Homeಕರ್ನಾಟಕವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..

ವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..

- Advertisement -
- Advertisement -

ವಿಧಾನ ಪರಿಷತ್ ಚುನಾವಣೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಅದರ ಭಾನಗಡಿಗಳ ಬಗ್ಗೆ ಆಕ್ರೋಶ, ಅದರ ಪ್ರಸ್ತುತ್ತೆಯ ಬಗ್ಗೆ ಚರ್ಚೆ ನಡೆಯುವುದು ಸಹಜವೇ. ಕಳೆದ ವಾರದ ಪತ್ರಿಕೆಯಲ್ಲಿ ಹೃಷಿಕೇಶ ಬಹದ್ದೂರ ದೇಸಾಯಿಯವರು “ಮೇಲ್ಮನೆ ಯಾರಿಗೆ ಬೇಕಾಗಿದೆ?” ಎಂದು ಕೇಳಿದ್ದರು. ಅದರಲ್ಲಿ ಪರಿಷತ್ತು ಹೇಗೆ ತನ್ನ ಉದ್ದೇಶ, ಮೌಲ್ಯಗಳಿಂದ ದೂರ ಸರಿಯುತ್ತಾ ಅಪ್ರಸ್ತುತವಾಗುತ್ತಿದೆ, ಕುಟುಂಬ ರಾಜಕಾರಣ, ಸೋತವರ ರೀಹ್ಯಾಬಿಲಿಟೇಷನ್ ಸೆಂಟರ್ ಮತ್ತು ಮುಖ್ಯವಾಗಿ ಮೇಲ್ಮನೆಯಲ್ಲಿ ಮೀಸಲಾತಿ ಇಲ್ಲದಿರುವುದರಿಂದ ಹೇಗೆ ಪ್ರಬಲ ಜಾತಿಗಳ ಅಡುಂಬೋಲವಾಗಿದೆ ಎಂದು ಸೋದಾಹರಣವಾಗಿ ವಿವರಿಸಿದ್ದರು. ಆದರೆ ನನಗೆ ಆ ಲೇಖನದ ಬಗ್ಗೆ ಎರಡು ಆಕ್ಷೇಪಗಳಿವೆ, ಹಾಗಾಗಿ ಇಲ್ಲಿ ಪತ್ರಿಕೆಯಲ್ಲೇ ಪ್ರತಿಕ್ರಿಯುಸುತ್ತಿದ್ದೇನೆ.

“ಮೇಲ್ಮನೆ ಯಾರಿಗೆ ಬೇಕಾಗಿದೆ?” ಎಂಬ ಪ್ರಶ್ನೆಯಲ್ಲಿ ಸದ್ಯದ ಪರಿಸ್ಥಿತಿಯ, ಅದು ತಲುಪಿರುವ ಅಧೋಗತಿಯ ಬಗ್ಗೆ ವಿಷಾದ ಇದೆ. ಇದು ನಮ್ಮ ನ್ಯಾಯಾಲಯಗಳು ಆಗಾಗ ’ಇಷ್ಟನ್ನೂ ಮಾಡಲಾಗದಿದ್ದರೆ ಏಕಿರಬೇಕು, ನಗರಪಾಲಿಕೆಯನ್ನು ಮುಚ್ಚಿಹಾಕಿಬಿಡೋಣವೆ’ ಎಂದು ರೆಟರಿಕ್ ಆಗಿ ಕೇಳುತ್ತಲ್ಲವೆ, ಹಾಗೆ ಎಂದು ನಾನು ಭಾವಿಸುತ್ತೇನೆ. ಆದರೆ ನ್ಯಾಯಾಲಯವಾದರೂ ಸರಿ, ನಾವಾದರೂ ಸರಿ, ಹೀಗೆ ಸಂಸ್ಥೆಗಳಲ್ಲಿನ ಸಮಸ್ಯೆಗಳಿಗೆ ಯಾವ ಮಟ್ಟದಲ್ಲಾದರೂ ಅದನ್ನು ಮುಚ್ಚುವ, ಬಹಿಷ್ಕರಿಸುವ ಮಾತಾಡುವುದು ಸಮಂಜಸವಲ್ಲವೆಂಬುದು ನನ್ನ ಭಾವನೆ. ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ, ಅಧ್ಯಕ್ಷ ಸ್ಥಾನಕ್ಕೆ ಸಂಘ ಪರಿವಾರ ಮತ್ತು ಬಿಜೆಪಿ ಬೆಂಬಲಿತ ಮಹೇಶ ಜೋಷಿ ಗೆದ್ದಾಗಲೂ ಇಂಥದ್ದೇ ಮಾತುಗಳು ಕೇಳಿಬಂದಿದ್ದವು. ಅದೂ ಯುಕ್ತವಲ್ಲ ಎಂದೇ ನನ್ನ ವಾದ. ರದ್ದು ಮಾಡುವುದೇ ಉತ್ತರವಾದರೆ ವಿಧಾನಸಭೆ, ಲೋಕಸಭೆಗಳೇನು ಕಮ್ಮಿ ಕೆಟ್ಟಿವೆಯೇ?

