್ದಿಗಳನ್ನು ತೆರೆಮರೆಯಲ್ಲಿ ಹುದುಗಿಸಿ ಬಿಡುತ್ತದೆ. ಕನ್ನಡದ ಸುದ್ದಿ ವಾಹಿನಿ ಬಿಟಿವಿ ಕೂಡಾ ಗುರುವಾರ ಅದೇ ರೀತಿಯಲ್ಲಿ ವರ್ತಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ. ಹಲವಾರು ನೆಟ್ಟಿಗರು ಈ ಬಗ್ಗೆ ಬಿಟಿವಿಯನ್ನು ಟ್ರೋಲ್ ಮಾಡುತ್ತಿದ್ದಾರೆ.

ಈ ಬಾರಿ ಕನ್ನಡದ ನಟಿ ಅಮೂಲ್ಯಾ ಅವರು ಗರ್ಭಿಣಿಯಾಗಿರುವುದನ್ನು ಬಿಟಿವಿ ‘ರಾಜ್ಯಕ್ಕೆ ಶುಭ ಸುದ್ದಿ’ ಎಂದು ವರದಿ ಮಾಡಿದೆ. ಅಮೂಲ್ಯಾ ಅವರು ಗರ್ಭಿಣಿ ಆಗಿರುವುದನ್ನು ‘ಮೆಘಾ ಬ್ರೇಕಿಂಗ್’ ಸುದ್ದಿ ಎಂದು ಉಲ್ಲೇಖಿಸಿರುವ ಬಿಟಿವಿ, “ಉಲ್ಲಾಸದ ಹೂಮಳೆ ಸುರಿಸುವ ಖುಷಿಖುಷಿಯ ಸುದ್ದಿ, ಸ್ಯಾಂಡಲ್‌ವುಡ್‌ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್, ಇಡೀ ರಾಜ್ಯ ಖುಷಿ ಪಡುವ ಸುದ್ದಿ-ನಟಿ ಅಮೂಲ್ಯಾ ಪ್ರಗ್ನೆಂಟ್‌” ಎಂದು ಸ್ಕ್ರೀನ್‌ನಲ್ಲಿ ಬರೆದು ವೀಕ್ಷಕರಿಗೆ ಸುದ್ದಿಯನ್ನು ತಿಳಿಸಿದೆ.

 ಇದನ್ನೂ ಓದಿ:ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ಆದರೆ ಪ್ರಜ್ಞಾವಂತರು ಬಿಟಿವಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಟ್ರೋಲ್ ಕೂಡಾ ಮಾಡಲಾಗುತ್ತಿದೆ.

ಇರ್ಶಾದ್ ಯುಟಿ ಅವರು, ‘ಈ ಮಟ್ಟಕ್ಕೆ ನಮ್ಮ ಕನ್ನಡದ ಸುದ್ದಿಮಾಧ್ಯಮಗಳು ಇಳಿದಿರುವುದು ನಾಚಿಕೆಯಿಲ್ಲವೇ…???’

ಚಿಂತಕ ಡಾ.ವಡ್ಡಗೆರೆ ನಾಗರಾಜಯ್ಯ ಅವರು, “ಕೇವಲ ಕರ್ನಾಟಕ ರಾಜ್ಯವಷ್ಟೇ ಅಲ್ಲದೆ ಇಡೀ ವಿಶ್ವದ ಕನ್ನಡಿಗರು ಖುಶಿಪಡಬೇಕಾದ ಸುದ್ದಿ ಇದು!. Btv ಕಂಜೂಸುಗಳು ಅಮೂಲ್ಯ ಬಸಿರಾಗಿರುವ ಖುಶಿಯ ಸುದ್ದಿಯನ್ನು ಕೇವಲ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತಗೊಳಿಸಿದ್ದಾರೆ!!” ಎಂದು ವ್ಯಂಗ್ಯವಾಡಿದ್ದಾರೆ.

“ಮಾನವನ ಜನ್ಮದಲ್ಲಿ ಹಿಂದೆಯೂ ಆಗಲಿಲ್ಲ ಮುಂದೆಯೂ ಆಗುವುದಿಲ್ಲ ಇಂದು ಇತಿಹಾಸ ಸೃಷ್ಟಿಸುವ ನಟಿ ಅಮೂಲ್ಯ ಅವರ ತಾಯಿತನ. ಬಿಟಿವಿ ಗೆ ಬೇರೆ ಸುದ್ದಿ ಸಿಕ್ಕಿಲ್ಲ”

ಪತ್ರಕರ್ತ ನಿಖಿಲ್ ಕೊಲ್ಪೆ, “ಬಿಟಿವಿಯ ಅತ್ಯಂತ ಮಹತ್ವದ ಸ್ಫೋಟಕ “ಪ್ರೆಗ್ನೆಂಟ್ ಸುದ್ದಿ”ಯ ಬಗ್ಗೆ ತನಿಖಾ ವರದಿ ಪ್ರಸಾರವಾಗಲಿ! ಈ ಅಧಿವೇಶನದಲ್ಲಿ ಗಂಭೀರ ಚರ್ಚೆಯಾಗಲಿ!” ಎಂದು ವ್ಯಂಗ್ಯವಾಡಿದ್ದಾರೆ.

“ಕರ್ನಾಟಕದ ಸುತ್ತಮುತ್ತಲಿನ ರಾಜ್ಯಗಳ ಪತ್ರಕರ್ತರು, ನಮ್ಮ ರಾಜ್ಯದ ಕೆಲ! ‘ಮೂರೂ ಬಿಟ್ಟ ಮಾಧ್ಯಮಗಳ’ ವರದಿಗಳನ್ನು ನೋಡಬೇಕು. ನಾವು ಅವರಿಗೆ ತಿಳಿಸಬೇಕು. ಇವರು ಮಾಡುವ ನಾಲಾಯಕ್ ವರದಿಗಳನ್ನು ನೋಡಿ ಆವರ ಚಾನಲ್‌ಗಳಲ್ಲಿ ಇವರಿಗೆ ಉಗಿಯಬೇಕು… ಮಲಯಾಳಿಗಳಿಗೆ ತಿಳಿದರೆ ಖಂಡಿತವಾಗಿಯೂ ಟ್ರೋಲ್ ಮಾಡಿ ಇವರನ್ನು ಬೆನ್ನಟ್ಟಿ ಕೊಲ್ಲುತ್ತಾರೆ”

ಇದನ್ನೂ ಓದಿ:ಲಖೀಂಪುರ್ ರೈತ ಹತ್ಯೆ; ಅಧಿಕಾರದ ಪರವಾಗಿ ನಿಂತ ಮಾಧ್ಯಮಗಳ ದುರುಳತನ

ಇದನ್ನೂ ಓದಿ:ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಇದನ್ನೂ ಓದಿ:ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...