Homeಕರ್ನಾಟಕನಟಿ ಅಮೂಲ್ಯಾ ಗರ್ಭಿಣಿಯಾಗಿದ್ದು ‘ರಾಜ್ಯಕ್ಕೆ ಶುಭಸುದ್ದಿ’ ಎಂದ BTV; ಆಕ್ರೋಶ-ಟ್ರೋಲ್

ನಟಿ ಅಮೂಲ್ಯಾ ಗರ್ಭಿಣಿಯಾಗಿದ್ದು ‘ರಾಜ್ಯಕ್ಕೆ ಶುಭಸುದ್ದಿ’ ಎಂದ BTV; ಆಕ್ರೋಶ-ಟ್ರೋಲ್

- Advertisement -
- Advertisement -

ಕನ್ನಡ ಮಾಧ್ಯಮಗಳು ಸಿನಿಮಾ ನಟ-ನಟಿಯರ ಪ್ರತಿ ವಿಚಾರದಲ್ಲಿ ‘ಮಾಧ್ಯಮ ಕರ್ತವ್ಯ’ವನ್ನು ಮರೆತು ಕೆಟ್ಟದಾಗಿ ವರ್ತಿಸುತ್ತವೆ. ಜನಪ್ರಿಯ ನಟ-ನಟಿಯರ ಸಾವು, ಅಪಘಾತ, ಅನಾರೋಗ್ಯ, ಪ್ರೀತಿ-ಪ್ರಣಯ ಮತ್ತು ಅವರ ಖುಷಿಯ ಘಳಿಗೆಯನ್ನು ಭಾವನಾತ್ಮಕವಾಗಿ ವೀಕ್ಷಕರ ಮೇಲೆ ಹೇರಿ ಬಿಡುತ್ತದೆ. ಜೊತೆಗೆ ಬೇರೆ ಅಂತಹದ್ದೇ ಸುದ್ದಿಗಳು ಸಿಗುವವರೆಗೂ ಅವುಗಳ ಸುತ್ತ ಗಿರಕಿ ಹೊಡೆಯುತ್ತಲೆ ಇರುತ್ತವೆ.

ಈ ವೇಳೆ ಅವು ನಟ ನಟಿಯರ ಖುಷಿ-ದುಃಖಗಳಷ್ಟೇ ರಾಜ್ಯದ ಸಮಸ್ಯೆ ಎಂದು ಬಿಂಬಿಸಿ ಉಳಿದ ಬಹುಮುಖ್ಯವಾದ ಸುದ್ದಿಗಳನ್ನು ತೆರೆಮರೆಯಲ್ಲಿ ಹುದುಗಿಸಿ ಬಿಡುತ್ತದೆ. ಕನ್ನಡದ ಸುದ್ದಿ ವಾಹಿನಿ ಬಿಟಿವಿ ಕೂಡಾ ಗುರುವಾರ ಅದೇ ರೀತಿಯಲ್ಲಿ ವರ್ತಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ. ಹಲವಾರು ನೆಟ್ಟಿಗರು ಈ ಬಗ್ಗೆ ಬಿಟಿವಿಯನ್ನು ಟ್ರೋಲ್ ಮಾಡುತ್ತಿದ್ದಾರೆ.

ಈ ಬಾರಿ ಕನ್ನಡದ ನಟಿ ಅಮೂಲ್ಯಾ ಅವರು ಗರ್ಭಿಣಿಯಾಗಿರುವುದನ್ನು ಬಿಟಿವಿ ‘ರಾಜ್ಯಕ್ಕೆ ಶುಭ ಸುದ್ದಿ’ ಎಂದು ವರದಿ ಮಾಡಿದೆ. ಅಮೂಲ್ಯಾ ಅವರು ಗರ್ಭಿಣಿ ಆಗಿರುವುದನ್ನು ‘ಮೆಘಾ ಬ್ರೇಕಿಂಗ್’ ಸುದ್ದಿ ಎಂದು ಉಲ್ಲೇಖಿಸಿರುವ ಬಿಟಿವಿ, “ಉಲ್ಲಾಸದ ಹೂಮಳೆ ಸುರಿಸುವ ಖುಷಿಖುಷಿಯ ಸುದ್ದಿ, ಸ್ಯಾಂಡಲ್‌ವುಡ್‌ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್, ಇಡೀ ರಾಜ್ಯ ಖುಷಿ ಪಡುವ ಸುದ್ದಿ-ನಟಿ ಅಮೂಲ್ಯಾ ಪ್ರಗ್ನೆಂಟ್‌” ಎಂದು ಸ್ಕ್ರೀನ್‌ನಲ್ಲಿ ಬರೆದು ವೀಕ್ಷಕರಿಗೆ ಸುದ್ದಿಯನ್ನು ತಿಳಿಸಿದೆ.

