Homeಕರ್ನಾಟಕಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ; ಎಷ್ಟು ದೂರಕ್ಕೆ ಎಷ್ಟಾಗುತ್ತದೆ? ಇಲ್ಲಿದೆ ಸುಲಭ ಲೆಕ್ಕ!

ಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ; ಎಷ್ಟು ದೂರಕ್ಕೆ ಎಷ್ಟಾಗುತ್ತದೆ? ಇಲ್ಲಿದೆ ಸುಲಭ ಲೆಕ್ಕ!

- Advertisement -
- Advertisement -

ಡಿಸೆಂಬರ್‌ 1 ರ ಬುಧವಾರದಿಂದ ಆಟೋ ರಿಕ್ಷಾದ ಹೊಸ ದರಗಳು ಜಾರಿಗೆ ಬಂದಿವೆ. ಇದು 8 ವರ್ಷಗಳ ಬಳಿಕ ರಾಜಧಾನಿಯಲ್ಲಿ ಮಾಡಲಾಗಿರುವ ಆಟೋರಿಕ್ಷಾ ದರಗಳನ್ನು ಪರಿಷ್ಕರಣೆಯಾಗಿದೆ. ಇಂಧನ ದರಗಳು, ವಾಹನ ಬಿಡಿಬಾಗಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದ ದರ ಏರಿಕೆ ಮಾಡುವುದು ದುಡಿಯುವ ವರ್ಗಕ್ಕೆ ಅನಿವಾರ್ಯವಾಗಿದೆ. ದರ ಏರಿಕೆಯಾಗಿದ್ದು ನಿಜವಾದರೂ, ಹಲವು ಆಟೋಗಳಲ್ಲಿ ಹಳೆಯ ಮೀಟರುಗಳೇ ಚಲಾವಣೆಯಲ್ಲಿದೆ. ಕಳೆದ ನವೆಂಬರ್‌ನಲ್ಲಿ ಸರ್ಕಾರವು ದರ ಹೆಚ್ಚಳಕ್ಕೆ ಅನುಮತಿ ನೀಡಿರುವುದರಿಂದ ಮುಂದಿನ ಫೆಬ್ರವರಿ ತಿಂಗಳ ಒಳಗಡೆ ಮೀಟರ್‌ಗಳನ್ನು ಅಪ್‌ಡೇಟ್‌‌ ಮಾಡಿಕೊಳ್ಳಲು ಚಾಲಕರಿಗೆ ಸಮಯ ನೀಡಲಾಗಿದೆ.

ಈ ಹಿಂದೆ ಬೆಂಗಳೂರಿನಲ್ಲಿ ಎರಡು ಕಿ.ಮೀ. ವರೆಗೆ ಕನಿಷ್ಠ ದರ 25 ರೂಪಾಯಿ ಇತ್ತು. ಈಗ ಈ ಕನಿಷ್ಠ ದರವು 30 ರೂಗೆ ಹೆಚ್ಚಾಗಿದೆ. ಜೊತೆಗೆ ನಂತರದ ಪ್ರತಿ ಕಿ.ಮೀ ಗೆ 15 ರೂ. ಆಗಿದೆ. ದರ ಹೆಚ್ಚಳದ ಬಗ್ಗೆ ಸರ್ಕಾರದಿಂದ ಅಧಿಸೂಚನೆ ಬಂದು ಕೇವಲ ಒಂದೇ ತಿಂಗಳು ಆಗಿರುವುದರಿಂದ ಮುಂದಿನ ವರ್ಷದ ಫೆಬ್ರವರಿವೆರೆಗೆ ಆಟೋದಲ್ಲಿನ ಮೀಟರ್‌ ಅಪ್‌ಡೇಟ್‌ ಮಾಡಲು ಚಾಲಕರಿಗೆ ಸಮಯವಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಆಟೋರಿಕ್ಷಾ ದರ ಏರಿಕೆ: ಕನಿಷ್ಠ ಬೆಲೆ 25 ರೂ.ನಿಂದ 30 ರೂಪಾಯಿಗೆ ಹೆಚ್ಚಳ

ಪ್ರಸ್ತುತ ಹೆಚ್ಚಿನ ಆಟೋಗಳಲ್ಲಿ ಹಳೆಯ ಮೀಟರ್‌ ಇರುವುದರಿಂದ ಆಟೋ ಚಾಲಕರಿಗೆ ಮತ್ತು ಪ್ರಯಾಣಿಕರಿಗೆ ಗೊಂದಲಗಳಿರುವ ಕಾರಣಕ್ಕೆ ನಾನುಗೌರಿ.ಕಾಂ ಓದುಗರಿಗಾಗಿ ಕೆಲವು ಮಾದರಿಗಳನ್ನು ನೀಡಿದ್ದ ಕೆಳಗಿನಂತಿವೆ.

