Homeಕರ್ನಾಟಕಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ; ಎಷ್ಟು ದೂರಕ್ಕೆ ಎಷ್ಟಾಗುತ್ತದೆ? ಇಲ್ಲಿದೆ ಸುಲಭ ಲೆಕ್ಕ!

ಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ; ಎಷ್ಟು ದೂರಕ್ಕೆ ಎಷ್ಟಾಗುತ್ತದೆ? ಇಲ್ಲಿದೆ ಸುಲಭ ಲೆಕ್ಕ!

- Advertisement -
- Advertisement -

ಡಿಸೆಂಬರ್‌ 1 ರ ಬುಧವಾರದಿಂದ ಆಟೋ ರಿಕ್ಷಾದ ಹೊಸ ದರಗಳು ಜಾರಿಗೆ ಬಂದಿವೆ. ಇದು 8 ವರ್ಷಗಳ ಬಳಿಕ ರಾಜಧಾನಿಯಲ್ಲಿ ಮಾಡಲಾಗಿರುವ ಆಟೋರಿಕ್ಷಾ ದರಗಳನ್ನು ಪರಿಷ್ಕರಣೆಯಾಗಿದೆ. ಇಂಧನ ದರಗಳು, ವಾಹನ ಬಿಡಿಬಾಗಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದ ದರ ಏರಿಕೆ ಮಾಡುವುದು ದುಡಿಯುವ ವರ್ಗಕ್ಕೆ ಅನಿವಾರ್ಯವಾಗಿದೆ. ದರ ಏರಿಕೆಯಾಗಿದ್ದು ನಿಜವಾದರೂ, ಹಲವು ಆಟೋಗಳಲ್ಲಿ ಹಳೆಯ ಮೀಟರುಗಳೇ ಚಲಾವಣೆಯಲ್ಲಿದೆ. ಕಳೆದ ನವೆಂಬರ್‌ನಲ್ಲಿ ಸರ್ಕಾರವು ದರ ಹೆಚ್ಚಳಕ್ಕೆ ಅನುಮತಿ ನೀಡಿರುವುದರಿಂದ ಮುಂದಿನ ಫೆಬ್ರವರಿ ತಿಂಗಳ ಒಳಗಡೆ ಮೀಟರ್‌ಗಳನ್ನು ಅಪ್‌ಡೇಟ್‌‌ ಮಾಡಿಕೊಳ್ಳಲು ಚಾಲಕರಿಗೆ ಸಮಯ ನೀಡಲಾಗಿದೆ.

ಈ ಹಿಂದೆ ಬೆಂಗಳೂರಿನಲ್ಲಿ ಎರಡು ಕಿ.ಮೀ. ವರೆಗೆ ಕನಿಷ್ಠ ದರ 25 ರೂಪಾಯಿ ಇತ್ತು. ಈಗ ಈ ಕನಿಷ್ಠ ದರವು 30 ರೂಗೆ ಹೆಚ್ಚಾಗಿದೆ. ಜೊತೆಗೆ ನಂತರದ ಪ್ರತಿ ಕಿ.ಮೀ ಗೆ 15 ರೂ. ಆಗಿದೆ. ದರ ಹೆಚ್ಚಳದ ಬಗ್ಗೆ ಸರ್ಕಾರದಿಂದ ಅಧಿಸೂಚನೆ ಬಂದು ಕೇವಲ ಒಂದೇ ತಿಂಗಳು ಆಗಿರುವುದರಿಂದ ಮುಂದಿನ ವರ್ಷದ ಫೆಬ್ರವರಿವೆರೆಗೆ ಆಟೋದಲ್ಲಿನ ಮೀಟರ್‌ ಅಪ್‌ಡೇಟ್‌ ಮಾಡಲು ಚಾಲಕರಿಗೆ ಸಮಯವಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಆಟೋರಿಕ್ಷಾ ದರ ಏರಿಕೆ: ಕನಿಷ್ಠ ಬೆಲೆ 25 ರೂ.ನಿಂದ 30 ರೂಪಾಯಿಗೆ ಹೆಚ್ಚಳ

ಪ್ರಸ್ತುತ ಹೆಚ್ಚಿನ ಆಟೋಗಳಲ್ಲಿ ಹಳೆಯ ಮೀಟರ್‌ ಇರುವುದರಿಂದ ಆಟೋ ಚಾಲಕರಿಗೆ ಮತ್ತು ಪ್ರಯಾಣಿಕರಿಗೆ ಗೊಂದಲಗಳಿರುವ ಕಾರಣಕ್ಕೆ ನಾನುಗೌರಿ.ಕಾಂ ಓದುಗರಿಗಾಗಿ ಕೆಲವು ಮಾದರಿಗಳನ್ನು ನೀಡಿದ್ದ ಕೆಳಗಿನಂತಿವೆ.