 ಇದನ್ನೂ ಓದಿ:ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ಆದರೆ ಪ್ರಜ್ಞಾವಂತರು ಬಿಟಿವಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಟ್ರೋಲ್ ಕೂಡಾ ಮಾಡಲಾಗುತ್ತಿದೆ.

ಇರ್ಶಾದ್ ಯುಟಿ ಅವರು, ‘ಈ ಮಟ್ಟಕ್ಕೆ ನಮ್ಮ ಕನ್ನಡದ ಸುದ್ದಿಮಾಧ್ಯಮಗಳು ಇಳಿದಿರುವುದು ನಾಚಿಕೆಯಿಲ್ಲವೇ…???’

ಚಿಂತಕ ಡಾ.ವಡ್ಡಗೆರೆ ನಾಗರಾಜಯ್ಯ ಅವರು, “ಕೇವಲ ಕರ್ನಾಟಕ ರಾಜ್ಯವಷ್ಟೇ ಅಲ್ಲದೆ ಇಡೀ ವಿಶ್ವದ ಕನ್ನಡಿಗರು ಖುಶಿಪಡಬೇಕಾದ ಸುದ್ದಿ ಇದು!. Btv ಕಂಜೂಸುಗಳು ಅಮೂಲ್ಯ ಬಸಿರಾಗಿರುವ ಖುಶಿಯ ಸುದ್ದಿಯನ್ನು ಕೇವಲ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತಗೊಳಿಸಿದ್ದಾರೆ!!” ಎಂದು ವ್ಯಂಗ್ಯವಾಡಿದ್ದಾರೆ.

“ಮಾನವನ ಜನ್ಮದಲ್ಲಿ ಹಿಂದೆಯೂ ಆಗಲಿಲ್ಲ ಮುಂದೆಯೂ ಆಗುವುದಿಲ್ಲ ಇಂದು ಇತಿಹಾಸ ಸೃಷ್ಟಿಸುವ ನಟಿ ಅಮೂಲ್ಯ ಅವರ ತಾಯಿತನ. ಬಿಟಿವಿ ಗೆ ಬೇರೆ ಸುದ್ದಿ ಸಿಕ್ಕಿಲ್ಲ”

ಪತ್ರಕರ್ತ ನಿಖಿಲ್ ಕೊಲ್ಪೆ, “ಬಿಟಿವಿಯ ಅತ್ಯಂತ ಮಹತ್ವದ ಸ್ಫೋಟಕ “ಪ್ರೆಗ್ನೆಂಟ್ ಸುದ್ದಿ”ಯ ಬಗ್ಗೆ ತನಿಖಾ ವರದಿ ಪ್ರಸಾರವಾಗಲಿ! ಈ ಅಧಿವೇಶನದಲ್ಲಿ ಗಂಭೀರ ಚರ್ಚೆಯಾಗಲಿ!” ಎಂದು ವ್ಯಂಗ್ಯವಾಡಿದ್ದಾರೆ.

“ಕರ್ನಾಟಕದ ಸುತ್ತಮುತ್ತಲಿನ ರಾಜ್ಯಗಳ ಪತ್ರಕರ್ತರು, ನಮ್ಮ ರಾಜ್ಯದ ಕೆಲ! ‘ಮೂರೂ ಬಿಟ್ಟ ಮಾಧ್ಯಮಗಳ’ ವರದಿಗಳನ್ನು ನೋಡಬೇಕು. ನಾವು ಅವರಿಗೆ ತಿಳಿಸಬೇಕು. ಇವರು ಮಾಡುವ ನಾಲಾಯಕ್ ವರದಿಗಳನ್ನು ನೋಡಿ ಆವರ ಚಾನಲ್‌ಗಳಲ್ಲಿ ಇವರಿಗೆ ಉಗಿಯಬೇಕು… ಮಲಯಾಳಿಗಳಿಗೆ ತಿಳಿದರೆ ಖಂಡಿತವಾಗಿಯೂ ಟ್ರೋಲ್ ಮಾಡಿ ಇವರನ್ನು ಬೆನ್ನಟ್ಟಿ ಕೊಲ್ಲುತ್ತಾರೆ”

ಇದನ್ನೂ ಓದಿ:ಲಖೀಂಪುರ್ ರೈತ ಹತ್ಯೆ; ಅಧಿಕಾರದ ಪರವಾಗಿ ನಿಂತ ಮಾಧ್ಯಮಗಳ ದುರುಳತನ

ಇದನ್ನೂ ಓದಿ:ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಇದನ್ನೂ ಓದಿ:ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...