ಪ್ರಯಾಣದ ದೂರ (ಕಿ. ಮೀ)ನಲ್ಲಿಡಿಸೆಂಬರ್‌ 1 ರಿಂದ ಅನ್ವಯಾಗಲಿರುವ ಹೊಸ ದರ
ಮೊದಲ 2 ಕಿ.ಮೀ ವರೆಗೆ30 ರೂ.
2.2 ಕಿ.ಮೀ 33 ರೂ.
2.4 ಕಿ.ಮೀ 36 ರೂ.
2.6 ಕಿ.ಮೀ 39 ರೂ.
2.8 ಕಿ.ಮೀ 42 ರೂ.
03 ಕಿ.ಮೀ 45 ರೂ.
3.2 ಕಿ.ಮೀ48 ರೂ.
3.4 ಕಿ.ಮೀ 51 ರೂ.
3.6 ಕಿ.ಮೀ 54 ರೂ.
ಹೀಗೇ ಪ್ರತಿ 0.2 ಕಿ.ಮಿಗೆ ಮೂರು ರೂ ಹೆಚ್ಚಾಗುತ್ತಾ ಹೋಗುತ್ತದೆ. (ಅಂದರೆ ಪ್ರತಿ 0.1 ಕಿ.ಮೀ.ಗೆ 1.5 ರೂ)
ಚಿತ್ರದಲ್ಲಿರುವ ಮೀಟರ್‌ ಹಳೆಯ ದರವೇ(37) ತೋರಿಸುತ್ತಿದೆ. ಹೊಸ ದರದ ಅನ್ವಯ, 2.9 ಕಿ.ಮೀ ಗೆ 43.5 ರೂ ಅಗಲಿದೆ. (2.9×15=43.5)

ಜೊತೆಗೆ, ಹೊಸ ಪರಿಷ್ಕೃತ ದರದಂತೆ, ಕಾಯುವಿಕೆಯ ದರ ಮೊದಲ 5 ನಿಮಿಷ ಉಚಿತವಾಗಿದೆ. ನಂತರ ಪ್ರತಿ  15 ನಿಮಿಷಕ್ಕೆ 5 ರೂಪಾಯಿ ಹೆಚ್ಚುವರಿಯಾಗಿ ಪ್ರಯಾಣಿಕರು ಪಾವತಿಸಬೇಕಾಗಿದೆ. ಅಲ್ಲದೆ, ಪ್ರಯಾಣಿಕರ ಲಗೇಜು 20 ಕೆಜಿ ಒಳಗಿದ್ದರೆ ಉಚಿತವೆಂದು ಪರಿಗಣಿಸಬೇಕಾಗಿದೆ. ಪ್ರಯಾಣಿಕರ ಲಗೇಜು 20 ಕೆಜಿಗಿಂತಲೂ ಅಧಿಕವಾಗಿದ್ದರೆ, ಪ್ರತಿ 20 ಕೆಜಿ ಲಗೇಜಿಗೆ 5 ರೂಪಾಯಿ ಹೆಚ್ಚುವರಿಯಾಗಿ ಪಾವತಿಸಬೇಕಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಒಳಗೆ ಸಾಮಾನ್ಯ ದರದ ಜೊತೆಗೆ ಅದರ ಅರ್ಧ ಪಟ್ಟು ದರವನ್ನು ಪ್ರಯಾಣಿಕರು ಆಟೋಗೆ ಪಾವತಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್, ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆಯಿಂದಾಗಿ ಆಟೋ ಚಾಲಕರು ಸರ್ಕಾರಕ್ಕೆ ಬೆಲೆ ಏರಿಕೆ ಮಾಡಲು ಮನವಿ ಸಲ್ಲಿಸಿದ್ದರು. ಚಾಲಕರ ಈ ಮನವಿಯನ್ನು ಪುರಸ್ಕರಿಸಿ ದರ ಹೆಚ್ಚಳಕ್ಕೆ ಅನುಮತಿ ನೀಡಿದೆ. ಬೆಂಗಳೂರಿನಲ್ಲಿ 8 ವರ್ಷಗಳ ಬಳಿಕ ಆಟೋರಿಕ್ಷಾ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ. 8 ವರ್ಷಗಳ ಹಿಂದೆ 2013 ರಲ್ಲಿ ಆಟೋರಿಕ್ಷಾ ದರವನ್ನು ಕೊನೆಯ ಬಾರಿಗೆ ಏರಿಕೆ ಮಾಡಲಾಗಿತ್ತು.

ಇದನ್ನೂ ಓದಿ: ತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...