ಹೃಷಿಕೇಶರು ನೆರೆಯ ಆಂಧ್ರಪ್ರದೇಶದ ಉದಾಹರಣೆ ಕೊಟ್ಟಿದ್ದಾರೆ. ರಾಜ್ಯಕ್ಕೆ ಮೂರು ರಾಜಧಾನಿಗಳನ್ನು ಮಾಡುವ ಯುವ ಮುಖ್ಯಮಂತ್ರಿಯ ಹೊಸ ವಿಚಾರಕ್ಕೆ ವಿರೋಧಪಕ್ಷಗಳ ಬಾಹುಳ್ಯ ಇರುವ ಪರಿಷತ್ತು ಅಡ್ಡಿ ಆಗಿದೆ, ಹಾಗಾಗಿ ಪರಿಷತ್ತನ್ನು ಬರಖಾಸ್ತು ಮಾಡುವ ಕೂಗೆದ್ದಿದೆ ಎಂದು ಹೇಳಿದ್ದಾರೆ. 175ರಲ್ಲಿ 150 ಸ್ಥಾನಗಳನ್ನು ಗೆದ್ದು ಪ್ರಚಂಡ ಬಹುಮತದೊಂದಿಗೆ ಆಡಳಿತ ನಡೆಸುತ್ತಿರುವ ಜಗನ್‌ಮೋಹನ ರೆಡ್ಡಿಯದು, ಮೋದಿಯನ್ನೂ ಮೀರಿದ ದುರಾಡಳಿತ, ಆರ್ಥಿಕ ಅಶಿಸ್ತು, ತುಘಲಕ್ ದರ್ಬಾರ್ ಮತ್ತು ದರ್ಪದ ಸರ್ವಾಧಿಕಾರ ಎಂಬುದು ನನ್ನ ಅಭಿಪ್ರಾಯ, ಇರಲಿ. ಮೂರು ರಾಜಧಾನಿಯದು ಕಾನೂನಾತ್ಮಕವಾಗಿಯೂ ಸಮಂಜಸವಾಗಿಲ್ಲ ಅಷ್ಟೇ ಅಲ್ಲ, ಅಲ್ಲಿ ಅಮರಾವತಿಯೇ ರಾಜಧಾನಿ ಆಗಿರಬೇಕೆಂದು ನಡೆಯುತ್ತಿರುವ “ನ್ಯಾಯಾಲಯಂ ನುಂಚಿ ದೇವಾಲಯಂ” ಪಾದಯಾತ್ರೆಗೆ ಲಭಿಸಿರುವ ಅಪಾರ ಜನಾದರಣೆಯನ್ನು, ಬೆಂಬಲವನ್ನೂ ನೋಡಿದರೆ ಜನಕ್ಕೂ ಮೂರು ರಾಜಧಾನಿಗಳು ಬೇಕಿಲ್ಲ ಎಂಬುದು ವಿದಿತ. ಇವತ್ತು ಇಷ್ಟು ದೊಡ್ಡ ಬಹುಮತ ಪಡೆದಿರುವ ಸರ್ಕಾರವೊಂದು ’ಗೂಳಿ’ಯಂತೆ ಮುನ್ನುಗ್ಗುವುದರಿಂದ, ಅದರ ಸರ್ವಾಧಿಕಾರಿ ಧೋರಣೆಗೆ ಇರುವ ಒಂದೇ ಅಂಕುಶ ಅಲ್ಲಿನ ಪರಿಷತ್ತು. ಇದುವರೆಗೂ ಹಲವು ರಾಜ್ಯಗಳಲ್ಲಿ ಪರಿಷತ್ತನ್ನು ರದ್ದು ಮಾಡಲಾಗಿದೆ. ಬಹುತೇಕ ಇದು ಆಳುವ ಪಕ್ಷಕ್ಕೆ ಪರಿಷತ್ತಿನಲ್ಲಿ ಬಹುಮತ ಇಲ್ಲದೇ ಇದ್ದಾಗಲೇ ಆಗಿದೆ. ಅದೇ ಅದರ ಪ್ರಸ್ತುತತೆ.