ಪ್ರಯಾಣದ ದೂರ (ಕಿ. ಮೀ)ನಲ್ಲಿಡಿಸೆಂಬರ್‌ 1 ರಿಂದ ಅನ್ವಯಾಗಲಿರುವ ಹೊಸ ದರ
ಮೊದಲ 2 ಕಿ.ಮೀ ವರೆಗೆ30 ರೂ.
2.2 ಕಿ.ಮೀ 33 ರೂ.
2.4 ಕಿ.ಮೀ 36 ರೂ.
2.6 ಕಿ.ಮೀ 39 ರೂ.
2.8 ಕಿ.ಮೀ 42 ರೂ.
03 ಕಿ.ಮೀ 45 ರೂ.
3.2 ಕಿ.ಮೀ48 ರೂ.
3.4 ಕಿ.ಮೀ 51 ರೂ.
3.6 ಕಿ.ಮೀ 54 ರೂ.
ಹೀಗೇ ಪ್ರತಿ 0.2 ಕಿ.ಮಿಗೆ ಮೂರು ರೂ ಹೆಚ್ಚಾಗುತ್ತಾ ಹೋಗುತ್ತದೆ. (ಅಂದರೆ ಪ್ರತಿ 0.1 ಕಿ.ಮೀ.ಗೆ 1.5 ರೂ)
ಚಿತ್ರದಲ್ಲಿರುವ ಮೀಟರ್‌ ಹಳೆಯ ದರವೇ(37) ತೋರಿಸುತ್ತಿದೆ. ಹೊಸ ದರದ ಅನ್ವಯ, 2.9 ಕಿ.ಮೀ ಗೆ 43.5 ರೂ ಅಗಲಿದೆ. (2.9×15=43.5)

ಜೊತೆಗೆ, ಹೊಸ ಪರಿಷ್ಕೃತ ದರದಂತೆ, ಕಾಯುವಿಕೆಯ ದರ ಮೊದಲ 5 ನಿಮಿಷ ಉಚಿತವಾಗಿದೆ. ನಂತರ ಪ್ರತಿ  15 ನಿಮಿಷಕ್ಕೆ 5 ರೂಪಾಯಿ ಹೆಚ್ಚುವರಿಯಾಗಿ ಪ್ರಯಾಣಿಕರು ಪಾವತಿಸಬೇಕಾಗಿದೆ. ಅಲ್ಲದೆ, ಪ್ರಯಾಣಿಕರ ಲಗೇಜು 20 ಕೆಜಿ ಒಳಗಿದ್ದರೆ ಉಚಿತವೆಂದು ಪರಿಗಣಿಸಬೇಕಾಗಿದೆ. ಪ್ರಯಾಣಿಕರ ಲಗೇಜು 20 ಕೆಜಿಗಿಂತಲೂ ಅಧಿಕವಾಗಿದ್ದರೆ, ಪ್ರತಿ 20 ಕೆಜಿ ಲಗೇಜಿಗೆ 5 ರೂಪಾಯಿ ಹೆಚ್ಚುವರಿಯಾಗಿ ಪಾವತಿಸಬೇಕಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಒಳಗೆ ಸಾಮಾನ್ಯ ದರದ ಜೊತೆಗೆ ಅದರ ಅರ್ಧ ಪಟ್ಟು ದರವನ್ನು ಪ್ರಯಾಣಿಕರು ಆಟೋಗೆ ಪಾವತಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್, ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆಯಿಂದಾಗಿ ಆಟೋ ಚಾಲಕರು ಸರ್ಕಾರಕ್ಕೆ ಬೆಲೆ ಏರಿಕೆ ಮಾಡಲು ಮನವಿ ಸಲ್ಲಿಸಿದ್ದರು. ಚಾಲಕರ ಈ ಮನವಿಯನ್ನು ಪುರಸ್ಕರಿಸಿ ದರ ಹೆಚ್ಚಳಕ್ಕೆ ಅನುಮತಿ ನೀಡಿದೆ. ಬೆಂಗಳೂರಿನಲ್ಲಿ 8 ವರ್ಷಗಳ ಬಳಿಕ ಆಟೋರಿಕ್ಷಾ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ. 8 ವರ್ಷಗಳ ಹಿಂದೆ 2013 ರಲ್ಲಿ ಆಟೋರಿಕ್ಷಾ ದರವನ್ನು ಕೊನೆಯ ಬಾರಿಗೆ ಏರಿಕೆ ಮಾಡಲಾಗಿತ್ತು.

ಇದನ್ನೂ ಓದಿ: ತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...