ಇನ್ನು ಸದ್ಯ ಇರುವಂತೆ ಪರಿಷತ್ತು ದಿನೇದಿನೇ ಅಪ್ರಸ್ತುತವಾಗುತ್ತಾ ಹೋಗುತ್ತಿದೆ ಎಂಬುದರಲ್ಲಿ ಎರಡು ಮಾತಿಲ್ಲ ಇದಕ್ಕೆ ಹೃಷಿಕೇಶರ ಮಾತಿಗೆ ನನ್ನ ಸಂಪೂರ್ಣ ಸಹಮತವಿದೆ. ಆದರೆ ನಾವು ಇವತ್ತು ಅದರ ಸಂರಚನೆಯನ್ನು ಪ್ರಸ್ತುತಗೊಳಿಸಬೇಕಿದೆ. ಇವತ್ತು ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಕ್ಕೆ ಅರ್ಥವೇ ಉಳಿದಿಲ್ಲ. ಪದವೀಧರರು ವಿರಳವಾಗಿದ್ದ ಕಾಲಕ್ಕೆ ಅದು ಬೇಕಾಗಿತ್ತು, ಇವತ್ತಿಗಲ್ಲ. ಪದವೀಧರರೆಲ್ಲರೂ ಮೇಧಾವಿಗಳು, ವಿವೇಕಯುಕ್ತರು ಎಂಬಂತಿದೆ. ಇನ್ನು ಶಿಕ್ಷಕರಿಗೆ ಮಾತ್ರ ಏಕೆ ನಾಲ್ಕು ಸ್ಥಾನಗಳು? ಅವರು ಮಾತ್ರವೇ ಪ್ರಜ್ಞಾವಂತರೆಂದೋ? ಇವತ್ತು ಅನೇಕ ಇತರೆ ದನಿ ಇಲ್ಲದ, ಪ್ರಾತಿನಿಧ್ಯ ಇಲ್ಲದ ಗುಂಪುಗಳಿಗೆ ಪರಿಷತ್ತಿನಲ್ಲಿ ತಾವು ಮಾಡಿಕೊಡಬೇಕಿದೆ.

ಅಂತಹ ಗುಂಪುಗಳ ಪ್ರಾತಿನಿಧ್ಯಕ್ಕೆ ಕೆಲವು ಸಲಹೆಗಳು: ಈ ವಲಯಗಳಿಂದ ಆಯ್ಕೆ ಆಗುವ ಸದಸ್ಯರು ಕಡ್ಡಾಯವಾಗಿ ಅದೇ ವಲಯದಲ್ಲಿ ತೊಡಗಿಸಿಕೊಂಡಿರುವವರಾಗಿರಬೇಕು. ಆ ರೀತಿಯ ನಿಯಮಗಳನ್ನು ಪ್ರತಿ ವಲಯಕ್ಕೂ ತರಬೇಕು.

1. ರಾಜ್ಯದ ಮಹಿಳೆಯರು: ಅವರ 5-6 ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು, ಲೈಂಗಿಕ ಅಲ್ಪಸಂಖ್ಯಾತರಿಗೆ ಒಂದು ಸ್ಥಾನ.
2. ರಾಜ್ಯದ ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತರಿಗೆ ಒಂದು ಸ್ಥಾನ, ಪೌರಕಾರ್ಮಿಕರಿಗೆ ಒಂದು ಸ್ಥಾನ.
3. ರಾಜ್ಯದ ರೈತರು ಅವರ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು.
4. ರಾಜ್ಯದ ಕಾರ್ಮಿಕರಿಗೆ ಕನಿಷ್ಠ ಎರಡು ಸ್ಥಾನ
5. ಶಿಕ್ಷಕರ ಪ್ರಾತಿನಿಧ್ಯವನ್ನು ಗರಿಷ್ಠ ಎರಡಕ್ಕೆ ಮಿತಿಗೊಳಿಸುವುದು. ಇನ್ನುಳಿದ ಎರಡು ಪ್ರತಿನಿಧಿಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು.
6. ರಾಜ್ಯದ ವೈದ್ಯರು ಒಂದು ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ.
7. ರಾಜ್ಯದ ಸಹಕಾರಿ ವಲಯದಿಂದ ಕೆಲವು ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕಿದೆ.

ಇನ್ನು ಪರಿಷತ್ತಿನಲ್ಲಿ ರಾಜ್ಯದ ಸ್ವಾಯತ್ತ ಸಂಸ್ಥೆಗಳ ನೇತೃತ್ವ ವಹಿಸಿದವರೆಲ್ಲರನ್ನೂ ex-officio ಸದಸ್ಯರನ್ನಾಗಿ ಮಾಡಬೇಕು. ಈ ಹುದ್ದೆಗಳ politicisation ತಡೆಯಲು ಅಗತ್ಯವಿದ್ದರೆ ಇವರಿಗೆ ಮತದಾನದ ಹಕ್ಕು ನೀಡದಿರುವುದು ಅಗತ್ಯವಾಗಬಹುದು. ಆದರೆ ಇವರೆಲ್ಲರೂ ಪರಿಷತ್ತಿನಲ್ಲಿ ಇದ್ದರೆ, ಈ ಸಂಸ್ಥೆಗಳ ವರದಿಗಳನ್ನು ಕಡ್ಡಾಯವಾಗಿ ಮಂಡಿಸುವಂತಾದರೆ, ಅಲ್ಲಿನ ಚರ್ಚೆಗೊಂದು ವಿಸ್ತಾರವೂ, ಸರ್ಕಾರಕ್ಕೊಂದು ಅಂಕುಶವೂ ಇರುತ್ತದೆ.

ಇವರೆಲ್ಲರೂ ex-officio ಸದಸ್ಯರಾಗಬೇಕು:

1. ಕರ್ನಾಟಕ ಯೋಜನಾ ಆಯೋಗದ ಉಪಾಧ್ಯಕ್ಷರು
2. ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರು
3. ಕರ್ನಾಟಕದ ಆಡಿಟರ್ ಜನರಲ್
4. ಕರ್ನಾಟಕ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು
5. ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು
6. ಕರ್ನಾಟಕ ಲೋಕಾಯುಕ್ತರು
7. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು
8. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು
9. ಈ ನಾಡಿನ ಎಲ್ಲ ಸರ್ಕಾರೀ ವಿಶ್ವವಿದ್ಯಾಲಯಗಳ ಉಪಕುಲಪತಿಗಳು.
10. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು
11. ಕರ್ನಾಟಕ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು
12. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು

ಇನ್ನು ಪರಿಷತ್ತಿನಲ್ಲಿ ಈ ಕೂಡಲೇ ಮೀಸಲಾತಿ ತರಬೇಕಿದೆ. ದಿ ಹಿಂದೂ ಪತ್ರಿಕೆಯು ಈಗ 25 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಿಲ್ಲಿಸಿರುವ ಉಮೇದುವಾರರ ಜಾತಿಗಣತಿ ನಡೆಸಿ ಎಲ್ಲ ಉಮೇದುವಾರರ ಪೈಕಿ ಶೇ.60ಕ್ಕಿಂತಲೂ ಹೆಚ್ಚು ಜನ ಒಕ್ಕಲಿಗ, ಲಿಂಗಾಯತ ಜಾತಿಗಳಿಗೆ ಸೇರಿದವರು ಎಂದು ತೋರಿಸಿದ್ದಾರೆ. ಮೀಸಲಾತಿ ಇಲ್ಲದಿದ್ದರೆ ಎಲ್ಲೆಡೆಯೂ ಇದೇ ವಾಸ್ತವ. ಇನ್ನು ಹಿರಿಯರ, ಪ್ರಾಜ್ಞರ ಮನೆಗೆ ಮೀಸಲಾತಿ ಇಲ್ಲದಿರುವುದು ಕೆಟ್ಟ ಮೆರಿಟ್ ವಾದವನ್ನು ಸರ್ಕಾರವೇ ಮಾಡಿದಂತೆ. ಈ ಕೂಡಲೇ ಪರಿಶಿಷ್ಟ ಜಾತಿ, ವರ್ಗಗಳಿಗೆ ಸಾಂವಿಧಾನಿಕ ಹಕ್ಕಾದ ಮೀಸಲಾತಿಯನ್ನು ನೀಡಬೇಕು.

ಹೀಗೆ ಇನ್ನೂ ಬೆಳೆಸಿ ಪರಿಷತ್ತನ್ನು ನಿಜಕ್ಕೂ ಮತ್ತೆ ಪ್ರಜಾಪ್ರತಿನಿಧಿ ಸಭೆ ಮಾಡಬೇಕಿದೆ. ಈ ರೀತಿಯಾಗಿ ಪ್ರತಿನಿಧಿತ್ವವನ್ನು ಸರಿಪಡಿಸಿ ವಿಧಾನ ಪರಿಷತ್ತನ್ನು ಉಳಿಸಿಕೊಳ್ಳುವ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಿದೆ.


ಇದನ್ನೂ ಓದಿ: ಮೇಲ್ಮನೆ ವಿಧಾನ ಪರಿಷತ್ ಯಾರಿಗೆ ಬೇಕಾಗಿದೆ?

ಇದನ್ನೂ ಓದಿ: ನಾಯಕತ್ವ ವ್ಯಕ್ತಿಯೊಬ್ಬರ ‘ದೈವಿಕ ಹಕ್ಕಲ್ಲ’: ರಾಹುಲ್ ಗಾಂಧಿ ವಿರುದ್ದ ಪ್ರಶಾಂತ್‌ ಕಿಶೋರ್‌ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...